AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes: ಮಧುಮೇಹವು ಕಣ್ಣಿನ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರಬಲ್ಲದು

ಮಧುಮೇಹ (Diabetes)ವು ಹುಟ್ಟಿನಿಂದಲೇ ಅಥವಾ ಕೆಲವು ವರ್ಷಗಳ ಬಳಿಕ ಕಾಣಿಸಿಕೊಳ್ಳಬಹುದು. ಮಧುಮೇಹ ಕಾಯಿಲೆ ಇರುವವರು ತಮ್ಮ ದೇಹದ ಬಗ್ಗೆ ತುಂಬಾ ಎಚ್ಚರಿಕೆಯಿಂದಿರಬೇಕು.

Diabetes: ಮಧುಮೇಹವು ಕಣ್ಣಿನ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರಬಲ್ಲದು
Diabetes
TV9 Web
| Edited By: |

Updated on: Jun 19, 2022 | 9:58 AM

Share

ಮಧುಮೇಹ (Diabetes)ವು ಹುಟ್ಟಿನಿಂದಲೇ ಅಥವಾ ಕೆಲವು ವರ್ಷಗಳ ಬಳಿಕ ಕಾಣಿಸಿಕೊಳ್ಳಬಹುದು. ಮಧುಮೇಹ ಕಾಯಿಲೆ ಇರುವವರು ತಮ್ಮ ದೇಹದ ಬಗ್ಗೆ ತುಂಬಾ ಎಚ್ಚರಿಕೆಯಿಂದಿರಬೇಕು. ಏಕೆಂದರೆ ಯಾವುದೋ ರೀತಿಯ ಆರೋಗ್ಯ ಸಮಸ್ಯೆ ಅಥವಾ ಸಣ್ಣ ಗಾಯ ಕಾಣಿಸಿಕೊಂಡರೂ ಅದು ಮಾಗಲು ತುಂಬಾ ದಿನಗಳನ್ನು ತೆಗೆದುಕೊಳ್ಳುತ್ತದೆ. ಕೆಲವೊಮ್ಮೆ ಗಾಯವಾದ ಭಾಗವನ್ನು ಕತ್ತರಿಸುವ ಪರಿಸ್ಥಿತಿಯೂ ಬರಬಹುದು.

ನೀವು ಮಧುಮೇಹಿಗಳಾಗಿದ್ದರೆ ಕೆಲವು ವಿಚಾರಗಳನ್ನು ತಿಳಿಯಿರಿ ಡಯಾಬಿಟಿಕ್ ರೆಟಿನೋಪತಿ ಮಧುಮೇಹವು ಕಣ್ಣುಗಳಿಗೆ ಹಾನಿಮಾಡುವುದಷ್ಟೇ ಅಲ್ಲದೆ, ದೃಷ್ಟಿ ದೋಷಕ್ಕೂ ಕಾರಣವಾಗಬಹುದು 1. ದೀರ್ಘ ಕಾಲದ ಮಧುಮೇಹ ತುಂಬಾ ವರ್ಷಗಳಿಂದ ಮಧುಮೇಹ ಹೊಂದಿರುವವರಲ್ಲಿ ಡಯಾಬಿಟಿಕ್ ರೆಟಿನೋಪತಿ ಕಾಣಿಸಿಕೊಳ್ಳುವುದು. ಕೆಲವೇ ದಿನಗಳಿಂದ ಮಧುಮೇಹ ಸಮಸ್ಯೆ ಕಾಣಿಸಿಕೊಂಡವರಲ್ಲಿ ಈ ಸಮಸ್ಯೆ ಕಡಿಮೆ.

2. ರಕ್ತದಲ್ಲಿನ ಸಕ್ಕರೆ ಮಟ್ಟ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾದಾಗ ಮಧುಮೇಹ ಕಾಣಿಸಿಕೊಳ್ಳುತ್ತದೆ. ಒಂದೊಮ್ಮೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸರಿಯಾಗಿ ನಿಯಂತ್ರಿಸದಿದ್ದರೆ ಕಣ್ಣಿಗೆ ಸಂಬಂಧಿಸಿದ ಕಾಯಿಲೆ ಕಾಣಿಸಿಕೊಳ್ಳಬಹುದು. 3. ಅಧಿಕ ರಕ್ತದೊತ್ತಡ ಅಧಿಕ ರಕ್ತದೊತ್ತಡವಿದ್ದರೂ ಮಧುಮೇಹ ರೆಟಿನೋಪತಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಏಕೆಂದರೆ ಅಧಿಕ ರಕ್ತದೊತ್ತಡವನ್ನು ರಕ್ತನಾಳಗಳು ಹೆಚ್ಚು ಸಮಯಗಳಕಾಲ ಸಹಿಸಿಕೊಳ್ಳುವುದಿಲ್ಲ.

ಕ್ಯಾಟರಾಕ್ಟ್​: ನಿಮಗೆ ಮಧುಮೇಹವಿದ್ದರೆ ಕ್ರಮೇಣ ನಿಮ್ಮ ದೃಷ್ಟಿ ಮಂಜಾಗಬಹುದು ನಿಮ್ಮ ದೃಷ್ಟಿ ಗುಣಮಟ್ಟವು ನಿಮ್ಮ ಜೀವನಶೈಲಿ ಮತ್ತು ದೈನಂದಿನ ಚಟುವಟಿಕೆಗಳ ಮೇಲೆ ಪ್ರಭಾವ ಬೀರಿದಾಗ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಅಗತ್ಯವಿದೆ.

ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯ ಮೂಲಕ ನಿಮ್ಮ ದೃಷ್ಟಿ ಸುಧಾರಿಸಬಹುದೆಂದು ನೀವು ಭಾವಿಸಿದರೆ, ಕಣ್ಣಿನ ಪರೀಕ್ಷೆಗಾಗಿ ಅಪಾಯಿಂಟ್ಮೆಂಟ್ ಅನ್ನು ನಿಗದಿಪಡಿಸಿ. ನಿಮ್ಮ ಕಣ್ಣಿನ ಪರೀಕ್ಷೆಯ ಸಮಯದಲ್ಲಿ, ನಿಮ್ಮ ಕಣ್ಣಿನ ವೈದ್ಯರು ನಿಮ್ಮ ಕಣ್ಣಿನ ಪೊರೆಗಳ ತೀವ್ರತೆಯನ್ನು ನಿರ್ಧರಿಸಲು ಅನೇಕ ರೋಗನಿರ್ಣಯದ ಪರೀಕ್ಷೆಗಳನ್ನು ಮಾಡುತ್ತಾರೆ.

ಆರಂಭದಲ್ಲಿ, ಕಣ್ಣಿನ ಪೊರೆ ದೃಷ್ಟಿಯ ಗಮನಾರ್ಹ ಕ್ಷೀಣತೆಗೆ ಕಾರಣವಾಗುತ್ತದೆ. ಇದರ ಜೊತೆಯಲ್ಲಿ ದೃಶ್ಯ ಕ್ಷೇತ್ರದ ಮಧ್ಯಭಾಗದಲ್ಲಿರುವ ಮಂಜು, ಇದು ಕಾಲಾನಂತರದಲ್ಲಿ ಸಾಂದ್ರವಾಗುತ್ತದೆ ಮತ್ತು ಗ್ರಹಿಕೆ ಮಸುಕಾಗುತ್ತದೆ.

ಮೆಂತ್ಯೆಯನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ : ಕೆಲವು ಅಧ್ಯಯನಗಳ ಪ್ರಕಾರ, ಮೆಂತ್ಯೆ ಉತ್ತಮ ಕೊಲೆಸ್ಟ್ರಾಲ್ (HDL) ಅನ್ನು ಹೆಚ್ಚಿಸಲು ಮತ್ತು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (LDL) ಅನ್ನು ಕಡಿಮೆ ಮಾಡಲು ಕೆಲಸ ಮಾಡುತ್ತದೆ. ಮೆಂತ್ಯೆ ಎಲೆಗಳು ಯಕೃತ್ತಿನಲ್ಲಿ ಕೊಲೆಸ್ಟ್ರಾಲ್ ರಚನೆಯನ್ನು ತಡೆಯುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಸಹಕಾರಿ : ಮೆಂತ್ಯೆ ಎಲೆಗಳು ಫೈಬರ್ ಜೊತೆಗೆ ಅಂಟಿ ಆಕ್ಸಿಡೆಂಟ್ ಗುಣಗಳನ್ನು ಹೊಂದಿವೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮೆಂತ್ಯ ಎಲೆಯ ಚಹಾವು ಮಲಬದ್ಧತೆ , ಅಜೀರ್ಣ ಮತ್ತು ಹೊಟ್ಟೆ ನೋವಿನ ಸಮಸ್ಯೆಯನ್ನು ನಿವಾರಿಸುತ್ತದೆ. ಇವುಗಳ ಸೇವನೆಯಿಂದ ಅಸಿಡಿಟಿ ಸಮಸ್ಯೆಯೂ ದೂರವಾಗುತ್ತದೆ.

ಹೃದ್ರೋಗಿಗಳಿಗೆ ಪ್ರಯೋಜನಕಾರಿ : ಮೆಂತ್ಯೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಮೆಂತ್ಯ ಎಲೆಗಳು ಗಿಡಮೂಲಿಕೆಗಳಂತೆ ಕಾರ್ಯನಿರ್ವಹಿಸುತ್ತವೆ, ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಸಂದರ್ಭದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ