AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮಕ್ಕಳಿಗೆ ಡೈಪರ್ ಹಾಕಿದಾಗ ಚರ್ಮ ಕೆಂಪಗಾಗುತ್ತಾ? ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ಇಲ್ಲಿದೆ ಟಿಪ್ಸ್

ಮಕ್ಕಳ ಚರ್ಮವು ತುಂಬಾ ಸೂಕ್ಷ್ಮವಾಗಿರುತ್ತದೆ. ಹುಟ್ಟಿನಿಂದ ಐದು ವರ್ಷದ ವರೆಗೂ ಮಕ್ಕಳನ್ನು ಬಹಳ ಎಚ್ಚರಿಕೆಯಿಂದ ನೋಡಿಕೊಳ್ಳಬೇಕಾಗುತ್ತದೆ. ಪರಿಸರದಲ್ಲಿ ಆಗುವಂತಹ ಬದಲಾವಣೆಗಳು ಕೂಡ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಮಾತ್ರವಲ್ಲ ಮಕ್ಕಳಿಗೆ ಹಾಕುವ ಡೈಪರ್‌ಗಳು ಕೂಡ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟು ಮಾಡಬಹುದು. ಆದರೆ ಕೆಲವು ಸರಳ ಸಲಹೆಗಳ ಮೂಲಕ ಡೈಪರ್ ನಿಂದ ಉಂಟಾಗುವ ದದ್ದುಗಳನ್ನು ಕಡಿಮೆ ಮಾಡಬಹುದು. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಿಮ್ಮ ಮಕ್ಕಳಿಗೆ ಡೈಪರ್ ಹಾಕಿದಾಗ ಚರ್ಮ ಕೆಂಪಗಾಗುತ್ತಾ? ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ಇಲ್ಲಿದೆ ಟಿಪ್ಸ್
Diaper Rash Solutions
ಪ್ರೀತಿ ಭಟ್​, ಗುಣವಂತೆ
|

Updated on: Sep 25, 2025 | 3:15 PM

Share

ಮಕ್ಕಳನ್ನು ಹುಟ್ಟಿನಿಂದ ಐದು ವರ್ಷದ ವರೆಗೆ ಎಷ್ಟು ಜಾಗರೂಕತೆಯಿಂದ ನೋಡಿಕೊಂಡರು ಸಾಲುವುದಿಲ್ಲ. ಈ ಸಮಯದಲ್ಲಿ ಮಕ್ಕಳಲ್ಲಿ ನಾನಾ ರೀತಿಯ ಸಮಸ್ಯೆಗಳು ಕಂಡುಬರುವುದು ಸಹಜ. ಎಷ್ಟೇ ಕಾಳಜಿ ಮಾಡಿದರೂ ಒಂದಲ್ಲಾ ಒಂದು ರೀತಿಯ ತೊಂದರೆ ತಪ್ಪಿದ್ದಲ್ಲ. ಅದರಲ್ಲಿಯೂ ಮಕ್ಕಳ ಚರ್ಮ ತುಂಬಾ ಸೂಕ್ಷ್ಮವಾಗಿರುವುದರಿಂದ ಬಹಳ ಎಚ್ಚರಿಕೆಯಿಂದ ನೋಡಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ಪರಿಸರದಲ್ಲಿ ಆಗುವಂತಹ ಬದಲಾವಣೆಗಳು ಸಹ ಮಕ್ಕಳಲ್ಲಿ ಆರೋಗ್ಯ (Health) ಸಮಸ್ಯೆಗಳನ್ನು ಉಂಟುಮಾಡಬಹುದು. ಇನ್ನು ಮಕ್ಕಳು ಚಿಕ್ಕವರಿರುವಾಗ ಅವರಿಗೆ ಹೆಚ್ಚಾಗಿ ಡೈಪರ್‌ಗಳನ್ನು ಹಾಕಲಾಗುತ್ತದೆ. ಇತ್ತೀಚಿಗೆ ಈ ಅಭ್ಯಾಸ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಈ ಡೈಪರ್‌ಗಳು (Diaper) ಎಲ್ಲಾ ಮಕ್ಕಳ ಚರ್ಮಕ್ಕೆ ಸೂಕ್ತವಲ್ಲ. ಇದರಿಂದ ನಾನಾ ರೀತಿಯ ಚರ್ಮ ಸಂಬಂಧಿ ಸಮಸ್ಯೆಗಳು ಕಂಡುಬರುತ್ತದೆ. ಆದರೆ ಕೆಲವು ಸರಳ ಸಲಹೆಗಳ ಮೂಲಕ ಡೈಪರ್ ನಿಂದ ಉಂಟಾಗುವ ದದ್ದುಗಳನ್ನು ಕಡಿಮೆ ಮಾಡಬಹುದು. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಡೈಪರ್‌ಗಳು ಕೆಲವು ಮಕ್ಕಳಲ್ಲಿ ದದ್ದುಗಳು ಕಾಣಿಸಿಕೊಳ್ಳುವುದಕ್ಕೆ ಕಾರಣವಾಗುತ್ತದೆ. ಇದು ಎಲ್ಲ ಮಕ್ಕಳಿಗೂ ಸೂಕ್ತವಲ್ಲ. ಕೆಲವರಲ್ಲಿ ದದ್ದುಗಳ ಜೊತೆಗೆ ಚರ್ಮದಲ್ಲಿ ಕಿರಿಕಿರಿಯನ್ನು ಕೂಡ ಉಂಟಾಗುತ್ತದೆ. ಈ ರೀತಿಯಾದಾಗ ಪೋಷಕರು ಆತಂಕಕ್ಕೆ ಒಳಗಾಗಿ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಆದರೆ ಇವುಗಳಿಗೆ ಕೆಲವು ಸರಳ ಸಲಹೆಗಳಿವೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಪಾಲನೆ ಮಾಡಿದಲ್ಲಿ ಡೈಪರ್ ನಿಂದ ಉಂಟಾಗುವ ದದ್ದು, ಕಿರಿಕಿರಿಯನ್ನು ಕಡಿಮೆ ಮಾಡಬಹುದು.

ತಾಯಿಯ ಎದೆ ಹಾಲು

ಡೈಪರ್‌ ನಿಂದ ಉಂಟಾಗುವ ದದ್ದುಗಳು ಮತ್ತು ಎಸ್ಜಿಮಾವನ್ನು ಕಡಿಮೆ ಮಾಡುವಲ್ಲಿ ತಾಯಿಯ ಎದೆ ಹಾಲು ತುಂಬಾ ಚೆನ್ನಾಗಿ ಕೆಲಸ ಮಾಡುತ್ತದೆ. ಎದೆ ಹಾಲು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, ದದ್ದುಗಳು ಮತ್ತು ಎಸ್ಜಿಮಾ ಇರುವ ಪ್ರದೇಶಗಳಲ್ಲಿ ಎದೆ ಹಾಲನ್ನು ತೆಗೆದು ಸ್ವಲ್ಪ ಸ್ವಲ್ಪವೇ ಹಚ್ಚುವುದರಿಂದ ಈ ದದ್ದುಗಳು ಕಡಿಮೆಯಾಗಲು ಸಹಾಯವಾಗುತ್ತದೆ.

ಇದನ್ನೂ ಓದಿ: ಕರ್ನಾಟಕದ 41,000 ಮಕ್ಕಳಲ್ಲಿ ಜನ್ಮಜಾತ ಹೃದಯ ಕಾಯಿಲೆ: ಸಮೀಕ್ಷೆಯಲ್ಲಿ ಬಯಲಾಯ್ತು ಆಘಾತಕಾರಿ ಅಂಶ

ತೆಂಗಿನ ಎಣ್ಣೆ

ಪ್ರತಿಯೊಬ್ಬರ ಮನೆಯಲ್ಲಿಯೂ ಸಿಗುವ ತೆಂಗಿನ ಎಣ್ಣೆಯು ಡೈಪರ್‌ ನಿಂದ ಉಂಟಾಗುವ ದದ್ದುಗಳು ಮತ್ತು ಕಿರಿಕಿರಿಯನ್ನು ಸಹ ಕಡಿಮೆ ಮಾಡುತ್ತದೆ. ಅಡುಗೆಗೆ ಮತ್ತು ಇನ್ನಿತರ ಉಪಯೋಗಕ್ಕಾಗಿ ಬಳಸುವ ತೆಂಗಿನ ಎಣ್ಣೆಯಲ್ಲಿ ಉತ್ತಮ ಪೋಷಕಾಂಶಗಳಿವೆ. ಡೈಪರ್‌ ಹಾಕುವ ಮೊದಲು ತೆಂಗಿನ ಎಣ್ಣೆಯನ್ನು ಹಚ್ಚುವುದರಿಂದ ಉರಿ, ತುರಿಕೆ ಮತ್ತು ಅಸ್ವಸ್ಥತೆ ಕಡಿಮೆಯಾಗುತ್ತದೆ.

ವ್ಯಾಸಲೀನ್

ವ್ಯಾಸಲೀನ್ ಬಳಸುವುದರಿಂದ ಡೈಪರ್ ಧರಿಸಿ ಉಂಟಾಗುವ ದದ್ದುಗಳು, ಸುಡುವಿಕೆ, ತುರಿಕೆ ಮತ್ತು ದದ್ದುಗಳನ್ನು ಕಡಿಮೆ ಮಾಡಬಹುದು. ವ್ಯಾಸಲೀನ್ ಚರ್ಮ ಮೃದುವಾಗಿರಲು ಸಹಾಯ ಮಾಡುವ ಮೂಲಕ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇವೆಲ್ಲವನ್ನೂ ಅನುಸರಿಸಿದರೆ ಡೈಪರ್‌ ಬಳಕೆ ಮಾಡಿದರೂ ಯಾವುದೇ ರೀತಿಯ ಸಮಸ್ಯೆಗಳು ಕಂಡು ಬರುವುದಿಲ್ಲ. ನೀವು ಕೂಡ ಇತ್ತೀಚಿಗೆ ತಾಯಿಯಾಗಿ ನಿಮ್ಮ ಮಗುವಿನ ಲಾಲನೆ ಪಾಲನೆ ಮಾಡುತ್ತಿದ್ದು, ನಿಮಗೂ ಮಕ್ಕಳಿಗೆ ಡೈಪರ್‌ ಹಾಕುವುದಕ್ಕೆ ಭಯವಿದ್ದರೆ ಈ ಮೂರು ಸುಲಭ ವಿಧಾನವನ್ನು ಅನುಸರಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ