AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Papaya Seeds :ಮಧುಮೇಹಕ್ಕೆ ಪಪ್ಪಾಯಿ ಬೀಜಗಳು ರಾಮಬಾಣ: ಅದ್ಭುತ ಪ್ರಯೋಜನಗಳು ಇಲ್ಲಿವೆ

ಮಧುಮೇಹದಿಂದ ಬಳಲುತ್ತಿರುವವರಿಗೆ ಪಪ್ಪಾಯಿ ಬೀಜಗಳು  ಸಾಕಷ್ಟು ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? ಮಧುಮೇಹಿಗಳು ಆಹಾರದಲ್ಲಿ ಪಪ್ಪಾಯಿ ಬೀಜಗಳನ್ನು ಹೇಗೆ ಸೇವಿಸಬೇಕು ಮತ್ತು ಪ್ರಯೋಜನಗಳು, ಅಡ್ಡಪರಿಣಾಮಗಳ ಕುರಿತು ಮಾಹಿತಿ ಇಲ್ಲಿದೆ.

Papaya Seeds :ಮಧುಮೇಹಕ್ಕೆ ಪಪ್ಪಾಯಿ ಬೀಜಗಳು ರಾಮಬಾಣ: ಅದ್ಭುತ ಪ್ರಯೋಜನಗಳು ಇಲ್ಲಿವೆ
ಪಪ್ಪಾಯಿ ಬೀಜಗಳು
TV9 Web
| Updated By: ಅಕ್ಷತಾ ವರ್ಕಾಡಿ|

Updated on: Feb 25, 2023 | 8:00 AM

Share

ಮಧುಮೇಹವು ಪ್ರಪಂಚದಾದ್ಯಂತ ಲಕ್ಷಾಂತರ ಜನರಲ್ಲಿ ಕಂಡುಬರುವ ಒಂದು ಸಮಸ್ಯೆಯಾಗಿದ್ದು, ಇದು ರೋಗಿಯ ದೈನಂದಿನ ಜೀವನದಲ್ಲಿ ಸಾಕಷ್ಟು ಅಡ್ಡಿಯನ್ನುಂಟು ಮಾಡುತ್ತದೆ. ನೀವು ಸರಿಯಾದ ರೀತಿಯ ಆಹಾರ ಮತ್ತು ಜೀವನಶೈಲಿಯ ಬದಲಾವಣೆಗಳೊಂದಿಗೆ ಮಧುಮೇಹವನ್ನು ಸುಲಭವಾಗಿ ನಿರ್ವಹಿಸಬಹುದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಆಹಾರದಲ್ಲಿ ಸೇರಿಸಬಹುದಾದ ಕೆಲವು ಆಹಾರಗಳು, ಧಾನ್ಯಗಳು ಮತ್ತು ಉತ್ಪನ್ನಗಳಿವೆ. ಮಧುಮೇಹಿಗಳು ಸುರಕ್ಷಿತವಾಗಿ ಸೇವಿಸಬಹುದಾದ ಕೆಲವು ಹಣ್ಣುಗಳನ್ನು ಆಹಾರ ತಜ್ಞರು ಶಿಫಾರಸು ಮಾಡುತ್ತಾರೆ ಮತ್ತು ಅವುಗಳಲ್ಲಿ ಒಂದು ಪಪ್ಪಾಯಿ. ಮಧುಮೇಹದಿಂದ ಬಳಲುತ್ತಿರುವವರಿಗೆ ಪಪ್ಪಾಯಿ ಬೀಜಗಳು  ಸಾಕಷ್ಟು ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? ಮಧುಮೇಹಿಗಳು ಆಹಾರದಲ್ಲಿ ಪಪ್ಪಾಯಿ ಬೀಜಗಳನ್ನು ಹೇಗೆ ಸೇವಿಸಬೇಕು ಮತ್ತು ಪ್ರಯೋಜನಗಳು, ಅಡ್ಡಪರಿಣಾಮಗಳ ಕುರಿತು ಮಾಹಿತಿ ಇಲ್ಲಿದೆ.

ಪಪ್ಪಾಯಿಯಂತೆಯೇ, ಪಪ್ಪಾಯಿ ಬೀಜಗಳು ಸಹ ಸಾಕಷ್ಟು ಫೈಬರ್‌ನಿಂದ ಸಮೃದ್ಧವಾಗಿವೆ. ಇದು ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳಲು ಮತ್ತು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಪಪ್ಪಾಯಿ ಬೀಜಗಳಲ್ಲಿ ಪಾಲಿಫಿನಾಲ್‌ಗಳು, ಫ್ಲೇವನಾಯ್ಡ್‌ಗಳು ಮತ್ತು ಇತರ ಉತ್ಕರ್ಷಣ ನಿರೋಧಕಗಳು ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳ ವಿರುದ್ಧ ರಕ್ಷಣೆ ನೀಡುತ್ತದೆ. ಮಧುಮೇಹದಿಂದ ಉಂಟಾಗುವ ಆಕ್ಸಿಡೇಟಿವ್ ಒತ್ತಡದ ವಿರುದ್ಧ ಪಪ್ಪಾಯಿ ಬೀಜಗಳು ಸಾಕಷ್ಟು ಪ್ರಯೋಜನಕಾರಿ ಎಂದು ಅಧ್ಯಯನವು ಕಂಡುಹಿಡಿದಿದೆ. ಪಪ್ಪಾಯಿ ಬೀಜಗಳು ತುಂಬಾ ಕಹಿಯಾಗಿರುತ್ತವೆ, ಅದಕ್ಕಾಗಿಯೇ ಅವು ಕೆಲವು ವ್ಯಕ್ತಿಗಳಲ್ಲಿ ಜಠರ-ಕರುಳಿನ ಅಡಚಣೆಯನ್ನು ಉಂಟುಮಾಡಬಹುದು. ಗರ್ಭಿಣಿ ಅಥವಾ ಬಾಣಂತಿಯರು ಪಪ್ಪಾಯಿ ಸೇವಿಸುವುದನ್ನು ತಪ್ಪಿಸಬೇಕು ಎಂದು ತಜ್ಞರು ಎಚ್ಚರಿಸುತ್ತಾರೆ.

ಇದನ್ನೂ ಓದಿ: ಹುಳಿ ಮತ್ತು ಖಾರವನ್ನು ಸಿಹಿಮಾಡುವ ಶಕ್ತಿ ಈ ಹಣ್ಣಿಗಿದೆ, ಯಾವುದು ಈ ಹಣ್ಣು?

ಮಧುಮೇಹದ ಆಹಾರಕ್ಕಾಗಿ ಪಪ್ಪಾಯಿ ಬೀಜಗಳನ್ನು ಹೇಗೆ ಸೇವಿಸುವುದು ಪಪ್ಪಾಯಿ ಬೀಜಗಳು ಸಾಕಷ್ಟು ಕಹಿಯಾಗಿರುವುದರಿಂದ ಅವುಗಳನ್ನು ಹಸಿಯಾಗಿ ಸೇವಿಸುವುದು ಕಷ್ಟ. ನೀವು ಅವುಗಳನ್ನು ಪುಡಿ ಮಾಡಬಹುದು ಮತ್ತು ಅವುಗಳನ್ನು ಜ್ಯೂಸ್, ಸ್ಮೂಥಿಗಳು ಅಥವಾ ಸಿಹಿತಿಂಡಿಗಳ ಮೇಲೆ ಸೇರಿಸಬಹುದು. ಅವುಗಳ ಪರಿಮಳವನ್ನು ಮರೆಮಾಚಲು ಮತ್ತು ಕಹಿ ರುಚಿಯನ್ನು ಕಡಿಮೆ ಮಾಡಲು ಮೇಲೋಗರಗಳು ಮತ್ತು ಗ್ರೇವಿಗಳ ಮೇಲೆ ಅವುಗಳನ್ನು ಸಿಂಪಡಿಸಿ. ಪಪ್ಪಾಯಿ ಬೀಜದ ಅತಿಯಾದ ಸೇವನೆ ಮಾಡದಿರಿ. ಜೊತೆಗೆ ನಿಮ್ಮ ಆಹಾರದಲ್ಲಿ ಯಾವುದೇ ಪ್ರಮುಖ ಬದಲಾವಣೆಗಳನ್ನು ಮಾಡುವ ಮೊದಲು ಯಾವಾಗಲೂ ನಿಮ್ಮ ಹತ್ತಿರದ ವೈದ್ಯರನ್ನು ಅಥವಾ ಪೌಷ್ಟಿಕತಜ್ಞರನ್ನು ಸಂಪರ್ಕಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ