AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿಮ್ಮ ನಾಲಿಗೆಯ ಬಣ್ಣ ನಿಮ್ಮ ಆರೋಗ್ಯವನ್ನು ಹೇಳುತ್ತದೆ, ಅದು ಹೇಗೆ?

ನಾಲಿಗೆ ಬಣ್ಣ ಬದಲಾದರೆ ನಿಮ್ಮ ದೇಹದ ಆರೋಗ್ಯ ಏರುಪೇರಾಗಿದೆ ಎಂದು ತಿಳಿದುಕೊಳ್ಳಬಹುದು. ನಾಲಿಗೆಯ ಬಣ್ಣ, ಆರೋಗ್ಯ ಸಮಸ್ಯೆಯನ್ನು ಸೂಚಿಸುತ್ತದೆ. ಹಾಗಾದರೆ ಆರೋಗ್ಯವಂತರ ನಾಲಿಗೆ ಯಾವ ಬಣ್ಣದಲ್ಲಿರುತ್ತದೆ? ಬಣ್ಣ ಬದಲಾಗುವುದಕ್ಕೆ ಕಾರಣಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Health Tips: ನಿಮ್ಮ ನಾಲಿಗೆಯ ಬಣ್ಣ ನಿಮ್ಮ ಆರೋಗ್ಯವನ್ನು ಹೇಳುತ್ತದೆ, ಅದು ಹೇಗೆ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 17, 2024 | 4:12 PM

Share

ನಮ್ಮ ದೇಹದಲ್ಲಿ ಏನೇ ಬದಲಾವಣೆಗಳಾದರೂ ಪಂಚೇಂದ್ರಿಯಗಳು ಅದರ ಲಕ್ಷಣಗಳನ್ನು ತೋರಿಸುತ್ತವೆ ಎಂದು ವೈದ್ಯರು ಹೇಳುತ್ತಾರೆ. ಉದಾಹರಣೆಗೆ ದೇಹದಲ್ಲಿ ಅತಿಯಾದ ಉಷ್ಣಾಂಶವಾದರೆ ಕಣ್ಣು ಉರಿಯುತ್ತದೆ ಕೆಲವೊಮ್ಮೆ ಕೆಂಪಗಾಗುತ್ತದೆ, ಸೇವಿಸಿದ ಆಹಾರ ಅಲರ್ಜಿಯಾದರೆ ಚರ್ಮದ ಮೇಲೆ ದದ್ದುಗಳು ಉಂಟಾಗುತ್ತವೆ. ಅದೇ ರೀತಿ ನಾಲಿಗೆ ಬಣ್ಣ ಬದಲಾದರೆ ನಿಮ್ಮ ದೇಹದ ಆರೋಗ್ಯ ಏರುಪೇರಾಗಿದೆ ಎಂದು ತಿಳಿದುಕೊಳ್ಳಬಹುದು. ನಾಲಿಗೆಯ ಬಣ್ಣ, ಆರೋಗ್ಯ ಸಮಸ್ಯೆಯನ್ನು ಸೂಚಿಸುತ್ತದೆ. ಹಾಗಾದರೆ ಆರೋಗ್ಯವಂತರ ನಾಲಿಗೆ ಯಾವ ಬಣ್ಣದಲ್ಲಿರುತ್ತದೆ? ಬಣ್ಣ ಬದಲಾಗುವುದಕ್ಕೆ ಕಾರಣಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಗುಲಾಬಿ ಬಣ್ಣ: ಆರೋಗ್ಯವಂತರ ನಾಲಿಗೆ ಗುಲಾಬಿಯಾಗಿರಬೇಕು. ನೀವು ತಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತಿದ್ದರೆ ನಿಮ್ಮ ನಾಲಿಗೆ ಗುಲಾಬಿ ಬಣ್ಣದಲ್ಲಿರುತ್ತದೆ.

ಬಿಳಿ ಬಣ್ಣ: ನಾಲಿಗೆ ಬಿಳಿ ಬಣ್ಣಕ್ಕೆ ತಿರುಗಿದರೆ ದೇಹ ಸೋಂಕಿಗೆ ಒಳಗಾಗಿದೆ ಎಂದು ತಿಳಿದುಕೊಳ್ಳಬಹುದು. ಕೆಲವೊಮ್ಮೆ ಕಫ ಇದ್ದಾಗಲೂ ಸಹ ಬಿಳಿ ಬಣ್ಣಕ್ಕೆ ತಿರುಗುತ್ತದೆ ಜೊತೆಗೆ ನಾಲಿಗೆ ಹೆಚ್ಚು ದ್ರವದಿಂದ ಕೂಡಿರುತ್ತದೆ. ಮತ್ತೆ ಕೆಲವರಿಗೆ ದೇಹದಲ್ಲಿ ನೀರಿನ ಅಂಶ ಕಡಿಮೆಯಾದರೂ ಕೂಡ ಈ ಬಣ್ಣಕ್ಕೆ ತಿರುಗುತ್ತದೆ. ಹಾಗಾಗಿ ನಾಲಿಗೆ ಸ್ವಚ್ಚತೆ ಮತ್ತು ಆರೋಗ್ಯವನ್ನು ಆಗಾಗ ಪರೀಕ್ಷಿಸಿಕೊಳ್ಳುವುದು ಒಳ್ಳೆಯದು.

ಕೆಂಪು ಬಣ್ಣ: ದೇಹದಲ್ಲಿ ಅಲರ್ಜಿಯಾದರೆ ನಾಲಿಗೆ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಕೆಲವೊಮ್ಮೆ ‘ಫೋಲಿಕ್ ಆಮ್ಲ’ ಅಥವಾ ‘ವಿಟಮಿನ್ ಬಿ12’ ಕೊರತೆಯು ನಾಲಿಗೆ ಕೆಂಪಾಗಲು ಕಾರಣವಾಗುತ್ತದೆ.

ಹಳದಿ ಬಣ್ಣ: ಬ್ಯಾಕ್ಟೀರಿಯಾ ಅಥವಾ ವಾತ ದೋಷದಲ್ಲಿ ವ್ಯತ್ಯಾಸವಾದರೆ ನಾಲಿಗೆ ಹಳದಿ ಬಣ್ಣಕ್ಕೆ ತಿರುಗುತ್ತದೆ. ಇದರಿಂದ ಮಲಬದ್ಧತೆ, ಅಧಿಕ ರಕ್ತದೊತ್ತಡ, ಸಂಧಿವಾತ, ಇತರ ಹೊಟ್ಟೆ ಅಥವಾ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಕಂಡುಬರಬಹುದು. ಕೆಲವೊಮ್ಮೆ ಹೆಚ್ಚು ಔಷಧಿಗಳನ್ನು ತೆಗೆದುಕೊಂಡಾಗಲು ನಾಲಿಗೆಯ ಮೇಲೆ ಹಳದಿ ಬಣ್ಣ ಕಾಣಿಸಿಕೊಳ್ಳಬಹುದು.

ನೀಲಿ ಬಣ್ಣ: ದೇಹದಲ್ಲಿ ಪಿತ್ತ ಜಾಸ್ತಿಯಾ್ದಾರೆ ನಾಲಿಗೆ ನೀಲಿ ಬಣ್ಣಕ್ಕೆ ಬರುತ್ತದೆ. ಜೊತೆಗೆ ಆಮ್ಲಜನಕದ ಕೊರತೆಯಾದರೂ ಕೂಡ ನಾಲಿಗೆ ಈ ಬಣ್ಣಕ್ಕೆ ತಿರುಗುತ್ತದೆ.

ಇದನ್ನೂ ಓದಿ: ವಾಕಿಂಗ್ ಈ ರೀತಿ ಮಾಡಿದರೆ ಕಾಯಿಲೆಗಳು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ

ನೇರಳೆ ಬಣ್ಣ: ತೀವ್ರ ಹೃದಯ ಸಮಸ್ಯೆಗಳಿರುವವರ ನಾಲಿಗೆ ನೇರಳೆ ಬಣ್ಣಕ್ಕೆ ತಿರುಗಬಹುದು. ಅಂದರೆ, ನಿಮ್ಮ ಹೃದಯವು ಸಾಕಷ್ಟು ರಕ್ತವನ್ನು ನೀಡಲು ಸಾಧ್ಯವಾಗಿರುವುದಿಲ್ಲ.

ಬೂದು ಬಣ್ಣ: ಹೊಟ್ಟೆ ಉಬ್ಬರ ಅಥವಾ ಗ್ಯಾಸ್ ಆಗಿದ್ದರೆ ನಾಲಿಗೆ ಬೂದು ಬಣ್ಣಕ್ಕೆ ತಿರುಗುತ್ತದೆ.

ಕಪ್ಪು ಬಣ್ಣ: ಕೆರಾಟಿನ್ ಸಮಸ್ಯೆ ತುಂಬಾ ಜಾಸ್ತಿಯಾದಲ್ಲಿ ನಿಮ್ಮ ನಾಲಿಗೆ ಕಪ್ಪು ಬಣ್ಣವಾಗುತ್ತದೆ. ಹಾಗಾಗಿ ನಿಮ್ಮ ಆರೋಗ್ಯವನ್ನು ಆಗಾಗ ಪರೀಕ್ಷಿಸಿಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ