Dill Leaves Benefits: ಬಾಣಂತಿಯರಿಗೆ ಸಬ್ಬಸಿಗೆ ಸೊಪ್ಪು ದೇವರು ಕೊಟ್ಟ ವರದಾನ!

ಹೆರಿಗೆಯ ನಂತರದ ಆಹಾರ ಸೇವನೆಯಲ್ಲಿ ಕೆಲವು ಪಥ್ಯಗಳನ್ನು ಮಾಡಬೇಕಾಗಿರುತ್ತದೆ. ಹಾಗಾಗಿ ಯಾವುದು ತಿನ್ನಬೇಕು ಮತ್ತು ತಿನ್ನಬಾರದು ಎಂಬುದರ ಕಡೆಗೆ ಗಮನ ನೀಡುವುದರ ಜೊತೆಗೆ ಯಾವ ಆಹಾರ ಸೇವನೆ ಮಾಡುವುದರಿಂದ ಅತ್ಯಧಿಕ ಲಾಭಗಳಿವೆ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಅಂತಹ ಅತ್ಯಧಿಕ ಪೋಷಕಾಂಶಗಳನ್ನು ಒಳಗೊಂಡಿರುವುದರಲ್ಲಿ ಸಬ್ಬಸಿಗೆ ಸೊಪ್ಪು ಅಗ್ರ ಸ್ಥಾನದಲ್ಲಿರುತ್ತದೆ. ಇದು ಬಾಣಂತಿಯರಿಗೆ ದೇವರು ಕೊಟ್ಟ ವರದಾನ ಎಂದರೆ ತಪ್ಪಾಗಲಾರದು. ಹಾಗಾದರೆ ಇದರ ಸೇವನೆಯನ್ನು ಯಾವ ರೀತಿಯಲ್ಲಿ ಮಾಡಬಹುದು? ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Dill Leaves Benefits: ಬಾಣಂತಿಯರಿಗೆ ಸಬ್ಬಸಿಗೆ ಸೊಪ್ಪು ದೇವರು ಕೊಟ್ಟ ವರದಾನ!
ಸಬ್ಬಸಿಗೆ ಸೊಪ್ಪು
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 17, 2024 | 3:33 PM

ಭಾರತೀಯ ಆಹಾರ ಪದ್ದತಿಯಲ್ಲಿ ಹೆರಿಗೆಯ ನಂತರದ ಆಹಾರ ಸೇವನೆಯಲ್ಲಿ ಕೆಲವು ಪಥ್ಯಗಳನ್ನು ಮಾಡಬೇಕಾಗಿರುತ್ತದೆ. ಹಾಗಾಗಿ ಯಾವುದು ತಿನ್ನಬೇಕು ಮತ್ತು ತಿನ್ನಬಾರದು ಎಂಬುದರ ಕಡೆಗೆ ಗಮನ ನೀಡುವುದರ ಜೊತೆಗೆ ಯಾವ ಆಹಾರ ಸೇವನೆ ಮಾಡುವುದರಿಂದ ಅತ್ಯಧಿಕ ಲಾಭಗಳಿವೆ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಅಂತಹ ಅತ್ಯಧಿಕ ಪೋಷಕಾಂಶಗಳನ್ನು ಒಳಗೊಂಡಿರುವುದರಲ್ಲಿ ಸಬ್ಬಸಿಗೆ ಸೊಪ್ಪು ಅಗ್ರ ಸ್ಥಾನದಲ್ಲಿರುತ್ತದೆ. ಇದು ಬಾಣಂತಿಯರಿಗೆ ದೇವರು ಕೊಟ್ಟ ವರದಾನ ಎಂದರೆ ತಪ್ಪಾಗಲಾರದು. ಹಾಗಾದರೆ ಇದರ ಸೇವನೆಯನ್ನು ಯಾವ ರೀತಿಯಲ್ಲಿ ಮಾಡಬಹುದು? ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಬಾಣಂತಿಯರಿಗೆ ಸಾಮಾನ್ಯವಾಗಿ ನಿಶಕ್ತಿ, ಆಯಾಸ ಇದ್ದೇ ಇರುತ್ತದೆ. ಆ ಸಮಯದಲ್ಲಿ ನೀಡುವ ಆಹಾರ ತಾಯಂದಿರಿಗೆ ಮತ್ತು ಮಗುವಿನ ದೇಹಕ್ಕೆ ತುಂಬಾ ಉಪಯೋಗಕಾರಿಯಾಗಿರಬೇಕು. ಏಕೆಂದರೆ ಈ ಸಮಯದಲ್ಲಿ ತೆಗೆದುಕೊಳ್ಳುವ ಆಹಾರ ಮಕ್ಕಳ ಆರೋಗ್ಯಕರ ಬೆಳವಣಿಗೆಗೂ ಕೂಡ ತುಂಬಾ ಮುಖ್ಯವಾಗಿರುತ್ತದೆ. ಹಾಗಾಗಿ ಸಬ್ಬಸಿಗೆ ಸೊಪ್ಪನ್ನು ಹೇರಳವಾಗಿ ನೀಡುವುದು ತುಂಬಾ ಒಳ್ಳೆಯದು. ಇದರಿಂದ ಅನೇಕ ರೀತಿಯ ಪದಾರ್ಥಗಳನ್ನು ಕೂಡ ತಯಾರಿಸಬಹುದಾಗಿದ್ದು ಬಗೆ ಬಗೆಯ ಖಾದ್ಯಗಳನ್ನು ಮಾಡಿ ಸವಿಯಬಹುದಾಗಿದೆ. ಅಂದರೆ ಸಾರು, ಪಲ್ಯ, ಇಡ್ಲಿ, ಚಹಾಕ್ಕೆ ಕೂಡ ಸಬ್ಬಸಿಗೆ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡುವುದು ಉತ್ತಮ.

ಈ ಬಗ್ಗೆ ಕೆಲವು ಆರೋಗ್ಯಕರ ಮಾಹಿತಿಗಳನ್ನು arogyabhagya_kannada ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದು ಸಬ್ಬಸಿಗೆ ಸೊಪ್ಪು ಬಾಣಂತಿಯರಿಗೆ ಎಷ್ಟು ಒಳ್ಳೆಯದು ಎಂಬುದರ ಕುರಿತು ಹಲವಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಹೇಳಿರುವ ಪ್ರಕಾರ ಕೇವಲ ಸಬ್ಬಸಿಗೆ ಸೊಪ್ಪು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಇದನ್ನೂ ಓದಿ: ಒಳ ಉಡುಪಿನ ಆಯ್ಕೆ ಹೇಗಿರಬೇಕು? ಯಾವುದು ಉತ್ತಮ

ಬಾಣಂತಿಯರ ಸಮಸ್ಯೆಗೆ ರಾಮಬಾಣ

ಸಬ್ಬಸಿಗೆ ಬೀಜವನ್ನು ಎರಡು ಚಮಚದಷ್ಟು ತೆಗೆದುಕೊಂಡು ಅದನ್ನು ಚೆನ್ನಾಗಿ ಕುಟ್ಟಿ ಪುಡಿ ಮಾಡಿ ನೀರಿನಲ್ಲಿ ಚೆನ್ನಾಗಿ ಕುದಿಸಿ ಅಂದರೆ ಅರ್ಧ ಪಾತ್ರೆ ನೀರು ಕಾಲು ಪಾತ್ರೆಗೆ ಬರುವ ತನಕ ಸರಿಯಾಗಿ ಕುದಿಸಿ ಕುಡಿಯುವುದರಿಂದ ಬಾಣಂತಿಯರಲ್ಲಿ ಕಂಡು ಬರುವ ಅನೇಕ ಸಮಸ್ಯೆಗಳು, ಉದಾಹರಣೆಗೆ ಎದೆ ಹಾಲು ಕಡಿಮೆಯಾಗುವುದು, ಸುಸ್ತು, ಸೊಂಟ ನೋವನ್ನು ನಿವಾರಣೆ ಮಾಡುವಂತಹ ಶಕ್ತಿಯನ್ನು ಹೊಂದಿದೆ. ಅಲ್ಲದೆ ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚುವರಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ