AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dill Leaves Benefits: ಬಾಣಂತಿಯರಿಗೆ ಸಬ್ಬಸಿಗೆ ಸೊಪ್ಪು ದೇವರು ಕೊಟ್ಟ ವರದಾನ!

ಹೆರಿಗೆಯ ನಂತರದ ಆಹಾರ ಸೇವನೆಯಲ್ಲಿ ಕೆಲವು ಪಥ್ಯಗಳನ್ನು ಮಾಡಬೇಕಾಗಿರುತ್ತದೆ. ಹಾಗಾಗಿ ಯಾವುದು ತಿನ್ನಬೇಕು ಮತ್ತು ತಿನ್ನಬಾರದು ಎಂಬುದರ ಕಡೆಗೆ ಗಮನ ನೀಡುವುದರ ಜೊತೆಗೆ ಯಾವ ಆಹಾರ ಸೇವನೆ ಮಾಡುವುದರಿಂದ ಅತ್ಯಧಿಕ ಲಾಭಗಳಿವೆ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಅಂತಹ ಅತ್ಯಧಿಕ ಪೋಷಕಾಂಶಗಳನ್ನು ಒಳಗೊಂಡಿರುವುದರಲ್ಲಿ ಸಬ್ಬಸಿಗೆ ಸೊಪ್ಪು ಅಗ್ರ ಸ್ಥಾನದಲ್ಲಿರುತ್ತದೆ. ಇದು ಬಾಣಂತಿಯರಿಗೆ ದೇವರು ಕೊಟ್ಟ ವರದಾನ ಎಂದರೆ ತಪ್ಪಾಗಲಾರದು. ಹಾಗಾದರೆ ಇದರ ಸೇವನೆಯನ್ನು ಯಾವ ರೀತಿಯಲ್ಲಿ ಮಾಡಬಹುದು? ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Dill Leaves Benefits: ಬಾಣಂತಿಯರಿಗೆ ಸಬ್ಬಸಿಗೆ ಸೊಪ್ಪು ದೇವರು ಕೊಟ್ಟ ವರದಾನ!
ಸಬ್ಬಸಿಗೆ ಸೊಪ್ಪು
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 17, 2024 | 3:33 PM

Share

ಭಾರತೀಯ ಆಹಾರ ಪದ್ದತಿಯಲ್ಲಿ ಹೆರಿಗೆಯ ನಂತರದ ಆಹಾರ ಸೇವನೆಯಲ್ಲಿ ಕೆಲವು ಪಥ್ಯಗಳನ್ನು ಮಾಡಬೇಕಾಗಿರುತ್ತದೆ. ಹಾಗಾಗಿ ಯಾವುದು ತಿನ್ನಬೇಕು ಮತ್ತು ತಿನ್ನಬಾರದು ಎಂಬುದರ ಕಡೆಗೆ ಗಮನ ನೀಡುವುದರ ಜೊತೆಗೆ ಯಾವ ಆಹಾರ ಸೇವನೆ ಮಾಡುವುದರಿಂದ ಅತ್ಯಧಿಕ ಲಾಭಗಳಿವೆ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಅಂತಹ ಅತ್ಯಧಿಕ ಪೋಷಕಾಂಶಗಳನ್ನು ಒಳಗೊಂಡಿರುವುದರಲ್ಲಿ ಸಬ್ಬಸಿಗೆ ಸೊಪ್ಪು ಅಗ್ರ ಸ್ಥಾನದಲ್ಲಿರುತ್ತದೆ. ಇದು ಬಾಣಂತಿಯರಿಗೆ ದೇವರು ಕೊಟ್ಟ ವರದಾನ ಎಂದರೆ ತಪ್ಪಾಗಲಾರದು. ಹಾಗಾದರೆ ಇದರ ಸೇವನೆಯನ್ನು ಯಾವ ರೀತಿಯಲ್ಲಿ ಮಾಡಬಹುದು? ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಬಾಣಂತಿಯರಿಗೆ ಸಾಮಾನ್ಯವಾಗಿ ನಿಶಕ್ತಿ, ಆಯಾಸ ಇದ್ದೇ ಇರುತ್ತದೆ. ಆ ಸಮಯದಲ್ಲಿ ನೀಡುವ ಆಹಾರ ತಾಯಂದಿರಿಗೆ ಮತ್ತು ಮಗುವಿನ ದೇಹಕ್ಕೆ ತುಂಬಾ ಉಪಯೋಗಕಾರಿಯಾಗಿರಬೇಕು. ಏಕೆಂದರೆ ಈ ಸಮಯದಲ್ಲಿ ತೆಗೆದುಕೊಳ್ಳುವ ಆಹಾರ ಮಕ್ಕಳ ಆರೋಗ್ಯಕರ ಬೆಳವಣಿಗೆಗೂ ಕೂಡ ತುಂಬಾ ಮುಖ್ಯವಾಗಿರುತ್ತದೆ. ಹಾಗಾಗಿ ಸಬ್ಬಸಿಗೆ ಸೊಪ್ಪನ್ನು ಹೇರಳವಾಗಿ ನೀಡುವುದು ತುಂಬಾ ಒಳ್ಳೆಯದು. ಇದರಿಂದ ಅನೇಕ ರೀತಿಯ ಪದಾರ್ಥಗಳನ್ನು ಕೂಡ ತಯಾರಿಸಬಹುದಾಗಿದ್ದು ಬಗೆ ಬಗೆಯ ಖಾದ್ಯಗಳನ್ನು ಮಾಡಿ ಸವಿಯಬಹುದಾಗಿದೆ. ಅಂದರೆ ಸಾರು, ಪಲ್ಯ, ಇಡ್ಲಿ, ಚಹಾಕ್ಕೆ ಕೂಡ ಸಬ್ಬಸಿಗೆ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡುವುದು ಉತ್ತಮ.

ಈ ಬಗ್ಗೆ ಕೆಲವು ಆರೋಗ್ಯಕರ ಮಾಹಿತಿಗಳನ್ನು arogyabhagya_kannada ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದು ಸಬ್ಬಸಿಗೆ ಸೊಪ್ಪು ಬಾಣಂತಿಯರಿಗೆ ಎಷ್ಟು ಒಳ್ಳೆಯದು ಎಂಬುದರ ಕುರಿತು ಹಲವಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಹೇಳಿರುವ ಪ್ರಕಾರ ಕೇವಲ ಸಬ್ಬಸಿಗೆ ಸೊಪ್ಪು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಇದನ್ನೂ ಓದಿ: ಒಳ ಉಡುಪಿನ ಆಯ್ಕೆ ಹೇಗಿರಬೇಕು? ಯಾವುದು ಉತ್ತಮ

ಬಾಣಂತಿಯರ ಸಮಸ್ಯೆಗೆ ರಾಮಬಾಣ

ಸಬ್ಬಸಿಗೆ ಬೀಜವನ್ನು ಎರಡು ಚಮಚದಷ್ಟು ತೆಗೆದುಕೊಂಡು ಅದನ್ನು ಚೆನ್ನಾಗಿ ಕುಟ್ಟಿ ಪುಡಿ ಮಾಡಿ ನೀರಿನಲ್ಲಿ ಚೆನ್ನಾಗಿ ಕುದಿಸಿ ಅಂದರೆ ಅರ್ಧ ಪಾತ್ರೆ ನೀರು ಕಾಲು ಪಾತ್ರೆಗೆ ಬರುವ ತನಕ ಸರಿಯಾಗಿ ಕುದಿಸಿ ಕುಡಿಯುವುದರಿಂದ ಬಾಣಂತಿಯರಲ್ಲಿ ಕಂಡು ಬರುವ ಅನೇಕ ಸಮಸ್ಯೆಗಳು, ಉದಾಹರಣೆಗೆ ಎದೆ ಹಾಲು ಕಡಿಮೆಯಾಗುವುದು, ಸುಸ್ತು, ಸೊಂಟ ನೋವನ್ನು ನಿವಾರಣೆ ಮಾಡುವಂತಹ ಶಕ್ತಿಯನ್ನು ಹೊಂದಿದೆ. ಅಲ್ಲದೆ ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚುವರಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ