AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಪದೇ ಪದೇ ನೋಯುತ್ತಿರುವ ಗಂಟಲು, ಸೌಮ್ಯ ಜ್ವರದ ಲಕ್ಷಣಗಳಿದ್ದರೆ ನಿರ್ಲಕ್ಷ್ಯಿಸದಿರಿ

ಪದೇ ಪದೇ ಗಂಟಲು ನೋವಿನ ಸಮಸ್ಯೆ ಕಾಡುತ್ತಿದ್ದರೆ ಇದು ದೇಹದಲ್ಲಿ ಡಿಫ್ತೀರಿಯಾದ ಲಕ್ಷಣವಾಗಿರಬಹುದು . ಈ ಸೋಂಕು ಹೃದಯ ಮತ್ತು ಮೆದುಳಿಗೆ ಹಾನಿ ಮಾಡುತ್ತದೆ. ಅದಕ್ಕಾಗಿಯೇ ಈ ರೋಗವನ್ನು ಲಘುವಾಗಿ ಪರಿಗಣಿಸಬಾರದು ಎಂದು ದೆಹಲಿಯ ಹಿರಿಯ ವೈದ್ಯ ಡಾ.ಅಜಯ್ ಕುಮಾರ್ ಎಚ್ಚರಿಸುತ್ತಾರೆ.

Health Tips: ಪದೇ ಪದೇ ನೋಯುತ್ತಿರುವ ಗಂಟಲು, ಸೌಮ್ಯ ಜ್ವರದ ಲಕ್ಷಣಗಳಿದ್ದರೆ ನಿರ್ಲಕ್ಷ್ಯಿಸದಿರಿ
Diphtheria
ಅಕ್ಷತಾ ವರ್ಕಾಡಿ
|

Updated on: Apr 17, 2024 | 8:15 PM

Share

ಕೆಲವೊಮ್ಮೆ ಹವಾಮಾನ ಬದಲಾವಣೆಯ ಕಾರಣಗಳಿಂದ ಗಂಟಲು ನೋವಿನ ಸಮಸ್ಯೆ ಉಂಟಾಗುತ್ತದೆ. ಆದರೆ ಪದೇ ಪದೇ ಗಂಟಲು ನೋವಿನ ಸಮಸ್ಯೆ ಕಾಡುತ್ತಿದ್ದರೆ ಇದು ದೇಹದಲ್ಲಿ ಡಿಫ್ತೀರಿಯಾದ ಲಕ್ಷಣವಾಗಿರಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಈ ಕಾಯಿಲೆಯಿಂದ ಬಳಲುತ್ತಿರುವವರಲ್ಲಿ ಗಂಟಲು ನೋವಿನ ಜೊತೆಗೆ ಸೌಮ್ಯ ಜ್ವರವೂ ಇರುತ್ತದೆ. ಇದಲ್ಲದೆ, ಡಿಫ್ತೀರಿಯಾ ರೋಗಿಗೆ ಉಸಿರಾಟದ ತೊಂದರೆ, ಕುತ್ತಿಗೆಯಲ್ಲಿ ಊತ, ನಿರಂತರ ಕೆಮ್ಮು ಇರುತ್ತದೆ. ಈ ರೋಗದಿಂದಾಗಿ ಚರ್ಮದ ಬಣ್ಣ ನೀಲಿ ಬಣ್ಣಕ್ಕೆ ತಿರುಗಬಹುದು. ಈ ರೋಗಲಕ್ಷಣಗಳನ್ನು ಲಘುವಾಗಿ ತೆಗೆದುಕೊಳ್ಳಬಾರದು. ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ಡಿಫ್ತೀರಿಯಾ ಬ್ಯಾಕ್ಟೀರಿಯಾದಿಂದ ಉಂಟಾಗುವ ರೋಗ. ಇವು ಗಾಳಿಯ ಮೂಲಕ ದೇಹವನ್ನು ಪ್ರವೇಶಿಸಿ ಗಂಟಲಿನ ಸೋಂಕನ್ನು ಉಂಟುಮಾಡುತ್ತವೆ. ಈ ಸೋಂಕು ಉಸಿರಾಟದ ಪ್ರದೇಶದಲ್ಲಿ ಪ್ಲೇಕ್ ರಚನೆಗೆ ಕಾರಣವಾಗುತ್ತದೆ. ಈ ಕಾರಣದಿಂದಾಗಿ, ರೋಗಿಯು ಉಸಿರಾಡಲು ಕಷ್ಟಪಡುತ್ತಾನೆ. ಅದರ ನಂತರ, ಪೊರೆಯಿಂದ ಬ್ಯಾಕ್ಟೀರಿಯಾವು ರಕ್ತದ ಮೂಲಕ ಹೃದಯ ಮತ್ತು ಮೆದುಳಿಗೆ ಹರಡಿ. ಈ ಸೋಂಕು ಹೃದಯ ಮತ್ತು ಮೆದುಳಿಗೆ ಹಾನಿ ಮಾಡುತ್ತದೆ. ಅದಕ್ಕಾಗಿಯೇ ಈ ರೋಗವನ್ನು ಲಘುವಾಗಿ ಪರಿಗಣಿಸಬಾರದು ಎಂದು ದೆಹಲಿಯ ಹಿರಿಯ ವೈದ್ಯ ಡಾ.ಅಜಯ್ ಕುಮಾರ್ ಎಚ್ಚರಿಸುತ್ತಾರೆ.

ಇದನ್ನೂ ಓದಿ: Heat Rash: ಬೆವರುಸಾಲೆಗೆ ಕಾರಣವೇನು? ಇದರ ಲಕ್ಷಣಗಳೇನು?

ಡಿಫ್ತಿರಿಯಾವನ್ನು ತಡೆಯುವುದು ಹೇಗೆ?

  • ಡಿಫ್ತೀರಿಯಾ ಸೋಂಕಿತ ವ್ಯಕ್ತಿಯಿಂದ ದೂರವಿರಬೇಕು. ಏಕೆಂದರೆ ಉಸಿರಾಟದಿಂದ ಹರಡುವ ರೋಗವಿದು.
  • ಜನಸಂದಣಿ ಇರುವ ಸ್ಥಳಗಳನ್ನು ತಪ್ಪಿಸಿ.
  • ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಸಿರು ತರಕಾರಿಗಳನ್ನು ಸೇವಿಸಿ.
  • ಶಿಶು ಮತ್ತು ಮಕ್ಕಳಿಗೆ ಲಸಿಕೆ ಹಾಕಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ