
ದೀಪಾವಳಿಯಲ್ಲಿ (Diwali) ಜನರು ದೀಪಗಳನ್ನು ಹಚ್ಚುವುದಕ್ಕಿಂತಲೂ ಪಟಾಕಿ ಸಿಡಿಸಿ ಸಂಭ್ರಮ ಪಡುತ್ತಾರೆ. ಈ ಮೂರು ದಿನಗಳ ಸಂಭ್ರಮದಲ್ಲಿ ಪಟಾಕಿಗಳು ಇಲ್ಲದಿದ್ದರೆ ಅದು ಹಬ್ಬವೇ ಅಲ್ಲ ಎಂಬ ಮನಸ್ಥಿತಿ ಹಲವರದ್ದು. ಅದು ತಪ್ಪಲ್ಲ. ಆದರೆ ಎಲ್ಲವೂ ಇತಿಮಿತಿಯಲ್ಲಿದ್ದರೆ ಬಹಳ ಒಳಿತು. ಅತಿಯಾದರೆ ಅಥವಾ ಅಗತ್ಯವಿದ್ದಾಗ ಮಾಡುವ ನಿರ್ಲಕ್ಷ್ಯ ಅಥವಾ ನಿಷ್ಕಾಳಜಿ ಹಲವು ಸಮಸ್ಯೆಗಳಿಗೆ ಎಡೆಮಾಡಿಕೊಡುತ್ತದೆ. ಹಾಗಾಗಿ ಹಬ್ಬದ ಸಂಭ್ರಮದಲ್ಲಿ ಆರೋಗ್ಯದ ಬಗ್ಗೆ ಅದರಲ್ಲಿಯೂ ಕಣ್ಣಿನ ವಿಷಯದಲ್ಲಿ ಹೆಚ್ಚಿನ ಕಾಳಜಿ ಮಾಡುವುದು ಬಹಳ ಅವಶ್ಯಕವಾಗಿದೆ. ಇಲ್ಲವಾದಲ್ಲಿ ಖುಷಿಯ ಕ್ಷಣ ಸೆಕೆಂಡುಗಳಲ್ಲಿ ಮಾಯವಾಗುತ್ತದೆ. ದೀಪಾವಳಿ ಸಂದರ್ಭ ಪಟಾಕಿ ಸಿಡಿಸುವಾಗ ನಿಮ್ಮ ಕಣ್ಣಿನ ಆರೈಕೆ (Eye Care) ವಹಿಸಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದು ಅವುಗಳನ್ನು ಪಾಲನೆ ಮಾಡುವ ಮೂಲಕ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಜೊತೆಗೆ ದೃಷ್ಠಿ ನಷ್ಟವಾಗುವುದನ್ನು ತಡೆಯಬಹುದು. ಹಾಗಾದರೆ ಏನದು ಸಲಹೆ? ಪಟಾಕಿ ಸಿಡಿಸುವಾಗ ಯಾವ ರೀತಿಯ ಕಾಳಜಿ ವಹಿಸಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು?
ಇದನ್ನೂ ಓದಿ: Deepavali: ಸಂಭ್ರಮದ ಜೊತೆ ಮುನ್ನೆಚ್ಚರಿಕೆಯೂ ಇರಲಿ; ಸುರಕ್ಷಿತ ದೀಪಾವಳಿ ನಿಮ್ಮದಾಗಲಿ!
ದೀಪಾವಳಿಯನ್ನು ಸಂಭ್ರಮ ಸಡಗರದಿಂದ ಆಚರಿಸಬೇಕು ಆದರೆ ಅದರ ಜೊತೆಗೆ ಆರೋಗ್ಯದ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳುವುದು ಅದರಲ್ಲಿಯೂ ಕಣ್ಣುಗಳು ಮತ್ತು ನಿಮ್ಮ ಸುತ್ತಮುತ್ತಲಿನವರ ಸುರಕ್ಷತೆಗೆ ಆದ್ಯತೆ ನೀಡುವುದು ಅತ್ಯಗತ್ಯ. ಅದರ ಜೊತೆಗೆ ಪಟಾಕಿಗಳಿಂದ ಕಣ್ಣಿನ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ತಿಳಿದುಕೊಳ್ಳುವುದು ಮತ್ತು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಹಬ್ಬವನ್ನು ಸುಂದರವಾಗಿ ಮತ್ತು ಸುರಕ್ಷಿತವಾಗಿ ಆಚರಿಸಲು ನೆರವಾಗುತ್ತದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ