AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Natural sleep remedies: ರಾತ್ರಿ ಬಾಳೆಹಣ್ಣು ತಿಂದರೆ ನಿದ್ದೆ ಚೆನ್ನಾಗಿ ಬರುತ್ತದೆ ಎಂಬುದು ನಿಜವೇ?

ನಿದ್ರಾಹೀನತೆ ಸಮಸ್ಯೆ: ಬಾಳೆಹಣ್ಣುಗಳು ಪೌಷ್ಠಿಕಾಂಶಗಳ ಆಗರ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಬಾಳೆಹಣ್ಣು ನಿದ್ರಾಹೀನತೆ ಸಮಸ್ಯೆಗೆ ರಾಮಬಾಣ ಎಂಬುದು ನಿಮಗೆ ತಿಳಿದಿದೆಯೇ? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಆಸಕ್ತಿದಾಯಕ ಸಂಗತಿ ಬಿತ್ತರವಾಗುತ್ತಿದ್ದು, ಈ ಮಾಹಿತಿ ನಿಜವೋ, ಅಲ್ಲವೋ ಎಂಬುದನ್ನು ತಿಳಿಯಲು ಅಧ್ಯಯನವೊಂದು ನಡೆದಿದ್ದು ಕೆಲವು ಸಂಗತಿಗಳನ್ನು ಬಹಿರಂಗಪಡಿಸಿದೆ. ಈ ಕುರಿತಾದ ಮತ್ತಷ್ಟು ಮಾಹಿತಿ ಇಲ್ಲಿದೆ.

Natural sleep remedies: ರಾತ್ರಿ ಬಾಳೆಹಣ್ಣು ತಿಂದರೆ ನಿದ್ದೆ ಚೆನ್ನಾಗಿ ಬರುತ್ತದೆ ಎಂಬುದು ನಿಜವೇ?
ಸಾಂದರ್ಭಿಕ ಚಿತ್ರImage Credit source: Getty Images
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 24, 2025 | 2:46 PM

ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬಾಳೆಹಣ್ಣು (Banana) ತಿಂದರೆ ನಿದ್ರೆ ಚೆನ್ನಾಗಿ ಬರುತ್ತದೆ ಎಂಬ ಸುದ್ದಿ ಹರಡಿತ್ತು. ಈ ಅಭ್ಯಾಸ ಅನುಸರಿಸುವವರು ಕೂಡ ಇದು ನಿಜ ಎಂದಿದ್ದರು. ಅದರಲ್ಲಿಯೂ ಈ ಹಣ್ಣಿನಲ್ಲಿ ಪೊಟ್ಯಾಸಿಯಮ್ (Potassium), ಮೆಗ್ನೀಸಿಯಮ್ ಮತ್ತು ಟ್ರಿಪ್ಟೋಫಾನ್ ನಂತಹ ಪೋಷಕಾಂಶಗಳಿರುವುದರಿಂದ ಇದನ್ನು ಸೇವನೆ ಮಾಡಿದರೆ ಉತ್ತಮ ನಿದ್ರೆ (Sleep) ಮಾಡುವುದಕ್ಕೆ ಸಹಾಯವಾಗುತ್ತದೆ ಎಂದು ಹೇಳಲಾಗುತ್ತಿತ್ತು. ಏಕೆಂದರೆ ಈ ಪೋಷಕಾಂಶಗಳು ದೇಹವನ್ನು ವಿಶ್ರಾಂತಿಗೊಳಿಸುತ್ತವೆ ಮತ್ತು ನಿದ್ರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಆದರೆ, ಇದು ಸತ್ಯವೇ? ನಿಜವಾಗಿಯೂ ಬಾಳೆಹಣ್ಣು ತಿಂದರೆ ಚೆನ್ನಾಗಿ ನಿದ್ರೆ ಮಾಡಬಹುದೇ ಎಂಬ ಗೊಂದಲ ಹಲವರನ್ನು ಕಾಡುತ್ತಿದ್ದು, ಇದಕ್ಕೆ ಪೂರಕವಾಗಿ ನ್ಯಾಷನಲ್ ಮೆಡಿಸಿನ್ ನ ಈ ಬಗ್ಗೆ ಅಧ್ಯಯನ (Study) ಮಾಡಿದ್ದು ಕೆಲವು ಆಸಕ್ತಿದಾಯಕ ಸಂಗತಿಗಳನ್ನು ಬಹಿರಂಗಪಡಿಸಿದೆ. ಈ ಕುರಿತಾದ ಮತ್ತಷ್ಟು ಮಾಹಿತಿ ಇಲ್ಲಿದೆ.

ಬಾಳೆಹಣ್ಣು ನಿದ್ರೆ ಮಾಡಲು ಹೇಗೆ ಸಹಾಯ ಮಾಡುತ್ತದೆ?

ಈ ಹಣ್ಣಿನಲ್ಲಿರುವ ಟ್ರಿಪ್ಟೋಫಾನ್ ಎಂಬ ಅಂಶವು ದೇಹದಲ್ಲಿ ಸೆರೊಟೋನಿನ್ ಅನ್ನು ಮೆಲಟೋನಿನ್ ಆಗಿ ಪರಿವರ್ತಿಸುತ್ತದೆ ಮತ್ತು ಒಳ್ಳೆಯ ನಿದ್ರೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೆ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ನಿಮ್ಮ ಒತ್ತಡವನ್ನು ಕಡಿಮೆ ಮಾಡುತ್ತದೆ. ಈ ಕಾರಣಗಳಿಗಾಗಿ, ರಾತ್ರಿ ಸಮಯದಲ್ಲಿ ಬಾಳೆಹಣ್ಣು ತಿನ್ನುವುದರಿಂದ ಒಳ್ಳೆಯ ನಿದ್ರೆ ಬರುತ್ತದೆ.

ಅಧ್ಯಯನದಲ್ಲಿ ಹೇಳಿರುವುದೇನು?

ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಬಾಳೆಹಣ್ಣು ತಿನ್ನುವುದರಿಂದ ನಿದ್ರೆ ಚೆನ್ನಾಗಿ ಬರಬಹುದು. ಆದರೆ ಇದು ಎಲ್ಲರಿಗೂ ಅನ್ವಯವಾಗುವುದಿಲ್ಲ ಅಥವಾ ಎಲ್ಲರಲ್ಲಿಯೂ ಒಂದೇ ರೀತಿಯಾಗಿ ಕೆಲಸ ಮಾಡುವುದಿಲ್ಲ. ಅವರವರ ಆಹಾರ ಪದ್ಧತಿ, ಮಲಗುವ ವಾತಾವರಣ ಮತ್ತು ವೈಯಕ್ತಿಕ ಜೀವನಶೈಲಿಯು ನಿದ್ರೆಯ ಗುಣಮಟ್ಟದ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಕೆಲವರಿಗೆ, ಬಾಳೆಹಣ್ಣು ಸೇವನೆ ಮಾಡುವುದರಿಂದ ಸ್ವಲ್ಪ ಪ್ರಮಾಣದಲ್ಲಿ ಪ್ರಯೋಜನವಾಗಬಹುದು. ಅಲ್ಲದೆ ನಿದ್ರೆ ಮಾತ್ರೆಗಳನ್ನು ಸೇವನೆ ಮಾಡುವವರಿಗೆ ಇದು ಒಳ್ಳೆಯದು. ಏಕೆಂದರೆ ಪ್ರತಿನಿತ್ಯ ಮಾತ್ರೆ ಸೇವನೆ ಮಾಡಿ ನಿದ್ರೆ ಮಾಡುವುದು ಒಳ್ಳೆಯದಲ್ಲ ಹಾಗಾಗಿ ಈ ರೀತಿ ಬಾಳೆಹಣ್ಣುಗಳನ್ನು ಸೇವನೆ ಮಾಡಬಹುದು.

ಇದನ್ನೂ ಓದಿ
Image
ಗೋಡಂಬಿ ತಿಂದರೆ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ತಿನ್ನಬೇಕು
Image
ಅಂಗೈನಲ್ಲಿ ತುರಿಕೆ ಕಂಡು ಬಂದರೆ ದುಡ್ಡು ಬರಲ್ಲ ರೋಗ ಬರುತ್ತೆ!
Image
ಸೂರ್ಯಾಸ್ತ ಆಗುವುದರೊಳಗೆ ರಾತ್ರಿಯ ಊಟ ಮಾಡುವ ಅಭ್ಯಾಸ ಒಳ್ಳೆಯದೇ?
Image
ಎಷ್ಟು ಮಾಡಿದರೂ ಸಣ್ಣ ಆಗುತ್ತಿಲ್ಲವಾ? ಚಿಂತೆ ಬೇಡ ಈ ರೀತಿ ಮಾಡಿ

ಇದನ್ನೂ ಓದಿ: ಗೋಡಂಬಿ ಸೇವನೆ ಮಾಡಿದರೆ ದೇಹದ ತೂಕ ಹೆಚ್ಚಾಗುತ್ತದೆಯೇ ಅಥವಾ ಕಡಿಮೆಯಾಗುತ್ತಾ ತಿಳಿದುಕೊಳ್ಳಿ

ನೀವು ಕೂಡ ಈ ಅಭ್ಯಾಸ ರೂಢಿಸಿಕೊಳ್ಳುತ್ತೀರಾ?

ಬಾಳೆಹಣ್ಣು ಆರೋಗ್ಯಕರ ಆಹಾರ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ರಾತ್ರಿ ಸಮಯದಲ್ಲಿ ತಿನ್ನುವುದರಿಂದ ಯಾವುದೇ ರೀತಿಯ ಹಾನಿಯಾಗುವುದಿಲ್ಲ ಆದರೆ, ನಿದ್ರೆಯ ಸಮಸ್ಯೆಗಳಿಗೆ ಪರಿಹಾರವಾಗಿ ಇದನ್ನು ಸಂಪೂರ್ಣವಾಗಿ ಅವಲಂಬಿಸಬಾರದು. ಅದಲ್ಲದೆ ಇದು ಎಲ್ಲರಿಗೂ ಸೂಕ್ತವಲ್ಲ. ಸಮತೋಲಿತ ಆಹಾರ, ನಿಯಮಿತ ವೇಳಾಪಟ್ಟಿ ಮತ್ತು ಒತ್ತಡ ಮುಕ್ತ ಮನಸ್ಸು ಇವೆಲ್ಲವೂ ರಾತ್ರಿ ಒಳ್ಳೆಯ ನಿದ್ರೆಗೆ ಬಹಳ ಮುಖ್ಯ. ನೀವು ಇವುಗಳನ್ನು ಒಮ್ಮೆ ಪ್ರಯತ್ನಿಸಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ