Sign In

By signing in or creating an account, you agree with Associated Broadcasting Company's Terms & Conditions and Privacy Policy.

Banana Benefits: ಕಪ್ಪು ಚುಕ್ಕೆಗಳಿರುವ ಬಾಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು, ಅಂಥದ್ದೇನಿದೆ ಅದರಲ್ಲಿ?

ನಾವು ಧರಿಸುವ ಬಟ್ಟೆಯಿಂದ ಹಿಡಿದು ತಿನ್ನುವ ಆಹಾರದವರೆಗೂ ಎಲ್ಲವೂ ಶುಚಿಯಾಗಿರಬೇಕು ಎಂದು ಬಯಸುತ್ತೇವೆ. ಆದರೆ ಬಾಳೆಹಣ್ಣು ಖರೀದಿಸುವಾಗ ಒಂದೊಮ್ಮೆ ಸಿಪ್ಪೆಯಲ್ಲಿ ಚುಕ್ಕೆಗಳು ಕಾಣಿಸಿಕೊಂಡರೆ ಅದನ್ನು ಕೊಂಡುಕೊಳ್ಳುವುದೇ ಇಲ್ಲ.

Banana Benefits: ಕಪ್ಪು ಚುಕ್ಕೆಗಳಿರುವ ಬಾಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು, ಅಂಥದ್ದೇನಿದೆ ಅದರಲ್ಲಿ?
Banana
Follow us
TV9 Web
| Updated By: ನಯನಾ ರಾಜೀವ್

Updated on: Dec 30, 2022 | 8:00 AM

ನಾವು ಧರಿಸುವ ಬಟ್ಟೆಯಿಂದ ಹಿಡಿದು ತಿನ್ನುವ ಆಹಾರದವರೆಗೂ ಎಲ್ಲವೂ ಶುಚಿಯಾಗಿರಬೇಕು ಎಂದು ಬಯಸುತ್ತೇವೆ. ಆದರೆ ಬಾಳೆಹಣ್ಣು ಖರೀದಿಸುವಾಗ ಒಂದೊಮ್ಮೆ ಸಿಪ್ಪೆಯಲ್ಲಿ ಚುಕ್ಕೆಗಳು ಕಾಣಿಸಿಕೊಂಡರೆ ಅದನ್ನು ಕೊಂಡುಕೊಳ್ಳುವುದೇ ಇಲ್ಲ. ಬಾಳೆಹಣ್ಣುಗಳಲ್ಲಿ ಕಪ್ಪು ಚುಕ್ಕೆ ಇರಬಹುದು ಆದರೆ ಅವು ನೈಸರ್ಗಿಕವಾಗಿ ಹಣ್ಣಾಗಿರುತ್ತದೆ, ಉಳಿದ ಬಾಳೆಹಣ್ಣಿಗಿಂತ ಹೆಚ್ಚು ಪೋಷಕಾಂಶಗಳು ಮಾತ್ರವಲ್ಲ ಗುಣಲಕ್ಷಣಗಳು 8 ಪಟ್ಟು ಹೆಚ್ಚು ಹೆಚ್ಚಾಗುತ್ತದೆ.

ಈ ರೀತಿಯಾಗಿ ಕಪ್ಪು ಚುಕ್ಕೆಗಳಿರುವ ಬಾಳೆಹಣ್ಣಿನಿಂದ ಸಂಪೂರ್ಣ ಪೋಷಣೆಯನ್ನು ಪಡೆಯಬಹುದು. ಇಂತಹ ಬಾಳೆಹಣ್ಣುಗಳು ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿರುತ್ತವೆ. ಇದು ಉತ್ಕರ್ಷಣ ನಿರೋಧಕಗಳ ಪ್ರಮಾಣವನ್ನು ಮತ್ತು ಬಿಳಿ ರಕ್ತ ಕಣಗಳ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇದಲ್ಲದೇ ಬಾಳೆಹಣ್ಣು ತಿಂದರೂ ಗಂಟೆಗಟ್ಟಲೆ ಹಸಿವಾಗುವುದಿಲ್ಲ. ಇದರ ಇತರ ಹಲವು ಪ್ರಯೋಜನಗಳಿವೆ.

ಬಾಳೆಹಣ್ಣಿನಲ್ಲಿ ಕಂಡುಬರುವ ಪೋಷಕಾಂಶಗಳು ಬಾಳೆಹಣ್ಣಿನಲ್ಲಿ ಕಾರ್ಬೋಹೈಡ್ರೇಟ್, ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ ಕಾಂಪ್ಲೆಕ್ಸ್, ಖನಿಜ ಕ್ಯಾಲ್ಸಿಯಂ, ಫೈಬರ್ ಮತ್ತು ಈ ಎಲ್ಲಾ ಅಂಶಗಳು ಇದನ್ನು ಸೂಪರ್ ಫುಡ್ ಅನ್ನಾಗಿ ಮಾಡುತ್ತವೆ.

ಕಪ್ಪು ಚುಕ್ಕೆ ಬಾಳೆಹಣ್ಣಿನ ಪ್ರಯೋಜನಗಳು ರೋಗನಿರೋಧಕ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ. ಬಾಳೆಹಣ್ಣು ಹಣ್ಣಾಗುತ್ತಿದ್ದಂತೆ, ಅದರಲ್ಲಿರುವ ಆಂಟಿಆಕ್ಸಿಡೆಂಟ್‌ಗಳ ಮಟ್ಟವು ಇನ್ನಷ್ಟು ಹೆಚ್ಚಾಗುತ್ತದೆ. ಇದು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಬಿಳಿ ರಕ್ತ ಕಣಗಳ ರಚನೆಗೆ ಸಹಾಯ ಮಾಡುತ್ತದೆ.

ಮತ್ತಷ್ಟು ಓದಿ: Banana: ಬಾಳೆ ಹಣ್ಣುಗಳನ್ನು ತಿನ್ನಲು ಸರಿಯಾದ ಸಮಯ ಯಾವುದು?

ಚುಕ್ಕೆಗಳಿರುವ ಬಾಳೆಹಣ್ಣನ್ನು ತಿನ್ನುವುದರಿಂದ ಬಿಪಿಯನ್ನು ನಿಯಂತ್ರಣದಲ್ಲಿಡಬಹುದು, ಅದರಲ್ಲಿ ಪೊಟ್ಯಾಷಿಯಂ ಅಧಿಕವಾಗಿರುತ್ತದೆ, ಆದರೆ ಸೋಡಿಯಂ ಪ್ರಮಾಣವು ಅತ್ಯಲ್ಪವಾಗಿದೆ. ಮತ್ತೊಂದೆಡೆ, ಇದಕ್ಕೆ ಹೋಲಿಸಿದರೆ, ಕಲೆಗಳಿಲ್ಲದ ಬಾಳೆಹಣ್ಣಿನಲ್ಲಿ ಪೊಟ್ಯಾಷಿಯಂ ಪ್ರಮಾಣ ಕಡಿಮೆಯಾಗಿರುತ್ತದೆ ಮತ್ತು ಸೋಡಿಯಂ ಪ್ರಮಾಣವು ಹೆಚ್ಚು, ಆದ್ದರಿಂದ ಬಿಪಿ ನಿಯಂತ್ರಣಕ್ಕೆ ಬರುತ್ತದೆ.

ಕಪ್ಪು ಚುಕ್ಕೆಗಳಿರುವ ಬಾಳೆಹಣ್ಣಿನ ಆ್ಯಂಟಿ ಆಸಿಡ್ ಗುಣಲಕ್ಷಣಗಳಿಂದಾಗಿ, ಇದು ನಿಮಗೆ ಆ್ಯಸಿಡಿಟಿಯಿಂದ ತ್ವರಿತ ಪರಿಹಾರವನ್ನು ನೀಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಎದೆಯುರಿಯಿಂದ ಪರಿಹಾರವನ್ನು ನೀಡುತ್ತದೆ. ಬಾಳೆಹಣ್ಣನ್ನು ಸಕ್ಕರೆಯೊಂದಿಗೆ ಬೆರೆಸಿ ತಿನ್ನಬೇಕು, ಇದು ತುಂಬಾ ಒಳ್ಳೆಯದು.

ಕಪ್ಪು ಚುಕ್ಕೆಗಳನ್ನು ಹೊಂದಿರುವ ಬಾಳೆಹಣ್ಣುಗಳು ಶುದ್ಧ ಬಾಳೆಹಣ್ಣುಗಳಿಗಿಂತ 8 ಪಟ್ಟು ಹೆಚ್ಚು ಆರೋಗ್ಯಕರವೆಂದು ಜಪಾನಿನ ಸಂಶೋಧಕರು ಕಂಡುಹಿಡಿದಿದ್ದಾರೆ.

ಪೇರಳೆ, ಅನಾನಸ್, ಕಲ್ಲಂಗಡಿ, ಸೇಬುಗಳಿಗೆ ಹೋಲಿಸಿದರೆ ಇಂತಹ ಬಾಳೆಹಣ್ಣಿನಲ್ಲಿ ಕ್ಯಾನ್ಸರ್ ವಿರೋಧಿ ಅಂಶಗಳಿರುತ್ತವೆ ಎಂದು ಅಧ್ಯಯನಗಳಲ್ಲಿ ಕಂಡುಬಂದಿದೆ. ಮಾಗಿದ ಬಾಳೆಹಣ್ಣು ಅಸ್ತಮಾ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ. ನೀವು ಮಾಗಿದ ಬಾಳೆಹಣ್ಣನ್ನು ಸಿಪ್ಪೆಯೊಂದಿಗೆ ಬೇಯಿಸಿ. ಇದಾದ ನಂತರ ಅದರ ಸಿಪ್ಪೆ ತೆಗೆದು ಬಾಳೆಹಣ್ಣನ್ನು ತುಂಡು ಮಾಡಿ ಅದಕ್ಕೆ ಕರಿಮೆಣಸಿನ ಪುಡಿ ಸೇರಿಸಿ ಅಸ್ತಮಾ ರೋಗಿಗೆ ತಿನ್ನಿಸಿದರೆ ಪ್ರಯೋಜನವಾಗುತ್ತದೆ.

ರಕ್ತಹೀನತೆಯನ್ನು ತೆಗೆದುಹಾಕಲು ಕಪ್ಪು ಚುಕ್ಕೆಗಳೊಂದಿಗೆ ಬಾಳೆಹಣ್ಣುಗಳನ್ನು ತಿನ್ನಲು ವೈದ್ಯರು ಶಿಫಾರಸು ಮಾಡುತ್ತಾರೆ. ಮೂಳೆಗಳನ್ನೂ ಗಟ್ಟಿಗೊಳಿಸುತ್ತದೆ.

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್