Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಈ ಕೆಲವು ಆಹಾರವನ್ನು ಸೇವಿಸಿದ ತಕ್ಷಣವೇ ನೀರು ಕುಡಿಯುವ ಅಭ್ಯಾಸ ಒಳ್ಳೆಯದಲ್ಲ!

ಹಣ್ಣುಗಳನ್ನು ತಿಂದ ತಕ್ಷಣವೇ ನೀರು ಸೇವಿಸುವ ಅಗತ್ಯವಿರುವುದಿಲ್ಲ. 45 ನಿಮಿಷದ ಬಳಿಕ ನೀರು ಸೇವಿಸುವುದು ಉತ್ತಮ .

Health Tips: ಈ ಕೆಲವು ಆಹಾರವನ್ನು ಸೇವಿಸಿದ ತಕ್ಷಣವೇ ನೀರು ಕುಡಿಯುವ ಅಭ್ಯಾಸ ಒಳ್ಳೆಯದಲ್ಲ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Jul 31, 2021 | 9:40 AM

ನಮ್ಮ ದೇಹಕ್ಕೆ ನೀರು ಬಹಳ ಮುಖ್ಯ. ದೇಹದಲ್ಲಿ ನೀರಿನಾಂಶ(Water) ಇಲ್ಲದಿದ್ದೆರೆ ಆರೋಗ್ಯ ಸಮಸ್ಯೆಗಳು(Health Problem) ಬಹುಬೇಗ ಕಾಡುತ್ತವೆ. ನೀರು ದೇಹವನ್ನು ಹೈಡ್ರೀಕರಿಸುತ್ತದೆ ಮತ್ತು ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ. ಆದರೆ ಆಯುರ್ವೇದದಲ್ಲಿ ನೀರು ಕುಡಿಯುವ(Drinking Water) ಕೆಲವು ವಿಧಾನಗಳನ್ನು ತಿಳಿಯಬಹುದು. ಕೆಲವು ಆಹಾರವನ್ನು ತಿಂದ ತಕ್ಷಣವೇ ನೀರು ಸೇವಿಸುವುದು ಉತ್ತಮವಲ್ಲ ಎಂದು ಆಯುರ್ವೇದ ತಿಳಿಸುತ್ತದೆ.

ಹಣ್ಣುಗಳನ್ನು ಈಗಷ್ಟೇ ತಿಂದ ಬಳಿಕವೇ ನೀರು ಸೇವಿಸಬೇಡಿ. ಹಣ್ಣುಗಳನ್ನು ಶೇ.80ರಿಂದ 90ರಷ್ಟು ನೀರಿನಾಂಶ ಇರುತ್ತದೆ. ಇದು ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳನ್ನು ಒದಗಿಸುತ್ತದೆ. ಹಣ್ಣುಗಳಲ್ಲಿ ಸಕ್ಕರೆ ಅಂಶ ಹಾಗೂ ಸಿಟ್ರಿಕ್ ಆಮ್ಲವಿರುತ್ತದೆ. ಅದಕ್ಕಾಗಿಯೇ ಹಣ್ಣುಗಳನ್ನು ತಿಂದ ತಕ್ಷಣವೇ ನೀರು ಸೇವಿಸುವ ಅಗತ್ಯವಿರುವುದಿಲ್ಲ. 45 ನಿಮಿಷದ ಬಳಿಕ ನೀರು ಸೇವಿಸುವುದು ಉತ್ತಮ .

ಐಸ್​ಕ್ರೀಂ ತಿಂದ ಬಳಿಕವೇ ನೀರು ಕುಡಿಯಬೇಡಿ. ಹೀಗೆ ಮಾಡುವುದರಿಂದ ಹಲ್ಲಿನ ಸಮಸ್ಯೆ ಉಂಟಾಗುತ್ತದೆ. ಒಸಡು ದುರ್ಬಲಗೊಳ್ಳುತ್ತದೆ. ಗಂಟಲು ನೋವಿನ ಸಮಸ್ಯೆಯನ್ನೂ ಎದುರಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಐಸ್​ಕ್ರೀಂ ಸೇವಿಸಿದ 15 ನಿಮಿಷಗಳ ಬಳಿಕ ನೀರು ಕುಡಿಯುವುದು ಉತ್ತಮ.

ಚಹಾ, ಕಾಫಿ ಹೀಗೆ ಯಾವುದೇ ಬಿಸಿ ಪಾನೀಯವನ್ನು ಸೇವಿಸಿದ ನಂತರ ನೀರನ್ನು ಕುಡಿಯಬೇಡಿ. ತಂಪಾಗಿರುವ ಹಾಗೂ ಬಿಸಿಯಾಗಿರುವ ಸಂಯೋಜನೆಯನ್ನು ಎಂದಿಗೂ ಒಟ್ಟಾಗಿ ಸೇವಿಸಬಾರದು.

ಕಡಲೆಕಾಯಿ ಅಥವಾ ಶೇಂಗಾ ತಿಂದ ಬಳಿಕ ನೀರು ಕುಡಿಯುವ ಅಭ್ಯಾಸ ಒಳ್ಳೆಯದಲ್ಲ. ಈ ಎರಡು ಆಹಾರ ಪದಾರ್ಥಗಳು ವಿರೋಧಾತ್ಮಕ ಸಂಯುಕ್ತಗಳನ್ನು ಹೊಂದಿದೆ. ಕೆಮ್ಮು, ಗಂಟಲು ನೋವು ಜತೆಗೆ ವಾಯು ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಎಂದಿಗೂ ಕಡಲೆ ಬೀಜವನ್ನು ಸೇವಿಸಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಒಳ್ಳೆಯದಲ್ಲ.

ಸಿಹಿ ತಿಂದ ತಕ್ಷಣ ನೀರು ಬೇಕೆನ್ನಿಸುವುದು ಸಹಜ. ಆದರೆ ಹೊಟ್ಟೆ ತುಂಬ ಸಿಹಿ ತಿಂದು ತಕ್ಷಣವೇ ನೀರು ಕುಡಿಯುವುದರಿಂದ ಆರೋಗ್ಯ ಸಮಸ್ಯೆಗಳು ಕಾಡುವ ಅಪಾಯ ಹೆಚ್ಚಾಗಿರುತ್ತದೆ. ಇದರಿಂದ ದೇಹದಲ್ಲಿನ ಸಕ್ಕರ ಪ್ರಮಾಣ ಬಹುಬೇಗ ಹೆಚ್ಚಳವಾಗುತ್ತದೆ. ಇಂತಹ ಸಮಯದಲ್ಲಿ ಟೈಪ್-2 ಮಧುಮೇಹದ ಅಪಾಯ ಹೆಚ್ಚಾಗಬಹುದು.

ಅತಿ ವೇಗವಾಗಿ ಓಡಿದ ಬಳಿಕವೇ ನೀರು ಕುಡಿಯುವುದು ಒಳ್ಳೆಯದಲ್ಲ. ಇದು ಸ್ಟ್ರೋಕ್ ಅಪಾಯವನ್ನು ಹೆಚ್ಚಿಸಬಹುದು. ಐದು ನಿಮಿಷದ ವಿಶ್ರಾಂತಿಯ ಬಳಿಕ ನೀರು ಕುಡಿಯುವ ಅಭ್ಯಾಸ ಒಳ್ಳೆಯದು.

ಇದನ್ನೂ ಓದಿ:

Health Tips: ನೀರು ಕುಡಿಯುವುದು ಒಳ್ಳೆಯ ಅಭ್ಯಾಸ, ಆದರೆ ಅತಿಯಾದ ನಿರ್ಜಲೀಕರಣ ಆರೋಗ್ಯಕ್ಕೆ ಹಾನಿಕಾರಕ

Health Tips: ವಾರಕ್ಕೆ ಮೂರಕ್ಕಿಂತ ಹೆಚ್ಚು ಬಾರಿ ಚಿಕನ್​ ಸೇವಿಸುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ಎಚ್ಚರ ವಹಿಸಿ

ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ