AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮೊಸರಿನೊಂದಿಗೆ ಇತರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇದೆಯೇ? ನಿಮ್ಮ ಆಹಾರ ಸೇವನೆ ಬಗ್ಗೆ ಎಚ್ಚರ ಇರಲಿ

ಮೊಸರಿನಲ್ಲಿ ವಿಟಮಿನ್ ಬಿ -2, ವಿಟಮಿನ್ ಬಿ -12, ರಂಜಕ, ಕ್ಯಾಲ್ಸಿಯಂ, ಮೆಗ್ನೀಶಿಯಮ್, ಪೊಟ್ಯಾಸಿಯಮ್ ಮತ್ತು ಖನಿಜಾಂಶವಿದ್ದು, ಇದು ದೇಹಕ್ಕೆ ಹೆಚ್ಚು ಶಕ್ತಿಯನ್ನು ನೀಡುತ್ತದೆ. ಜತೆಗೆ ಮೊಸರು ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿಯೂ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ.

Health Tips: ಮೊಸರಿನೊಂದಿಗೆ ಇತರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇದೆಯೇ? ನಿಮ್ಮ ಆಹಾರ ಸೇವನೆ ಬಗ್ಗೆ ಎಚ್ಚರ ಇರಲಿ
ಮೊಸರು
TV9 Web
| Edited By: |

Updated on: Jun 12, 2021 | 7:18 AM

Share

ಸಾಮಾನ್ಯವಾಗಿ ಮನೆಯಲ್ಲಿ ಅನ್ನದೊಂದಿಗೆ ಕಲಸಿಕೊಂಡು, ಇಲ್ಲವೇ ಊಟ ಮಾಡಿದ ನಂತರದಲ್ಲಿ ಒಂದು ಲೋಟ ಮೊಸರು ಕುಡಿಯದೇ ಇದ್ದರೆ ಕೆಲವರಿಗೆ ಸಮಾಧಾನವೇ ಇಲ್ಲ. ಅಷ್ಟರ ಮಟ್ಟಿಗೆ ಮೊಸರು ಕುಡಿಯುವ ಅಭ್ಯಾಸವನ್ನು ಮಾಡಿಕೊಂಡಿರುತ್ತಾರೆ. ಅದರಂತೆ ಮೊಸರಿನಲ್ಲಿ ವಿಟಮಿನ್ ಬಿ -2, ವಿಟಮಿನ್ ಬಿ -12, ರಂಜಕ, ಕ್ಯಾಲ್ಸಿಯಂ, ಮೆಗ್ನೀಶಿಯಮ್, ಪೊಟ್ಯಾಸಿಯಮ್ ಮತ್ತು ಇತರೆ ಖನಿಜಾಂಶವಿದ್ದು, ಇದು ದೇಹಕ್ಕೆ ಹೆಚ್ಚು ಶಕ್ತಿಯನ್ನು ನೀಡುತ್ತದೆ. ಜತೆಗೆ ಮೊಸರು ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ಬೇಸಿಗೆಯಲ್ಲಿ ಮೊಸರು ಹೆಚ್ಚು ಸೇವಿಸುವುದರಿಂದ ದೇಹದ ಉಷ್ಣತೆಯು ಸ್ಥಿರವಾಗಿರುತ್ತದೆ. ಆದಾಗ್ಯೂ, ಮೊಸರಿನೊಂದಿಗೆ ಕೆಲವು ಪದಾರ್ಥಗಳನ್ನು ತಿನ್ನಬಾರದು ಇದು ದೇಹಕ್ಕೆ ಹಾನಿಯುಂಟು ಮಾಡುತ್ತದೆ. ಹೀಗಾಗಿ ಮೊಸರನ್ನು ಸೇವಿಸುವ ಕ್ರಮ ಹೇಗೆ ಎನ್ನುವುದರ ಕುರಿತು ತಿಳಿದುಕೊಳ್ಳುವುದು ಸೂಕ್ತ.

ಬೇಸಿಗೆಯಲ್ಲಿ ತಾಜಾ ಮೊಸರು ಅಥವಾ ಮಜ್ಜಿಗೆ ದೇಹವನ್ನು ತಂಪಾಗಿಸುತ್ತದೆ. ಮೊಸರು ಜೀರ್ಣಕ್ರಿಯೆಯನ್ನು ಸುಧಾರಿಸುವ ಪ್ರೋಬಯಾಟಿಕ್ ಪದಾರ್ಥಗಳನ್ನು ಹೊಂದಿದೆ. ಮೊಸರು ಜೀರ್ಣಾಂಗ ಮತ್ತು ಕರುಳನ್ನು ಆರೋಗ್ಯವಾಗಿರಿಸುತ್ತದೆ. ಇದೇ ಕಾರಣಕ್ಕೆ ಬೇಸಿಗೆಯಲ್ಲಿ ನಾವು ಹೆಚ್ಚು ಮೊಸರು ಸೇವಿಸುತ್ತೇವೆ. ಆದರೆ ಮೊಸರಿನೊಂದಿಗೆ ಕೆಲವು ಪದಾರ್ಥಗಳನ್ನು ಸೇವಿಸುವುದರಿಂದ ತೊಂದರೆಯಾಗುತ್ತದೆ ಅವುಗಳು ಈ ಕೆಳಗಿನಂತಿವೆ.

ಮೊಸರು ಸೇವಿಸಿದ ಕೂಡಲೇ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಡಿ ಮೊಸರಿನೊಂದಿಗೆ ಆಹಾರವನ್ನು ಸೇವಿಸಿದ ಕೂಡಲೇ ಹೆಚ್ಚು ಎಣ್ಣೆ ಮತ್ತು ತುಪ್ಪದಿಂದ ಕರಿದ ಆಹಾರವನ್ನು ಸೇವಿಸಬೇಡಿ. ಇದು ನಿಮ್ಮ ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ ಮತ್ತು ಅಜೀರ್ಣಕ್ಕೆ ಕಾರಣ.

ಮೀನು ಮತ್ತು ಮೊಸರನ್ನು ಒಟ್ಟಿಗೆ ತಿನ್ನುವುದನ್ನು ಕಡಿಮೆ ಮಾಡಿ ಆಯುರ್ವೇದದ ಪ್ರಕಾರ, ಒಂದೇ ಸಮಯದಲ್ಲಿ ಅನೇಕ ಪ್ರೋಟೀನ್ ಆಹಾರವನ್ನು ಸೇವಿಸದಿರುವುದು ಉತ್ತಮ. ಮೀನು ಮತ್ತು ಮೊಸರು ಎರಡರಲ್ಲೂ ಪ್ರೋಟೀನ್ ಅಧಿಕವಾಗಿದೆ. ಎರಡನ್ನೂ ಒಂದೇ ಸಮಯದಲ್ಲಿ ತೆಗೆದುಕೊಳ್ಳುವುದರಿಂದ ಅಜೀರ್ಣ ಮತ್ತು ಚರ್ಮದ ತೊಂದರೆ ಉಂಟಾಗುತ್ತದೆ.

ಹಾಲು ಮತ್ತು ಮೊಸರನ್ನು ಎಂದಿಗೂ ಒಟ್ಟಿಗೆ ಸೇವಿಸಬಾರದು ಹಾಲು ಮತ್ತು ಮೊಸರನ್ನು ಒಟ್ಟಿಗೆ ಸೇವಿಸುವುದರಿಂದ ಜೀರ್ಣ ಕ್ರಿಯೆಗೆ ತೊಂದರೆಯಾಗುತ್ತದೆ. ಅಲ್ಲದೆ ಅತಿಸಾರ ಮತ್ತು ಹೊಟ್ಟೆ ಉಬ್ಬರಿಸಿದಂತಾಗುತ್ತದೆ. ಹಾಲು ಮತ್ತು ಮೊಸರಿನಲ್ಲಿ ಕೊಬ್ಬಿನಾಂಶ ಹೆಚ್ಚು ಇರುವುದರಿಂದ ತಜ್ಞರು, ಈ ಆಹಾರವನ್ನು ಒಂದೇ ಸಮಯದಲ್ಲಿ ತಿನ್ನಬಾರದು ಎಂದು ಸಲಹೆ ನೀಡುತ್ತಾರೆ.

ಮಾವಿನ ಹಣ್ಣು ಮತ್ತು ಮೊಸರನ್ನು ಒಂದೇ ಸಮಯದಲ್ಲಿ ತಿನ್ನಬಾರದು ಮೊಸರು ಮತ್ತು ಮಾವು ಸೇರಿಸಿ ವಿವಿಧ ರುಚಿಕರವಾದ ಜ್ಯೂಸ್ ತಯಾರಿಸಲಾಗುತ್ತದೆ. ಮತ್ತು ಇದನ್ನು ಜನರು ಹೆಚ್ಚು ಇಷ್ಟಪಟ್ಟು ಸೇವಿಸುತ್ತಾರೆ. ಆದರೆ, ಮೊಸರು ಸೇವಿಸಿದ ತಕ್ಷಣ ಮಾವಿನಹಣ್ಣು ಅಥವಾ ಇವೆರಡರ ಸಂಯೋಜನೆಯು ದೇಹಕ್ಕೆ ವಿಷವನ್ನುಂಟು ಮಾಡುತ್ತದೆ. ಇದರಿಂದಾಗಿ ಚರ್ಮರೋಗಗಳು ಹರಡುವ ಅಪಾಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಿಟ್ರಸ್ ಹಣ್ಣುಗಳೊಂದಿಗೆ ಮೊಸರು ತಿನ್ನುವುದು ಹಾನಿಕಾರಕ ಸಿಟ್ರಸ್ ಅಂಶವುಳ್ಳ ಹಣ್ಣುಗಳನ್ನು ಮೊಸರಿನೊಂದಿಗೆ ತಿನ್ನಬಾರದು. ಇದು ವಿವಿಧ ಕಿಣ್ವಗಳನ್ನು ಹೊಂದಿರುತ್ತದೆ. ಈ ಕಾರಣದಿಂದಾಗಿ, ಮೊಸರು ಮತ್ತು ಸಿಟ್ರಸ್ ಅಂಶವುಳ್ಳ ಹಣ್ಣನ್ನು ಒಟ್ಟಿಗೆ ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ. ಇದು ಜೀರ್ಣ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಅಂತಿಮವಾಗಿ ಮಲಬದ್ಧತೆ, ಅಜೀರ್ಣ ಮತ್ತು ಅತಿಸಾರದಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಇದನ್ನೂ ಓದಿ:

ಆಹಾರದಲ್ಲಿನ ನಾರಿನಾಂಶ ಎಂದರೆ ಏನು? ಮಲಬದ್ಧತೆಯಿಂದ ದೂರವಿರಲು ಇದು ಹೇಗೆ ಸಹಕಾರಿಯಾಗಿದೆ

Weight loss Tips: ತೂಕವನ್ನು ಇಳಿಸಲು ದೇಹದಂಡನೆ ಮಾಡುವುದನ್ನು ಬಿಡಿ; ಈ ಸರಳ ಆಹಾರ ಪದ್ಧತಿಯನ್ನು ಅನುಸರಿಸಿ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ