AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personal Hygiene: ನಿಮ್ಮ ಈ ಕೆಲವೊಂದು ವೈಯಕ್ತಿಕ ಬಳಕೆ ವಸ್ತುಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ;ಸೋಂಕುಗಳು ಹರಡಬಹುದು

ರೋಗಗಳು ಮತ್ತು ಸೋಂಕುಗಳ ವಿರುದ್ಧ ರಕ್ಷಣೆಯನ್ನು ಪಡೆಯಬೇಕೆಂದರೆ ವೈಯಕ್ತಿಕ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಜೊತೆಗೆ ನಿಮ್ಮ ಈ ಕೆಲವೊಂದು ವಸ್ತುಗಳನ್ನು ಇತರರೊಂದಿಗೆ ಹಂಚಿಕೊಳ್ಳಬಾರದು, ಏಕೆಂದರೆ ಅದು ಸೋಂಕುಗಳನ್ನು ಹರಡುವ ಸಾಧ್ಯತೆಯಿರುತ್ತದೆ. ಹಾಗಾಗಿ ಈ ಬಗ್ಗೆ ಜಾಗರೂಕರಾಗಿರಬೇಕು.

Personal Hygiene: ನಿಮ್ಮ ಈ ಕೆಲವೊಂದು ವೈಯಕ್ತಿಕ ಬಳಕೆ ವಸ್ತುಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ;ಸೋಂಕುಗಳು ಹರಡಬಹುದು
Personal HygieneImage Credit source: Pinterest
ಮಾಲಾಶ್ರೀ ಅಂಚನ್​
| Edited By: |

Updated on: Sep 05, 2023 | 11:48 AM

Share

ಹೆಚ್ಚಿನವರು ಕಾಳಜಿಯ ವಿಷಯವಾಗಿ ತಮ್ಮ ವಸ್ತುಗಳನ್ನು ಪ್ರೀತಿಪಾತ್ರರೊಂದಿಗೆ ಹಂಚಿಕೊಳ್ಳುತ್ತಾರೆ. ಸಾಮಾನ್ಯವಾಗಿ ನೀರಿನ ಬಾಟಲಿ, ಮೇಕಪ್ ಕಿಟ್, ಬಟ್ಟೆ, ಚಾಚಣಿಕೆ ಹೀಗೆ ಹಲವು ವಸ್ತುಗಳನ್ನು ಜನರು ತಮ್ಮ ಸ್ನೇಹಿತರು ಮತ್ತು ಕುಟುಂಬ ಸದಸ್ಯರೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಹಂಚಿಕೊಂಡು ಬಾಳುವುದು ಒಳ್ಳೆಯ ಅಭ್ಯಾಸ. ಆದರೆ ಈ ಕೆಲವೊಂದು ವೈಯಕ್ತಿಯ ಬಳಕೆಯ ವಸ್ತುಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಏಕೆಂದರೆ ಇದರಿಂದ ಒಬ್ಬರಿಂದ ಒಬ್ಬರಿಗೆ ಸೋಂಕುಗಳು ಮತ್ತು ರೋಗಗಳು ಹರಡುವ ಸಾಧ್ಯತೆಯಿರುತ್ತದೆ. ಹಾಗಾಗಿ ವಿಷಯಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅತ್ಯಗತ್ಯ.

ನಿಮ್ಮ ಕೆಲವೊಂದು ವೈಯಕ್ತಿಯ ಬಳಕೆಯ ವಸ್ತುಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ:

ಹಲ್ಲುಜ್ಜುವ ಬ್ರಷ್:

ಕುಟುಂಬದ ಸದಸ್ಯರು ಅಥವಾ ಸ್ನೇಹಿತರೇ ಆಗಿರಲಿ, ಹಲ್ಲುಜ್ಜುವ ಬ್ರಷ್ ನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಹಲ್ಲುಜ್ಜುವ ಬ್ರಷ್ ನ್ನು ಪರಸ್ಪರ ಬಳಸುವುದರಿಂದ ಸೋಂಕು ಹರಡಬಹುದು ಮತ್ತು ಹಲ್ಲಿನ ಕೊಳೆಯಂತಹ ಸಮಸ್ಯೆಗಳು ಉಂಟಾಬಹುದು.

ಟವೆಲ್:

ನೀವು ಯಾರೊಂದಿಗೂ ಟವೆಲ್ ಹಂಚಿಕೊಳ್ಳಬಾರದು, ನಿಮ್ಮ ಮನೆಯಲ್ಲಿ ಮುಖ ಒರೆಸಲು ಅಥವಾ ಕೈ ಒರೆಸಿಕೊಳ್ಳಲು ಒಂದೇ ಟವೆಲ್ ನ್ನು ಬಳಸುತ್ತಿದ್ದರೆ, ಈ ಅಭ್ಯಾಸವನ್ನು ಇಂದೇ ಬಿಟ್ಟುಬಿಡಿ. ಏಕೆಂದರೆ ಯಾವುದೇ ರೀತಿಯ ಸೋಂಕು ಒಬ್ಬರಿಂದ ಒಬ್ಬರಿಗೆ ಟವೆಲ್ ಮೂಲಕ ಹರಡುತ್ತದೆ. ಮನೆಯಲ್ಲಿ ಯಾರಿಗಾದರೂ ರಿಂಗ್ ವರ್ಮ್ ಸಮಸ್ಯೆ ಅಥವಾ ಇತರ ಚರ್ಮದ ಸಮಸ್ಯೆಗಳು ಇದ್ದರೆ, ಅವರು ಬಳಸುವ ಟವೆಲ್ ನ್ನು ಮನೆಯ ಇತರ ಸದಸ್ಯರೂ ಬಳಸಿದರೆ, ಅವರಿಗೂ ಸೋಂಕು ಹರಡುವ ಸಾಧ್ಯತೆ ಇರುತ್ತದೆ.

ಲಿಪ್ ಬಾಮ್:

ಅನೇಕ ಬಾರಿ ಜನರು ತಮ್ಮ ಲಿಪ್ ಬಾಮ್ ನ್ನು ಇತರರೊಂದಿಗೆ ಹಂಚಿಕೊಳ್ಳುತ್ತಾರೆ. ಲಿಪ್ ಬಾಮ್ ನ್ನು ಇತರರೊಂದಿಗೆ ಹಂಚಿಕೊಳ್ಳುವುದರಿಂದ ಬ್ಯಾಕ್ಟೀರಿಯಾಗಳು ಒಬ್ಬರಿಂದ ಇನ್ನೊಬ್ಬರಿಗೆ ಸುಲಭವಾಗಿ ಅಂಟಿಕೊಳ್ಳಬಹುದು.

ಇದನ್ನೂ ಓದಿ: ಊಟವಾದ ಮೇಲೆ ಹೊಟ್ಟೆ ಉರಿಯುತ್ತಾ?; ಕಾರಣ ಇಲ್ಲಿದೆ

ಡಿಯೋಡರೆಂಟ್:

ಜನರು ಹೆಚ್ಚಾಗಿ ಬೆವರಿನ ವಾಸನೆಯನ್ನು ತೆಗೆದುಹಾಕಲು ಡಿಯೋಡರೆಂಟ್ ನ್ನು ಬಳಸುತ್ತಾರೆ. ಆದರೆ ಇದನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಏಕೆಂದರೆ ಇದನ್ನು ನೇರವಾಗಿ ದೇಹದ ಮೇಲೆ ಅನ್ವಯಿಸಲಾಗುವುದರಿಂದ ಬ್ಯಾಕ್ಟೀರಿಯಾಗಳು ಇನ್ನೊಬ್ಬರ ದೇಹದ ಮೇಲೆ ಅಂಟಿಕೊಳ್ಳುವ ಸಾಧ್ಯತೆಯಿರುತ್ತದೆ.

ಬಾಚಣಿಕೆ:

ಸಾಮಾನ್ಯವಾಗಿ ಹೆಚ್ಚಿನವರ ಮನೆಯಲ್ಲಿ ಎಲ್ಲರೂ ಒಂದೇ ಬಾಚಣಿಕೆಯಿಂದ ತಮ್ಮ ಕೂದಲನ್ನು ಬಾಚುತ್ತಾರೆ. ನೀವು ಹೀಗೆ ಮಾಡುತ್ತಿದ್ದರೆ, ಈ ಅಭ್ಯಾಸವನ್ನು ತಕ್ಷಣ ನಿಲ್ಲಿಸಿ. ಏಕೆಂದರೆ ತಲೆಹೊಟ್ಟು, ಕೂದಲಿನಲ್ಲಿ ಇನ್ಫೆಕ್ಷನ್ ನಂತಹ ಸಮಸ್ಯೆಗಳಿದ್ದರೆ, ಬೇರೆಯವರು ಅದೇ ಬಾಚಣಿಕೆ ಬಳಸಿದರೆ ಅವರಿಗೂ ಸೋಂಕು ತಗಲುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಬಾಚಣಿಕೆಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ