AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bottle Feeding: ಮಗುವಿಗೆ ಬಾಟಲಿಯಲ್ಲಿ ಹಾಲುಣಿಸುತ್ತಿದ್ದೀರಾ? ಹಾಗಿದ್ದರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಬಾಟಲಿಯಲ್ಲಿ ಹಾಲುಣಿಸುತ್ತಿದ್ದರೆ ನೈರ್ಮಲ್ಯಕ್ಕೆ ವಿಶೇಷ ಗಮನ ಕೊಡುವುದು ಅತ್ಯಂತ ಅಗತ್ಯವಾಗಿರುತ್ತದೆ. ಮಗು ಮಲಗಿರುವಾಗ ಯಾವುದೇ ಕಾರಣಕ್ಕೂ ಹಾಲುಣಿಸಬೇಡಿ. ಯಾಕೆಂದರೆ ಹೆಚ್ಚುವರಿ ಹಾಲು ಕೆಲವೊಮ್ಮೆ ಗಂಟಲಲ್ಲಿ ಸಿಲುಕಿ,ಮೂಗಿನಿಂದ ಹೊರಬರಬಹುದು. ಇದು ಮಗುವಿನ ಪ್ರಾಣಕ್ಕೂ ಅಪಾಯ ತಂದೊಡ್ಡಬಹುದು.

Bottle Feeding: ಮಗುವಿಗೆ ಬಾಟಲಿಯಲ್ಲಿ ಹಾಲುಣಿಸುತ್ತಿದ್ದೀರಾ? ಹಾಗಿದ್ದರೆ ಈ ವಿಷಯಗಳನ್ನು ತಿಳಿದುಕೊಳ್ಳಿ
Feeding Bottle
ಅಕ್ಷತಾ ವರ್ಕಾಡಿ
|

Updated on:Jan 07, 2024 | 12:11 PM

Share

ಹುಟ್ಟಿನಿಂದ ಆರು ತಿಂಗಳವರೆಗೆ ಎದೆಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ ‘ತಾಯಿ ಎದೆಹಾಲು ನವಜಾತ ಶಿಶುವಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹುಟ್ಟಿದಾಗಿನಿಂದ ಆರು ತಿಂಗಳುಗಳ ಕಾಲ ತಾಯಿಯ ಹಾಲನ್ನು ಉಣಿಸಬೇಕು’. ಕೆಲವೊಮ್ಮೆ ಎದೆಹಾಲಿನ ಕೊರತೆ ಅಥವಾ ಇನ್ಯಾವುದೋ ಸಮಸ್ಯೆಯಿಂದ ಮಕ್ಕಳು ಬಾಟಲಿ ಮೂಲಕ ಕುಡಿಸಬೇಕಾಗುತ್ತದೆ. ಆದರೆ ಬಾಟಲಿಯಲ್ಲಿ ಹಾಲುಣಿಸುತ್ತಿದ್ದರೆ ಅದರ ನೈರ್ಮಲ್ಯಕ್ಕೆ ವಿಶೇಷ ಗಮನ ಕೊಡುವುದು ಅತ್ಯಂತ ಅಗತ್ಯವಾಗಿರುತ್ತದೆ.

ಮಗುವಿನ ಹಾಲಿನ ಬಾಟಲಿಗೆ ಸಂಬಂಧಿಸಿದಂತೆ ಮಾರುಕಟ್ಟೆಯಲ್ಲಿ ಪ್ಲ್ಯಾಸ್ಟಿಕ್,ಸ್ಟೀಲ್ ಮತ್ತು ಗಾಜಿನ ಬಾಟಲಿಗಳು ಲಭ್ಯವಿವೆ. ಆದರೆ ಬಿಸಿ ಹಾಲಿಗೆ ಪ್ಲಾಸ್ಟಿಕ್​​ ಬಾಟಲಿ ಬಳಸುವುದು ಅಷ್ಟು ಸೂಕ್ತವಲ್ಲ. ನೀವು ಸ್ಟೀಲ್​​ ಅಥವಾ ಗಾಜಿನ ಬಾಟಲಿಗಳನ್ನು ಬಳಸಬಹುದು. ಗಾಲಿನ ಬಾಟಲಿ ಬೇಗ ಒಡೆದು ಹೋಗುವುದರಿಂದ ಹೆಚ್ಚಿನ ಜಾಗ್ರತೆ ವಹಿಸಿ. ಮಗುವಿಗೆ ಹಾಲು ನೀಡುವ ಮೊದಲು ಬಾಟಲಿಯನ್ನು ಚೆನ್ನಾಗಿ ಸ್ವಚ್ಛಗೊಳಿಸಿ. ಇದಲ್ಲದೆ, ಬಾಟಲಿಯನ್ನು ನೀರಿನಲ್ಲಿ ಕುದಿಸಿ ಸ್ವಚ್ಛಗೊಳಿಸಿ. ಮಗುವಿನ ಬಾಟಲ್ ಸ್ವಚ್ಛಗೊಳಿಸುವ ಬ್ರಷ್ಗಳನ್ನು ಸ್ವಚ್ಛವಾದ ಪ್ರದೇಶದಲ್ಲಿ ಪ್ರತ್ಯೇಕವಾಗಿ ಇರಿಸಿ. ಹಾಲು ತಯಾರಿಸುವ ಮೊದಲು ಕೈಗಳನ್ನು ತೊಳೆಯಬೇಕು. ಬರಿಗಣ್ಣಿಗೆ ಕಾಣದ ಅನೇಕ ಸೂಕ್ಷ್ಮಾಣುಜೀವಿಗಳಿವೆ. ಅಲ್ಲದೆ, ಬಾಟಲಿಗೆ ಜೋಡಿಸಲಾದ ಮೊಲೆತೊಟ್ಟುಗಳನ್ನು ನಿಯಮಿತವಾಗಿ ಬದಲಾಯಿಸುತ್ತೀರಿ.

ಇದನ್ನೂ ಓದಿ: ಎಚ್ಚರವಿದ್ದಾಗಲೇ 5 ವರ್ಷದ ಕಂದಮ್ಮನಿಗೆ ಬ್ರೈನ್ ಸರ್ಜರಿ, ಈ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಶ್ವದ ಅತ್ಯಂತ ಕಿರಿಯ ವ್ಯಕ್ತಿ

ಸ್ತನ್ಯಪಾನ ಮಾಡುವಾಗ ಈ ಅಂಶ ನೆನಪಿಡಿ:

ಮಗುವನ್ನು ನಿಮ್ಮ ತೊಡೆಯ ಮೇಲೆ ಇರಿಸಿ ಮತ್ತು ತಲೆಯ ಕೆಳಗೆ ಒಂದು ಕೈಯನ್ನು ಇರಿಸಿ ಮಗುವಿಗೆ ಹಾಲುಣಿಸಿ. ಮಗು ಮಲಗಿರುವಾಗ ಯಾವುದೇ ಕಾರಣಕ್ಕೂ ಹಾಲುಣಿಸಬೇಡಿ. ಯಾಕೆಂದರೆ ಹೆಚ್ಚುವರಿ ಹಾಲು ಕೆಲವೊಮ್ಮೆ ಗಂಟಲಲ್ಲಿ ಸಿಲುಕಿ,ಮೂಗಿನಿಂದ ಹೊರಬರಬಹುದು. ಇದು ಮಗುವಿನ ಪ್ರಾಣಕ್ಕೂ ಅಪಾಯ ತಂದೊಡ್ಡಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:08 pm, Sun, 7 January 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ