AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggery Benefits: ನೀವು ಬೆಲ್ಲವನ್ನು ಸೇವಿಸುತ್ತೀರಾ? ಹಲವು ರೋಗಗಳ ಮುಕ್ತಿಗೆ ಬೆಲ್ಲ ಸೇವನೆ ಸಹಕಾರಿ

ನಿಯಮಿತವಾಗಿ ಬೆಲ್ಲವನ್ನು ಸೇವಿಸುವುದರಿಂದ ದೇಹಕ್ಕೆ ಹೆಚ್ಚಿನ ಪ್ರಯೋಜನಗಳಿವೆ. ಹಾಗಾದರೆ ಬೆಲ್ಲದ ಆರೋಗ್ಯಕಾರಿ ಪ್ರಯೋಜನಗಳೇನು ಎಂಬುದನ್ನು ಈ ಒಂದು ಲೇಖನದಲ್ಲಿ ತಿಳಿಯೋಣ. 

Jaggery Benefits: ನೀವು ಬೆಲ್ಲವನ್ನು ಸೇವಿಸುತ್ತೀರಾ? ಹಲವು ರೋಗಗಳ ಮುಕ್ತಿಗೆ ಬೆಲ್ಲ ಸೇವನೆ ಸಹಕಾರಿ
ಬೆಲ್ಲ
TV9 Web
| Edited By: |

Updated on: Jul 15, 2022 | 7:00 AM

Share

ಬೆಲ್ಲವು ಹಲವಾರು ಔಷಧೀಯ ಗುಣಗಳನ್ನು ಹೊಂದಿದ್ದು, ಆಯುರ್ವೇದ ಸೇರಿದಂತೆ ಹಲವು ವಿಧದ ಚಿಕಿತ್ಸೆಗಳಲ್ಲಿ ಬೆಲ್ಲವನ್ನು ಬಳಸಲಾಗುತ್ತದೆ. ಸಕ್ಕರೆಯ ಬದಲು ಬೆಲ್ಲ (Jaggery) ಬಳಸುವುದು ತುಂಬಾ ಒಳ್ಳೆಯದು ಎಂದು ತಜ್ಞರು ಕೂಡ ಹೇಳುತ್ತಾರೆ. ಸಾಮಾನ್ಯವಾಗಿ, ಹೆಚ್ಚಿನ ಜನರು ಆಹಾರದಲ್ಲಿ ಅಥವಾ ಆಹಾರದ ನಂತರ ಬೆಲ್ಲವನ್ನು ತಿನ್ನಲು ಇಷ್ಟ ಪಡುತ್ತಾರೆ. ವಾಸ್ತವವಾಗಿ ಬೆಲ್ಲವನ್ನು ತಿನ್ನುವುದರಿಂದ ಅನೇಕ ರೋಗಗಳಿಂದ ಮುಕ್ತಿ ಹೊಂದಬಹುದಾಗಿದೆ. ಮುಖ್ಯವಾಗಿ ಬೆಲ್ಲ ತಿನ್ನುವುದರಿಂದ ಹೊಟ್ಟೆಯ ಸಮಸ್ಯೆ ದೂರವಾಗುತ್ತದೆ. ನಿಯಮಿತವಾಗಿ ಬೆಲ್ಲವನ್ನು ಸೇವಿಸುವುದರಿಂದ ದೇಹಕ್ಕೆ ಹೆಚ್ಚಿನ ಪ್ರಯೋಜನಗಳಿವೆ. ಹಾಗಾದರೆ ಬೆಲ್ಲದ ಆರೋಗ್ಯಕಾರಿ ಪ್ರಯೋಜನಗಳೇನು ಎಂಬುದನ್ನು ಈ ಒಂದು ಲೇಖನದಲ್ಲಿ ತಿಳಿಯೋಣ.

ಇದನ್ನೂ ಓದಿ: Nairobi Fly: ನೈರೋಬಿ ಫ್ಲೈಸ್ ಎಂದರೇನು? ಈ ನೊಣಗಳಿಂದಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಇಲ್ಲಿದೆ ಮಾಹಿತಿ

ದೇಹಕ್ಕೆ ಶಕ್ತಿಯನ್ನು ನೀಡುತ್ತದೆ:

ದೇಹವು ಶಕ್ತಿಯ ಕೊರತೆಯನ್ನು ಅನುಭವಿಸುತ್ತಿದ್ದರೆ, ಕೆಲವು ಪೋಷಕಾಂಶಗಳ ಕೊರತೆಯಿದೆ ಎಂದು ಅರ್ಥ. ಇಂತಹ ಪರಿಸ್ಥಿತಿಯಲ್ಲಿ ಬೆಲ್ಲವನ್ನು ನಿಮ್ಮ ಆಹಾರದ ಭಾಗವಾಗಿ ಸೇವಿಸುವುದು ಉತ್ತಮ. ಇದು ತಕ್ಷಣ ಪ್ರಯೋಜನವನ್ನು ನೀಡುತ್ತದೆ. ವಾಸ್ತವವಾಗಿ, ಬೆಲ್ಲವನ್ನು ಸೇವಿಸುವುದರಿಂದ ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ.

ಕೀಲು ನೋವು ದೂರ:

ಬದಲಾಗುತ್ತಿರುವ ಇಂದಿನ ಜೀವನಶೈಲಿಯಲ್ಲಿ ಕೀಲು ನೋವಿನ ಸಮಸ್ಯೆ ಸಾಮಾನ್ಯವಾಗಿದೆ. ಜೊತೆಗೆ ಇದು ಪ್ರತಿಯೊಬ್ಬರನ್ನು ಕಾಡುವ ಸಮಸ್ಯೆಯು ಹೌದು. ಇಂತಹ ಸ್ಥಿತಿಯಲ್ಲಿ ಪ್ರತಿದಿನ ಬೆಲ್ಲವನ್ನು ಸೇವಿಸುವುದರಿಂದ ಕೀಲು ನೋವು ಕಡಿಮೆಯಾಗುತ್ತದೆ  ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: Fibroids: ತೀವ್ರ ಹೊಟ್ಟೆ ನೋವಿಗೆ ಗರ್ಭಾಶಯದಲ್ಲಿ ಬೆಳೆದ ಫೈಬ್ರಾಯ್ಡ್​ಗಳು ಕಾರಣ ಇರಬಹುದು, ಇದರ ಲಕ್ಷಣಗಳು ಇಲ್ಲಿವೆ

ರಕ್ತದೊತ್ತಡ ನಿಯಂತ್ರಣ: ಬಿಪಿ ನಿಯಂತ್ರಣದಲ್ಲಿಲ್ಲದವರು ಬೆಲ್ಲವನ್ನು ಸೇವಿಸಬೇಕು. ಇದನ್ನು ಸೇವಿಸುವುದರಿಂದ ದೇಹದಲ್ಲಿನ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಜೊತೆಗೆ ಅನೇಕ ರೋಗಗಳನ್ನು ದೂರ ಮಾಡುತ್ತದೆ.

ದೇಹದಲ್ಲಿ ಕಬ್ಬಿಣದ ಕೊರತೆ:

ದೇಹದಲ್ಲಿ ಕಬ್ಬಿಣಾಂಶದ ಕೊರತೆಯಿದ್ದರೆ ಔಷಧಿಗಳ ಬದಲು ಬೆಲ್ಲವನ್ನು ನಿತ್ಯ ಸೇವಿಸಬೇಕು. ಇದು ಪ್ರಯೋಜನಕಾರಿಯಾಗಿದೆ. ಬೆಲ್ಲವು ದೇಹದಲ್ಲಿನ ಕಬ್ಬಿಣದ ಕೊರತೆಯನ್ನು ಸುಲಭವಾಗಿ ನಿವಾರಿಸುತ್ತದೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು