AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer: ಬಿಸಿಲಿನಲ್ಲಿ ಓಡಾಡಿದರೆ ತಲೆ ತಿರುಗುತ್ತಾ, ನಿರ್ಲಕ್ಷಿಸಬೇಡಿ, ಕಾರಣಗಳ ತಿಳಿಯಿರಿ

ತುರ್ತು ಕೆಲಸಗಳನ್ನು ಹೊರತುಪಡಿಸಿ ಇನ್ನೇನೇ ಕೆಲಸಗಳಿದ್ದರೂ ಬೇಸಿಗೆ ಕಾಲದಲ್ಲಿ ಸಂಜೆಯವರೆಗೆ ಮನೆಯಿಂದ ಹೊರಹೋಗುವ ಮಾತೇ ಇಲ್ಲ.

Summer: ಬಿಸಿಲಿನಲ್ಲಿ ಓಡಾಡಿದರೆ ತಲೆ ತಿರುಗುತ್ತಾ, ನಿರ್ಲಕ್ಷಿಸಬೇಡಿ, ಕಾರಣಗಳ ತಿಳಿಯಿರಿ
ಬಿಸಿಲುImage Credit source: ABP Live
ನಯನಾ ರಾಜೀವ್
|

Updated on: Mar 17, 2023 | 8:00 AM

Share

ತುರ್ತು ಕೆಲಸಗಳನ್ನು ಹೊರತುಪಡಿಸಿ ಇನ್ನೇನೇ ಕೆಲಸಗಳಿದ್ದರೂ ಬೇಸಿಗೆ ಕಾಲದಲ್ಲಿ ಸಂಜೆಯವರೆಗೆ ಮನೆಯಿಂದ ಹೊರಹೋಗುವ ಮಾತೇ ಇಲ್ಲ. ಹೆಚ್ಚುತ್ತಿರುವ ತಾಪಮಾನದಿಂದಾಗಿ, ಬೆವರು, ಶಾಖ ಮತ್ತು ತಲೆತಿರುಗುವಿಕೆ ಮತ್ತು ಮೂರ್ಛೆ ಮುಂತಾದ ಸಮಸ್ಯೆಗಳು ಪ್ರಾರಂಭವಾಗುತ್ತವೆ. ಬಿಸಿಲಿನಲ್ಲಿ ಹೆಚ್ಚು ಹೊತ್ತು ಇರುವುದರಿಂದ ಅನೇಕ ಆರೋಗ್ಯ ಸಮಸ್ಯೆ ಉಂಟಾಗಬಹುದು, ದೇಹವು ನಿರ್ಜಲೀಕರಣಗೊಳ್ಳಬಹುದು.

ದೇಹದಲ್ಲಿ ನೀರಿನ ಅಂಶ ಕಡಿಮೆಯಾದಾಗ ತಲೆ ತಿರುಗುತ್ತದೆ, ಕಡಿಮೆ ರಕ್ತದೊತ್ತಡವಿದ್ದರೂ ತಲೆ ತಿರುಗುವ ಅನುಭವವಾಗುವುದು. ಬೇಸಿಗೆಯಲ್ಲಿ ಯಾರಿಗೆ ಹೆಚ್ಚು ಬೆವರುತ್ತದೆಯೋ ಅವರಿಗೆ ತಲೆತಿರುಗುವ ಸಮಸ್ಯೆಯೂ ಇರುವುದು. ಬಲವಾದ ಸೂರ್ಯನ ಬೆಳಕಿನಲ್ಲಿ ಹೊರಗೆ ಹೋಗುವಾಗ ತಲೆಯಲ್ಲಿ ಭಾರವಾದ ಅನುಭವವಾಗುತ್ತದೆ.

ಇದು ಸಂಭವಿಸುತ್ತದೆ ಏಕೆಂದರೆ ಬೆವರು, ಉಪ್ಪು ಮತ್ತು ತೇವಾಂಶವು ದೇಹದಿಂದ ಹೊರಬರುತ್ತದೆ. ಇದಲ್ಲದೇ ಬೇಸಿಗೆ ಕಾಲದಲ್ಲಿ ಹೀಟ್ ಸ್ಟ್ರೋಕ್ ನಿಂದ ತಲೆ ಸುತ್ತುವ ಸಮಸ್ಯೆಯೂ ಬರಬಹುದು.

ಮತ್ತಷ್ಟು ಓದಿ: Bleeding Gums: ಅನಾರೋಗ್ಯಕರ ಒಸಡು ರಕ್ತಸ್ರಾವಕ್ಕೆ ಕಾರಣವಾಗಿರಬಹುದು; ಇಲ್ಲಿವೆ ನೀವು ಗಮನಿಸಬೇಕಾದ ಅಂಶಗಳು

ನಿಮ್ಮನ್ನು ರಕ್ಷಿಸುವುದು ಹೇಗೆ? ತಿಳಿ ಬಣ್ಣದ ಬಟ್ಟೆಗಳನ್ನು ಧರಿಸಿ, ಗಾಢ ಬಣ್ಣಗಳು ದೇಹದ ಉಷ್ಣತೆಯನ್ನು ಹೆಚ್ಚಿಸುವ ಶಾಖವನ್ನು ಹೀರಿಕೊಳ್ಳುತ್ತವೆ. ಬಿಸಿಲಿನಲ್ಲಿ ಹೋಗುವ ಮೊದಲು ಕ್ಯಾಪ್ ಧರಿಸಿ, ಸೂರ್ಯನನ್ನು ತಲೆ ಮತ್ತು ಮುಖದಿಂದ ದೂರವಿರಿಸುವುದರಿಂದ ದೇಹದ ಉಷ್ಣತೆಯನ್ನು ನಿಯಂತ್ರಣದಲ್ಲಿಡಬಹುದು. ನೀವು ಬಿಸಿಲಿಗೆ ಹೋದಾಗಲೆಲ್ಲಾ, ಸ್ವಲ್ಪ ಸಮಯದವರೆಗೆ ನೀರನ್ನು ಕುಡಿಯುವ ಮೂಲಕ ನಿಮ್ಮನ್ನು ಹೈಡ್ರೇಟ್ ಆಗಿರಿಸಿಕೊಳ್ಳಬಹುದು.

ನೀವು ಬಿಸಿಲಿಗೆ ಹೋಗುವಾಗ ನೀರಿನ ಬಾಟಲಿಯನ್ನು ನಿಮ್ಮೊಂದಿಗೆ ಕೊಂಡೊಯ್ಯಿರಿ.

ತಲೆತಿರುಗುವಿಕೆಯ ಸಂದರ್ಭದಲ್ಲಿ, ಮೊದಲನೆಯದಾಗಿ ತಂಪಾದ ಸ್ಥಳದಲ್ಲಿ ಕುಳಿತುಕೊಳ್ಳಿ.

ತಣ್ಣೀರಿನಿಂದ ನಿಮ್ಮ ಮುಖವನ್ನು ತೊಳೆಯಿರಿ ಮತ್ತು ಸಾಧ್ಯವಾದರೆ ತಕ್ಷಣ ನಿಂಬೆ ನೀರನ್ನು ಕುಡಿಯಿರಿ.

ಬೇಸಿಗೆಯಲ್ಲಿ ನಿಮ್ಮನ್ನು ಹೀಗೆ ನೋಡಿಕೊಳ್ಳಿ ಬೇಸಿಗೆ ಕಾಲದಲ್ಲಿ ನಿಮ್ಮನ್ನು ಹೈಡ್ರೀಕರಿಸಿಟ್ಟುಕೊಳ್ಳಿ. ದೇಹಕ್ಕೆ ದಿನಕ್ಕೆ ಸುಮಾರು 8 ರಿಂದ 10 ಗ್ಲಾಸ್ ನೀರು ಬೇಕಾಗುತ್ತದೆ. ದಿನವಿಡೀ ನೀರು ಕುಡಿಯಲು ಪ್ರಯತ್ನಿಸಿ.

ಇದಲ್ಲದೆ, ಈ ಸಮಸ್ಯೆಯನ್ನು ಹೋಗಲಾಡಿಸಲು, ಪ್ರತಿದಿನ ಸ್ವಲ್ಪ ಬಾದಾಮಿ ತಿನ್ನಿರಿ. ಇದರಲ್ಲಿ ವಿಟಮಿನ್ ಎ, ಬಿ ಮತ್ತು ಇ ಹೇರಳವಾಗಿದ್ದು, ತಲೆತಿರುಗುವಿಕೆಯ ಸಮಸ್ಯೆಯನ್ನು ಹೋಗಲಾಡಿಸುತ್ತದೆ.

ಮನೆಯಿಂದ ಹೊರಗೆ ಹೋಗುವಾಗ ಟೀ ಅಥವಾ ಕಾಫಿ ಸೇವಿಸುವ ಬದಲು ಹರ್ಬಲ್ ಟೀ ಕುಡಿಯಿರಿ.

ತಾಜಾ ಹಣ್ಣಿನ ರಸವನ್ನು ಕುಡಿಯುವುದು ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಪ್ರತಿದಿನ ಬೆಳಗ್ಗೆ ತಾಜಾ ಹಣ್ಣಿನ ರಸವನ್ನು ಕುಡಿಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ