AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವರ ಬಂದ ತಕ್ಷಣ ಮಾತ್ರೆ ತೆಗೆದುಕೊಳ್ಳುವ ಅಭ್ಯಾಸ ನಿಮಗಿದೆಯಾ?

ಸಣ್ಣದಾಗಿ ಮೈ ಸುಡುವುದು, ತಲೆ ನೋವು ಕಂಡಾಕ್ಷಣ ನೀವು ಔಷಧಿಗಳನ್ನು ತೆಗೆದುಕೊಳ್ಳುವ ಅಭ್ಯಾಸ ನಿಮಗಿದ್ದರೆ ಈ ಕೂಡಲೇ ಬಿಟ್ಟು ಬಿಡಿ. ಇದು ಕಾಲ ಕ್ರಮೇಣ ನಿಮ್ಮ ದೇಹದ ಮೇಲೆ ಕೆಟ್ಟ ಪರಿಣಾಮ ಬೀರಬಹುದು

ಜ್ವರ ಬಂದ ತಕ್ಷಣ ಮಾತ್ರೆ ತೆಗೆದುಕೊಳ್ಳುವ ಅಭ್ಯಾಸ ನಿಮಗಿದೆಯಾ?
ಸಾಂದರ್ಭಿಕ ಚಿತ್ರImage Credit source: Cleveland Clinic
TV9 Web
| Edited By: |

Updated on: Dec 21, 2022 | 5:00 PM

Share

ಹವಾಮಾನ ಬದಲಾವಣೆ(Climate change) ಯಿಂದಾಗಿ ಮಳೆಗಾಲ, ಚಳಿಗಾಲ ಮತ್ತು ಬೇಸಿಗೆ ಕಾಲ ಯಾವುದು ಎಂಬುದೇ ತಿಳಿಯದಾಗಿದೆ. ಇದರಿಂದಾಗಿ ಜ್ವರ, ಶೀತ ,ಕೆಮ್ಮು ಪ್ರತಿಯೊಬ್ಬರಲ್ಲಿಯೂ ಈಗೀಗಾ ಸಾಮಾನ್ಯವಾಗಿ ಬಿಟ್ಟಿದೆ. ಇದಲ್ಲದೇ ಒಬ್ಬ ವ್ಯಕ್ತಿಯು ಒತ್ತಡದ ಜೀವನದ ನಡುವೆ ತುಂಬಾ ದಣಿದಿದ್ದರೆ ಸೌಮ್ಯವಾದ ಜ್ವರದ ಲಕ್ಷಣವೂ ಕಂಡುಬರುತ್ತದೆ. ಇಂತಹ ಸಮಯದಲ್ಲಿ ಜ್ವರ ತಕ್ಷಣ ಕಡಿಮೆಯಾಗಲು ಮಾತ್ರೆಗಳನ್ನು ತೆಗೆದುಕೊಳ್ಳುವ ಅಭ್ಯಾಸ ನಿಮಗಿದ್ದರೆ ಎಚ್ಚರ ವಹಿಸಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಜ್ವರವು ಎರಡು ದಿನಗಳಿಗಿಂತ ಹೆಚ್ಚು ಕಾಲ ಉಳಿಯದಿದ್ದರೆ, ಯಾವುದೇ ವೈದ್ಯರ ಸಮಾಲೋಚನೆಯಿಲ್ಲದೆ ನೀವು ಔಷಧಿಗಳನ್ನು ತೆಗೆದುಕೊಳ್ಳಬಾರದು ಎಂದು ಲುಧಿಯಾನಾದ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ ಡಾ ಎರಿಕ್ ವಿಲಿಯಮ್ಸ್ ಹೇಳುತ್ತಾರೆ. ಡೆಂಗ್ಯೂ, ಟೈಫಾಯಿಡ್ ಅಥವಾ ಮಲೇರಿಯಾದಂತಹ ಪ್ರಮುಖ ಕಾಯಿಲೆಗಳ ಹೊರತಾಗಿ ಜ್ವರವು ನೂರಾರು ಕಾರಣಗಳನ್ನು ಹೊಂದಿದೆ ಎಂಬುದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಕೆಲವೊಮ್ಮೆ, ಸುದೀರ್ಘ ಪ್ರವಾಸದ ನಂತರ ಒಬ್ಬ ವ್ಯಕ್ತಿಯು ಜ್ವರವನ್ನು ಹೊಂದಿರಬಹುದು. ಈ ರೀತಿಯ ಆಯಾಸದ ಸಂದರ್ಭಗಳಲ್ಲಿ, ದೀರ್ಘಾವಧಿಯಲ್ಲಿ ದೇಹಕ್ಕೆ ಹಾನಿಯಾಗಬಹುದು ಎಂದು ವ್ಯಕ್ತಿಯು ಸ್ವಯಂ-ಔಷಧಿ ಮಾಡದಂತೆ ಸಲಹೆ ನೀಡಲಾಗುತ್ತದೆ ಎಂದು ಹೇಳುತ್ತಾರೆ.

ಸಣ್ಣದಾಗಿ ಮೈ ಸುಡುವುದು, ತಲೆ ನೋವು ಕಂಡಾಕ್ಷಣ ನೀವು ಔಷಧಿಗಳನ್ನು ತೆಗೆದುಕೊಳ್ಳುವ ಅಭ್ಯಾಸ ನಿಮಗಿದ್ದರೆ ಈ ಕೂಡಲೇ ಬಿಟ್ಟು ಬಿಡಿ. ಇದು ಕಾಲ ಕ್ರಮೇಣ ನಿಮ್ಮ ದೇಹದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಂತಾನೋತ್ಪತ್ತಿಗೆ ಸಹಾಯಕವಾಗುವ ಯೋಗಾಸನದ ಭಂಗಿಗಳು ಇಲ್ಲಿವೆ

ನೀವು ಪ್ಯಾರೆಸಿಟಮಾಲ್ ಅತಿಯಾಗಿ ತೆಗೆದುಕೊಂಡರೆ ಇದು ನಿಮ್ಮ ದೇಹದ ಮೇಲೆ ಕಾಲಕ್ರಮೇಣ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಆದ್ದರಿಂದ, ಸರಿಯಾದ ಮಾರ್ಗದರ್ಶನವಿಲ್ಲದೆ ಔಷಧವನ್ನು ತೆಗೆದುಕೊಳ್ಳುವುದು ನಿಮ್ಮ ಯಕೃತ್ತಿನ ವೈಫಲ್ಯಕ್ಕೆ ಕಾರಣವಾಗುತ್ತದೆ ಎಂದು ನವದೆಹಲಿಯ ಫೋರ್ಟಿಸ್ ಆಸ್ಪತ್ರೆಯ ಹಿರಿಯ ಸಲಹೆಗಾರ ಡಾ ಮನೋಜ್ ಶರ್ಮಾ ಹೇಳಿದ್ದಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ