AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವರ ಬಂದ ತಕ್ಷಣ ಮಾತ್ರೆ ತೆಗೆದುಕೊಳ್ಳುವ ಅಭ್ಯಾಸ ನಿಮಗಿದೆಯಾ?

ಸಣ್ಣದಾಗಿ ಮೈ ಸುಡುವುದು, ತಲೆ ನೋವು ಕಂಡಾಕ್ಷಣ ನೀವು ಔಷಧಿಗಳನ್ನು ತೆಗೆದುಕೊಳ್ಳುವ ಅಭ್ಯಾಸ ನಿಮಗಿದ್ದರೆ ಈ ಕೂಡಲೇ ಬಿಟ್ಟು ಬಿಡಿ. ಇದು ಕಾಲ ಕ್ರಮೇಣ ನಿಮ್ಮ ದೇಹದ ಮೇಲೆ ಕೆಟ್ಟ ಪರಿಣಾಮ ಬೀರಬಹುದು

ಜ್ವರ ಬಂದ ತಕ್ಷಣ ಮಾತ್ರೆ ತೆಗೆದುಕೊಳ್ಳುವ ಅಭ್ಯಾಸ ನಿಮಗಿದೆಯಾ?
ಸಾಂದರ್ಭಿಕ ಚಿತ್ರImage Credit source: Cleveland Clinic
TV9 Web
| Edited By: |

Updated on: Dec 21, 2022 | 5:00 PM

Share

ಹವಾಮಾನ ಬದಲಾವಣೆ(Climate change) ಯಿಂದಾಗಿ ಮಳೆಗಾಲ, ಚಳಿಗಾಲ ಮತ್ತು ಬೇಸಿಗೆ ಕಾಲ ಯಾವುದು ಎಂಬುದೇ ತಿಳಿಯದಾಗಿದೆ. ಇದರಿಂದಾಗಿ ಜ್ವರ, ಶೀತ ,ಕೆಮ್ಮು ಪ್ರತಿಯೊಬ್ಬರಲ್ಲಿಯೂ ಈಗೀಗಾ ಸಾಮಾನ್ಯವಾಗಿ ಬಿಟ್ಟಿದೆ. ಇದಲ್ಲದೇ ಒಬ್ಬ ವ್ಯಕ್ತಿಯು ಒತ್ತಡದ ಜೀವನದ ನಡುವೆ ತುಂಬಾ ದಣಿದಿದ್ದರೆ ಸೌಮ್ಯವಾದ ಜ್ವರದ ಲಕ್ಷಣವೂ ಕಂಡುಬರುತ್ತದೆ. ಇಂತಹ ಸಮಯದಲ್ಲಿ ಜ್ವರ ತಕ್ಷಣ ಕಡಿಮೆಯಾಗಲು ಮಾತ್ರೆಗಳನ್ನು ತೆಗೆದುಕೊಳ್ಳುವ ಅಭ್ಯಾಸ ನಿಮಗಿದ್ದರೆ ಎಚ್ಚರ ವಹಿಸಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಜ್ವರವು ಎರಡು ದಿನಗಳಿಗಿಂತ ಹೆಚ್ಚು ಕಾಲ ಉಳಿಯದಿದ್ದರೆ, ಯಾವುದೇ ವೈದ್ಯರ ಸಮಾಲೋಚನೆಯಿಲ್ಲದೆ ನೀವು ಔಷಧಿಗಳನ್ನು ತೆಗೆದುಕೊಳ್ಳಬಾರದು ಎಂದು ಲುಧಿಯಾನಾದ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ ಡಾ ಎರಿಕ್ ವಿಲಿಯಮ್ಸ್ ಹೇಳುತ್ತಾರೆ. ಡೆಂಗ್ಯೂ, ಟೈಫಾಯಿಡ್ ಅಥವಾ ಮಲೇರಿಯಾದಂತಹ ಪ್ರಮುಖ ಕಾಯಿಲೆಗಳ ಹೊರತಾಗಿ ಜ್ವರವು ನೂರಾರು ಕಾರಣಗಳನ್ನು ಹೊಂದಿದೆ ಎಂಬುದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಕೆಲವೊಮ್ಮೆ, ಸುದೀರ್ಘ ಪ್ರವಾಸದ ನಂತರ ಒಬ್ಬ ವ್ಯಕ್ತಿಯು ಜ್ವರವನ್ನು ಹೊಂದಿರಬಹುದು. ಈ ರೀತಿಯ ಆಯಾಸದ ಸಂದರ್ಭಗಳಲ್ಲಿ, ದೀರ್ಘಾವಧಿಯಲ್ಲಿ ದೇಹಕ್ಕೆ ಹಾನಿಯಾಗಬಹುದು ಎಂದು ವ್ಯಕ್ತಿಯು ಸ್ವಯಂ-ಔಷಧಿ ಮಾಡದಂತೆ ಸಲಹೆ ನೀಡಲಾಗುತ್ತದೆ ಎಂದು ಹೇಳುತ್ತಾರೆ.

ಸಣ್ಣದಾಗಿ ಮೈ ಸುಡುವುದು, ತಲೆ ನೋವು ಕಂಡಾಕ್ಷಣ ನೀವು ಔಷಧಿಗಳನ್ನು ತೆಗೆದುಕೊಳ್ಳುವ ಅಭ್ಯಾಸ ನಿಮಗಿದ್ದರೆ ಈ ಕೂಡಲೇ ಬಿಟ್ಟು ಬಿಡಿ. ಇದು ಕಾಲ ಕ್ರಮೇಣ ನಿಮ್ಮ ದೇಹದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಂತಾನೋತ್ಪತ್ತಿಗೆ ಸಹಾಯಕವಾಗುವ ಯೋಗಾಸನದ ಭಂಗಿಗಳು ಇಲ್ಲಿವೆ

ನೀವು ಪ್ಯಾರೆಸಿಟಮಾಲ್ ಅತಿಯಾಗಿ ತೆಗೆದುಕೊಂಡರೆ ಇದು ನಿಮ್ಮ ದೇಹದ ಮೇಲೆ ಕಾಲಕ್ರಮೇಣ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಆದ್ದರಿಂದ, ಸರಿಯಾದ ಮಾರ್ಗದರ್ಶನವಿಲ್ಲದೆ ಔಷಧವನ್ನು ತೆಗೆದುಕೊಳ್ಳುವುದು ನಿಮ್ಮ ಯಕೃತ್ತಿನ ವೈಫಲ್ಯಕ್ಕೆ ಕಾರಣವಾಗುತ್ತದೆ ಎಂದು ನವದೆಹಲಿಯ ಫೋರ್ಟಿಸ್ ಆಸ್ಪತ್ರೆಯ ಹಿರಿಯ ಸಲಹೆಗಾರ ಡಾ ಮನೋಜ್ ಶರ್ಮಾ ಹೇಳಿದ್ದಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ