AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ತರಕಾರಿಗಳು ಏಕೆ ಆರೋಗ್ಯಕ್ಕೆ ಒಳ್ಳೆಯದು? ಇಲ್ಲಿದೆ ಕಾರಣ

ಹಸಿರು ತರಕಾರಿಗಳು ದೇಹಕ್ಕೆ ತುಂಬಾ ಒಳ್ಳೆಯದು ಎಂಬ ಮಾತನ್ನು ನೀವು ಆಗಾಗ ಕೇಳಿರಬಹುದು. ಆದರೆ ಹೇಗೆ ಆರೋಗ್ಯಕರ ಎಂಬುದನ್ನು ಯೋಚಿಸಿದ್ದೀರಾ? ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಂಡಿದ್ದೀರಾ? ಹಸಿರು ತರಕಾರಿಗಳು ಅವುಗಳ ಸಮೃದ್ಧ ಪೋಷಕಾಂಶಗಳಿಂದಾಗಿ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಹಾಗಾದರೆ ಈ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಿ.

ಹಸಿರು ತರಕಾರಿಗಳು ಏಕೆ ಆರೋಗ್ಯಕ್ಕೆ ಒಳ್ಳೆಯದು? ಇಲ್ಲಿದೆ ಕಾರಣ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 18, 2023 | 4:55 PM

ಹಸಿರು ತರಕಾರಿಗಳು ದೇಹಕ್ಕೆ ತುಂಬಾ ಒಳ್ಳೆಯದು ಎಂಬ ಮಾತನ್ನು ನೀವು ಆಗಾಗ ಕೇಳಿರಬಹುದು. ಆದರೆ ಹೇಗೆ ಆರೋಗ್ಯಕರ ಎಂಬುದನ್ನು ಯೋಚಿಸಿದ್ದೀರಾ? ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಂಡಿದ್ದೀರಾ? ದೃಷ್ಟಿ ದೋಷ, ಪ್ರತಿರಕ್ಷಣಾ ಶಕ್ತಿ, ಚರ್ಮದ ಆರೋಗ್ಯ ಅಥವಾ ಬಲವಾದ ಮೂಳೆಗಳಿಗಾಗಿ, ನಿಮ್ಮ ದೇಹಕ್ಕೆ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳನ್ನು ನೀಡುವ ಆಹಾರವನ್ನು ನೀವು ಸೇವಿಸಬೇಕಾಗುತ್ತದೆ. ನಿಮ್ಮ ಅಗತ್ಯ ಸೇವನೆ, ಬೇಕಾದ ಪೂರಕಗಳನ್ನು ನೀಡಲು ಸಹಾಯ ಮಾಡಬಹುದಾದರೂ ಕೂಡ ನಿಮ್ಮ ಪೌಷ್ಠಿಕಾಂಶದ ಪ್ರಮಾಣಕ್ಕಾಗಿ ನೀವು ಮೊದಲು ನೈಸರ್ಗಿಕ ಮೂಲಗಳತ್ತ ಚಿತ್ತ ಹರಿಸಬೇಕು. ಅಂದರೆ ಹಸಿರು ತರಕಾರಿಗಳು, ಇವು ಪೌಷ್ಠಿಕಾಂಶದ ಅತ್ಯುತ್ತಮ ಮೂಲಗಳಲ್ಲಿ ಒಂದಾಗಿದೆ. ಜೊತೆಗೆ ಇದು ವೈವಿಧ್ಯಮಯವಾಗಿದ್ದು ಅಗತ್ಯ ಪೋಷಕಾಂಶಗಳಿಂದ ತುಂಬಿವೆ ಎಂದು ಕ್ಲಿನಿಕಲ್ ಪೌಷ್ಟಿಕ ತಜ್ಞ ಅಭಿಲಾಷಾ ವಿ. ಹೇಳುತ್ತಾರೆ. ಅತ್ಯಂತ ಕೆಲವು ಜನಪ್ರಿಯ ಹಸಿರು ತರಕಾರಿಗಳ ಬಗ್ಗೆ ಮತ್ತು ಹಸಿರು ತರಕಾರಿಗಳು ಏಕೆ ಆರೋಗ್ಯಕ್ಕೆ ಒಳ್ಳೆಯದು? ಎಂಬ ಬಗ್ಗೆ ಮಾಹಿತಿ ಇಲ್ಲಿವೆ.

• ಪಾಲಕ್- ಇದರಲ್ಲಿ ಕಬ್ಬಿಣ, ವಿಟಮಿನ್ ಎ ಮತ್ತು ಕೆ ಅಧಿಕವಾಗಿದೆ ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ.

• ಬ್ರೊಕೋಲಿ- ಇದರಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ಫೈಬರ್ ಇದೆ.

• ಕೇಲ್ – ವಿಟಮಿನ್ ಎ, ಕೆ ಮತ್ತು ಸಿ ಮತ್ತು ತಾಮ್ರ ಮತ್ತು ಪೊಟ್ಯಾಸಿಯಮ್ ನಂತಹ ಖನಿಜಗಳನ್ನು ಹೊಂದಿರುವ ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದೆ.

• ಲೆಟ್ಯೂಸ್ – ಕಡಿಮೆ ಕ್ಯಾಲೊರಿಗಳನ್ನು ಹೊಂದಿರುತ್ತದೆ, ಇದು ವಿಟಮಿನ್ ಎ ಮತ್ತು ಕೆ ಯ ಉತ್ತಮ ಮೂಲವಾಗಿದೆ.

• ಬಟಾಣಿಗಳು- ಇದು ಪ್ರೋಟೀನ್, ಫೈಬರ್ ಮತ್ತು ವಿಟಮಿನ್ ಕೆ ಮತ್ತು ಸಿ ನಂತಹ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತವೆ.

• ಸೀಬೆಹಣ್ಣು – ಇದರಲ್ಲಿ ಕಡಿಮೆ ಕ್ಯಾಲೊರಿಗಳಿವೆ, ಇದು ವಿಟಮಿನ್ ಎ ಮತ್ತು ಸಿ ಯ ಉತ್ತಮ ಮೂಲವಾಗಿದೆ.

• ಶತಾವರಿ- ಫೈಬರ್ ಮತ್ತು ಫೋಲೇಟ್ ಸಮೃದ್ಧವಾಗಿದೆ.

• ಹಸಿರು ಬೀನ್ಸ್- ಇದರಲ್ಲಿ ಫೈಬರ್, ವಿಟಮಿನ್ ಎ ಮತ್ತು ಸಿ ಅಧಿಕವಾಗಿರುತ್ತದೆ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿರುವ ಸಸ್ಯ ಸಂಯುಕ್ತಗಳ ಉತ್ತಮ ಮೂಲವಾಗಿದೆ.

ಇದನ್ನೂ ಓದಿ: ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ, ಇಲ್ಲಿದೆ ಕಾರಣ

ಹಸಿರು ತರಕಾರಿಗಳು ಏಕೆ ಆರೋಗ್ಯಕ್ಕೆ ಒಳ್ಳೆಯದು?

ಹಸಿರು ತರಕಾರಿಗಳು ಅವುಗಳ ಸಮೃದ್ಧ ಪೋಷಕಾಂಶಗಳಿಂದಾಗಿ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಕೆಲವು ಪ್ರಮುಖ ಪ್ರಯೋಜನಗಳು ಇಲ್ಲಿವೆ:

1. ಹೃದಯದ ಆರೋಗ್ಯ: ಕೇಲ್ ಮತ್ತು ಪಾಲಕ್ ನಂತಹ ಅನೇಕ ಹಸಿರು ತರಕಾರಿಗಳು ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಅನ್ನು ಹೊಂದಿರುತ್ತವೆ, ಇದು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅವುಗಳಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ, ಹೃದಯರಕ್ತನಾಳದ ಆರೋಗ್ಯವನ್ನು ಉತ್ತೇಜಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

2. ಮೂಳೆಯ ಆರೋಗ್ಯ: ಬ್ರೊಕೋಲಿ ಮತ್ತು ಕೇಲ್ ನಂತಹ ಸೊಪ್ಪುಗಳು ಕ್ಯಾಲ್ಸಿಯಂನ ಅತ್ಯುತ್ತಮ ಮೂಲಗಳಾಗಿವೆ, ಇದು ಮೂಳೆಗಳನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.

3. ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ: ಹಸಿರು ತರಕಾರಿಗಳಲ್ಲಿನ ಫೈಬರ್ ಅಂಶವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಮಲಬದ್ಧತೆಯನ್ನು ತಡೆಯಲು ಮತ್ತು ಆರೋಗ್ಯಕರ ಕರುಳನ್ನು ಕಾಪಾಡಿಕೊಳ್ಳಲು ಉತ್ತಮವಾಗಿದೆ.

4. ತೂಕ ನಿರ್ವಹಣೆ: ಕಡಿಮೆ ಕ್ಯಾಲೊರಿಗಳು ಮತ್ತು ಫೈಬರ್ ಅಧಿಕವಾಗಿರುವುದರಿಂದ, ಹಸಿರು ತರಕಾರಿಗಳು ಹೊಟ್ಟೆ ತುಂಬಿದ ಭಾವನೆಯನ್ನು ಉತ್ತೇಜಿಸುವ ಮೂಲಕ ಮತ್ತು ಒಟ್ಟಾರೆ ಕ್ಯಾಲೊರಿ ಸೇವನೆಯನ್ನು ಕಡಿಮೆ ಮಾಡುತ್ತದೆ ಹಾಗಾಗಿ ಇದು ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ.

5. ದೃಷ್ಟಿ ರಕ್ಷಣೆ: ಪಾಲಕ್ ಮತ್ತು ಕೇಲ್ ನಂತಹ ಹಸಿರು ಎಲೆಗಳ ತರಕಾರಿಗಳಲ್ಲಿ ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್ ಸಮೃದ್ಧವಾಗಿದೆ. ಇದು ಕಣ್ಣಿನ ಆರೋಗ್ಯವನ್ನು ಬೆಂಬಲಿಸುವ ಉತ್ಕರ್ಷಣ ನಿರೋಧಕಗಳಾಗಿವೆ.

6. ರಕ್ತದಲ್ಲಿನ ಸಕ್ಕರೆ ನಿಯಂತ್ರಣ; ಹಸಿರು ತರಕಾರಿಗಳಲ್ಲಿನ ಫೈಬರ್ ಅಂಶವು ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ, ಇದು ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಉತ್ತಮ ಕೊಡುಗೆ ನೀಡುತ್ತದೆ.

7. ಪ್ರತಿರಕ್ಷಣಾ ಬೆಂಬಲ: ಹಸಿರು ತರಕಾರಿಗಳಲ್ಲಿ ಕಂಡು ಬರುವ ಸಿ ಮತ್ತು ಎ ನಂತಹ ಜೀವಸತ್ವಗಳು ರೋಗನಿರೋಧಕ ಶಕ್ತಿಯನ್ನು ಬೆಂಬಲಿಸುವಲ್ಲಿ ಮುಖ್ಯ ಪಾತ್ರವಹಿಸುತ್ತವೆ, ದೇಹವು ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ