AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮಿಡೆಸಿವಿರ್ ಸಹ ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿಸುತ್ತದೆ ಎನ್ನುತ್ತಾರೆ ವೈದ್ಯರು!

ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚಾಗಿದ್ದರೆ ಅಂಥ ರೋಗಿಗಳಿಗೆ ವೈದ್ಯರು ರೆಮಿಡೆಸಿವಿರ್ ಇಂಜೆಕ್ಷನ್ ನೀಡುತ್ತಾರೆ. ಹಾಗಾಗೇ ಈ ಇಂಜೆಕ್ಷನ್ ಮಾರುಕಟ್ಟೆಯಲ್ಲಿ ಸಿಗದಂಥ ಸ್ಥಿತಿ ನಿರ್ಮಾಣವಾಗಿದೆ

ರೆಮಿಡೆಸಿವಿರ್ ಸಹ ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿಸುತ್ತದೆ ಎನ್ನುತ್ತಾರೆ ವೈದ್ಯರು!
ರೆಮ್​ಡಿಸಿವಿರ್ (ಸಂಗ್ರಹ ಚಿತ್ರ)
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 22, 2021 | 12:38 AM

Share

ಕೊರೊನಾ ಪಿಡುಗು ದಿನಕ್ಕೊಂದು ಬಗೆಯ ಆತಂಕವನ್ನು ಸೃಷ್ಟಿಸುತ್ತಿದೆ. ನಮಗೆಲ್ಲ ಗೊತ್ತಿರುವ ಹಾಗೆ ಚಿಕಿತ್ಸೆ ಸಂದರ್ಭದಲ್ಲಿ ಸೋಂಕಿತರಿಗೆ ಸ್ಟಿರಾಯ್ಡ್​ಗಳನ್ನು ನೀಡಲಾಗುತ್ತದೆ. ಇವುಗಳನ್ನು ತೆಗೆದುಕೊಂಡರೆ ರೋಗದಿಂದ ಗುಣಮುಖರಾಗುವ ಅವಧಿ ತ್ವರಿತಗೊಳ್ಳುತ್ತದಾದರೂ ಅವು ದೇಹದಲ್ಲಿ ಸಕ್ಕರೆ ಪ್ರಮಾಣವನ್ನು ಹೆಚ್ಚುಸುತ್ತಿವೆ. ಅದಾಗಲೇ ಕೊರೊನಾ ಸೋಂಕಿನಿಂದ ತತ್ತರಿಸಿರುವ ರೋಗಿಗಳಲ್ಲಿ ಇದು ಮತ್ತಷ್ಟು ಭೀತಿಯನ್ನು ಹುಟ್ಟಿಸುತ್ತಿದೆ. ಈಗ ಬೆಳಕಿಗೆ ಬಂದಿರುವ ಮತೊಂದು ಸಂಗತಿಯೇನೆಂದರೆ, ರೆಮಿಡೆಸಿವಿರ್ ಔಷಧಿ ಸಹ ಸಕ್ಕರೆ ಅಂಶವನ್ನು ಹೆಚ್ಚಿಸುತ್ತದೆ.

ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚಾಗಿದ್ದರೆ ಅಂಥ ರೋಗಿಗಳಿಗೆ ವೈದ್ಯರು ರೆಮಿಡೆಸಿವಿರ್ ಇಂಜೆಕ್ಷನ್ ನೀಡುತ್ತಾರೆ. ಹಾಗಾಗೇ ಈ ಇಂಜೆಕ್ಷನ್ ಮಾರುಕಟ್ಟೆಯಲ್ಲಿ ಸಿಗದಂಥ ಸ್ಥಿತಿ ನಿರ್ಮಾಣವಾಗಿದೆ. ರೆಮಿಡೆಸಿವಿರ್ ಕೊವಿಡ್-19 ನಿಂದ ಬಳಲುತ್ತಿರುವವರ ಪ್ರಾಣ ಉಳಿಸುತ್ತದೆ ಎಂದು ವೈದ್ಯರು ಹೇಳುವುದು ನಿಜವೇ ಆದರೂ ಅದು ಕೇವಲ ನಾಣ್ಯದ ಒಂದು ಭಾಗವನದನು ಮಾತ್ರ ವ್ಯಾಖ್ಯಾನಿಸುತ್ತದೆ.

ರೆಮಿಡೆಸಿವಿರ್ ದೇಹದಲ್ಲಿ ಸಕ್ಕರೆ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂಬ ಅಂಶವನ್ನು ವೈದ್ಯರು ಕಂಡುಕೊಂಡಿದ್ದಾರೆ. ಕೆಲವು ಸೋಂಕಿತರಲ್ಲಿ ಮಧುಮೇಹದ ಸಮಸ್ಯೆ ಇಲ್ಲದಾಗ್ಯೂ ರೆಮಿಡೆಸಿವಿರ್ ಇಂಜೆಕ್ಷನ್ ತೆಗೆದುಕೊಂಡ ಕಾರಣ ಅದು ಕಾಣಿಸಿಕೊಂಡಿದೆ.ಕೊರೊನಾದಿಂದ ಮುಕ್ತರಾದರೂ ಮಧುಮೇಹವನ್ನು ದೇಹದಲ್ಲಿ ತುಂಬಿಕೊಂಡು ಮನೆಗಳಿಗೆ ಅವರು ಹಿಂತಿರುಗಿದ್ದಾರೆ.

ಹಾಗಾಗೇ, ರೆಮಿಡೆಸಿವಿರ್ ಇಂಜೆಕ್ಷನ್​ಗಳನ್ನು ಸೋಂಕಿತರಿಗೆ ನೀಡುವ ಮೊದಲು ಎರಡೆರಡು ಬಾರಿ ಯೋಚಿಸುವ ಅನಿವಾರ್ಯತೆ ವೈದ್ಯರಿಗೆ ಎದುರಾಗಿದೆ. ರಾಜಸ್ತಾನಲ್ಲಿ ಒಂದು ಆಧ್ಯಯನ ನಡೆಸಿದ ನಂತರ ಕೊರೊನಾದಿಂದ ನರಳುತ್ತಿರುವ ಮಧುಮೇಹಿಗಳಿಗೆ ರೆಮಿಡೆಸಿವಿರ್ ಇಂಜೆಕ್ಷನ್ ಕೊಡದಿರುವ ಬಗ್ಗೆ ಅಲ್ಲಿನ ವೈದ್ಯರು ತೀರ್ಮಾನಕ್ಕೆ ಬಂದಿದ್ದಾರೆ.

ಸ್ಟಿರಾಯ್ಡ್​ಗಳ ಜೊತೆಗೆ ರೆಮಿಡಿಸಿವಿರ್ ಇಂಜೆಕ್ಷನ್ ತೆಗೆದುಕೊಂಡ ರೋಗಿಗಳಲ್ಲಿ ಸಕ್ಕರೆ ಪ್ರಮಾಣ 5 ರಿಂದ 10 ಪರ್ಸೆಂಟ್​​ನಷ್ಟು ಹೆಚ್ಚಾಗುತ್ತದೆ ಎಂದು ಡಾಕ್ಟರ್​ಗಳು ಹೇಳುತ್ತಾರೆ. ಈ ಕಾರಣಕ್ಕಾಗೇ ರೆಮಿಡೆಸಿವಿರ್ ಇಂಜೆಕ್ಷನ್ ತೆಗೆದುಕೊಂಡ ಸೋಂಕಿತರ ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ಸದಾ ಮಾನಿಟರ್ ಮಾಡಬೇಕಿದೆ. ಅವರಲ್ಲಿ ಸಕ್ಕರೆ ಪ್ರಮಾಣ ತಹಬದಿಗೆ ತರಲು ಇನ್ಸುಲಿಲ್ ಅನ್ನು ವೈದ್ಯರು ನೀಡುತ್ತಿದ್ದಾರೆ.

ಆದರೆ ಬೇರೆ ಕೆಲವು ಡಾಕ್ಟರ್​ಗಳಿ ಸ್ಟಿರಾಯ್ಡ್​ಗಳನ್ನು ಸೀಡಿದಾಗ ಸಹಜವಾಗೇ ರಕ್ತದ ಪ್ರಮಾಣ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಒಮ್ಮೆ ಅವುಗಳ ಬಳಕೆ ನಿಲ್ಲಿಸಿದರೆ ಸಕ್ಕರೆ ಪ್ರಮಾಣ ತಾನಾಗಿಯೇ ಇಳಿಯುತ್ತದೆ ಅಂತ ಅವರು ಹೇಳುತ್ತಾರೆ.

ಇದನ್ನೂ ಓದಿ: Remdesivir: ರೆಮಿಡಿಸಿವರ್ ಇಂಜೆಕ್ಷನ್​ಗೆ ಬಾಲಿವುಡ್ ಕೊರಿಯೋಗ್ರಾಫರ್​ ಹೆಸರು; ಫನ್ನಿ ವಿಡಿಯೋ ವೈರಲ್​

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ