AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಣ ಹೇಳದೆ ರೋಗಿಗಳಿಗೆ ವೈದ್ಯರು ಆ್ಯಂಟಿ ಬಯೋಟಿಕ್ ನೀಡುವಂತಿಲ್ಲ; ಸರ್ಕಾರ ಸೂಚನೆ

ಆ್ಯಂಟಿಮೈಕ್ರೊಬಿಯಲ್​ಗಳನ್ನು ಶಿಫಾರಸು ಮಾಡುವಾಗ ನಿಖರವಾದ ಸೂಚನೆ/ಕಾರಣ/ಸಮರ್ಥನೆಯನ್ನು ಕಡ್ಡಾಯವಾಗಿ ನಮೂದಿಸಬೇಕು" ಎಂದು ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.

ಕಾರಣ ಹೇಳದೆ ರೋಗಿಗಳಿಗೆ ವೈದ್ಯರು ಆ್ಯಂಟಿ ಬಯೋಟಿಕ್ ನೀಡುವಂತಿಲ್ಲ; ಸರ್ಕಾರ ಸೂಚನೆ
ಆ್ಯಂಟಿಬಯೋಟಿಕ್‌
ಸುಷ್ಮಾ ಚಕ್ರೆ
|

Updated on: Jan 18, 2024 | 12:14 PM

Share

ನವದೆಹಲಿ: ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ಆ್ಯಂಟಿ ಬಯೋಟಿಕ್ ಮಾತ್ರೆಗಳನ್ನು ಸೇವಿಸುವವರಿದ್ದಾರೆ. ಆದರೆ, ಇದರಿಂದ ಆರೋಗ್ಯಕ್ಕೆ ಹಲವು ರೀತಿಯ ತೊಂದರೆ ಉಂಟಾಗುತ್ತದೆ. ಹೀಗಾಗಿ, ಆ್ಯಂಟಿಬಯೋಟಿಕ್‌ಗಳ ಮಿತಿಮೀರಿದ ಪ್ರಿಸ್ಕ್ರಿಪ್ಷನ್‌ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರವು ಸೂಚನೆಯನ್ನು ಹೊರಡಿಸಿದ್ದು, “ವೈದ್ಯರು ರೋಗಿಗಳಿಗೆ ಆ್ಯಂಟಿಬಯೋಟಿಕ್‌ಗಳನ್ನು ತೆಗೆದುಕೊಳ್ಳಲು ಶಿಫಾರಸು ಮಾಡುವಾಗ ಕಡ್ಡಾಯವಾಗಿ ಅದಕ್ಕೆ ಕಾರಣ ಅಥವಾ ಸಮರ್ಥನೆಯನ್ನು ತಿಳಿಸಲೇಬೇಕು” ಎಂದು ಹೇಳಿದೆ.

ಮೂಲಗಳ ಪ್ರಕಾರ, ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ. ಅತುಲ್ ಗೋಯೆಲ್ ವೈದ್ಯಕೀಯ ಕಾಲೇಜುಗಳಲ್ಲಿನ ಎಲ್ಲಾ ವೈದ್ಯರಿಗೆ ಪತ್ರದಲ್ಲಿ “ಆ್ಯಂಟಿಮೈಕ್ರೊಬಿಯಲ್​ಗಳನ್ನು ಶಿಫಾರಸು ಮಾಡುವಾಗ ನಿಖರವಾದ ಸೂಚನೆ/ಕಾರಣ/ಸಮರ್ಥನೆಯನ್ನು ಕಡ್ಡಾಯವಾಗಿ ನಮೂದಿಸಬೇಕು” ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಲಿವರ್ ಆರೋಗ್ಯಕ್ಕೆ ಆಲ್ಕೋಹಾಲ್​ಗಿಂತ ಹೆಚ್ಚು ಅಪಾಯಕಾರಿ ಆಹಾರಗಳಿವು

ಆ್ಯಂಟಿಮೈಕ್ರೊಬಿಯಲ್‌ಗಳ ದುರ್ಬಳಕೆ ಮತ್ತು ಮಿತಿಮೀರಿದ ಬಳಕೆಯು ರೋಗಕಾರಕಗಳ ಹೊರಹೊಮ್ಮುವಿಕೆಯ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಸರ್ಕಾರದ ಪ್ರಕಾರ, ಆ್ಯಂಟಿಮೈಕ್ರೊಬಿಯಲ್ ರೆಸಿಸ್ಟನ್ಸ್ (AMR) ಜಾಗತಿಕ ಸಾರ್ವಜನಿಕ ಆರೋಗ್ಯ ಆತಂಕಗಳಲ್ಲಿ ಒಂದಾಗಿದೆ. 2019ರಲ್ಲಿ 1.27 ಮಿಲಿಯನ್ ಜಾಗತಿಕ ಸಾವುಗಳಿಗೆ ಬ್ಯಾಕ್ಟೀರಿಯಾದ AMR ನೇರವಾಗಿ ಕಾರಣವಾಗಿದೆ ಎಂದು ಅಂದಾಜಿಸಲಾಗಿದೆ. 4.95 ಮಿಲಿಯನ್ ಸಾವುಗಳು ಔಷಧ ನಿರೋಧಕ ಸೋಂಕುಗಳೊಂದಿಗೆ ಸಂಬಂಧಿಸಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವಾಲಯ ಈ ಸೂಚನೆಯನ್ನು ಹೊರಡಿಸಿದೆ.

ಇದನ್ನೂ ಓದಿ: ನೊಣ ಬಿದ್ದ ಆಹಾರ ಸೇವಿಸುತ್ತೀರಾ?; ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ

AMR ನಿರೋಧಕ ಸೂಕ್ಷ್ಮಜೀವಿಗಳಿಂದ ಉಂಟಾಗುವ ಸೋಂಕುಗಳ ಪರಿಣಾಮಕಾರಿ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ಅಪಾಯವನ್ನು ಉಂಟುಮಾಡುತ್ತದೆ. ಇದು ದೀರ್ಘಕಾಲದ ಅನಾರೋಗ್ಯ ಮತ್ತು ಸಾವಿನ ಹೆಚ್ಚಿನ ಅಪಾಯವನ್ನು ಉಂಟುಮಾಡುತ್ತದೆ. ಚಿಕಿತ್ಸೆಯ ವೈಫಲ್ಯಗಳು ಸಹ ದೀರ್ಘಾವಧಿಯ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ