AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗರಂತೆ ಗಡ್ಡ, ಮೀಸೆ ಬರುತ್ತಾ? ಈ ಸಮಸ್ಯೆ ತಡೆಯಲು ಇಲ್ಲಿದೆ ವೈದ್ಯರ ಸಲಹೆ

ಗಡ್ಡ, ಮೀಸೆ ಬರುವುದು ಹುಡುಗರಿಗೆ ಮಾತ್ರ. ಆದರೆ ಕೆಲವು ಹುಡುಗಿಯರಿಗೂ ಈ ರೀತಿ ಸಮಸ್ಯೆ ಕಂಡು ಬರುತ್ತದೆ. ಅದಕ್ಕಾಗಿಯೇ ಅವರು ಪ್ರತಿ ತಿಂಗಳು ಹುಡುಗರಂತೆ ಶೇವ್ ಮಾಡಿಕೊಳ್ಳುತ್ತಾರೆ. ಇದನ್ನು ಮರೆಮಾಚುವುದಕ್ಕೆ ಎಷ್ಟೇ ಪ್ರಯತ್ನ ಪಟ್ಟರು ಅದು ಸಾಧ್ಯವಾಗುವುದಿಲ್ಲ. ಈ ರೀತಿ ಪ್ರತಿ ಬಾರಿ ಆಗುವ ಮುಜುಗರಕ್ಕೆ ಶಾಶ್ವತ ಪರಿಹಾರ ನೀಡಲು ವೈದ್ಯರು ನೀಡಿರುವ ಸಲಹೆ ಇಲ್ಲಿದೆ.

ಹುಡುಗರಂತೆ ಗಡ್ಡ, ಮೀಸೆ ಬರುತ್ತಾ? ಈ ಸಮಸ್ಯೆ ತಡೆಯಲು ಇಲ್ಲಿದೆ ವೈದ್ಯರ ಸಲಹೆ
ಸಾಂದರ್ಭಿಕ ಚಿತ್ರImage Credit source: pinterest
ಪ್ರೀತಿ ಭಟ್​, ಗುಣವಂತೆ
|

Updated on: May 01, 2025 | 5:30 PM

Share

ಹುಡುಗರಿಗೆ ಮೀಸೆ (Mustache) ಗಡ್ಡ (beard) ಬರುವುದು ಸಹಜ. ಆದರೆ ಹುಡುಗಿಯರಿಗೆ ಈ ರೀತಿ ಆದರೆ ಯಾರಿಗಾದರೂ ಮುಜುಗರ ಆಗುತ್ತದೆ. ನೀವು ಕೂಡ ನೋಡಿರಬಹುದು ಕೆಲವು ಹುಡುಗಿಯರಲ್ಲಿ ಈ ರೀತಿ ಸಮಸ್ಯೆ ಕಂಡುಬರುತ್ತದೆ. ಅದಕ್ಕಾಗಿಯೇ ಅವರು ಪ್ರತಿ ತಿಂಗಳು ಹುಡುಗರಂತೆ ಶೇವ್ (Shave) ಮಾಡಿಕೊಳ್ಳುತ್ತಾರೆ. ಆದರೂ ಕೂಡ ಎಲ್ಲ ಹುಡುಗಿಯರ ರೀತಿ ಮುಖ ಕ್ಲಿಯರ್ ಆಗಿ ಇಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ. ಎಷ್ಟೇ ಮರೆಮಾಚಲೂ ಪ್ರಯತ್ನ ಪಟ್ಟರು ಕೂಡ ಅದು ಸಾಧ್ಯವಾಗುವುದಿಲ್ಲ. ಹಾಗಾದರೆ ಈ ರೀತಿ ಸಮಸ್ಯೆ ಕಂಡು ಬರಲು ಕಾರಣವೇನು? ಇದನ್ನು ತಡೆಯಲು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ. ಈ ಬಗ್ಗೆ ವೈದ್ಯರು (Doctor) ನೀಡಿರುವ ಮಾಹಿತಿ ಇಲ್ಲಿದೆ.

ಈ ಬಗ್ಗೆ ಡಾ. ಐಶ್ವರ್ಯಾ ಗೌಡ ಅವರು ಕೆಲವು ಮಾಹಿತಿ ಹಂಚಿಕೊಂಡಿದ್ದು ಅವರು ತಮ್ಮ ಇನ್ಸ್ಟಾ ಖಾತೆಯಲ್ಲಿ ಅದನ್ನು ಹಂಚಿಕೊಂಡಿದ್ದಾರೆ. ಅವರು ನೀಡಿರುವ ಮಾಹಿತಿ ಪ್ರಕಾರ, ಅನೇಕ ಮಹಿಳೆಯರಿಗೆ ಮೇಲಿನ ತುಟಿ ಮತ್ತು ಗಲ್ಲದಲ್ಲಿ ಕೂದಲಿನ ಬೆಳವಣಿಗೆಯ ಸಮಸ್ಯೆ ಇರುತ್ತದೆ. ಇದಕ್ಕೆ ಕಾರಣವೇನೆಂದರೆ ನಿಮ್ಮ ದೇಹದಲ್ಲಿ ಆಂಡ್ರೊಜೆನ್ ಮಟ್ಟ ಹೆಚ್ಚಾಗಿರುತ್ತದೆ ಇದು ಪುರುಷರ ಹಾರ್ಮೋನ್ (Male hormone). ಹಾಗಾಗಿ ಆ ಹಾರ್ಮೋನ್ ಗಳನ್ನು ಕಡಿಮೆ ಮಾಡಿಕೊಂಡರೆ ಈ ಸಮಸ್ಯೆಯನ್ನು ತಡೆಯಬಹುದು ಎಂದಿದ್ದಾರೆ. ಜೊತೆಗೆ ಅವರು ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ಮಾತ್ರೆ ಅಥವಾ ಔಷಧಿಗಳ ಮೊರೆ ಹೋಗುವ ಬದಲು ಮನೆಯಲ್ಲಿರುವ ವಸ್ತುಗಳನ್ನು ಬಳಕೆ ಮಾಡಿಕೊಂಡು ಅದನ್ನು ಹೇಗೆ ತಡೆಯಬಹುದು ಎಂಬುದನ್ನು ಹೇಳಿದ್ದಾರೆ.

ಇಲ್ಲಿದೆ ನೋಡಿ ಪೋಸ್ಟ್;

ಇದನ್ನೂ ಓದಿ
Image
ಗಜಗದ ಬಳ್ಳಿ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಗೊತ್ತಾ?
Image
ರಾಗಿ ಮಾಲ್ಟ್ ಸೇವನೆ ಮಾಡುವ ಅಭ್ಯಾಸವಿದ್ದರೆ ಈ ವಿಷಯ ತಿಳಿದುಕೊಳ್ಳಿ
Image
ಕುಡಿಯುವ ನೀರಿಗೂ ಇದೆ ಎಕ್ಸ್‌ಪೈರ್ಡ್ ಡೇಟ್! ಎಲ್ಲಿಯವರೆಗೆ ಒಳ್ಳೆಯದು?
Image
Liver Health: ಈ ಹಣ್ಣುಗಳ ಸೇವನೆ ಮಾಡಿದರೆ ನಿಮ್ಮ ಲಿವರ್ ಹಾಳಾಗುವುದಿಲ್ಲ

ಇದನ್ನೂ ಓದಿ: ಈ ಆಹಾರ ಸೇವನೆ ಮಾಡಿದರೆ ಮೆದುಳು ಕೆಲಸ ಮಾಡುವುದನ್ನೇ ನಿಲ್ಲಿಸುತ್ತೆ

ಮೀಸೆ, ಗಡ್ಡ ಬರುವುದನ್ನು ತಡೆಯಲು ಇಲ್ಲಿದೆ ಮನೆಮದ್ದು;

ಅವರು ಹೇಳಿರುವ ಪ್ರಕಾರ, “ಈ ಸಮಸ್ಯೆಯನ್ನು ಶಾಶ್ವತವಾಗಿ ಕಡಿಮೆ ಮಾಡಿಕೊಳ್ಳಲು, ಒಂದು ಚಮಚ ಕೊತ್ತಂಬರಿ ಬೀಜಗಳನ್ನು ತೆಗೆದುಕೊಂಡು ಅದಕ್ಕೆ ಒಂದು ಚಿಟಿಕೆ ದಾಲ್ಚಿನ್ನಿ ಪುಡಿ ಅಥವಾ ಚಕ್ಕೆ ಪುಡಿಯನ್ನು ಸೇರಿಸಿ ನೀರಿನಲ್ಲಿ ಚೆನ್ನಾಗಿ ಕುದಿಸಿಕೊಳ್ಳಿ. ಬಳಿಕ ಪ್ರತಿನಿತ್ಯ ಈ ನೀರನ್ನು ದಿನದಲ್ಲಿ ಒಂದು ಅಥವಾ ಎರಡು ಬಾರಿ ಕುಡಿಯಲು ಆರಂಭ ಮಾಡಿ. ಸರಿ ಸುಮಾರು ಒಂದು ತಿಂಗಳು ನಿರಂತರವಾಗಿ ಈ ಅಭ್ಯಾಸವನ್ನು ತಪ್ಪದೆ ಪಾಲನೆ ಮಾಡಿ. ಆಗ ನಿಮಗೆ ವ್ಯತ್ಯಾಸ ತಿಳಿಯುತ್ತದೆ. ಅದಲ್ಲದೆ ಈ ರೀತಿ ಆರೋಗ್ಯಕರ ಅಭ್ಯಾಸದಿಂದ ಕ್ರಮೇಣ ಆಂಡ್ರೊಜೆನ್ ಮಟ್ಟವೂ ಕೂಡ ಕಡಿಮೆ ಆಗುತ್ತದೆ” ಎಂದು ಅವರು ಹೇಳಿದ್ದಾರೆ. ನಿಮಗೂ ಈ ರೀತಿಯ ಸಮಸ್ಯೆ ಇದ್ದರೆ ಮಾತ್ರೆ ಔಷಧಿಗಳ ಮೊರೆ ಹೋಗುವ ಬದಲು ಈ ಸಿಂಪಲ್ ಮನೆ ಮದ್ದನ್ನು ಒಮ್ಮೆ ಟ್ರೈ ಮಾಡಿ ನೋಡಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!