AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಣ್ಣೀರು ಕುಡಿಯುವುದರಿಂದ ತೂಕ ಹೆಚ್ಚಾಗುತ್ತಾ? ಇಲ್ಲಿದೆ ನೋಡಿ ತಜ್ಞರ ಸಲಹೆ

ನೀರು ಪ್ರತಿಯೊಬ್ಬ ಮನುಷ್ಯ ಅಗತ್ಯ, ಪಂಚ ಭೂತಗಳಲ್ಲಿ ನೀರು ಒಂದು, ಪ್ರಕೃತಿಯಿಂದ ಸಿಗುವ ಮಹತ್ವದ ವರ ಇದು. ಹಾಗಾಗಿ ನೀರು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಈಗ ಬೇಸಿಗೆಯಲ್ಲಿ ನೀರು ಇನ್ನು ಅಗತ್ಯವಾಗಿರುತ್ತದೆ. ಈ ಸಮಯದಲ್ಲಿ ತಣ್ಣೀರು ಅಥವಾ ಬಿಸಿನೀರು ಇದರಲ್ಲಿ ಯಾವುದು ಒಳ್ಳೆಯದು, ಅನೇಕರಿಗೆ ತಣ್ಣೀರು ಕುಡಿದ್ರೆ ತೂಕ ಹೆಚ್ಚಾಗುತ್ತದೆ ಎಂಬ ಭಯ, ಆದರೆ ಇದು ಎಷ್ಟು ನಿಜಾ? ಎಂಬ ಬಗ್ಗೆ ಇಲ್ಲಿ ತಜ್ಞರು ಮಾಹಿತಿ ನೀಡಿದ್ದಾರೆ.

ತಣ್ಣೀರು ಕುಡಿಯುವುದರಿಂದ ತೂಕ ಹೆಚ್ಚಾಗುತ್ತಾ? ಇಲ್ಲಿದೆ ನೋಡಿ ತಜ್ಞರ ಸಲಹೆ
ಸಾಂದರ್ಭಿಕ ಚಿತ್ರ Image Credit source: Getty Images
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 01, 2025 | 6:00 PM

Share

ಬಾಯರಿಕೆಗೆ ನೀರು ಕುಡಿಯಲೇಬೇಕು, ಆದರೆ ಯಾವ ಪ್ರಮಾಣದಲ್ಲಿ ಅಥವಾ ಬಿಸಿ ಅಥವಾ ತಣ್ಣೀರು ಯಾವುದನ್ನು ಕುಡಿಯಬೇಕು ಎಂಬ ಬಗ್ಗೆ ಮೊದಲು ತಿಳಿದುಕೊಳ್ಳಬೇಕು. ಇದರಿಂದ ದೇಹದಲ್ಲಾಗುವ ಬದಲಾವಣೆಗಳೇನು ಎಂಬ ಅರಿವು ಇರಬೇಕು. ನೀರು ಬಾಯಾರಿಕೆಯನ್ನು ತಣಿಸುತ್ತದೆ. ಇದರ ಜತೆಗೆ ದೇಹಕ್ಕೂ ಇದರ ಪರಿಣಾಮ ಇರುತ್ತದೆ. ಈ ಬೇಸಿಗೆಯಲ್ಲಿ ತಣ್ಣೀರು ಸಿಕ್ಕರೆ ಅಮೃತವೇ ಸರಿ. ಬೇಸಿಕೆಯಲ್ಲಿ ಬಾಯರಿಕೆ ಹೆಚ್ಚು. ಬಾಯರಿಕೆ ಕಡಿಮೆ ಮಾಡಲು ತಣ್ಣೀರು (cold water) ಅಥವಾ ಕೋಲ್ಡ್​​​ ಪಾನೀಯಗಳನ್ನು ಸೇವನೆ ಮಾಡಬೇಕು ಎಂಬ ಬಯಕೆ ಬರುವುದು ಸಹಜ, ಆದರೆ ಕೆಲವರು ಈ ಬೇಸಿಗೆಯಲ್ಲಿ ತಣ್ಣೀರು ಕುಡಿದರೆ ಆರೋಗ್ಯ ಸಮಸ್ಯೆ ಕಾಡುತ್ತೇ ಎಂಬ ಗೊಂದಲ ಅನೇಕರಲ್ಲಿ ಇದೆ. ಅದರಲ್ಲೂ ತಣ್ಣೀರು ಕುಡಿದರೆ ತೂಕ ಹೆಚ್ಚಾಗುತ್ತದೆ (weight gain) ಎಂಬ ಭಯ ಇದೆ. ಪೌಷ್ಟಿಕತಜ್ಞೆ ಅಮಿತಾ ಗದ್ರೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಇದಕ್ಕೆ ಸ್ಪಷ್ಟವಾಗಿ ಉತ್ತರಿಸಿದ್ದಾರೆ.

ತೂಕ ಹೆಚ್ಚಳದ ಬಗ್ಗೆ ಸತ್ಯ:

ತೂಕ ಇಳಿಸುವುದೇ ತೂಕ, ಅದರಲ್ಲಿ ಕ್ಯಾಲೊರಿಗಳು ಶೂನ್ಯ ಇರುತ್ತದೆ. ತಣ್ಣೀರು ದೇಹದಲ್ಲಿ ಕೊಬ್ಬನ್ನು ಸಂಗ್ರಹಿಸುತ್ತದೆ ಎಂಬುದು ಸುಳ್ಳು. ತಣ್ಣೀರು ಕುಡಿಯುವುದರಿಂದ ಕೊಬ್ಬಿನ ಕೋಶಗಳು ಹೆಪ್ಪುಗಟ್ಟುವುದಿಲ್ಲ. ಹಾಗೆ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಅವು ಕರಗುವುದಿಲ್ಲ. ದೇಹದ ಹೈಡ್ರೇಟೆಡ್ ಸರಳವಾಗಿರುತ್ತದೆ. ಒಂದು ವೇಳೆ ದೇಹದಲ್ಲಿ ನೀರಿನ ಅಂಶ ಇಲ್ಲವೆಂದರೆ, ಆಲಸ್ಯ ಬರುವುದು ಖಂಡಿತ. ಇದರಿಂದ ಚಯಾಪಚಯ ಕ್ರಿಯೆಗೆ ತೊಂದರೆಯಾಗಬಹುದು. ಹಾಗಾಗಿ ಹೆಚ್ಚು ಹೆಚ್ಚು ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು. ಅದರಲ್ಲೂ ಈ ಬೇಸಿಗೆಯಲ್ಲೇ ಅದು ಹೆಚ್ಚಾಗಬೇಕು ಎನ್ನುವುದು ಅಮಿತಾ ಗದ್ರೆ ಸಲಹೆ.

  1. ತಣ್ಣೀರು ಕುಡಿಯುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದೇ ಎಂಬ ಪ್ರಶ್ನೆ ಬಂದಾಗ, ಇದು ಒಳ್ಳೆಯದಲ್ಲ ಎಂದ ಹೇಳಿದೆ. ಜೀರ್ಣ ಕ್ರಿಯೆಯನ್ನು ಕುಗ್ಗಿಸಬಹುದು. ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದಲ್ಲ. ಅತ್ಯುತ್ತಮ ಜೀರ್ಣಕ್ರಿಯೆಯನ್ನು ಕಾಪಾಡಿಕೊಳ್ಳಲು, ಉಗುರು ಬೆಚ್ಚಗಿನ ನೀರನ್ನು ಕುಡಿಯುವುದು ಉತ್ತಮ.
  2. ಒಬ್ಬ ವ್ಯಕ್ತಿ ದಿನಕ್ಕೆ ಎಷ್ಟು ಬಾರಿ ನೀರು ಕುಡಿಯಬೇಕು ಹಾಗೂ ಯಾವ ಪ್ರಮಾಣದಲ್ಲಿ ಕುಡಿಯಬೇಕು. ಪ್ರತಿ ಕಿಲೋಗ್ರಾಂ ದೇಹದ ತೂಕಕ್ಕೆ 35 ಮಿಲಿ ನೀರನ್ನು ಸೇವಿಸುವ ಗುರಿಯನ್ನು ಹೊಂದಿರಬೇಕು. ದೇಹದಲ್ಲಿ ನೀರಿನಂಶವನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿರುತ್ತದೆ.
  3. ತಣ್ಣೀರು ಕುಡಿಯುವುದರಿಂದ ಯಾವುದಾದರೂ ಅಡ್ಡ ಪರಿಣಾಮ ಇದ್ದೀಯಾ ಎಂಬ ಬಗ್ಗೆ ಇಲ್ಲಿದೆ ಮಾಹಿತಿ, ಅತಿಯಾಗಿ ತಣ್ಣೀರು ಕುಡಿಯುವುದರಿಂದ ಜೀರ್ಣಕಾರಿ ಸಮಸ್ಯೆಗಳು, ಗಂಟಲು ನೋವು ಅಥವಾ ಕೆಲವು ಸಂದರ್ಭಗಳಲ್ಲಿ ತಲೆನೋವು ಕೂಡ ಉಂಟಾಗುತ್ತದೆ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!