Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಣ್ಣೀರು ಕುಡಿದರೆ ದೇಹದ ತೂಕ ಹೆಚ್ಚಾಗುತ್ತದಾ? ನಿಜ ಸಂಗತಿ ಏನು?

ತಣ್ಣೀರು ಕುಡಿಯುವುದರಿಂದ ತೂಕ ಹೆಚ್ಚಾಗುತ್ತದೆ ಎಂಬುದು ಸರಿಯಲ್ಲ. ವಾಸ್ತವವಾಗಿ ನೀರು ಕ್ಯಾಲೊರಿಗಳನ್ನು ಹೊಂದಿರುವುದಿಲ್ಲ, ಅದು ತೂಕವನ್ನು ಹೆಚ್ಚಿಸುವುದಿಲ್ಲ. ಆದರೆ ತಣ್ಣೀರು ಕುಡಿಯುವುದರಿಂದ ಇತರ ಸಮಸ್ಯೆಗಳು ಬರಬಹುದು ಎನ್ನುತ್ತಾರೆ ವೈದ್ಯರು.

ತಣ್ಣೀರು ಕುಡಿದರೆ ದೇಹದ ತೂಕ ಹೆಚ್ಚಾಗುತ್ತದಾ? ನಿಜ ಸಂಗತಿ ಏನು?
ತಣ್ಣೀರು ಕುಡಿದರೆ ದೇಹದ ತೂಕ ಹೆಚ್ಚಾಗುತ್ತದಾ?
Follow us
ಸಾಧು ಶ್ರೀನಾಥ್​
|

Updated on: Jan 08, 2024 | 1:32 PM

ಆರೋಗ್ಯದ ಬಗ್ಗೆ ಅನೇಕ ನಂಬಿಕೆಗಳು ಮತ್ತು ತಪ್ಪು ಕಲ್ಪನೆಗಳಿವೆ. ವೈದ್ಯರು ನೀಡುವ ಸಲಹೆಗಳ ಹೊರತಾಗಿ ಕೆಲವರು ತಮ್ಮ ಸ್ವಂತ ನಂಬಿಕೆಗಳ ಆಧಾರದ ಮೇಲೆ ಕೆಲವನ್ನು ಪಾಲಿಸುತ್ತಾರೆ. ಅದಕ್ಕೆ ಉದಾಹರಣೆಯೆಂದರೆ ತಣ್ಣೀರು (Drinking Water) ಕುಡಿಯುವುದರಿಂದ ದೇಹ ತೂಕ (body weight) ಹೆಚ್ಚಾಗುತ್ತದೆ ಎಂಬುದು. ಆದರೆ ತಂಪು ನೀರು ಕುಡಿದರೆ ತೂಕ ಹೆಚ್ಚುತ್ತದೆಯೇ? ತಜ್ಞರು ಏನು ಹೇಳುತ್ತಾರೆ? ಈಗ ವಿವರಗಳನ್ನು (Health Tips) ತಿಳಿಯೋಣ..

ದೇಹಕ್ಕೆ ನೀರು ಎಷ್ಟು ಮುಖ್ಯ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ನ್ಯಾಷನಲ್ ಅಕಾಡೆಮಿ ಆಫ್ ಸೈನ್ಸಸ್, ಎಂಜಿನಿಯರಿಂಗ್ ಮತ್ತು ಮೆಡಿಸಿನ್ (ಯುಎಸ್) ಪ್ರಕಾರ 19 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಪುರುಷರು ಪ್ರತಿದಿನ ಕನಿಷ್ಠ 3.7 ಲೀಟರ್ ನೀರನ್ನು ಕುಡಿಯಬೇಕು. 19 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳೆಯರು ದಿನಕ್ಕೆ ಕನಿಷ್ಠ 2.7 ಲೀಟರ್ ನೀರನ್ನು ಕುಡಿಯಬೇಕು. ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರಿಗೆ ಇದಕ್ಕಿಂತ ಹೆಚ್ಚಿನ ನೀರಿನ ಅಗತ್ಯವಿದೆ. ಸಾಕಷ್ಟು ನೀರು ಕುಡಿಯುವುದರಿಂದ ನೀವು ದಿನವಿಡೀ ತಾಜಾ ಮತ್ತು ಶಕ್ತಿಯುತವಾಗಿರಬಹುದು.

ಹೀಗಿರುವಾಗ… ತಣ್ಣೀರು ಕುಡಿದರೆ ತೂಕ ಹೆಚ್ಚುತ್ತದೆ ಎಂಬ ನಂಬಿಕೆ ಇದೆ. ಆದರೆ ಜರ್ನಲ್ ಆಫ್ ಕ್ಲಿನಿಕಲ್ ಎಂಡೋಕ್ರೈನಾಲಜಿ ಮತ್ತು ಮೆಟಾಬಾಲಿಸಮ್ ಪ್ರಕಾರ ತಣ್ಣೀರು ಕುಡಿಯುವುದರಿಂದ ತೂಕ ಹೆಚ್ಚಾಗುತ್ತದೆ ಎಂಬುದಕ್ಕೆ ಸಂಬಂಧವಿಲ್ಲ. ವಾಸ್ತವವಾಗಿ ನೀರು ಕ್ಯಾಲೊರಿಗಳನ್ನು ಹೊಂದಿರುವುದಿಲ್ಲ, ಆದ್ದರಿಂದ ಅದು ತೂಕವನ್ನು ಹೆಚ್ಚಿಸುವುದಿಲ್ಲ. ಆದರೆ ತಣ್ಣೀರು ಕುಡಿಯುವುದರಿಂದ ಇತರ ಸಮಸ್ಯೆಗಳು ಬರಬಹುದು ಎನ್ನುತ್ತಾರೆ ವೈದ್ಯರು.

Also Read: Benefits of Ice Bath -ತಣ್ಣೀರಿನ ಸ್ನಾನ ದೇಹಕ್ಕೆ ಒಳ್ಳೆಯದು ಎಂಬುದಕ್ಕೆ ಇಲ್ಲಿದೆ ಕಾರಣಗಳು

ಸಾಮಾನ್ಯವಾಗಿ, ಹೆಚ್ಚು ತಣ್ಣೀರಿನ ಸೇವನೆಯು ಗ್ಯಾಸ್ ಮತ್ತು ಮಲಬದ್ಧತೆಯಂತಹ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು. ಗಂಟಲಿನಲ್ಲಿ ನೋವು ಅಥವಾ ಊತ ಹೆಚ್ಚಾಗುತ್ತದೆ. ತಲೆನೋವು ಒಂದು ಸಮಸ್ಯೆಯಾಗಿದೆ. ಹಲ್ಲಿನ ನೋವು ಅಥವಾ ವಸಡಿನ ಸಂವೇದನೆ ಹೆಚ್ಚುತ್ತದೆ. ಆದ್ದರಿಂದ ಸಾಧಾರಣ ಉಷ್ಣಾಂಶದಲ್ಲಿದ್ದರೆ ಮಾತ್ರ ನೀರನ್ನು ತೆಗೆದುಕೊಳ್ಳಬೇಕು. ತಣ್ಣೀರು ಹೆಚ್ಚು ಕುಡಿಯುವುದರಿಂದ ಮೇಲೆ ತಿಳಿಸಿದ ಸಮಸ್ಯೆಗಳ ಸಾಧ್ಯತೆ ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು.

(ಸೂಚನೆ: ಯಾವುದೇ ಚಿಕಿತ್ಸೆ ಅಥವಾ ಸೆಲೆಬ್ರಿಟಿ ಹ್ಯಾಕ್ ಅನ್ನು ಅನುಸರಿಸುವ ಮೊದಲು ಯಾವಾಗಲೂ ಸುರಕ್ಷತೆಗೆ ಆದ್ಯತೆ ನೀಡಿ ಮತ್ತು ವೈಯಕ್ತಿಕಗೊಳಿಸಿದ ಸಲಹೆಗಾಗಿ ಆರೋಗ್ಯ ವೃತ್ತಿಪರರೊಂದಿಗೆ ಸಮಾಲೋಚಿಸಿ.)

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?