AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುತ್ತಾ? ಹಾಗಿದ್ರೆ ನಿಮಗೆ ಈ ಸಮಸ್ಯೆ ಇದೆ ಎಂದರ್ಥ!

ಬೇಸಿಗೆ ಕಾಲದಲ್ಲಿ ಹಲವರಿಗೆ ಬಿಸಿಲಿಗೆ ಹೋದ ತಕ್ಷಣ ತಲೆನೋವು ಶುರುವಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದನ್ನು ಸಾಮಾನ್ಯವೆಂದು ನಿರ್ಲಕ್ಷಿಸುವುದು ಸರಿಯಲ್ಲ ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಇದು ದೇಹದೊಳಗಿನ ಅಸಮತೋಲನ ಅಥವಾ ಆರೋಗ್ಯ ಸಮಸ್ಯೆಗಳ ಸೂಚನೆಯಾಗಿರಬಹುದು. ಹಾಗಾದರೆ ಈ ರೀತಿಯಾಗುವುದಕ್ಕೆ ಕಾರಣವೇನು, ಈ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುತ್ತಾ? ಹಾಗಿದ್ರೆ ನಿಮಗೆ ಈ ಸಮಸ್ಯೆ ಇದೆ ಎಂದರ್ಥ!
Sun Exposure and HeadachesImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 09, 2026 | 6:54 PM

Share

ಬಿಸಿಲಿನಲ್ಲಿ ಹೊರಗೆ ಹೋದ ತಕ್ಷಣ ಅನೇಕರಿಗೆ ತಲೆನೋವು (Headache) ಬರುತ್ತದೆ. ಇದನ್ನು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷಿಸುವುದು ಸೂಕ್ತವಲ್ಲ, ಏಕೆಂದರೆ ಇದು ದೇಹದಲ್ಲಿನ ಕೆಲವು ಅಸಮತೋಲನದ ಸಂಕೇತವಾಗಿರಬಹುದು. ತಲೆ ಭಾರ, ಕಣ್ಣುಗಳಲ್ಲಿ ಉರಿ, ತಲೆತಿರುಗುವಿಕೆ, ದೌರ್ಬಲ್ಯ, ಅತಿಯಾದ ಬೆವರು ಅಥವಾ ಚಡಪಡಿಕೆ ಮುಂತಾದ ಲಕ್ಷಣಗಳು ಸೂರ್ಯನ ಬೆಳಕಿಗೆ ಒಡ್ಡಿಕೊಂಡ ತಕ್ಷಣ ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ, ವೇಗದ ಹೃದಯ ಬಡಿತ, ಆಯಾಸ ಕಂಡುಬರಬಹುದು. ಹಾಗಾದರೆ ಈ ರೀತಿಯಾಗುವುದಕ್ಕೆ ಕಾರಣವೇನು, ಈ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುವುದಕ್ಕೆ ಕಾರಣವೇನು?

ದೆಹಲಿಯ ವೈದ್ಯರಾದ ಡಾ. ಅಜಿತ್ ಜೈನ್ ಹೇಳುವ ಪ್ರಕಾರ, ತೀವ್ರ ಬಿಸಿಲು ಮತ್ತು ಉಷ್ಣತೆಯಿಂದ ದೇಹದ ತಾಪಮಾನ ತಕ್ಷಣ ಏರಿಕೆಯಾಗುತ್ತದೆ. ಇದರಿಂದ ತಲೆಭಾರ ಮತ್ತು ತಲೆನೋವು ಕಾಣಿಸಿಕೊಳ್ಳಬಹುದು. ಜೊತೆಗೆ ದೇಹದಲ್ಲಿ ನೀರಿನ ಕೊರತೆ (ಡಿಹೈಡ್ರೇಷನ್) ಉಂಟಾದರೆ, ಬೆವರಿನ ಮೂಲಕ ನೀರು ಮತ್ತು ಖನಿಜಗಳು ಹೊರಗೆ ಹೋದಾಗ ತಲೆನೋವು ಹೆಚ್ಚಾಗಬಹುದು. ಅಷ್ಟೇ ಅಲ್ಲ, ತೀವ್ರ ಬೆಳಕು ಕಣ್ಣಿನ ಮೇಲೆ ಬಿದ್ದಾಗ ಮೈಗ್ರೇನ್ ಇರುವವರಿಗೆ ತಲೆನೋವು ಉಂಟಾಗಬಹುದು. ಖಾಲಿ ಹೊಟ್ಟೆಯಲ್ಲಿ ಬಿಸಿಲಿಗೆ ಹೋಗುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕುಸಿಯಬಹುದು, ಇದು ಕೂಡ ತಲೆನೋವಿಗೆ ಕಾರಣವಾಗುತ್ತದೆ. ಇದಲ್ಲದೆ ನಿದ್ರೆ ಕೊರತೆ, ದಣಿವು ಮತ್ತು ಬಿಸಿ ಗಾಳಿ ಸಮಸ್ಯೆಯನ್ನು ಮತ್ತಷ್ಟು ಗಂಭೀರವಾಗಿಸಬಹುದು.

ಇದನ್ನೂ ಓದಿ: Cold Water Vs Warm Water: ಬಿಸಿ ನೀರು ಅಥವಾ ತಣ್ಣೀರು; ಬೇಸಿಗೆಯಲ್ಲಿ ಕುಡಿಯಲು ಯಾವುದು ಬೆಸ್ಟ್?

ಯಾರಿಗೆ ಹೆಚ್ಚು ಅಪಾಯ?

ಮೈಗ್ರೇನ್ ಇರುವವರು, ಶೀಘ್ರವಾಗಿ ಡಿಹೈಡ್ರೇಷನ್ ಆಗುವವರು, ದೀರ್ಘಕಾಲ ಖಾಲಿ ಹೊಟ್ಟೆಯಲ್ಲಿ ಇರುವವರು ಹೆಚ್ಚು ಸಮಸ್ಯೆಗೆ ಒಳಗಾಗಬಹುದು. ಮಕ್ಕಳಲ್ಲಿ, ವೃದ್ಧರಲ್ಲಿ, ಗರ್ಭಿಣಿಯರಲ್ಲಿ ಮತ್ತು ಹೊರಾಂಗಣದಲ್ಲಿ ಕೆಲಸ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಬಹುದು.

ತಡೆಗಟ್ಟಲು ಏನು ಮಾಡಬೇಕು?

ಬಿಸಿಲಿಗೆ ಹೋಗುವ ಮೊದಲು ಸಾಕಷ್ಟು ನೀರು ಕುಡಿಯುವುದು ಅತ್ಯಗತ್ಯ. ತಲೆ ಮುಚ್ಚಲು ಟೋಪಿ, ದುಪ್ಪಟ್ಟಾ ಅಥವಾ ಛತ್ರಿ ಬಳಸುವುದು ಉತ್ತಮ. ಕಣ್ಣನ್ನು ರಕ್ಷಿಸಲು ಸನ್‌ಗ್ಲಾಸ್ ಧರಿಸಬಹುದು. ಸಾಧ್ಯವಾದಷ್ಟು ಮಧ್ಯಾಹ್ನದ ತೀವ್ರ ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಹೋಗಲೇ ಬೇಕಾದಾಗ ಹೊರಗೆ ಹೋಗುವ ಮೊದಲು ಸ್ವಲ್ಪ ಏನಾದರೂ ದೇಹ ತಂಪಾಗಿಸುವ ಆಹಾರ ಸೇವಿಸುವುದು ಮುಖ್ಯ. ಹಗುರ ಮತ್ತು ಸಡಿಲವಾಗಿರುವ ಉಡುಪನ್ನು ಧರಿಸುವುದರಿಂದ ದೇಹ ತಂಪಾಗಿರುತ್ತದೆ. ಈ ಸರಳ ಕ್ರಮಗಳು ತಲೆನೋವು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಬಿಸಿಲಿಗೆ ಹೋದ ತಕ್ಷಣ ತಲೆನೋವು ಕಾಣಿಸಿಕೊಳ್ಳುವುದು ದೇಹದ ಎಚ್ಚರಿಕೆಯ ಸೂಚನೆ ಆಗಿರಬಹುದು. ಆದ್ದರಿಂದ ದೇಹದ ಸಂಕೇತಗಳನ್ನು ಗಮನಿಸಿ, ಸರಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಮತ್ತು ಅಗತ್ಯವಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಹಂಸಲೇಖ-ರವಿಚಂದ್ರನ್ ಹಾಡುಗಳ ಕಾನ್ಸರ್ಟ್ ‘ಕ್ರೇಜಿಬ್ರಹ್ಮಂ’: ಎಲ್ಲಿ? ಯಾವಾಗ?
ಹಂಸಲೇಖ-ರವಿಚಂದ್ರನ್ ಹಾಡುಗಳ ಕಾನ್ಸರ್ಟ್ ‘ಕ್ರೇಜಿಬ್ರಹ್ಮಂ’: ಎಲ್ಲಿ? ಯಾವಾಗ?
ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ: ಕೇಸ್ ದಾಖಲಾಗ್ತಿದ್ದಂತೆ ಪರಾರಿ
ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ: ಕೇಸ್ ದಾಖಲಾಗ್ತಿದ್ದಂತೆ ಪರಾರಿ
ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು
ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು
ಅಬ್ಬರದ ಮಳೆಗೆ ರಾಯರ ಭಕ್ತರು ಕಂಗಾಲು: ನೆರವಿಗೆ ದೌಡಾಯಿಸಿದ ಶ್ರೀಗಳು
ಅಬ್ಬರದ ಮಳೆಗೆ ರಾಯರ ಭಕ್ತರು ಕಂಗಾಲು: ನೆರವಿಗೆ ದೌಡಾಯಿಸಿದ ಶ್ರೀಗಳು
ಮೂರಿಕಟ್ಟೆ ಒಡೆದ ಮುಸ್ಲಿಮರು; ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ
ಮೂರಿಕಟ್ಟೆ ಒಡೆದ ಮುಸ್ಲಿಮರು; ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್!
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್!
ಭಟ್ಕಳದಲ್ಲಿ ಘನಘೋರ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಭಟ್ಕಳದಲ್ಲಿ ಘನಘೋರ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಕರ್ನಾಟಕದಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ
ಕರ್ನಾಟಕದಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ
ಕುಮಾರಣ್ಣ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ ಬಿಗ್‌ಬಾಸ್‌ ಜಾಹ್ನವಿ
ಕುಮಾರಣ್ಣ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ ಬಿಗ್‌ಬಾಸ್‌ ಜಾಹ್ನವಿ
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು