AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದಾನ ಮಾಡಿದ್ರೆ ಈ ರೋಗಗಳು ಬರುವುದಿಲ್ಲ

ರಕ್ತದಾನ ಶ್ರೇಷ್ಠ ದಾನ, ರಕ್ತದಾನ ಮಾಡುವುದರಿಂದ ದೇಹದ ಆರೋಗ್ಯ ಉತ್ತಮವಾಗಿರುತ್ತದೆ. ರಕ್ತದಾನದಿಂದ ದೇಹದಲ್ಲಿರುವ ಹಳೆಯ ರಕ್ತಗಳು ಹೋಗಿ ಹೊಸ ರಕ್ತ ಉತ್ಪಾದನೆ ಆಗುತ್ತದೆ. ಇಷ್ಟು ಮಾತ್ರವಲ್ಲದೆ ರಕ್ತದಾನ ಮಾಡುವುದರಿಂದ ಈ ರೋಗಗಳು ಬರುವುದಿಲ್ಲ ಎಂದು ಲಂಡನ್‌ನ ಫ್ರಾನ್ಸಿಸ್ ಕ್ರಿಕ್ ಇನ್‌ಸ್ಟಿಟ್ಯೂಟ್ ನಡೆಸಿದ ಅಧ್ಯಯದಲ್ಲಿ ತಿಳಿದು ಬಂದಿದೆ. ರಕ್ತದಾನದಿಂದ ಯಾವೆಲ್ಲ ರೋಗ ಬರುವುದಿಲ್ಲ. ರಕ್ತದಾನದಿಂದ ಆಗುವ ಪ್ರಯೋಜನಗಳೇನು? ಇಲ್ಲಿದೆ ನೋಡಿ.

ರಕ್ತದಾನ ಮಾಡಿದ್ರೆ ಈ ರೋಗಗಳು ಬರುವುದಿಲ್ಲ
ಸಾಂದರ್ಭಿಕ ಚಿತ್ರ Image Credit source: Getty Images
ಸಾಯಿನಂದಾ
| Edited By: |

Updated on:Apr 28, 2025 | 5:07 PM

Share

ದಾನಗಳಲ್ಲಿ ಮಹತ್ವ ದಾನದ ರಕ್ತದಾನ (Blood donation) ಎನ್ನುತ್ತಾರೆ. ರಕ್ತದಾನ ಮಾಡಿದ್ರೆ ಪ್ರಾಣ ಅಪಾಯದಲ್ಲಿರುವವರ ಜೀವವನ್ನು ಉಳಿಸಬಹುದು. ಅದಕ್ಕಾಗಿ ವೈದ್ಯರು ಜಾಗೃತಿಗಳನ್ನು, ಶಿಬಿರಗಳನ್ನು, ಅಭಿಯಾನಗಳನ್ನು ನಡೆಸುವುದು. ಇದು ಕೇವಲ ಜೀವ ಅಪಾದಲ್ಲಿರುವವರ ಪ್ರಾಣ ಮಾತ್ರವಲ್ಲ, ರಕ್ತದಾನ ಮಾಡುವವರಿಗೂ ಒಳ್ಳೆಯದು. ದೇಹದಿಂದ ತಿಂಗಳಿಗೆ ಅಥವಾ ವರ್ಷಕ್ಕೆ ರಕ್ತ ಬದಲಾವಣೆ ಆಗಬೇಕು. ಹೀಗೆ ಮಾಡುವುದರಿಂದ ಹೊಸ ರಕ್ತದ ಉತ್ಪಾದನೆಗೆ ಅವಕಾಶ ನೀಡುತ್ತದೆ. ಇದರ ಜತೆಗೆ ಆರೋಗ್ಯಕ್ಕೂ ಇದು ಒಳ್ಳೆಯದು ಎಂದು ಹೇಳಲಾಗಿದೆ. ರಕ್ತದಾನ ಮಾಡುವುದರಿಂದ ಅಪಾಯಕಾರಿ ಕಾಯಿಲೆಗಳು ಮತ್ತು ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ ಎಂದು ಅಧ್ಯಯನವೊಂದು ಹೇಳಿದೆ. ಇತ್ತೀಚಿನ ಸಂಶೋಧನೆಗಳ ಪ್ರಕಾರ ರಕ್ತದಾನ ಮಾಡುವುದರಿಂದ ಕ್ಯಾನ್ಸರ್, ( cancer) ಹೃದ್ರೋಗ ಮತ್ತು ಮಧುಮೇಹದಂತಹ ಗಂಭೀರ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ.

ರಕ್ತದಾನ ಮಾಡುವುದರಿಂದ ಈ ರೋಗ ಬರುವುದಿಲ್ಲ;

  • ರಕ್ತದಾನ ಮಾಡುವುದರಿಂದ ಕ್ಯಾನ್ಸರ್ ತಡೆಗಟ್ಟಬಹುದು: ಲಂಡನ್‌ನ ಫ್ರಾನ್ಸಿಸ್ ಕ್ರಿಕ್ ಇನ್‌ಸ್ಟಿಟ್ಯೂಟ್ ನಡೆಸಿದ ಅಧ್ಯಯ ಹೇಳಿರುವ ಪ್ರಕಾರ ರಕ್ತದಾನ ಮಾಡುತ್ತಿರುವ ಜನರಿಗೆ ಲ್ಯುಕೇಮಿಯಾದಂತಹ ರಕ್ತ ಸಂಬಂಧಿತ ಕ್ಯಾನ್ಸರ್‌ಗಳು ಬರುವ ಅಪಾಯ ಕಡಿಮೆ. ರಕ್ತದಾನ ಮಾಡುವುದರಿಂದ ದೇಹವು ಹೊಸ ರಕ್ತ ಕಣಗಳನ್ನು ಉತ್ಪಾದಿಸುತ್ತದೆ, ಇದರಿಂದಾಗಿ ಅಪಾಯಕಾರಿ ರೂಪಾಂತರಗಳ ಅಪಾಯ ಕಡಿಮೆಯಾಗುತ್ತದೆ.
  • ರಕ್ತದಾನ ಹೃದಯಕ್ಕೆ ಒಳ್ಳೆಯದು: ರಕ್ತದಾನ ಮಾಡುವುದರಿಂದ ರಕ್ತದ ದಪ್ಪ ಆಗುವುದಿಲ್ಲ. ಇದು ಅಧಿಕ ರಕ್ತದೊತ್ತಡ ಮತ್ತು ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ.ದೇಹದಲ್ಲಿ ಕಬ್ಬಿಣದ ಮಟ್ಟವನ್ನು ಸಮತೋಲನದಲ್ಲಿಡುತ್ತದೆ. ಹೆಚ್ಚುವರಿ ಕಬ್ಬಿಣವು ದೇಹದಲ್ಲಿ ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಹೆಚ್ಚಿಸುತ್ತದೆ, ಇದು ಹೃದ್ರೋಗಕ್ಕೆ ಕಾರಣವಾಗಬಹುದು.
  • ಮಧುಮೇಹ ಅಪಾಯ ಕಡಿಮೆ: ರಕ್ತದಾನ ಮಾಡುವುದರಿಂದ ಇನ್ಸುಲಿನ್ ಸೂಕ್ಷ್ಮತೆಯು ಹೆಚ್ಚಾಗಬಹುದು, ಇದು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ.
  • ಉಚಿತ ಆರೋಗ್ಯ ತಪಾಸಣೆ: ರಕ್ತದಾನ ಮಾಡುವ ಮೊದಲು ಆರೋಗ್ಯದ ಪರೀಕ್ಷೆ ಮಾಡುವುದು ಕಡ್ಡಾಯ. ರಕ್ತದೊತ್ತಡ, ಹಿಮೋಗ್ಲೋಬಿನ್, ನಾಡಿಮಿಡಿತ ಇತ್ಯಾದಿಗಳನ್ನು ಪರಿಶೀಲಿಸಲಾಗುತ್ತದೆ. ಆರೋಗ್ಯದಲ್ಲಿ ಏನಾದರೂ ಸಮಸ್ಯ ಇದ್ದರೆ ಇದರಿಂದ ಕಡಿಮೆ ಆಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Mon, 28 April 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!