Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನಾನ ಮಾಡಿ ಬಂದ ತಕ್ಷಣ ನೀರು ಕುಡಿಯಬೇಡಿ, ಈ ರೋಗ ಬರುವುದು ಖಂಡಿತ

ನಮ್ಮ ದಿನನಿತ್ಯ ಕರ್ಮಗಳಲ್ಲಿ ಈ ತಪ್ಪುಗಳನ್ನು ನಾವು ಮಾಡುತ್ತೇವೆ. ಆದರೆ ಅವುಗಳನ್ನು ಬದಲಾವಣೆ ಮಾಡುವ ಅಥವಾ ಎಚ್ಚರಿಕೆ ವಹಿಸುವ ಕೆಲಸವನ್ನು ಮಾಡಲೇಬೇಕು. ಪ್ರತಿದಿನ ಸ್ನಾನ ಮಾಡಿದ ನಂತರ ತಕ್ಷಣ ಬಂದು ನೀರು ಕುಡಿಯಬೇಡಿ ಎಂದು ಹೇಳಲಾಗುತ್ತದೆ. ಇದರಿಂದ ನಿಮ್ಮ ಆರೋಗ್ಯದ ಮೇಲೆ ಬಹುದೊಡ್ಡ ಪರಿಣಾಮವನ್ನು ಉಂಟು ಮಾಡುತ್ತದೆ. ಯಾವೆಲ್ಲ ಆರೋಗ್ಯ ಸಮಸ್ಯೆಗಳು ಬರುತ್ತದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ.

ಸ್ನಾನ ಮಾಡಿ ಬಂದ ತಕ್ಷಣ ನೀರು ಕುಡಿಯಬೇಡಿ, ಈ ರೋಗ ಬರುವುದು ಖಂಡಿತ
ಸಾಂದರ್ಭಿಕ ಚಿತ್ರ Image Credit source: Getty Images
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 03, 2025 | 3:14 PM

ಸಾನ್ನ ಮಾಡಿದ (bathing) ನಂತರ ಹೊರಗಡೆ ಹೋಗುವಾಗ ನೀರು ಕುಡಿಯದೇ ಹೋಗಬಾರದು ಎಂದು ಹೇಳುತ್ತಾರೆ. ಆದರೆ ಕೆಲವರಿಗೆ ಸ್ನಾನ ಮಾಡಿದ ನಂತರ ನೀರು ಕುಡಿಯುವ ಅಭ್ಯಾಸ ಇದೆ, ಇದು ನಿಮಗೆ ನಕಾರತ್ಮಕ ಸೂಚನೆಗಳನ್ನು ನೀಡುತ್ತದೆ. ದೇಹದಲ್ಲಿರುವ ಉಷ್ಣಾಂಶವನ್ನು ಬದಲಾವಣೆಯನ್ನು ಮಾಡುವ ಸಾಧ್ಯತೆ ಕೂಡ ಇದೆ. ಸ್ನಾನ ಮಾಡಿದ ನಂತರ ನೀರು ಕುಡಿಯುವ ಬಗ್ಗೆ ನೀವು ತಜ್ಞರ ಸಲಹೆಯನ್ನು ಖಂಡಿತ ಪಾಲಿಸಲೇಬೇಕು. ಇದು ನಮ್ಮ ಆರೋಗ್ಯ ಹಾಗೂ ದೇಹದ ಮೇಲೆ ಪರಿಣಾವನ್ನು ಉಂಟು ಮಾಡುಬಹುದು. ಅದಕ್ಕಾಗಿ ಇಲ್ಲಿ ಹೇಳಿರುವ ಕೆಲವೊಂದು ಸಲಹೆಗಳನ್ನು ಪಾಲಿಸಿ.

ನೀವು ಪ್ರತಿದಿನ ಸ್ನಾನ ಮಾಡಿದ ಬಂದ ನಂತರ ನಿಮ್ಮ ದೇಹದ ಉಷ್ಣಾಂಶ ಬದಲಾವಣೆ ಆಗುತ್ತದೆ. ಈ ವೇಳೆ ನೀವು ಬಂದು ಬಿಸಿ ನೀರು ಕುಡಿದರೆ ನಿಮ್ಮ ದೇಹದ ಉಷ್ಣಾಂಶ ಮತ್ತೆ ಬದಲಾಗುತ್ತದೆ. ಇದು ನಿಮ್ಮ ಆರೋಗ್ಯದ ಮೇಲೆ ಪೆಟ್ಟು ನೀಡುತ್ತದೆ. ನಿಮ್ಮ ದೇಹವು ಒಂದು ಉಷ್ಣಾಂಶಕ್ಕೆ ಹೊಂದಿಕೊಂಡಿರುತ್ತದೆ. ಇದು ಸ್ನಾನ ಮಾಡಿದಾಗ ಗಮನಿಸಬೇಕಾದ ವಿಷಯ, ಒಂದು ವೇಳೆ ಸ್ನಾನ ಮಾಡಿ ಬಂದ ಮೇಲೆ ನೀರು ಕುಡಿದರೆ, ಮತ್ತೆ ನಿಮ್ಮ ದೇಹದ ಉಷ್ಣಾಂಶ ಬದಲಾಗುತ್ತದೆ. ಅದಕ್ಕಾಗಿ ಅದನ್ನು ಸಮವಾಗಿ ಇಟ್ಟುಕೊಂಡಿರಬೇಕು. ಒಂದು ವೇಳೆ ಬದಲಾವಣೆಯಾದರೆ, ನಿಮ್ಮ ದೇಹದಲ್ಲಿ ರಕ್ತ ಪರಿಚಲನೆ ವೇಗವಾಗುತ್ತದೆ. ಇದು ಹೃದಯಕ್ಕೂ ಒತ್ತಡವನ್ನು ಉಂಟು ಮಾಡುತ್ತದೆ.

ಯಾವೆಲ್ಲ ಸಮಸ್ಯೆಗಳು ಉಂಟಾಗಬಹುದು:

ಸ್ನಾನ ಮಾಡಿದ ನಂತರ, ನಮ್ಮ ದೇಹದಲ್ಲಿ ರಕ್ತ ಪರಿಚಲನೆ ಹೆಚ್ಚಾಗುತ್ತದೆ.

ಇದನ್ನೂ ಓದಿ
Image
ಪ್ರೋಟೀನ್ ಹೆಚ್ಚಾದರೆ ಮೂತ್ರಪಿಂಡಕ್ಕೆ ಹಾನಿ
Image
ಕಣ್ಣಿಗೆ ಧೂಳು, ಕಸ ಬಿದ್ದರೆ ಹೀಗೆ ಮಾಡಿ
Image
ಬೇಸಿಗೆಯಲ್ಲಿ ಸ್ನಾನಕ್ಕೆ ಬಿಸಿ ನೀರನ್ನೇ ಆಯ್ಕೆ ಮಾಡಿಕೊಳ್ತೀರಾ?
Image
ನೀವು ಆರೋಗ್ಯವಾಗಿದ್ದೀರಿ ಎಂದು ಬೆಳಗಿನಜಾವದ ಈ ಸೂಚನೆಗಳಿಂದ ತಿಳಿಯಬಹುದು

ರಕ್ತನಾಳಗಳ ಮೇಲೆ ಒತ್ತಡ ಹೆಚ್ಚಿ ಶೀತ ಉಂಟಾಗುವ ಅಪಾಯವಿದೆ.

ಇದು ತಲೆನೋವು, ಆಲಸ್ಯ ಮತ್ತು ಆಯಾಸದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು.

ಒಂದು 10-15 ನಿಮಿಷದಿಂದ ನಂತರ ನೀರು ಕುಡಿಯಿರಿ

ಇನ್ನು ಸ್ನಾನ ಮಾಡಿದ ನಂತರ ಮಾತ್ರವಲ್ಲ, ಊಟ ಮಾಡುವಾಗಲು ಕೂಡ ಇದನ್ನು ಪಾಲಿಸಬೇಕು. ನಿಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಏಕೆಂದರೆ ತಿಂದ ಆಹಾರ ಜೀರ್ಣಕ್ರಿಯೆ ಸರಿಯಾಗಿ ನಡೆಯಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆ ಸಮಯದಲ್ಲಿ ನೀರು ಕುಡಿಯುವುದರಿಂದ ಹೊಟ್ಟೆಯ ಆಮ್ಲಗಳು ದುರ್ಬಲಗೊಳ್ಳುತ್ತವೆ. ಜತೆಗೆ ಇದು ಅಜೀರ್ಣ, ಅನಿಲ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ಉಂಟುಮಾಡಬಹುದು.

ಹಲವು ತಜ್ಞರು ಹೇಳುವ ಪ್ರಕಾರ, ಊಟವಾದ 30-45 ನಿಮಿಷಗಳ ನಂತರ ಮಾತ್ರ ನೀರು ಕುಡಿಯಬೇಕು. ಹೀಗೆ ಮಾಡುವುದರಿಂದ ಜೀರ್ಣಕ್ರಿಯೆ ಸ್ವಾಭಾವಿಕವಾಗಿ ನಡೆದು ದೇಹಕ್ಕೆ ಪೋಷಕಾಂಶಗಳು ದೊರೆಯುತ್ತವೆ. ಬಿಸಿಲಿನಲ್ಲಿ ಸಮಯ ಕಳೆದು ಮನೆಗೆ ಬಂದ ತಕ್ಷಣ ಅನೇಕ ಜನರಿಗೆ ತಣ್ಣೀರು ಕುಡಿಯಬೇಕೆಂದು ಅನಿಸುತ್ತದೆ. ಆದರೆ ಇದು ದೇಹಕ್ಕೆ ಒಳ್ಳೆಯದಲ್ಲ. ನಾವು ಸೂರ್ಯನಲ್ಲಿ ದೀರ್ಘಕಾಲ ಕಳೆದಾಗ, ನಮ್ಮ ದೇಹದ ಉಷ್ಣತೆಯು ಹೆಚ್ಚಾಗುತ್ತದೆ. ಅಂತಹ ಸಮಯದಲ್ಲಿ, ಒಂದೇ ಬಾರಿಗೆ ತಣ್ಣೀರು ಕುಡಿಯುವುದರಿಂದ ದೇಹದ ಉಷ್ಣತೆಯು ಇದ್ದಕ್ಕಿದ್ದಂತೆ ಕಡಿಮೆಯಾಗುತ್ತದೆ. ಇದು ತಲೆನೋವು, ಶೀತ ಮತ್ತು ಜ್ವರದಂತಹ ಸಮಸ್ಯೆಗಳನ್ನು ಉಂಟುಮಾಡಬಹುದು.

ಇದನ್ನೂ ಓದಿ: ಪುರುಷರಿಗೆ ಈ ಬೇಸಿಗೆಯಲ್ಲಿ ಯಾವ ಅಂಡರ್‌ವೇರ್‌ ಉತ್ತಮ? ಒಳ ಉಡುಪಿನ ವಿಚಾರದಲ್ಲಿ ಈ ತಪ್ಪುಗಳನ್ನು ಮಾಡದಿರಿ

ಸ್ನಾನ ಹಾಗೂ ಊಟದ ಸಮಯದಲ್ಲಿ ನೀರು ಕುಡಿಯಲು 10ರಿಂದ 15 ಅಂತರದಲ್ಲಿ ಬಿಟ್ಟು ಕುಡಿಯಬೇಕು. ಇದರ ಜೆತೆಗೆ ಹೊರಗಿನಿಂದ ಮನೆಗೆ ಬಂದ ತಕ್ಷಣ ತಣ್ಣೀರು ಕುಡಿಯಬಾರದು. ಸ್ವಲ್ಪ ವಿರಾಮ ತೆಗೆದುಕೊಂಡು ಉಗುರು ಬೆಚ್ಚಗಿನ ನೀರು ಕುಡಿಯಿರಿ. ಹೊರಗಿನಿಂದ ಮನೆಗೆ ಬಂದ ತಕ್ಷಣ ತಣ್ಣೀರು ಕುಡಿಯಬಾರದು. ಸ್ವಲ್ಪ ವಿರಾಮ ತೆಗೆದುಕೊಂಡು ಉಗುರು ಬೆಚ್ಚಗಿನ ನೀರು ಕುಡಿಯಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!