AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆಯುರಿ ಇದ್ದರೆ ಅಸಿಡಿಟಿ ಎನ್ನಬೇಡಿ, ನೀವೇ ಡಾಕ್ಟರ್ ಅಗ್ಬೇಡಿ: ಹೃದಯದ ಆರೋಗ್ಯಕ್ಕೆ ಇಲ್ಲಿದೆ ಟಿಪ್ಸ್

ಹೃದಯ ಆರೋಗ್ಯದ ಮಹತ್ವ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವ ಬಗ್ಗೆ ಅಪೋಲೋ ಆಸ್ಪತ್ರೆಯ ಎಂಡಿ, ಮಕ್ಕಳ ಹೃದ್ರೋಗ ತಜ್ಞ ಡಾ. ಗಿರೀಶ್ ಬಿ ನವಸುಂಡಿ ವಿವರಿಸಿದ್ದಾರೆ. ಅಸಿಡಿಟಿ ಮತ್ತು ಗ್ಯಾಸ್ಟ್ರಿಕ್‌ನಂತಹ ಸಾಮಾನ್ಯ ಲಕ್ಷಣಗಳನ್ನು ಹೃದಯ ಸಂಬಂಧಿ ಸಮಸ್ಯೆಗಳ ಲಕ್ಷಣಗಳೆಂದು ತಪ್ಪಾಗಿ ಭಾವಿಸಬಾರದು ಎಂದು ಅವರು ಎಚ್ಚರಿಸಿದ್ದಾರೆ. ನಿಯಮಿತ ಆರೋಗ್ಯ ತಪಾಸಣೆ ಮತ್ತು ಸರಿಯಾದ ಚಿಕಿತ್ಸೆಯ ಮಹತ್ವದ ಬಗ್ಗೆ ಅವರು ಮಾತನಾಡಿದ್ದು, ವಿವರಗಳು ಇಲ್ಲಿವೆ.

ಎದೆಯುರಿ ಇದ್ದರೆ ಅಸಿಡಿಟಿ ಎನ್ನಬೇಡಿ, ನೀವೇ ಡಾಕ್ಟರ್ ಅಗ್ಬೇಡಿ: ಹೃದಯದ ಆರೋಗ್ಯಕ್ಕೆ ಇಲ್ಲಿದೆ ಟಿಪ್ಸ್
ಡಾ. ಗಿರೀಶ್ ಬಿ ನವಸುಂಡಿ ಅವರಿಂದ ಹೃದಯ ಆರೋಗ್ಯದ ಟಿಪ್ಸ್
Ganapathi Sharma
|

Updated on:Jun 28, 2025 | 5:05 PM

Share

ಬೆಂಗಳೂರು, ಜೂನ್ 28: ಹೃದಯದ ಆರೋಗ್ಯದ ಮಹತ್ವ ಮತ್ತು ಹೃದಯಾಘಾತದಂತಹ (Heart Attack) ತುರ್ತು ಪರಿಸ್ಥಿತಿಗಳನ್ನು ತಡೆಗಟ್ಟುವ ಬಗ್ಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯ ಎಂಡಿ, ಮಕ್ಕಳ ಹೃದ್ರೋಗ ತಜ್ಞ ಡಾ. ಗಿರೀಶ್ ಬಿ ನವಸುಂಡಿ (Dr Girish B Navasundi) ‘ಟಿವಿ9’ ಜತೆ ಮಾತನಾಡಿದ್ದು, ವಿವರವಾದ ಮಾಹಿತಿ ನೀಡಿದ್ದಾರೆ. ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಹೃದಯದ ಆರೋಗ್ಯಕ್ಕೆ ಅತ್ಯಗತ್ಯ. ಇದರಲ್ಲಿ ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ ಮತ್ತು ಸಾಕಷ್ಟು ನಿದ್ರೆ ಸೇರಿವೆ. ಧೂಮಪಾನ, ಮದ್ಯಪಾನ ಮತ್ತು ಒತ್ತಡದಂತಹ ಅಂಶಗಳು ಹೃದಯದ ಆರೋಗ್ಯವನ್ನು (Heart Health) ದುರ್ಬಲಗೊಳಿಸಬಹುದು. ಅತಿಯಾಗಿ ತಿನ್ನುವುದು ಮತ್ತು ಅನಾರೋಗ್ಯಕರ ಆಹಾರಗಳ ಸೇವನೆಯು ಹೃದಯಕ್ಕೆ ಹಾನಿಯಾಗಬಹುದು ಎಂದು ಅವರು ಹೇಳಿದ್ದಾರೆ.

ನಿಮಗೆ ನೀವೇ ಡಾಕ್ಟರ್ ಆಗಬೇಡಿ!

ಹೃದಯ ಸಂಬಂಧಿ ಸಮಸ್ಯೆಗಳ ಲಕ್ಷಣಗಳನ್ನು ಗುರುತಿಸುವುದು ಅತಿ ಮುಖ್ಯ. ಎದೆನೋವು, ಉಸಿರಾಟದ ತೊಂದರೆ, ತಲೆತಿರುಗುವಿಕೆ ಮತ್ತು ವಾಂತಿಯಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಹೃದಯದ ಎದೆನೋವನ್ನು ಅಸಿಡಿಟಿ ಅಥವಾ ಗ್ಯಾಸ್ಟ್ರಿಕ್ ಎಂದು ತಪ್ಪಾಗಿ ಭಾವಿಸಬಾರದು. ವೈದ್ಯರನ್ನು ಸಂಪರ್ಕಿಸುವ ಮೊದಲು ಸ್ವಯಂ ಚಿಕಿತ್ಸೆ ಪಡೆಯುವುದು ಅಪಾಯಕಾರಿ. ವೈದ್ಯರು ಸರಿಯಾದ ರೋಗನಿರ್ಣಯ ಮಾಡಲು ನಿಮ್ಮ ಅನುಭವಗಳನ್ನು ನಿಖರವಾಗಿ ವಿವರಿಸುವುದು ಅಗತ್ಯ. ಅದರ ಬದಲು ನೀವೇ ಅಸಿಡಿಟಿ, ಗ್ಯಾಸ್ಟ್ರಿಕ್ ಅಂದುಬಿಡಬಾರದು ಎಂದು ಡಾ. ಗಿರೀಶ್ ಬಿ ನವಸುಂಡಿ ಸಲಹೆ ನೀಡಿದ್ದಾರೆ.

ಹೃದಯದ ಆರೋಗ್ಯ ಕಾಪಾಡುವುದು ಹೇಗೆ? ಸಮಸ್ಯೆ ಇದ್ದರೆ ಗೊತ್ತಾಗುವುದು ಹೇಗೆ?

ಇದನ್ನೂ ಓದಿ
Image
ಕಣ್ಣಿನ ಆರೋಗ್ಯದಿಂದ ಕ್ಯಾನ್ಸರ್ ತಡೆಗಟ್ಟುವ ವರೆಗೆ; ಚೀನಿಕಾಯಿಯ ಉಪಯೋಗಗಳಿವು
Image
ರಾತ್ರಿಯಲ್ಲಿ ಕಂಡು ಬರುವ ಕಾಲು ಸೆಳೆತವನ್ನು ತಡೆಯಲು ಇಲ್ಲಿದೆ ಸಲಹೆಗಳು
Image
ಹಣ್ಣು, ತರಕಾರಿಗಳನ್ನು ತೊಳೆಯುವುದು ಹೇಗೆ? ವಿವಿಧ ವಿಧಾನಗಳು ಇಲ್ಲಿವೆ
Image
ನೀವು ಏನಾದರೂ ತಿಂದ ತಕ್ಷಣ ಟಾಯ್ಲೆಟ್ ಗೆ ಹೋಗುತ್ತೀರಾ? ನಿಮಗೆ ಇಲ್ಲಿದೆ ಸಲಹೆ

ನಿಯಮಿತ ಆರೋಗ್ಯ ತಪಾಸಣೆಯ ಮಹತ್ವವನ್ನು ಅವರು ಒತ್ತಿ ಹೇಳುತ್ತಾರೆ. ವರ್ಷಕ್ಕೊಮ್ಮೆ ಕೊಲೆಸ್ಟ್ರಾಲ್, ರಕ್ತದೊತ್ತಡ ಮತ್ತು ರಕ್ತದ ಸಕ್ಕರೆ ಪರೀಕ್ಷೆಗಳನ್ನು ಮಾಡಿಸುವುದು ಅವಶ್ಯಕ. ಇಸಿಜಿ, ಎಕೋ ಕಾರ್ಡಿಯೋಗ್ರಾಮ್ ಮತ್ತು ಟ್ರೆಡ್ಮಿಲ್ ಪರೀಕ್ಷೆಗಳು ಹೃದಯದ ಆರೋಗ್ಯವನ್ನು ನಿರ್ಣಯಿಸಲು ಸಹಾಯ ಮಾಡುತ್ತವೆ. ಈ ಪರೀಕ್ಷೆಗಳ ಮೂಲಕ ಹೃದಯ ಸಂಬಂಧಿ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯುವುದರಿಂದ ಹೃದಯದ ಮೇಲಾಗುವ ಹಾನಿಯನ್ನು ತಡೆಯಬಹುದು. ಆರೋಗ್ಯಕರ ಜೀವನಶೈಲಿ ಮತ್ತು ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:50 pm, Sat, 28 June 25