AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಾಗ ಪ್ರಜ್ಞೆ ತಪ್ಪಿ ಕುಸಿದು ಬೀಳುತ್ತಿದ್ದೀರಾ? ಭಯ ಪಡುವುದು ಬೇಡ, ಈ ವಿಧಾನಗಳನ್ನು ಅನುಸರಿಸಿ

ನಿಮ್ಮ ಆರೋಗ್ಯದಲ್ಲಿ ಏನೇ ಏರುಪೇರಾದರೂ ತಕ್ಷಣವೇ ವೈದ್ಯರ ಸಲಹೆ ಪಡೆಯಿರಿ. ಚಿಕ್ಕ ಸಮಸ್ಯೆಯೂ ಮುಂದೊಂದು ದಿನ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಉಂಟುಮಾಡಬಲ್ಲದು. ಹಾಗಾಗಿ ಆರೋಗ್ಯದ ದೃಷ್ಟಿಯಿಂದ ಯಾವುದೇ ನಿರ್ಲಕ್ಷ್ಯ ಬೇಡ. 

ಆಗಾಗ ಪ್ರಜ್ಞೆ ತಪ್ಪಿ ಕುಸಿದು ಬೀಳುತ್ತಿದ್ದೀರಾ? ಭಯ ಪಡುವುದು ಬೇಡ, ಈ ವಿಧಾನಗಳನ್ನು ಅನುಸರಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 05, 2021 | 7:27 AM

Share

ದೇಹಕ್ಕೆ ಸುಸ್ತಾದಾಗ ಬೆವರುವುದು ಅಥವಾ ತಲೆ ತಿರುಗುವುದು ಸಾಮಾನ್ಯ. ಹಾಗಂತ ಯಾವುದೇ ಕಾರಣಕ್ಕೂ ಇಂತಹ ಸಮಸ್ಯೆಗಳನ್ನು ಕಡೆಗಣಿಸಬೇಡಿ. ಇದು ಮೂರ್ಛೆ ಹೋಗುವ ಲಕ್ಷಣಗಳೂ ಆಗಿರಬಹುದು. ಮೂರ್ಛೆ ಹೋಗುವ ಸಮಯದಲ್ಲಿ ದೇಹದ ಸ್ಥಿತಿ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಿ. ಇಂತಹ ಲಕ್ಷಣಗಳು ಕಂಡು ಬಂದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೇ ವೈದ್ಯರನ್ನು ಭೇಟಿ ಮಾಡುವುದು ನಿಮ್ಮ ಆರೋಗ್ಯ ದೃಷ್ಟಿಯಿಂದ ಒಳಿತು.

ಪದೇ ಪದೇ ತಲೆ ಸುತ್ತುವಂತಾಗುತ್ತಿದೆ ಅಥವಾ ತಾತ್ಕಾಲಿಕವಾಗಿ ಪ್ರಜ್ಞೆ ಕಳೆದುಕೊಳ್ಳುತ್ತಿದ್ದೀರಿ ಎಂದಾದರೆ ದೇಹಕ್ಕೆ ಅಪಾಯಕಾರಿ ಒಡ್ಡುವ ಮುನ್ಸೂಚನೆಗಳಾಗಿರಬಹುದು. ಹಾಗಾಗಿ ಪ್ರಜ್ಞೆ ತಪ್ಪುವುದು ಸಾಮಾನ್ಯ ಎಂಬ ನಿರ್ಲಕ್ಷ್ಯ ಎಂಬ ಭಾವನೆ ಎಂದಿಗೂ ಬೇಡ. ಆ ಸಮಯದಲ್ಲಿ ಹೆಚ್ಚಿನ ಕೆಲಸಗಳು ಬೇಡ. ವಿಶ್ರಾಂತಿ ತೆಗೆದುಕೊಳ್ಳಿ. ಆಹಾರ ಕ್ರಮ ಬದಲಿಸಿಕೊಳ್ಳಿ. ಹೆಚ್ಚು ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದ ದೇಹದ ಸೃದೃಢವಾಗುತ್ತದೆ ಹಾಗೂ ನರದೌರ್ಬಲ್ಯದಂತಹ ಸಮಸ್ಯೆ ಪರಿಹಾರವಾಗುತ್ತದೆ.

ನಿಮ್ಮ ಆರೋಗ್ಯದಲ್ಲಿ ಏನೇ ಏರುಪೇರಾದರೂ ತಕ್ಷಣವೇ ವೈದ್ಯರ ಸಲಹೆ ಪಡೆಯಿರಿ. ಚಿಕ್ಕ ಸಮಸ್ಯೆಯೂ ಮುಂದೊಂದು ದಿನ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಉಂಟುಮಾಡಬಲ್ಲದು. ಹಾಗಾಗಿ ಆರೋಗ್ಯದ ದೃಷ್ಟಿಯಿಂದ ಯಾವುದೇ ನಿರ್ಲಕ್ಷ್ಯ ಬೇಡ.

ಲಕ್ಷಣಗಳು ಯಾವುದು? * ತಲೆನೋವು * ಪ್ರಜ್ಞೆ ತಪ್ಪುವುದು * ತಲೆತಿರುಗುವುದು * ಅಸ್ಥಿರತೆ ಅಥವಾ ದುರ್ಬಲತೆ

ಅಸಮ ಹೃದಯ ಬಡಿತ. ಕೆಲವು ಸೆಕೆಂಡುಗಳ ಕಾಲ ಹೃದಯ ಬಡಿತ ತಾತ್ಕಾಲಿಕವಾಗಿ ನಿಲ್ಲುವುದರಿಂದ ಮೆದುಳಿಗೆ ರಕ್ತದ ಸಂಚಾರವು ಕೆಲಕಾಲ ಸ್ಥಗಿತಗೊಳ್ಳುತ್ತದೆ. ರಕ್ತದೊತ್ತಡ ಉಂಟಾಗುವುದರಿಂದ ಮೆದುಳಿಕೆ ರಕ್ತ ಪೂರೈಕೆ ಕಡಿಮೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಪರಿಹಾರಗಳೇನು?  * ನಿಯಮಿತವಾಗಿ ಊಟ ಮಾಡಿ. ಊಟಮಾಡುವುದನ್ನು ಎಂದೂ ತಪ್ಪಿಸಬೇಡಿ * ಸಾಕಷ್ಟು ನೀರು ಕುಡಿಯಿರಿ * ಒಂದೇ ಸ್ಥಳದಲ್ಲಿ ತುಂಬಾ ಸಮಯದವರೆಗೆ ಕಾಲುಗಳನ್ನು ಅಲುಗಾಡಿಸದಯೇ ಹಾಗೆಯೇ ಇರಬೇಡಿ * ಮೂರ್ಛೆ ಕಾಯಿಯಿಂದ ಬಳಲುತ್ತಿದ್ದರೆ ಆದಷ್ಟು ಬಿಸಿಲಿನಿಂದ ದೂರವಿರಿ * ಮಧುಮೇಹ ಅಥವಾ ಹೃದಯ ಸಂಬಂಧಿ ಕಾಯಿಲೆಯ ಸಮಸ್ಯೆಗೆ ಔಚಧಿಗಳನ್ನು ಸೂಚಿಸಿದಂತೆಯೇ ಸೇವನೆ ಮಾಡಿ * ರಕ್ತದೊತ್ತಡವನ್ನು ನಿಯಂತ್ರಿಸಲು ನಿಯಮಿತವಾಗಿ ಉಪ್ಪು ಸೇವಿಸಿ.

ಇದನ್ನೂ ಓದಿ: 

Health Tips: ಬಾದಾಮಿ ಸೇವನೆಯ 5 ಆರೋಗ್ಯಕಾರಿ ಪ್ರಯೋಜನಗಳು

Health Tips: ಆರೋಗ್ಯ ಕಾಪಾಡಿಕೊಳ್ಳಲು ಮಹಿಳೆಯರಿಗಾಗಿ ಕಿವಿಮಾತು; ನಿಮಗಾಗಿಯೇ ಒಂದಿಷ್ಟು ಸಮಯ ಮೀಸಲಿಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು