AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ದೇಹ ನೀಡುವ ಸಂಕೇತಗಳನ್ನು ನಿರ್ಲಕ್ಷಿಸಬೇಡಿ, ಇದು ನಿಮ್ಮ ಆರೋಗ್ಯದ ಎಚ್ಚರಿಕೆ

ದೇಹ ಪೂರ್ವಭಾವಿಯಾಗಿ ನೀಡುವ ಎಚ್ಚರಿಕೆಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಸಮಸ್ಯೆಗಳು ಕೈ ಮೀರಿ ಹೋಗುವ ಮೊದಲು ಅವುಗಳಿಂದ ಮುಕ್ತಿ ಪಡೆದುಕೊಳ್ಳಬೇಕು. ತಜ್ಞರು ಹೇಳುವ ಪ್ರಕಾರ ನಮ್ಮ ದೇಹದ ಮಾತನ್ನು ನಾವು ಕೇಳಿ ಆರೋಗ್ಯ ಕಾಪಾಡಿಕೊಳ್ಳಬೇಕಾಗುತ್ತದೆ. ಹಾಗಾದರೆ ಸಮಸ್ಯೆಗಳು ಬರುವ ಮೊದಲು ದೇಹ ಯಾವ ರೀತಿಯ ಮುನ್ಸೂಚನೆಗಳನ್ನು ನೀಡುತ್ತದೆ? ಅದರ ಅರ್ಥವೇನು? ಯಾವ ರೀತಿಯಲ್ಲಿ ಪರಿಹಾರ ಪಡೆದುಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳಿ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ನಿಮ್ಮ ದೇಹ ನೀಡುವ ಸಂಕೇತಗಳನ್ನು ನಿರ್ಲಕ್ಷಿಸಬೇಡಿ, ಇದು ನಿಮ್ಮ ಆರೋಗ್ಯದ ಎಚ್ಚರಿಕೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 28, 2025 | 4:12 PM

Share

ಸಾಮಾನ್ಯವಾಗಿ ಕೆಲವು ಆರೋಗ್ಯ ಸಮಸ್ಯೆಗಳು ಬರುವುದಕ್ಕಿಂತ ಮೊದಲು ದೇಹವು ನಮಗೆ ಕೆಲವು ಸಂಕೇತಗಳನ್ನು ನೀಡುತ್ತದೆ. ಆದರೆ ನಾವು ಅಷ್ಟಾಗಿ ಗಮನಹರಿಸದೆಯೇ ಅವುಗಳನ್ನು ನಿರ್ಲಕ್ಷಿಸುತ್ತೇವೆ. ಆದರೆ ಈ ರೀತಿ ಮಾಡುವುದು ಸರಿಯಲ್ಲ. ದೇಹ ನೀಡುವ ಎಚ್ಚರಿಕೆಗಳನ್ನು ನಾವು ಸರಿಯಾಗಿ ಅರ್ಥ ಮಾಡಿಕೊಂಡು ಸಮಸ್ಯೆಗಳು ಕೈ ಮೀರಿ ಹೋಗುವ ಮೊದಲು ಅವುಗಳಿಂದ ಮುಕ್ತಿ ಪಡೆದುಕೊಳ್ಳಬೇಕು. ತಜ್ಞರು ಹೇಳುವ ಪ್ರಕಾರ ನಮ್ಮ ದೇಹದ ಮಾತನ್ನು ನಾವು ಕೇಳಿ ಆರೋಗ್ಯ ಕಾಪಾಡಿಕೊಳ್ಳಬೇಕಾಗುತ್ತದೆ. ಹಾಗಾದರೆ ಸಮಸ್ಯೆಗಳು ಬರುವ ಮೊದಲು ದೇಹ ಯಾವ ರೀತಿಯ ಮುನ್ಸೂಚನೆಗಳನ್ನು ನೀಡುತ್ತದೆ? ಅದರ ಅರ್ಥವೇನು? ಯಾವ ರೀತಿಯಲ್ಲಿ ಪರಿಹಾರ ಪಡೆದುಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳಿ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

  • ಸಾಮಾನ್ಯವಾಗಿ, ನಿಮ್ಮ ಬಾಯಿ ಅಥವಾ ತುಟಿಗಳು ಬಿರುಕು ಬಿಟ್ಟಿದ್ದರೆ ನಿಮಗೆ ವಿಟಮಿನ್ ಬಿ ಕೊರತೆಯಿದೆ ಎಂದರ್ಥ. ಈ ರೀತಿ ಆಗುತ್ತಿದ್ದರೆ ಹೆಚ್ಚು ನೀರನ್ನು ಕುಡಿಯಿರಿ. ವೈದ್ಯರ ಸಲಹೆ ಪಡೆದುಕೊಂಡು ಪ್ರತಿನಿತ್ಯ ವ್ಯಾಯಾಮ ಮಾಡಿ. ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಯುಕ್ತ ಆಹಾರವನ್ನು ಸೇವಿಸಿ. ನೋವಿರುವ ಜಾಗಕ್ಕೆ ತಣ್ಣಗಿರುವ ಅಥವಾ ಉಗುರು ಬೆಚ್ಚಗಿನ ಒತ್ತಡ ನೀಡಿ. ತುಟಿಗಳಿಗೆ ನಿಯಮಿತವಾಗಿ ತೇವಾಂಶ ನೀಡಿ. ತುಟಿಗಳನ್ನು ಸ್ಕ್ರಬ್ ಮಾಡಿ.
  • ನಿಮಗೆ ತೀವ್ರವಾದ ಬೆನ್ನು ನೋವು ಇದ್ದರೆ ನಿಮಗೆ ವಿಟಮಿನ್ ಡಿ ಕೊರತೆಯಿದೆ. ಹಾಗಾಗಿ ನೀವು ಸಾಧ್ಯವಾದಷ್ಟು ನೇರವಾಗಿ ಕುಳಿತುಕೊಳ್ಳಿ. ಬೆಳಗ್ಗಿನ ಸೂರ್ಯನ ಕಿರಣ ನಿಮ್ಮ ದೇಹಕ್ಕೆ ಬೀಳುವಂತೆ ನೋಡಿಕೊಳ್ಳಿ. ವಿಟಮಿನ್ ಬಿ ಸಮೃದ್ಧ ಆಹಾರವನ್ನು ಸೇವಿಸಿ.
  • ಮುಖದ ಮೇಲೆ ಮೊಡವೆಗಳು ಇದ್ದರೆ ನಿಮಗೆ ವಿಟಮಿನ್ ಇ ಮತ್ತು ಸತುವಿನ ಕೊರತೆಯಿದೆ ಎಂದರ್ಥ. ಹಾಗಾಗಿ ದಿನಕ್ಕೆ ಕನಿಷ್ಠ ಎಂಟು ಲೋಟ ನೀರು ಕುಡಿಯಿರಿ. ಖರೀದ ಆಹಾರ, ಜಂಕ್ ಫುಡ್, ಚಾಕಲೇಟ್, ಐಸ್ ಕ್ರೀಮ್ ಮುಂತಾದ ಆಹಾರಗಳನ್ನು ಕಡಿಮೆ ಸೇವಿಸಿ. ದಿನಕ್ಕೆ ಎರಡು ಬಾರಿ ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ. ನೀವು ಬಳಸುವ ಸೋಪಿನಲ್ಲಿ ಸೌಮ್ಯ ಗುಣಗಳಿರಲಿ.
  • ನಿರಂತರವಾಗಿ ಆಯಾಸ ಮತ್ತು ನಿದ್ರೆ ಬರುತ್ತಿದ್ದರೆ ನಿಮ್ಮ ದೇಹದಲ್ಲಿ ವಿಟಮಿನ್ ಬಿ2, ಸಿ ಮತ್ತು ಕಬ್ಬಿಣದ ಕೊರತೆ ಇರಬಹುದು. ಸಾಮಾನ್ಯವಾಗಿ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಆಯಾಸ ಉಂಟಾಗುತ್ತದೆ. ಹಾಗಾಗಿ ದಿನವಿಡೀ ಸಾಕಷ್ಟು ನೀರು ಕುಡಿಯುವುದನ್ನು ಮರೆಯಬೇಡಿ. ಅಲ್ಲದೆ ಒತ್ತಡ ನಿಮ್ಮ ನಿದ್ರೆಗೆ ಅಡ್ಡಿಪಡಿಸುತ್ತದೆ ಜೊತೆಗೆ ಆಯಾಸವನ್ನು ಹೆಚ್ಚಿಸುತ್ತದೆ. ಆದ್ದರಿಂದ ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ, ಯೋಗ ಅಥವಾ ಯಾವುದೇ ರೀತಿಯ ವಿಶ್ರಾಂತಿ ಚಟುವಟಿಕೆಗಳ ಮೂಲಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ.
  • ನಿಮ್ಮ ಕಣ್ಣಿನ ಸುತ್ತ ಕಪ್ಪು ಕಲೆಗಳು ಕಂಡು ಬರುತ್ತಿದ್ದರೆ ನಿಮ್ಮ ದೇಹದಲ್ಲಿ ವಿಟಮಿನ್ ಇ ಮತ್ತು ಕೆ ನ ಕೊರತೆಯಾಗಿದೆ ಎಂದರ್ಥ. ಹಾಗಾಗಿ ಕಣ್ಣುಗಳಿಗೆ ನಿಯಮಿತವಾಗಿ ವಿರಾಮ ನೀಡಿ. ದೀರ್ಘಕಾಲದ ವರೆಗೆ ಕಂಪ್ಯೂಟರ್ ಅಥವಾ ಮೊಬೈಲ್ ಬಳಕೆಯನ್ನು ತಪ್ಪಿಸಿ. ಜೊತೆಗೆ ದಿನವಿಡೀ ಸಾಕಷ್ಟು ನೀರು ಕುಡಿಯಿರಿ.
  • ನಿಮಗೆ ಕೂದಲು ಉದುರುವಿಕೆ ಮ್ಯಾಟ್ ಬಿಳಿ ಕೂದಲಿನ ಸಮಸ್ಯೆ ಇದ್ದಲ್ಲಿ ಬಯೋಟಿನ್ ಮತ್ತು ವಿಟಮಿನ್ ಬಿ ೧೨ ಕೊರತೆಯಿದೆ ಎಂದರ್ಥ. ಹಾಗಾಗಿ ಪ್ರತಿನಿತ್ಯ ಕೂದಲನ್ನು ಸರಿಯಾಗಿ ಬಾಚಿಕೊಳ್ಳಿ. ಒದ್ದೆ ಇರುವಾಗ ಕೂದಲನ್ನು ಬಾಚಿಕೊಳ್ಳಬೇಡಿ. ಜೊತೆಗೆ ಸಾಧ್ಯವಾದಷ್ಟು ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ