AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟ್ರೆಸ್ ಮಲಬದ್ದತೆಗೆ ಹೇಗೆ ಕಾರಣವಾಗುತ್ತೆ ಗೊತ್ತಾ? ಈ ಬಗ್ಗೆ ಡಾ ಅನುರಾಗ್ ಶೆಟ್ಟಿ ಏನ್ ಹೇಳ್ತಾರೆ ನೋಡಿ

ಸ್ಟ್ರೆಸ್ ಆರೋಗ್ಯವನ್ನು ಹೇಗೆಲ್ಲಾ ಹಾಳು ಮಾಡಬಹುದು ಎಂಬುದರ ಬಗ್ಗೆ ಹಲವರಿಗೆ ತಿಳಿದಿಲ್ಲ. ನಮಗೆ ಅರಿವಿಲ್ಲದಂತೆ ದೇಹವನ್ನು ಅನಾರೋಗ್ಯಕ್ಕೆ ದೂಡುವ ಶಕ್ತಿ ಇದಕ್ಕಿದೆ. ಅದರಲ್ಲಿಯೂ ಸ್ಟ್ರೆಸ್ ಅಥವಾ ಒತ್ತಡವು ನೇರವಾಗಿ ಮತ್ತು ಗಂಭೀರವಾಗಿ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಮಲಬದ್ದತೆ, ಅತಿಸಾರ, ಹೊಟ್ಟೆ ನೋವಿನಂತಹ ಸಮಸ್ಯೆಯನ್ನು ತಂದೊಡ್ಡುತ್ತದೆ. ಈ ಬಗ್ಗೆ ಮಂಗಳೂರು ಕೆಎಂಸಿ ಆಸ್ಪತ್ರೆಯ ಮೆಡಿಕಲ್ ಗ್ಯಾಸ್ಟ್ರೊಎಂಟರಾಲಾಜಿಸ್ಟ್, ಡಾ ಅನುರಾಗ್ ಶೆಟ್ಟಿ ಅವರು ಮತ್ತಷ್ಟು ಮಾಹಿತಿ ಹಂಚಿಕೊಂಡಿದ್ದು ಹೆಚ್ಚಿನ ವಿವರಕ್ಕೆ ಸ್ಟೋರಿ ಓದಿ.

ಸ್ಟ್ರೆಸ್ ಮಲಬದ್ದತೆಗೆ ಹೇಗೆ ಕಾರಣವಾಗುತ್ತೆ ಗೊತ್ತಾ? ಈ ಬಗ್ಗೆ ಡಾ ಅನುರಾಗ್ ಶೆಟ್ಟಿ ಏನ್ ಹೇಳ್ತಾರೆ ನೋಡಿ
Gut Health And Stress
ಪ್ರೀತಿ ಭಟ್​, ಗುಣವಂತೆ
|

Updated on: Feb 09, 2026 | 6:18 PM

Share

ಇತ್ತೀಚಿನ ದಿನಗಳಲ್ಲಿ ಸ್ಟ್ರೆಸ್ ಅಥವಾ ಒತ್ತಡ (Stress) ಮನುಷ್ಯನ ಆರೋಗ್ಯವನ್ನು ಅರಿವಿಲ್ಲದಂತೆ ಹಾಳು ಮಾಡುತ್ತಿದೆ. ಆದರೆ ಒತ್ತಡ ಜೀರ್ಣಕಾರಿ ಸಮಸ್ಯೆಗೆ ಹಾನಿ ಮಾಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ… ಹೌದು, ಕರುಳು ಮತ್ತು ಮೆದುಳಿಗೆ ಪರಸ್ಪರ ಸಂಪರ್ಕವಿರುತ್ತದೆ. ಅದಕ್ಕಾಗಿಯೇ ಇವುಗಳನ್ನು ‘ಗಟ್ ಬ್ರೈನ್ ಎಕ್ಸಿಸ್’ (ಮೆದುಳು ಕರುಳಿನ ಅಕ್ಷ) ಎಂದು ಕರೆಯಲಾಗುತ್ತದೆ. ಇದು ದ್ವಿಮುಖ ಸಂಪರ್ಕ ವ್ಯವಸ್ಥೆಯಾಗಿದ್ದು ನರಗಳು, ಹಾರ್ಮೋನ್ ಗಳು ಮತ್ತು ಕರುಳಿನ ಮೈಕ್ರೊಬೈಟಾ ಈ ಸಂಪರ್ಕವನ್ನು ನಿರ್ವಹಿಸುತ್ತವೆ. ಈ ಗಟ್ ಬ್ರೈನ್ ಎಕ್ಸಿಸ್ ವ್ಯವಸ್ಥೆಯ ಕಾರಣ ಸ್ಟ್ರೆಸ್ ಅಥವಾ ಒತ್ತಡವು ನೇರವಾಗಿ ಮತ್ತು ಗಂಭೀರವಾಗಿ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಮಲಬದ್ದತೆ (Constipation), ಅತಿಸಾರ, ಹೊಟ್ಟೆ ನೋವಿನಂತಹ ಸಮಸ್ಯೆಯನ್ನು ತಂದೊಡ್ಡುತ್ತದೆ. ಈ ಬಗ್ಗೆ ಮಂಗಳೂರು ಕೆಎಂಸಿ ಆಸ್ಪತ್ರೆಯ ಮೆಡಿಕಲ್ ಗ್ಯಾಸ್ಟ್ರೊಎಂಟರಾಲಾಜಿಸ್ಟ್, ಡಾ ಅನುರಾಗ್ ಶೆಟ್ಟಿ ಅವರು ಮತ್ತಷ್ಟು ಮಾಹಿತಿ ಹಂಚಿಕೊಂಡಿದ್ದು ಹೆಚ್ಚಿನ ವಿವರಕ್ಕೆ ಸ್ಟೋರಿ ಓದಿ.

ಒತ್ತಡದ ಸಮಯದಲ್ಲಿ ಕಂಡುಬರುವ ಮಲಬದ್ಧತೆ ಸಮಸ್ಯೆಗೆ ಕಾರಣ, ಸಿಂಪತೆಟಿಕ್ ನರಗಳ ಅತಿಯಾದ ಚಟುವಟಿಕೆಯಿಂದ ಉಂಟಾಗುವ ಕರುಳಿನ ಚಲನವಲನಗಳ ನಿಧಾನಗೊಳ್ಳುವಿಕೆ. ಇದರೊಂದಿಗೆ ಸ್ಟ್ರೆಸ್ ಹಾರ್ಮೋನ್ ಗಳ ಶರೀರದಲ್ಲಿ ಉತ್ಪಾದನೆ, ಕರುಳಿನ ಭೇದ್ಯತೆ ಹೆಚ್ಚಳ, ಹಾಗೂ ಕರುಳಿನ ಸೂಕ್ಷ್ಮ ಜೀವಿಗಳಲ್ಲಿ ಕಂಡುಬರುವ ವ್ಯತ್ಯಾಸಗಳೆಲ್ಲವೂ ಸೇರಿ ಮಲಬದ್ದತೆಯನ್ನು ಹೆಚ್ಚಿಸುತ್ತದೆ. ಅಧ್ಯಯನಗಳು ಹೇಳುವ ಪ್ರಕಾರ, ಒತ್ತಡದ ಸಮಯದಲ್ಲಿ ಆಹಾರ ಸೇವನೆಯ ವಿಧಾನವೂ ಬದಲಾಗುತ್ತದೆ. ಹೆಚ್ಚು ಸಿಹಿ ಪದಾರ್ಥಗಳನ್ನು ಸೇವಿಸುವುದು, ಅಧಿಕ ಕೆಫೇನ್ ಸೇವನೆ, ಹೆಚ್ಚು ಸಂಸ್ಕರಿಸಿದ ಆಹಾರ ಪದಾರ್ಥ ಸೇವನೆ, ಫೈಬರ್ ಅಧಿಕವಾಗಿರುವ ಆಹಾರ ಸೇವಿಸದೇ ಇರುವುದು ಇವೆಲ್ಲವೂ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವಂತಹದ್ದಾಗಿರುತ್ತದೆ. ಇದೊಂದು ಚಕ್ರವ್ಯೂಹವಾಗಿದ್ದು ಒತ್ತಡವು ಮಲಬದ್ದತೆ ಹಾಗೂ ಮಲಬದ್ದತೆಯು ಪ್ರತಿಯಾಗಿ ಒತ್ತಡವನ್ನು ವರ್ದಿಸುತ್ತದೆ.

ಇದನ್ನೂ ಓದಿ: ಯಾವ ಕಾರಣಕ್ಕೂ ಶೌಚಾಲಯದಲ್ಲಿ ಮೊಬೈಲ್ ಬಳಕೆ ಮಾಡಬೇಡಿ, ಎಚ್ಚರಿಕೆ ನೀಡಿದ ಡಾ. ಭರತ್ ಕುಮಾರ್

ಮಲಬದ್ದತೆಗೆ ಒತ್ತಡ ಮಾತ್ರ ಕಾರಣವೇ?

ಸಾಮಾನ್ಯವಾಗಿ ಮಲಬದ್ದತೆ ಸಮಸ್ಯೆಗೆ ಒತ್ತಡ ಮಾತ್ರ ಕಾರಣವಲ್ಲ. ಆಹಾರ ಪದ್ದತಿಯಲ್ಲಿ ನಾರಿನಾಂಶದ ಕೊರತೆ, ಕಡಿಮೆ ನೀರು ಕುಡಿಯುವ ಅಭ್ಯಾಸ, ವ್ಯಾಯಾಮದ ಕೊರತೆ, ನಿತ್ಯ ಮಲವಿಸರ್ಜನೆ ಮಾಡುವುದನ್ನು ನಿರ್ಲಕ್ಷಿಸುವುದು ಕೂಡ ಮಲಬದ್ದತೆ ಸಮಸ್ಯೆಗೆ ಕಾರಣವಾಗಬಹುದು.

ಪರಿಹಾರವೇನು ?

ಒತ್ತಡ ಕಡಿಮೆ ಮಾಡಿಕೊಳ್ಳುವುದು ಬಹಳ ಮುಖ್ಯ. ನಾರಿನಾಂಶ ಅಧಿಕವಾಗಿರುವ ಹಣ್ಣು, ತರಕಾರಿಗಳ ಸೇವನೆ, ಮೊಳಕೆಕಾಳುಗಳ ಸೇವನೆ, ಅಗತ್ಯವಾಗಿರುವಷ್ಟು ನೀರು ಕುಡಿಯುವುದು. ಜೊತೆಗೆ ನಿತ್ಯ ವ್ಯಾಯಾಮ, ದೈಹಿಕ ಚಟುವಟಿಕೆ ಅಗತ್ಯ. ಇದರ ಜೊತೆಗೆ ಮಲವಿಸರ್ಜನೆಯ ಸೂಚನೆಯನ್ನು ನಿರ್ಲಕ್ಷಿಸಬಾರದು. ಇದು ದೇಹ ಶುದ್ಧವಾಗಿರಲು ಅಗತ್ಯ ಎಂಬುದು ನೆನಪಿನಲ್ಲಿಡಿ. ಮಲಬದ್ದತೆ ಸಮಸ್ಯೆ ಸರಳ ವಿಧಾನದಿಂದ ಪರಿಹಾರವಾಗದಿದ್ದಲ್ಲಿ ಅಥವಾ ಸಮಸ್ಯೆ ತುಂಬಾ ಸಮಯದವರೆಗೆ ಮುಂದುವರೆದರೆ, ತೂಕ ಕಡಿಮೆಯಾದರೆ, ಹಿಮೊಗ್ಲೊಬಿನ್ ಮಟ್ಟದಲ್ಲಿ ಇಳಿತ ಕಂಡುಬಂದರೆ, ಮಲದಲ್ಲಿ ರಕ್ತ ಕಾಣಿಸಿಕೊಂಡರೆ ಅಥವಾ ಕುಟುಂಬದಲ್ಲಿ ಕೊಲನ್ ಕ್ಯಾನ್ಸರ್ ಇತಿಹಾಸವಿದ್ದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​