AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ವಯಸ್ಸಿಗೆ ತಾಯಿಯಾಗುವವರೇ ಎಚ್ಚರ, ಬಾಣಂತಿ ಸನ್ನಿ ನಿಮ್ಮನ್ನು ಕಾಡಬಹುದು, ಡಾ. ಜಯಶ್ರೀ ನೀಡುವ ಸಲಹೆಗಳೇನು?

ಬಾಣಂತಿ ಸನ್ನಿ ಬಗ್ಗೆ ಹಲವರಿಗೆ ತಿಳಿದಿರಬಹುದು ಆದರೆ ಇದನ್ನು ಸಾಮಾನ್ಯವಾಗಿ ನಿರ್ಲಕ್ಷಿಸುವವರೇ ಹೆಚ್ಚು. ಜೊತೆಗೆ ಇದರ ಬಗ್ಗೆ ಸರಿಯಾದ ಮಾಹಿತಿ ಇಲ್ಲದಿರುವುದು ಕೂಡ ಈ ರೀತಿ ಸಮಸ್ಯೆಯ ಹೆಚ್ಚಳಕ್ಕೆ ಕಾರಣವಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ, ಈ ಬಗ್ಗೆ ಹೆಚ್ಚಿನ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಿಸಿದ್ದು ಈ ವಿಷಯದ ಕುರಿತು ಮಣಿಪಾಲ್ ಆಸ್ಪತ್ರೆಯ ಕನ್ಸಲ್ಟೆಂಟ್ ಒಬ್ಸ್ಟೆಟ್ರಿಕ್ಸ್ ಮತ್ತು ಗೈನಾಕಾಲಜಿ, ಡಾ. ಜಯಶ್ರೀ ವೀರಪ್ಪ ಕಣವಿ ಅವರು ಮಾತನಾಡಿದ್ದಾರೆ.

ಪ್ರೀತಿ ಭಟ್​, ಗುಣವಂತೆ
|

Updated on: May 26, 2025 | 3:30 PM

Share

ಡೆಲಿವರಿ ಆದ ನಂತರದಲ್ಲಿ ಕಂಡು ಬರುವ ಮಾನಸಿಕ ಅಸ್ವಸ್ಥತೆ (Postpartum Mental Health), ಖಿನ್ನತೆಯನ್ನು ಸಾಮಾನ್ಯ ಭಾಷೆಯಲ್ಲಿ ಬಾಣಂತಿ ಸನ್ನಿ (Postpartum Depression) ಎಂದು ಕರೆಯಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಈ ರೀತಿಯ ಸಮಸ್ಯೆ ಹೆಚ್ಚಾಗುತ್ತಿದ್ದು, ಇದರ ಬಗ್ಗೆ ಎಲ್ಲರಿಗೂ ಸರಿಯಾದ ಮಾಹಿತಿ ಇರುವುದು ಬಹಳ ಅವಶ್ಯಕವಾಗಿದೆ. ಸಾಮಾನ್ಯವಾಗಿ ಡೆಲಿವರಿ ಆದ ಬಳಿಕ ಮಂಕಾಗಿರುವುದು, ಆಸಕ್ತಿ ಇಲ್ಲದಿರುವುದು, ಸರಿಯಾಗಿ ನಿದ್ರೆ ಮಾಡಲು, ಊಟ ಮಾಡಲು ಆಗದಿರುವುದು, ಜೊತೆಗೆ ಡೆಲಿವರಿ ಸಮಯದಲ್ಲಿ ಆದಂತಹ ನೋವು ಈ ರೀತಿ ಸಾಕಷ್ಟು ರೀತಿಯಲ್ಲಿ ತೊಂದರೆ ಅನುಭವಿಸಿರುವುದರಿಂದ ಇಂತಹ ಸಮಯದಲ್ಲಿ ಕುಂಟುಂಬದವರ ಬೆಂಬಲ ಆಕೆಗೆ ಅಗತ್ಯವಾಗಿ ಬೇಕಾಗಿರುತ್ತದೆ. ಆಗ ಅವಳಿಗೆ ಅವಶ್ಯಕತೆ ಇರುವಂತಹದ್ದು ಸಿಗದಿದ್ದಾಗ ಮಾನಸಿಕವಾಗಿ ಆಕೆ ಕುಗ್ಗುತ್ತಾಳೆ. ಇದು ಖಿನ್ನತೆಗೆ ಕಾರಣವಾಗುತ್ತದೆ. ಹಾಗಾದರೆ ಯಾರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ? ಲಕ್ಷಣಗಳೇನು? ಸನ್ನಿ ಬರದಂತೆ ತಡೆಯಲು ಏನು ಮಾಡಬೇಕು ಎಂಬುದರ ಬಗ್ಗೆ ಬೆಂಗಳೂರು ಹಳೆ ವಿಮಾನ ನಿಲ್ದಾಣ ರಸ್ತೆ, ಮಣಿಪಾಲ್ ಆಸ್ಪತ್ರೆಯ ಕನ್ಸಲ್ಟೆಂಟ್ ಒಬ್ಸ್ಟೆಟ್ರಿಕ್ಸ್ ಮತ್ತು ಗೈನಾಕಾಲಜಿ, ಡಾ. ಜಯಶ್ರೀ ವೀರಪ್ಪ ಕಣವಿ ಅವರು ಟಿವಿ9 ಕನ್ನಡ ಜೊತೆ ಮಾತನಾಡಿದ್ದು ಈ ಕುರಿತ ಮತ್ತಷ್ಟು ಮಾಹಿತಿ ಇಲ್ಲಿದೆ.

ಡಾ. ಜಯಶ್ರೀ ಅವರು ಹೇಳುವ ಪ್ರಕಾರ, ಇತ್ತೀಚಿಗೆ ಬಾಣಂತಿ ಸನ್ನಿ ಹೆಚ್ಚಾಗಿ ಕಂಡು ಬರುತ್ತಿದ್ದು, ಡೆಲಿವರಿಯಾದ ಹತ್ತು ಮಹಿಳೆಯರಲ್ಲಿ ಒಬ್ಬರಲ್ಲಿ ಈ ರೀತಿಯ ಸಮಸ್ಯೆ ಕಾಣಸಿಗುತ್ತಿದೆ. ಆದರೆ ಈ ರೀತಿಯಾಗಲು ಮುಖ್ಯ ಕಾರಣ ಹಾರ್ಮೋನ್ ಗಳ ಏರಿಳಿತ. ಈಸ್ಟ್ರೋಜೆನ್, ಪ್ರೋಜೆಸ್ಟಿರೋನ್ ಎನ್ನುವಂತಹ ಹಾರ್ಮೋನ್ ಗರ್ಭಾವಸ್ಥೆಯ ಸಮಯದಲ್ಲಿ ಇರುವುದಕ್ಕಿಂತ ಹತ್ತು ಪಟ್ಟು ಹೆಚ್ಚಾಗುತ್ತದೆ. ಬಳಿಕ ಡೆಲಿವರಿಯಾದ ನಂತರ ತಕ್ಷಣ ಅದು ತನ್ನ ಮೊದಲಿನ ಸ್ಥಿತಿಗೆ ಬಂದು ತಲುಪುತ್ತದೆ. ಈ ರೀತಿ ಹೆಚ್ಚು, ಕಡಿಮೆ ಆಗುವುದರಿಂದ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ಯಾರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ?

ಡಾ. ಜಯಶ್ರೀ ಹಂಚಿಕೊಂಡ ಮಾಹಿತಿಯ ಆಧಾರದ ಮೇಲೆ, “ಎಲ್ಲರಲ್ಲಿಯೂ ಈ ರೀತಿ ಸಮಸ್ಯೆ ಕಂಡು ಬರುವುದಿಲ್ಲ. ಆದರೆ ಡೆಲಿವರಿಗೂ ಮೊದಲೇ ಆಕೆಗೆ ಪಿಎಂಎಸ್ (ಪ್ರೀ ಮೆನ್ಸ್ಟ್ರುವಲ್ ಸಿಂಡ್ರೋಮ್), ಆತಂಕ ಈ ರೀತಿಯ ಸಮಸ್ಯೆಗಳು ಇದ್ದರೆ ಡೆಲಿವರಿ ಆದ ಬಳಿಕ ಮಾನಸಿಕ ಅಸ್ವಸ್ಥತೆ ಕಂಡು ಬರಬಹುದು ಅಥವಾ ಮೊದಲ ಬಾರಿಗೆ ಗರ್ಭಿಣಿಯಾದಾಗ, ಅದು ಕೂಡ ಬಹಳ ಚಿಕ್ಕ ವಯಸ್ಸಿಗೆ ತಾಯಿ ಆಗುತ್ತಿದ್ದರೆ ಅಂತವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಏಕೆಂದರೆ ಈ ರೀತಿಯಾದಾಗ ತಿಳುವಳಿಕೆ ಬಹಳ ಕಡಿಮೆ ಇರುತ್ತದೆ. ಜೊತೆಗೆ ಕುಟುಂಬದಿಂದ ದೂರ ಇದ್ದು, ಹಿರಿಯರೊಂದಿಗೆ ಒಡನಾಟ ಜಾಸ್ತಿ ಇರದಿದ್ದಾಗಲೂ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಏಕೆಂದರೆ ಈ ಸಮಯದಲ್ಲಿ ದೊಡ್ಡವರ ಸಲಹೆ, ಕಾಳಜಿ ಸಿಗದ ಕಾರಣ ಮನಸ್ಸಿನಲ್ಲಿ ನೊರೆಂಟು ಆಲೋಚನೆ ಹರಿದಾಡುತ್ತದೆ ಜೊತೆಗೆ ಸರಿಯಾದ ಮಾಹಿತಿಯ ಕೊರತೆ ಇಲ್ಲದಿರುವುದು ಕೂಡ ಖಿನ್ನತೆಗೆ ಕಾರಣವಾಗುತ್ತದೆ. ಇದೆಲ್ಲದರ ಜೊತೆಗೆ ಡೆಲಿವರಿ ಆದ ನಂತರ ಅವಳ ಜೊತೆಗೆ ಮಗುವು ಬರುವುದರಿಂದ ಅದರ ಬಗ್ಗೆಯೂ ಕಾಳಜಿ ವಹಿಸಬೇಕಾಗುತ್ತದೆ. ಈ ರೀತಿಯ ಸಮಯದಲ್ಲಿ ಆಕೆಗೆ ಅದರ ಬಗ್ಗೆ ತಿಳವಳಿಕೆ ಇಲ್ಲದಿದ್ದಾಗ ಅವಳಿಗೆ ಎಲ್ಲವೂ ಹೊಸತಾದಾಗ ಅದೆಲ್ಲವನ್ನೂ ನಿಭಾಯಿಸುವ ಶಕ್ತಿ ಆಕೆಗೆ ಇಲ್ಲದಿದ್ದಾಗ ಮಾನಸಿಕವಾಗಿ ಆಕೆ ಖಿನ್ನತೆಗೆ ಜಾರುತ್ತಾಳೆ. ಹಾಗಾಗಿ ಇಂತಹ ಸಮಯದಲ್ಲಿ ಆಕೆಯ ಮನೆಯವರು ಅವಳಿಗೆ ಬೆಂಬಲ ನೀಡಿ ಕಾಳಜಿ ತೋರಿಸಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
Image
ಶೌಚಾಲಯದಲ್ಲಿ ಹೆಚ್ಚು ಹೊತ್ತು ಕುಳಿತುಕೊಳ್ಳಬೇಡಿ: ಡಾ. ಭರತ್
Image
ಮಹಿಳೆಯರೇ ಈ ರೀತಿ ಲಕ್ಷಣ ಕಂಡು ಬಂದಾಗ ನಿರ್ಲಕ್ಷಿಸಬೇಡಿ
Image
ಸಿಸೇರಿಯನ್‌, ನಾರ್ಮಲ್ ಡೆಲಿವರಿಯಾದ ಬಾಣಂತಿಯರಿಗೆ ಡಾ. ಶಿಲ್ಪಾ ಹೇಳೋದೇನು?

ಡಾ. ಜಯಶ್ರೀ ವೀರಪ್ಪ ಕಣವಿ ಟಿವಿ9ಗೆ ನೀಡಿದ ಮಾಹಿತಿ ಇಲ್ಲಿದೆ ನೋಡಿ:

ಸನ್ನಿಯನ್ನು ಕಂಡು ಹಿಡಿಯುವುದು ಹೇಗೆ?

ಡಾ. ಜಯಶ್ರೀ ಅವರ ಪ್ರಕಾರ, ಅವಳು ಮಾತನಾಡುವುದನ್ನು ನಿಲ್ಲಿಸಿಬಿಡಬಹುದು. ಅಂತರ್ಮುಖಿಯಾಗಬಹುದು. ಯಾವಾಗಲೂ ಸಪ್ಪೆ ಮುಖ ಮಾಡಿಕೊಂಡು ಕುಳಿತುಕೊಳ್ಳಬಹುದು ಅಥವಾ ಕಾರಣವಿಲ್ಲದೆ ಅಳಬಹುದು. ಅತಿರೇಕವಾಗಿ ಕೋಪ ಮಾಡಿಕೊಳ್ಳಬಹುದು. ಮಗುವಿನ ಮುಖ ನೋಡದೆಯೇ ಅವಳಿಂದಲೇ ಇಷ್ಟೆಲ್ಲಾ ತೊಂದರೆಯಾಗುತ್ತಿದೆ ಎಂದು ತಿಳಿದು ಮಗುವಿನ ಮೇಲೆ ಕೋಪ ಮಾಡಿಕೊಳ್ಳುವುದು, ಹಾಲು ಉಣಿಸುವುದಕ್ಕೆ ನಿರಾಕರಿಸುವುದು. ಇನ್ನು ತೀವ್ರವಾದ ಸಂದರ್ಭಗಳಲ್ಲಿ ಮಗುವಿಗೆ ತೊಂದರೆ ಮಾಡುವುದು, ಕೊಲ್ಲಲು ಹೋಗಬಹುದು ಇನ್ನು ಕೆಲವರು ತಾವೇ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಪ್ರಯತ್ನಿಸಬಹುದು” ಎಂದಿದ್ದಾರೆ.

ಇದನ್ನೂ ಓದಿ:  ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ? ಮಣಿಪಾಲದ ವೈದ್ಯರು ಹೇಳೋದೇನು?

ಇದನ್ನು ತಡೆಯುವುದು ಹೇಗೆ?

ಡಾ. ಜಯಶ್ರೀ ವೀರಪ್ಪ ಕಣವಿ ಅವರು ತಿಳಿಸಿರುವ ಮಾಹಿತಿ ಪ್ರಕಾರ, “ಗರ್ಭಾವಸ್ಥೆಯಲ್ಲಿರುವಾಗಲೇ ವೈದ್ಯರು ಆಕೆಯನ್ನು ನೋಡಿ, ಅವಳು ಮಾನಸಿಕವಾಗಿ ಹೇಗಿದ್ದಾಳೆ ಎಂಬುದನ್ನು ಪರೀಕ್ಷಿಸಬೇಕಾಗುತ್ತದೆ. ಅವಳಿಗೆ ಮುಂದೆ ಈ ರೀತಿ ಸಮಸ್ಯೆ ಬರುತ್ತದೆ ಎನಿಸಿದರೆ, ಆಕೆಗೆ ಒಳ್ಳೆಯ ಕೋನ್ಸಿಲಿಂಗ್ ಕೊಡಿಸಬೇಕು. ಆಕೆಗೆ ಯಾವುದೇ ರೀತಿಯ ಪ್ರಶ್ನೆ ಅಥವಾ ಗೊಂದಲಗಳಿದ್ದಲ್ಲಿ ಕೇಳಿ, ಆಕೆಗೆ ಸಮಾಧಾನ ಮಾಡಬೇಕಾಗುತ್ತದೆ. ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಏನೇ ಆಗಲಿ ನಿಮ್ಮ ಕುಟುಂಬ ಮತ್ತು ವೈದ್ಯರು ನಿನ್ನ ಜೊತೆಗೆ ಇರುತ್ತಾರೆ ಎಂಬುದನ್ನು ಮನವರಿಕೆ ಮಾಡಬೇಕಾಗುತ್ತದೆ. ಯಾವುದೇ ವಿಷಯವನ್ನು ಮುಚ್ಚಿಟ್ಟುಕೊಳ್ಳದೆಯೇ ಅದನ್ನು ಹಂಚಿಕೊಂಡು ಆ ಗೊಂದಲ ಬಗೆಹರಿಸಿಕೊಳ್ಳಬೇಕು ಎಂಬುದನ್ನು ಆಕೆಗೆ ಮನದಟ್ಟು ಮಾಡಬೇಕಾಗುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?