AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆನ್ನು ನೋವು ಬರುವುದಕ್ಕೆ ಕಾರಣವೇನು? ಯೋಗದ ಮೂಲಕ ಅದನ್ನು ಪರಿಹರಿಸಿಕೊಳ್ಳುವುದು ಹೇಗೆ?

ಜೀವನಶೈಲಿಯಿಂದ ಬರುವಂತಹ ಮಾನಸಿಕ ಒತ್ತಡ ಮತ್ತು ಬೆನ್ನು ನೋವನ್ನು ಯೋಗ ಮಾಡುವ ಮೂಲಕ ಕಡಿಮೆ ಮಾಡಿಕೊಳ್ಳಬಹುದು. ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಈ ರೀತಿ ಸಮಸ್ಯೆಗಳು ಕಂಡುಬರುತ್ತಿದ್ದು ಇವುಗಳನ್ನು ಕಡಿಮೆ ಮಾಡಿಕೊಳ್ಳಲು ಔಷಧಿಗಳು ಬೇಕಾಗಿಲ್ಲ ಬದಲಾಗಿ ತಪ್ಪದೆ ಯೋಗ ಮಾಡುವುದರಿಂದ ಈ ರೀತಿಯ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಈ ಕುರಿತು ಎಸ್.ಡಿ. ಎಂ ಕ್ಷೇಮವನದ ಮುಖ್ಯ ಸ್ವಾಸ್ಥ್ಯ ಅಧಿಕಾರಿ ಡಾ. ನರೇಂದ್ರ ಕೆ ಶೆಟ್ಟಿ ಅವರು ಟಿವಿ9 ಕನ್ನಡ ಜೊತೆ ಕೆಲವು ಮಾಹಿತಿ ಹಂಚಿಕೊಂಡಿದ್ದು, ಮಾನಸಿಕ ಒತ್ತಡ ಮತ್ತು ಜೀವನಶೈಲಿಯಿಂದ ಬರುವಂತಹ ಬೆನ್ನು ನೋವನ್ನು ಯೋಗದ ಮೂಲಕ ಹೇಗೆ ಕಡಿಮೆ ಮಾಡಬಹುದು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ.

ಪ್ರೀತಿ ಭಟ್​, ಗುಣವಂತೆ
| Updated By: Digi Tech Desk|

Updated on:Jun 21, 2025 | 8:14 AM

Share

ಇತ್ತೀಚಿನ ದಿನಗಳಲ್ಲಿ 95% ಕಾಯಿಲೆಗಳು ಕೇವಲ ಮಾನಸಿಕ ಒತ್ತಡದಿಂದ ಬರುತ್ತಿದೆ. ಏಕೆಂದರೆ ನಮ್ಮ ಜೀವನಶೈಲಿಯೇ ಹಾಗಿದೆ. ನಮ್ಮ ವಯಸ್ಸಿನ ಮುಕ್ಕಾಲು ಭಾಗ ನಾವು ಕುರ್ಚಿಯಲ್ಲಿಯೇ ಕುಳಿತು ಸವೆಸಿದ್ದೇವೆ ಜೊತೆಗೆ ಯಾವುದೇ ರೀತಿಯ ದೈಹಿಕ ಚಟುವಟಿಕೆಗಳನ್ನು ಮಾಡುವುದೇ ಇಲ್ಲ. ಅದಕ್ಕೆ ಸಮಯವೂ ಇಲ್ಲದಂತಾಗಿದೆ. ಫ್ರೀ ಸಿಕ್ಕಾಗೆಲ್ಲಾ ನಾವು ಮೊಬೈಲ್, ಟಿವಿ, ಲ್ಯಾಪ್ಟಾಪ್ ಹೀಗೆ ಇವುಗಳ ಹೊರತು ನಮಗೆ ಬೇರೆ ಜೀವನವೇ ಇಲ್ಲ ಎಂಬ ಸ್ಥಿತಿಗೆ ಬಂದು ತಲುಪಿದ್ದೇವೆ. ಮೊದಲೆಲ್ಲಾ ಬೆನ್ನು ನೋವಿನ ಸಮಸ್ಯೆ 50 ವರ್ಷ ಮೇಲ್ಪಟ್ಟವರಲ್ಲಿ ಕಂಡು ಬರುತ್ತಿತ್ತು. ಆದರೆ ಈಗ ಯುವ ಜನತೆಯಲ್ಲಿಯೇ ಈ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದೆ. ಇದಕ್ಕೆ ಕಾರಣ ನಮ್ಮ ಜೀವನಶೈಲಿ. ಹಾಗಾದರೆ ಮಾನಸಿಕ ಒತ್ತಡ, ಬೆನ್ನು ನೋವನ್ನು ಯೋಗದ ಮೂಲಕ ಯಾವ ರೀತಿ ಕಡಿಮೆ ಮಾಡಿಕೊಳ್ಳಬಹುದು? ಈ ಕುರಿತು ಎಸ್.ಡಿ.ಎಂ ಕ್ಷೇಮವನದ (Kshemavana) ಮುಖ್ಯ ಸ್ವಾಸ್ಥ್ಯ ಅಧಿಕಾರಿ ಡಾ. ನರೇಂದ್ರ ಕೆ ಶೆಟ್ಟಿ (Dr Narendra K Shetty) ಅವರು ಟಿವಿ9 ಕನ್ನಡ ಜೊತೆ ಮಾಹಿತಿ ಹಂಚಿಕೊಂಡಿದ್ದು, ಮಾನಸಿಕ ಒತ್ತಡ ಮತ್ತು ಜೀವನಶೈಲಿಯಿಂದ ಬರುವಂತಹ ಬೆನ್ನು ನೋವನ್ನು ಯೋಗದ ಮೂಲಕ ಹೇಗೆ ಕಡಿಮೆ ಮಾಡಬಹುದು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ.

ಬೆನ್ನು ನೋವು ಬರುವುದಕ್ಕೆ ಕಾರಣವೇನು?

ಡಾ. ನರೇಂದ್ರ ಕೆ ಶೆಟ್ಟಿ ಅವರು ಹೇಳಿರುವ ಪ್ರಕಾರ, “ಜೀವನಶೈಲಿಯಿಂದ ಬರುವಂತಹ ಮಾನಸಿಕ ಒತ್ತಡ ಮತ್ತು ಬೆನ್ನು ನೋವನ್ನು ಯೋಗ ಮಾಡುವ ಮೂಲಕ ಕಡಿಮೆ ಮಾಡಿಕೊಳ್ಳಬಹುದು. ಅದಕ್ಕೂ ಮೊದಲು ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ಕೆಲವು ಅಂಶಗಳು ಬಹಳ ಮುಖ್ಯವಾಗುತ್ತದೆ. ಅಂದರೆ ಮೊದಲು ಕುಳಿತುಕೊಳ್ಳುವ ಭಂಗಿ ಅಂದರೆ ನೀವು ಯಾವ ರೀತಿ ಕುಳಿತುಕೊಳ್ಳಬೇಕು? ಎಷ್ಟು ಎತ್ತರದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು? ಅಲ್ಲದೆ ನಮ್ಮ ಕಣ್ಣು ಮತ್ತು ಕಂಪ್ಯೂಟರ್ ಇರುವ ಅಂತರ ಎಲ್ಲವೂ ಕೂಡ ಬಹಳ ಮುಖ್ಯವಾಗುತ್ತದೆ. ಜೊತೆಗೆ ಬೊಜ್ಜು. ಇದು ಕೂಡ ನಮ್ಮ ಬೆನ್ನು ನೋವಿಗೆ ಮುಖ್ಯ ಕಾರಣವಾಗಿರುತ್ತದೆ. ಹಾಗಾಗಿ ಇವುಗಳ ಬಗ್ಗೆ ನಿಗಾ ವಹಿಸಸಬೇಕು” ಎಂದು ಹೇಳಿದ್ದಾರೆ.

ಡಾ. ನರೇಂದ್ರ ಶೆಟ್ಟಿ ಟಿವಿ9ಗೆ ನೀಡಿದ ಮಾಹಿತಿ ಇಲ್ಲಿದೆ ನೋಡಿ:

ಇದನ್ನೂ ಓದಿ
Image
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
Image
ಊಟದ ನಂತರ ಯೋಗ ಮಾಡಬಹುದೇ?
Image
ಜೂನ್‌ 21 ರಂದೇ ಯೋಗ ದಿನಾಚರಣೆ ಆಚರಿಸುವುದರ ಹಿಂದಿದೆ ಅಚ್ಚರಿಯ ಕಾರಣ
Image
ಮೊದಲ ಬಾರಿಗೆ ಯೋಗ ಮಾಡುವವರು ಈ ವಿಷಯಗಳನ್ನು ಮರೆಯಬೇಡಿ

ಇದನ್ನೂ ಓದಿ: ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು ಎನ್ನುತ್ತಾರೆ ಡಾ. ವಂದನಾ

ಬೆನ್ನು ನೋವು ಕಡಿಮೆ ಮಾಡಲು ಈ ಆಸನಗಳು ಬೆಸ್ಟ್

ಡಾ. ನರೇಂದ್ರ ಕೆ. ಶೆಟ್ಟಿ ಅವರು ನೀಡಿರುವ ಮಾಹಿತಿ ಪ್ರಕಾರ, ನಾವು ಜಿಮ್, ವ್ಯಾಯಾಮ ಅಥವಾ ವಾಕಿಂಗ್ ಮಾಡುವುದರಿಂದ ನಮ್ಮ ಸ್ಕೆಲಿಟಲ್ ಮಸಲ್ ಇಂಪ್ರೂವ್ ಆಗುತ್ತೆ. ಆದ್ರೆ ಯೋಗ ಮಾಡುವುದರಿಂದ ಕೋರ್ ಸ್ನಾಯುಗಳು ಇಂಪ್ರೂವ್ ಆಗುತ್ತದೆ. ಬೆನ್ನು ನೋವು ಕಡಿಮೆ ಮಾಡಲು ಸ್ಕೆಲಿಟಲ್ ಮಸಲ್ ಇಂಪ್ರೂವ್ ಆದರೆ ಸಾಲುವುದಿಲ್ಲ ಕೋರ್ ಸ್ನಾಯುಗಳು ಸುಧಾರಣೆಯಾಗಬೇಕಾಗುತ್ತದೆ. ಇನ್ನು ನಮ್ಮ ಮಾನಸಿಕ ಒತ್ತಡ ಮತ್ತು ಬೆನ್ನು ನೋವನ್ನು ಕಡಿಮೆ ಮಾಡಲು ಭುಜಂಗಾಸನ, ಶಶಾಂಕಾಸನ, ಏಕಪಾದ ಉತ್ಕಟಾಸನ, ಉಷ್ಟ್ರಾಸನ ಹೀಗೆ ಹಲವಾರು ಆಸನಗಳು ನಮ್ಮ ಬೆನ್ನು ಮೂಳೆಗಳನ್ನು ಗಟ್ಟಿಗೊಳಿಸಲು ಸಹಾಯ ಮಾಡುತ್ತದೆ. ಇವುಗಳನ್ನು ತಪ್ಪದೆ ಮಾಡುವುದರಿಂದ ಬೆನ್ನು ನೋವು ಬರುವುದಿಲ್ಲ. ಒಂದು ಕಡೆ ಆಸನ ಇನ್ನೊಂದು ಕಡೆ ರಿಲಾಕ್ಸೇಷನ್ ಇವೆರಡನ್ನು ಜೊತೆಯಾಗಿ ಮಾಡುವುದರಿಂದ ಮಾನಸಿಕ ಒತ್ತಡ ಮತ್ತು ಜೀವನಶೈಲಿಯಿಂದ ಬರುವಂತಹ ಬೆನ್ನು ನೋವು ಎರಡನ್ನೂ ಕಡಿಮೆ ಮಾಡಬಹುದು” ಎಂದಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Fri, 20 June 25

ಸಿಎಂ ಸಿದ್ದರಾಮಯ್ಯ ಪ್ರತಾಪ್​ನಂತೆ ಕೆಲಸವಿಲ್ಲದವರಲ್ಲ: ಪ್ರದೀಪ್ ಈಶ್ವರ್
ಸಿಎಂ ಸಿದ್ದರಾಮಯ್ಯ ಪ್ರತಾಪ್​ನಂತೆ ಕೆಲಸವಿಲ್ಲದವರಲ್ಲ: ಪ್ರದೀಪ್ ಈಶ್ವರ್
ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ, ಇತ್ತ ಧಿಕಾರಿ ರಮ್ಮಿ ಆಟದಲ್ಲಿ ಮಗ್ನ
ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ, ಇತ್ತ ಧಿಕಾರಿ ರಮ್ಮಿ ಆಟದಲ್ಲಿ ಮಗ್ನ
ಮಳೆಗಾಲದಲ್ಲಿ ಮಕ್ಕಳ ಪ್ರತಿನಿತ್ಯದ ಗೋಳಿದು, ಶಾಸಕರಿಗಿಲ್ಲ ಕಾಳಜಿ
ಮಳೆಗಾಲದಲ್ಲಿ ಮಕ್ಕಳ ಪ್ರತಿನಿತ್ಯದ ಗೋಳಿದು, ಶಾಸಕರಿಗಿಲ್ಲ ಕಾಳಜಿ
ಬಿಹಾರದಲ್ಲಿ ಸಿಎಂ ನಿತೀಶ್ ಕುಮಾರ್ ಜತೆ ಪ್ರಧಾನಿ ಮೋದಿ ರೋಡ್ ಶೋ
ಬಿಹಾರದಲ್ಲಿ ಸಿಎಂ ನಿತೀಶ್ ಕುಮಾರ್ ಜತೆ ಪ್ರಧಾನಿ ಮೋದಿ ರೋಡ್ ಶೋ
ಎಫ್ಐಅರ್​ನಲ್ಲಿ ಹೆಸರಿರುವ ಕಾರಣ ಶಾಸಕನ ವಿಚಾರಣೆ ನಡೆಯಲಿದೆ: ಪರಮೇಶ್ವರ್
ಎಫ್ಐಅರ್​ನಲ್ಲಿ ಹೆಸರಿರುವ ಕಾರಣ ಶಾಸಕನ ವಿಚಾರಣೆ ನಡೆಯಲಿದೆ: ಪರಮೇಶ್ವರ್
ಬೈಕ್​, ಕಾರು ಆಯ್ತು ಈಗ ಥೈಲ್ಯಾಂಡ್​ನಲ್ಲಿ ಯಾಚ್ ಡ್ರೈವ್ ಮಾಡಿದ ದರ್ಶನ್
ಬೈಕ್​, ಕಾರು ಆಯ್ತು ಈಗ ಥೈಲ್ಯಾಂಡ್​ನಲ್ಲಿ ಯಾಚ್ ಡ್ರೈವ್ ಮಾಡಿದ ದರ್ಶನ್
ಕೇವಲ ವಂಚನೆಯಿಂದ ಐಷಾರಾಮಿ ಬದುಕು ನಡೆಸಿದವನನ್ನು ಬಂಧಿಸಿದ ಪೊಲೀಸ್
ಕೇವಲ ವಂಚನೆಯಿಂದ ಐಷಾರಾಮಿ ಬದುಕು ನಡೆಸಿದವನನ್ನು ಬಂಧಿಸಿದ ಪೊಲೀಸ್
ಮಂಗಳೂರು ನಟೋರಿಯಸ್‌ ವಂಚಕನ ರಹಸ್ಯ ಕೋಣೆಲಿ ವಿದೇಶಿ ಯುವತಿಯರು, ಮದ್ಯ ರಾಶಿ!
ಮಂಗಳೂರು ನಟೋರಿಯಸ್‌ ವಂಚಕನ ರಹಸ್ಯ ಕೋಣೆಲಿ ವಿದೇಶಿ ಯುವತಿಯರು, ಮದ್ಯ ರಾಶಿ!
ಸಿದ್ದರಾಮಯ್ಯ ಕಾರ್ಯಕ್ರಮದ ತಯಾರಿ ನೋಡಿ ಬರುವಷ್ಟರಲ್ಲಿ ಕಳ್ಳರ ಕೈ ಚಳಕ
ಸಿದ್ದರಾಮಯ್ಯ ಕಾರ್ಯಕ್ರಮದ ತಯಾರಿ ನೋಡಿ ಬರುವಷ್ಟರಲ್ಲಿ ಕಳ್ಳರ ಕೈ ಚಳಕ
ಬೆಳಗಿನ ಜಾವದಿಂದಲೇ ದೇವಿದರ್ಶನಕ್ಕಾಗಿ ಸಾಲುಗಟ್ಟಿರುವ ಭಕ್ತರು
ಬೆಳಗಿನ ಜಾವದಿಂದಲೇ ದೇವಿದರ್ಶನಕ್ಕಾಗಿ ಸಾಲುಗಟ್ಟಿರುವ ಭಕ್ತರು