AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುರ್ವೇದ ಆಧುನಿಕ ರೋಗಗಳಿಗೆ ಪರಿಣಾಮಕಾರಿಯಾದ ಪರಿಹಾರ: ಡಾ. ಸಂಹಿತಾ

ಪ್ರಸ್ತುತ ಕಾಲಘಟ್ಟದಲ್ಲಿ ದಿನೇ ದಿನೇ ಜೀವನಶೈಲಿ ಸಂಬಂಧಿತ ರೋಗಗಳು ಹಾಗೂ ಮಾನಸಿಕ ಒತ್ತಡ ಹೆಚ್ಚುತ್ತಿರುವುದನ್ನು ನಾವು ಕಾಣಬಹುದಾಗಿದ್ದು, ಈ ಎಲ್ಲಾ ಆರೋಗ್ಯದ ಅಸಮತೋಲನಗಳಿಗೆ ಆಯುರ್ವೇದದಲ್ಲಿ ಸಹಜ ಹಾಗೂ ದೀರ್ಘಕಾಲೀನ ಪರಿಹಾರ ಮಾರ್ಗಗಳಿವೆ. ಆದರೆ ಇದರ ಪೂರ್ಣ ಪ್ರಯೋಜನವನ್ನು ಪಡೆಯಲು ಜನಸಾಮಾನ್ಯರು ಆಯುರ್ವೇದ ಶಿಕ್ಷಣದ ವೈಜ್ಞಾನಿಕ ಹಾಗೂ ಸಾಮಾಜಿಕ ಪ್ರಾಮುಖ್ಯತೆಯ ಬಗ್ಗೆ ಹೆಚ್ಚು ಅರಿವು ಹೊಂದಿರುವುದು ಅವಶ್ಯಕವಾಗಿದೆ. ಈ ವಿಷಯದ ಕುರಿತು ಡಾ. ಸಂಹಿತಾ ಉಲ್ಲೋಡು ಅವರು ಟಿವಿ9 ಕನ್ನಡ ಜೊತೆ ಕೆಲವು ಮಾಹಿತಿ ಹಂಚಿಕೊಂಡಿದ್ದು, ಮತ್ತಷ್ಟು ಮಾಹಿತಿ ಪಡೆಯಲು ಈ ಸ್ಟೋರಿ ಓದಿ.

ಆಯುರ್ವೇದ ಆಧುನಿಕ ರೋಗಗಳಿಗೆ ಪರಿಣಾಮಕಾರಿಯಾದ ಪರಿಹಾರ: ಡಾ. ಸಂಹಿತಾ
Ayurvedic approaches to managing modern health problems
ಪ್ರೀತಿ ಭಟ್​, ಗುಣವಂತೆ
|

Updated on: Nov 10, 2025 | 6:46 PM

Share

ಆಯುರ್ವೇದ (Ayurveda) ಎಂಬುದು ಭಾರತದ ಪುರಾತನ ಚಿಕಿತ್ಸಾ ಪದ್ಧತಿ ಎಂಬುದು ಬಹುತೇಕರಿಗೆ ತಿಳಿದ ವಿಚಾರ. ಆದರೆ ಇದು ಕೇವಲ ರೋಗ ನಿವಾರಣೆಯ ವಿಧಾನವಾಗಿಲ್ಲ ಬದಲಾಗಿ ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಒತ್ತಿ ಹೇಳುವ ಸಮಗ್ರ ಜೀವನಶೈಲಿಯಾಗಿದೆ. ಅದರಲ್ಲಿಯೂ ಪ್ರಸ್ತುತ ಕಾಲಘಟ್ಟದಲ್ಲಿ ದಿನೇ ದಿನೇ ಜೀವನಶೈಲಿ ಸಂಬಂಧಿತ ರೋಗಗಳು ಹಾಗೂ ಮಾನಸಿಕ ಒತ್ತಡ ಹೆಚ್ಚುತ್ತಿರುವುದನ್ನು ನಾವು ಕಾಣಬಹುದಾಗಿದ್ದು, ಈ ಎಲ್ಲಾ ಆರೋಗ್ಯದ ಅಸಮತೋಲನಗಳಿಗೆ ಆಯುರ್ವೇದದಲ್ಲಿ ಸಹಜ ಹಾಗೂ ದೀರ್ಘಕಾಲೀನ ಪರಿಹಾರ ಮಾರ್ಗಗಳಿವೆ. ಆದರೆ ಇದರ ಪೂರ್ಣ ಪ್ರಯೋಜನವನ್ನು ಪಡೆಯಲು ಜನಸಾಮಾನ್ಯರು ಆಯುರ್ವೇದ ಶಿಕ್ಷಣದ ವೈಜ್ಞಾನಿಕ ಹಾಗೂ ಸಾಮಾಜಿಕ ಪ್ರಾಮುಖ್ಯತೆಯ ಬಗ್ಗೆ ಹೆಚ್ಚು ಅರಿವು ಹೊಂದಿರುವುದು ಅವಶ್ಯಕವಾಗಿದೆ. ಈ ವಿಷಯದ ಕುರಿತು ಬೆಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ (SDM Institute of Ayurveda & Hospital) ಸಂಹಿತಾ ಸಿದ್ಧಾಂತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಂಹಿತಾ ಉಲ್ಲೋಡು ಅವರು ಟಿವಿ9 ಕನ್ನಡ ಜೊತೆ ಕೆಲವು ಮಾಹಿತಿ ಹಂಚಿಕೊಂಡಿದ್ದು, ಮತ್ತಷ್ಟು ಮಾಹಿತಿ ಪಡೆಯಲು ಈ ಸ್ಟೋರಿ ಓದಿ.

ವೈಜ್ಞಾನಿಕ ಶಿಕ್ಷಣದ ಮೂಲಭೂತ ರಚನೆ

ಭಾರತದಲ್ಲಿ ಆಯುರ್ವೇದ ಶಿಕ್ಷಣವು ತನ್ನದೇ ಇತಿಹಾಸವನ್ನು ಹೊಂದಿದೆ ಹಾಗೂ ಆಯುಷ್ ಸಚಿವಾಲಯ ಹಾಗೂ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಆಯೋಗದಂತಹ ಸಂಸ್ಥೆಗಳ ಮಾನ್ಯತೆಯನ್ನು ಪಡೆದಿದೆ. ಆಯುರ್ವೇದ ಶಿಕ್ಷಣವು ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಆಂಡ್ ಸರ್ಜರಿ (BAMS), ಸ್ನಾತಕೋತ್ತರ ಮತ್ತು ಸಂಶೋಧನಾ ಕೋರ್ಸುಗಳು ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಹಾಗೂ ಆಧುನಿಕ ವಿಜ್ಞಾನದ ಸಂಯೋಜಿತ ಅಧ್ಯಯನವನ್ನು ನೀಡುತ್ತದೆ.

ತಪ್ಪು ಕಲ್ಪನೆಯನ್ನು ದೂರ ಮಾಡುತ್ತೆ

ಅನಾಟಮಿ , ಫಿಸಿಯೋಲಾಜಿ, ಪ್ಯಾಥಾಲಜಿ, ಫಾರ್ಮಕಾಲಜಿ ಮತ್ತು ಕ್ಲಿನಿಕಲ್ ತರಬೇತಿಯನ್ನು ಒಳಗೊಂಡ ಆಯುರ್ವೇದ ಶಿಕ್ಷಣ ಕೇವಲ ಪಾರಂಪರಿಕ ಕಲೆಯಷ್ಟೇ ಅಲ್ಲ ಅದು ಸಾಕ್ಷ್ಯಾಧಾರಿತ ಆರೋಗ್ಯ ಶಾಸ್ತ್ರವಾಗಿದೆ. ಇಂದಿನ ದಿನಗಳಲ್ಲಿ ಆಯುರ್ವೇದ ಕ್ಷೇತ್ರ ನಕಲಿ ಹಾಗೂ ಅರ್ಹತೆಯಿಲ್ಲದ ಚಿಕಿತ್ಸಾಗಾರ, ಹೀಗೆ ನಾನಾ ರೀತಿಯ ಸಾಕಷ್ಟು ಸವಾಲನ್ನು ಎದುರಿಸುತ್ತಿದೆ. ಜನರು ಆಯುರ್ವೇದ ಶಿಕ್ಷಣದ ವ್ಯವಸ್ಥೆಯ ಬಗ್ಗೆ ಅರಿವು ಹೊಂದಿರದಿದ್ದರೆ ಅವರು ತಪ್ಪು ಚಿಕಿತ್ಸೆ ಅಥವಾ ಸುರಕ್ಷಿತವಲ್ಲದ ವಿಧಾನಗಳಿಗೆ ಒಳಗಾಗುವ ಸಾಧ್ಯತೆ ಇದೆ. ಆದ್ದರಿಂದ ಆಯುರ್ವೇದದ ಶಿಕ್ಷಣದ ಅರಿವು ಜನರಲ್ಲಿ ನಂಬಿಕೆ ಹಾಗೂ ನೈತಿಕತೆಯನ್ನು ಬಲಪಡಿಸುತ್ತದೆ. ಹಾಗೆಯೇ ಆಯುರ್ವೇದವು ಬರಿಯ ಮನೆಮದ್ದಲ್ಲ , ವಿಜ್ಞಾನದಾರಿತವಲ್ಲ ಎಂಬ ತಪ್ಪು ಕಲ್ಪನೆಯನ್ನು ದೂರ ಮಾಡುತ್ತದೆ. ಸಂಶೋಧನೆ, ವೈದ್ಯಕೀಯ ತರಬೇತಿ, ಪ್ರಯೋಗಾಲಯ ಕಾರ್ಯ ಆಯುರ್ವೇದ ಶಿಕ್ಷಣದ ಅವಿಭಾಜ್ಯ ಭಾಗವಾಗಿದೆ ಎಂಬ ಅರಿವು ಮೂಡಿದಾಗ ಜನರಿಗೆ ಆಯುರ್ವೇದ ಆಧುನಿಕ ರೋಗಗಳಿಗೆ ಪರಿಣಾಮಕಾರಿಯಾದ ಪರಿಹಾರವೆಂಬುದು ಮನವರಿಕೆಯಾಗುತ್ತದೆ.

ಇದನ್ನೂ ಓದಿ: ಹೆರಿಗೆಯ ನಂತರ ಬಾಣಂತಿಯರಿಗೆ ಕಾಣಿಸಿಕೊಳ್ಳುವ ಡಿಪ್ರೆಶನ್ ಗೆ ಕಾರಣ ಏನ್ ಗೊತ್ತಾ? ಡಾ. ಕೃತಿಶ್ರೀ ಸೋಮಣ್ಣ ನೀಡಿರುವ ಸಲಹೆ ಇಲ್ಲಿದೆ

ಆಯುರ್ವೇದ ಶಿಕ್ಷಣದ ಅರಿವು ಜನರಲ್ಲಿ ಸ್ವಯಂ ಆರೈಕೆ ಹಾಗೂ ರೋಗಗಳು ಬಾರದಂತೆ ತಡೆಗಟ್ಟುವ ಆರೋಗ್ಯ ಸಂಸ್ಕೃತಿಯನ್ನು ಬೆಳೆಸುತ್ತದೆ. ದಿನಚರ್ಯೆ (ದೈನಂದಿನ ನಿಯಮ) ಋತುಚರ್ಯೆ (ಋತುಗಳಿಗೆ ತಕ್ಕಂತ ಜೀವನಶೈಲಿ) ಮತ್ತು ವೈಯಕ್ತಿಕ ಆಹಾರ ಕರ್ಮಗಳ ಮಾರ್ಗದರ್ಶನ ವೃತ್ತಿಯನ್ನು ಸಂತೋಲನಾಯುತ ಹಾಗೂ ಆರೋಗ್ಯಕರ ಜೀವನದತ್ತ ನಡೆಸುತ್ತದೆ ಹಾಗೆಯೇ ಇಂತಹ ಅರಿವು ಜನರಲ್ಲಿ ರಾಸಾಯನಿಕಯುಕ್ತ ಔಷಧಿಗಳ ಅವಲಂಬನೆಯನ್ನು ಕಡಿಮೆ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ