AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stroke: ಪಾರ್ಶ್ವವಾಯು ಅಪಾಯ ತಪ್ಪಿಸಬೇಕೆಂದರೆ ಈ ಅಭ್ಯಾಸ ಬಿಟ್ಟುಬಿಡಿ

Stroke: ಅತಿಯಾಗಿ ಮದ್ಯಪಾನ( Alcohol)ಸೇವನೆಯು ಪಾರ್ಶ್ವವಾಯು(Stroke)ವಿಗೆ ಕಾರಣವಾಗಬಹುದು, ಜತೆಗೆ ಹೃದಯ ಬಡಿತದಲ್ಲೂ ಏರುಪೇರು ಉಂಟಾಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ.

Stroke: ಪಾರ್ಶ್ವವಾಯು ಅಪಾಯ ತಪ್ಪಿಸಬೇಕೆಂದರೆ ಈ ಅಭ್ಯಾಸ ಬಿಟ್ಟುಬಿಡಿ
Alcohol
TV9 Web
| Updated By: ನಯನಾ ರಾಜೀವ್|

Updated on: Jun 15, 2022 | 4:41 PM

Share

ಅತಿಯಾಗಿ ಮದ್ಯಪಾನ( Alcohol)ಸೇವನೆಯು ಪಾರ್ಶ್ವವಾಯು(Stroke)ವಿಗೆ ಕಾರಣವಾಗಬಹುದು, ಜತೆಗೆ ಹೃದಯ ಬಡಿತದಲ್ಲೂ ಏರುಪೇರು ಉಂಟಾಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಇಂಗ್ಲೆಂಡ್​ನ ನ್ಯಾಷನಲ್ ಹೆಲ್ತ್​ ಸರ್ವೀಸ್ ವರದಿ ಪ್ರಕಾರ, ಮದ್ಯಪಾನವು ರಕ್ತದೊತ್ತಡವನ್ನು ಹೆಚ್ಚಿಸಿ, ಹೃದಯಾಘಾತಕ್ಕೂ ಕಾರಣವಾಗಬಹುದು, ಅದರ ಜತೆಗೆ ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆಯೂ ಹೆಚ್ಚಿದೆ ಎಂಬುದು ತಿಳಿದುಬಂದಿದೆ.

ಒಂದೊಮ್ಮೆ ರಕ್ತ ಹಾಗೂ ಆಮ್ಲಜನಕದ ಸರಬರಾಜು ಮೆದುಳಿಗೆ ಸರಿಯಾಗಿ ಆಗದಿದ್ದರೆ ಅಪಧಮನಿಗಳಲ್ಲಿ ಬ್ಲಾಕೇಜ್ ಕಾಣಿಸಿಕೊಳ್ಳಲಿದ್ದು, ಹೆಚ್ಚಿನ ಕೊಬ್ಬಿನಾಂಶ ಸಂಗ್ರಹವಾಗಿ ರಕ್ತದೊತ್ತಡಕ್ಕೂ ಕಾರಣವಾಗಲಿದೆ. ಮದ್ಯಪಾನವನ್ನು ತ್ಯಜಿಸಲು ವ್ಯಾಯಾಮ, ಧ್ಯಾನವು ಉತ್ತಮ ಮಾರ್ಗವಾಗಿದೆ. ಸಮತೋಲಿತ ಡಯೆಟ್, ರೆಗ್ಯುಲರ್ ವರ್ಕೌಟ್ ಹಾಗೂ ಧೂಮಪಾನದಿಂದ ದೂರವಿದ್ದರೆ ಪಾರ್ಶ್ವವಾಯು ಅಪಾಯ ಕಡಿಮೆಯಾಗಲಿದೆ.

ಪಾರ್ಶ್ವವಾಯುವಿನಿಂದ ಚೇತರಿಸಿಕೊಂಡವರು ಮಾಡಬೇಕಾಗಿದ್ದೇನು? ಪಾರ್ಶ್ವವಾಯುವಿನಿಂದ ಚೇತರಿಸಿಕೊಂಡವರು ಆರೋಗ್ಯದ ಬಗ್ಗೆ ಇನ್ನೂ ಹೆಚ್ಚಿನ ಎಚ್ಚರಿಕೆವಹಿಸಬೇಕು, ಪಾರ್ಶ್ವವಾಯುವಿನಿಂದ ಚೇತರಿಸಿಕೊಂಡವರು ಯಾವುದೇ ಕಾರಣಕ್ಕೂ ಧೂಮಪಾನವಾಗಲಿ, ಮದ್ಯಪಾನವಾರಗಲಿ ಸೇವಿಸಲೇಬಾರದು. ಒಂದೊಮ್ಮೆ ಮದ್ಯಪಾನ ಮಾಡಿದರೆ ಜೀವಕ್ಕೇ ಕುತ್ತು ಬರುವ ಸಾಧ್ಯತೆ ಇರುತ್ತದೆ.

ಮದ್ಯಪಾನವು ಹೇಗೆ ಪಾರ್ಶ್ವವಾಯುವಿಗೆ ಕಾರಣವಾಗಬಹುದು? ನ್ಯಾಷನಲ್ ಹೆಲ್ತ್ ಸರ್ವೀಸ್ ಆಫ್ ಇಂಗ್ಲೆಂಡ್​ನ ಮಾಹಿತಿ ಪ್ರಕಾರ, ಆಲ್ಕೋಹಾಲ್ ಸೇವನೆಯು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಅನಿಶ್ಚಿತ ಹೃದಯಬಡಿತಕ್ಕೆ ಕಾರಣವಾಗುತ್ತದೆ. ತೂಕ ಹೆಚ್ಚಳವಾಗಲಿದ್ದು, ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಮೂರು ಪಟ್ಟು ಹೆಚ್ಚಿರಲಿದೆ.

ಪಾರ್ಶ್ವವಾಯುವಿನ ಲಕ್ಷಣಗಳೇನು? -ಮುಖದ ಒಂದು ಭಾಗ ಸ್ಪರ್ಶವನ್ನು ಕಳೆದುಕೊಳ್ಳಬಹುದು -ರೋಗಿಯು ನಗಾಡಲು ಅಥವಾ ಬಾಯಿಯನ್ನು ಕಳೆಯಲು ತೊಂದರೆ ಅನುಭವಿಸಬಹುದು -ಎರಡು ಕಾಲುಗಳನ್ನು ಮೇಲಕ್ಕೆತ್ತಲು ಸಾಧ್ಯವಾಗದಿರುವುದು -ತೊದಲು ನುಡಿ -ಬೇರೆಯವರ ಮಾತು ಆಲಿಸಲು ಸಾಧ್ಯವಾಗದೇ ಇರುವುದು -ವಿಪರೀತ ಕಣ್ಣುನೋವು

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ