AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನೀರು ಕುಡಿಯುವುದು ಒಳ್ಳೆಯ ಅಭ್ಯಾಸ, ಆದರೆ ಅತಿಯಾದ ನಿರ್ಜಲೀಕರಣ ಆರೋಗ್ಯಕ್ಕೆ ಹಾನಿಕಾರಕ

ದೇಹವನ್ನು ಹೈಡ್ರೀಕರಿಸುವುದಕ್ಕಾಗಿ ದಿನಕ್ಕೆ 7 ರಿಂದ 8 ಗ್ಲಾಸ್ ನೀರು ಕುಡಿಯಬೇಕು. ಆದರೆ ಹೆಚ್ಚು ನೀರು ಕುಡಿಯುವುದು ಕೂಡ ಆರೋಗ್ಯಕ್ಕೆ ಕೆಟ್ಟದು ಎಂದು ನಿಮಗೆ ತಿಳಿದಿದೆಯೇ? ಇದು ಕೇಳಲು ವಿಚಿತ್ರವೆನಿಸಬಹುದು. ಆದರೆ ಇದು ನಿಜ. ಹೆಚ್ಚಿನ ಜಲಸಂಚಯನದಿಂದಾಗಿ ದೇಹದಲ್ಲಿನ ರಕ್ತದ ಮಟ್ಟವು ತುಂಬಾ ಕಡಿಮೆಯಾಗುತ್ತದೆ.

Health Tips: ನೀರು ಕುಡಿಯುವುದು ಒಳ್ಳೆಯ ಅಭ್ಯಾಸ, ಆದರೆ ಅತಿಯಾದ ನಿರ್ಜಲೀಕರಣ ಆರೋಗ್ಯಕ್ಕೆ ಹಾನಿಕಾರಕ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 27, 2021 | 7:55 AM

Share

ನಮ್ಮ ದೇಹವು ಶೇಕಡಾ 70 ರಷ್ಟು ನೀರಿನಾಂಶವನ್ನು ಹೊಂದಿರಬೇಕು. ಆದರೆ ಸರಿಯಾದ ಸಮಯಕ್ಕೆ ನೀರು ಕುಡಿಯದೆ ದೇಹದಲ್ಲಿ ಅನೇಕ ಸಮಸ್ಯೆಗಳು ಉಂಟಾಗುತ್ತದೆ. ಇದು ಮಾತ್ರವಲ್ಲ, ಚರ್ಮದ ಸಮಸ್ಯೆಗಳೂ ಹೆಚ್ಚಾಗುತ್ತವೆ. ಬೆವರು ಮತ್ತು ತೇವಾಂಶದಿಂದಾಗಿ ದೇಹವು ತ್ವರಿತವಾಗಿ ನಿರ್ಜಲೀಕರಣಗೊಳ್ಳುತ್ತದೆ. ದೇಹವನ್ನು ಹೈಡ್ರೀಕರಿಸುವುದಕ್ಕಾಗಿ ದಿನಕ್ಕೆ 7 ರಿಂದ 8 ಗ್ಲಾಸ್ ನೀರು ಕುಡಿಯಬೇಕು. ಆದರೆ ಹೆಚ್ಚು ನೀರು ಕುಡಿಯುವುದು ಕೂಡ ಆರೋಗ್ಯಕ್ಕೆ ಕೆಟ್ಟದು ಎಂದು ನಿಮಗೆ ತಿಳಿದಿದೆಯೇ? ಇದು ಕೇಳಲು ವಿಚಿತ್ರವೆನಿಸಬಹುದು. ಆದರೆ ಇದು ನಿಜ. ಹೆಚ್ಚಿನ ಜಲಸಂಚಯನದಿಂದಾಗಿ ದೇಹದಲ್ಲಿನ ರಕ್ತದ ಮಟ್ಟವು ತುಂಬಾ ಕಡಿಮೆಯಾಗುತ್ತದೆ. ಈ ಕಾರಣದಿಂದಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತವೆ. ಅತಿಯಾದ ನಿರ್ಜಲೀಕರಣದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಹೇಗೆ ತಿಳಿದುಕೊಳ್ಳುವುದು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಅತಿಯಾದ ನಿರ್ಜಲೀಕರಣದ ಲಕ್ಷಣಗಳು

1. ಬಾಯಾರಿಕೆಯಿಲ್ಲದಿದ್ದರೂ ನೀರು ಕುಡಿಯಬೇಕು ಅನಿಸುತ್ತದೆ.

2. ಅತಿಯಾದ ನಿರ್ಜಲೀಕರಣದಿಂದ ಮೂತ್ರದ ಬಣ್ಣ ತಿಳಿ ಹಳದಿ ಬಣ್ಣದ್ದಾಗಿರುತ್ತದೆ. ಆದರೆ ಆರೋಗ್ಯಕರ ಮೂತ್ರದ ಬಣ್ಣವು ಮಸುಕಾದ ಹಳದಿ ಬಣ್ಣದ್ದಾಗಿರುತ್ತದೆ.

3. ಹೆಚ್ಚು ನೀರು ಕುಡಿಯುವುದರಿಂದ ದೇಹದಲ್ಲಿ ಉತ ಕಾಣಿಸಿಕೊಳ್ಳುತ್ತದೆ.

ಅಧಿಕ ಜಲಸಂಚಯನವು ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ನಾವು ನೀರು ಕುಡಿದರೆ ಅದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಹೆಚ್ಚು ನೀರು ಕುಡಿಯುವುದು ನಮ್ಮ ಆರೋಗ್ಯಕ್ಕೆ ಕೆಟ್ಟದು ಎಂಬುವುದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು.

1. ದೇಹದಲ್ಲಿ ಅತಿಯಾದ ನೀರು ಸಂಗ್ರಹವಾಗುವುದರಿಂದ ಮುಖ ಮತ್ತು ದೇಹದ ಇತರ ಭಾಗಗಳಲ್ಲಿ ಉತ ಉಂಟಾಗುತ್ತದೆ.

2. ದೇಹದ ಭಾಗಗಳಲ್ಲಿ ಕಾಣಿಸಿಕೊಳ್ಳುವ ಉರಿಯೂತವು ತಲೆನೋವು ಮತ್ತು ದೇಹದ ನೋವುಗಳಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ.

3. ದೇಹದಲ್ಲಿ ಉಪ್ಪಿನ ಪ್ರಮಾಣವನ್ನು ಸಹ ಕಡಿಮೆ ಮಾಡುತ್ತದೆ, ಇದು ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ.

4. ದೇಹದಲ್ಲಿನ ಹೆಚ್ಚುವರಿ ನೀರು ವಾಂತಿ ಮತ್ತು ಗ್ಯಾಸ್ಟಿಕ್​ಗೆ ಕಾರಣವಾಗುತ್ತದೆ. ಮೂತ್ರಪಿಂಡಗಳು ಹೆಚ್ಚು ನೀರನ್ನು ಹೀರಿಕೊಳ್ಳುವುದಿಲ್ಲ ಎಂಬುವುದು ಇದಕ್ಕೆ ಕಾರಣ.

5. ಅತಿಯಾದ ನಿರ್ಜಲೀಕರಣವು ದೌರ್ಬಲ್ಯ, ಆಯಾಸ ಮತ್ತು ದೇಹ ಮರಗಟ್ಟುವಿಕೆಗೆ ಕಾರಣವಾಗಬಹುದು.

6. ಇದು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ಊಟ ಮುಗಿಸಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಇದೆಯೇ? ಹಾಗಿದ್ದರೆ ಅದನ್ನು ಇಂದೇ ಬಿಟ್ಟು ಬಿಡಿ

Kidney Stone: ಮೂತ್ರಪಿಂಡದಲ್ಲಿ ಕಲ್ಲು ಇದೆ ಎಂದು ತಿಳಿಯುವುದು ಹೇಗೆ? ಈ ಲಕ್ಷಣಗಳೇ ಸಮಸ್ಯೆಗೆ ಮುನ್ನೆಚ್ಚರಿಕೆ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್