AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drinking Water : ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

ಬೇಸಿಗೆಯ ಧಗೆಯು ಜೋರಾಗಿದೆ. ಸೂರ್ಯನ ಸುಡು ಬಿಸಿಲಿನ ನಡುವೆ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಹೀಗಾಗಿ ದಿನಕ್ಕೆ ಇಂತಿಷ್ಟು ನೀರು ಕುಡಿಯುವುದು ಅಗತ್ಯ. ಕೆಲವರು ಏನೇ ಹೇಳಿದರೂ ನೀರು ಕುಡಿಯುವುದು ಕಡಿಮೆಯೇ. ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯುತ್ತಾರೆ. ಆದರೆ ನಿಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಬೇಕಕಾದರೆ ನೀರು ಕುಡಿಯುವುದು ಅಗತ್ಯ. ಆದರೆ ಈ ನೀರು ಕುಡಿಯುವುದು ಮರೆತು ಹೋದರೆ ಈ ಟಿಪ್ಸ್ ಪಾಲಿಸಿ ನೋಡಿ.

Drinking Water : ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ
ಸಾಯಿನಂದಾ
| Edited By: |

Updated on: May 08, 2024 | 5:15 PM

Share

ಈಗಿನ ಕಾಲದಲ್ಲಿ ಆರೋಗ್ಯವಂತರಾಗಿ ಬಿಟ್ಟರೆ ಅದಕ್ಕಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ. ಆರೋಗ್ಯವಾಗಿರಬೇಕಾದರೆ ಪೌಷ್ಟಿಕಾಂಶಯುಕ್ತ ಆಹಾರ ಹಾಗೂ ಸರಿಯಾದ ನಿದ್ದೆಯು ಎಷ್ಟು ಮುಖ್ಯವೋ, ದೇಹಕ್ಕೆ ನೀರು ಕೂಡ ಅಷ್ಟೇ ಅಗತ್ಯ. ನೀರು ಕುಡಿಯುವ ಪ್ರಮಾಣವು ಕಡಿಮೆಯಾದರೆ ದೇಹವು ನಿರ್ಜಲೀಕರಣಕ್ಕೆ ಒಳಗಾಗಿ ಆರೋಗ್ಯ ಸಮಸ್ಯೆಗಳು ಬರುವ ಸಾಧ್ಯತೆಯು ಅಧಿಕ. ಹೀಗಾಗಿ ನೀರು ಕಡಿಮೆ ಕುಡಿದರೂ ತೊಂದರೆಯೇ, ಹೆಚ್ಚಾದರೆ ಅಡ್ಡಪರಿಣಾಮಗಳೇ ಹೆಚ್ಚು. ಹೀಗಾಗಿ ದಿನಕ್ಕೆ ಇತಿಮಿತಿಯಲ್ಲಿ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಂಡರೆ ಆರೋಗ್ಯಕ್ಕೆ ಹಿತಕರ.

* ಮನೆಯಿಂದ ಹೊರಗಡೆ ಹೋಗುವಾಗ ನಿಮ್ಮ ಬ್ಯಾಗ್ ನಲ್ಲಿ ನೀರಿನ ಬಾಟಲ್ ಇಟ್ಟುಕೊಳ್ಳುವುದು ಮರೆಯದಿರಿ. ಈ ಅಭ್ಯಾಸದಿಂದ ಆಗಾಗ ನೀರು ಕುಡಿಯಲು ನೆನಪಾಗುತ್ತದೆ.

* ಬಾಯಾರಿಕೆಯಾಗದೇ ಇದ್ದರೂ ನೀರು ಕುಡಿಯುತ್ತಿರಬೇಕಾದರೆ ಫೋನ್ ನಲ್ಲಿ ಅಲರಂ ಅನ್ನು ಸೆಟ್ ಮಾಡಿಕೊಳ್ಳುವುದು ಒಳ್ಳೆಯದು.

* ಬೆಳಿಗ್ಗೆ ಎದ್ದಾಗ, ಊಟಕ್ಕೆ ಅರ್ಧ ಗಂಟೆ ಮೊದಲು, ಊಟವಾದ ಅರ್ಧ ಗಂಟೆ ನಂತರ ನೀರನ್ನು ಕುಡಿಯುವ ಅಭ್ಯಾಸವಿರಲಿ.

ಇದನ್ನೂ ಓದಿ: ವೆಸ್ಟ್ ನೈಲ್ ಜ್ವರದ ಲಕ್ಷಣಗಳೇನು?; ಇದನ್ನು ತಡೆಗಟ್ಟೋದು ಹೇಗೆ?

* ನೀರಿನ ಬದಲಿಗೆ ನಿಂಬೆ ಅಥವಾ ಪುದೀನಾ ಮಿಶ್ರಿತ ಜ್ಯೂಸ್ ಕುಡಿಯಲು ಬಹುದು. ಹೀಗೆ ಮಾಡುವುದರಿಂದ ಈ ಜ್ಯೂಸ್ ಕುಡಿಯುವುದಕ್ಕೂ ಮನಸ್ಸಾಗುತ್ತದೆ. ಅಗತ್ಯವಿರುವಷ್ಟು ನೀರು ದೇಹಕ್ಕೆ ಸೇರುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ