ಗಾಯ ಬೇಗ ಗುಣ ಆಗಲ್ವಾ? ಚಿಂತೆ ಮಾಡಬೇಡಿ ವಾರಕೊಮ್ಮೆ ಮನೆಯಲ್ಲಿಯೇ ಸಿಗುವ ಈ ಹುಲ್ಲಿನ ಜ್ಯೂಸ್ ಕುಡಿಯಿರಿ
ಮನೆಯ ಅಂಗಳದಲ್ಲಿ ಬೆಳೆಯುವ ಗರಿಕೆ ಹುಲ್ಲಿನಲ್ಲಿರುವಷ್ಟು ಆರೋಗ್ಯ ಪ್ರಯೋಜನ ಮತ್ತಾವುದರಲ್ಲಿಯೂ ಇಲ್ಲ. ಹಸಿರಾಗಿರುವ ಈ ಹುಲ್ಲು ಗಣಪನಿಗೆ ಬಲು ಪ್ರೀಯ. ಆದರೆ ಇದು ದೇವರ ಪೂಜೆಗೆ ಮಾತ್ರವಲ್ಲ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದಕ್ಕೂ ಸಹಕಾರಿ. ಅದರಲ್ಲಿಯೂ ಈ ಹುಲ್ಲಿನಿಂದ ಮಾಡುವ ಜ್ಯೂಸ್ ಅಥವಾ ಕಷಾಯದಲ್ಲಿ ನೀವು ಅಂದುಕೊಂಡಿರದಂತಹ ಪ್ರಯೋಜನಗಳಿವೆ. ಹಾಗಾದರೆ ಗರಿಕೆ ಹುಲ್ಲಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ಮತ್ತು ಅದು ಯಾರಿಗೆ ಒಳ್ಳೆಯದು ಎಂಬುದರ ಕುರಿತ ಮಾಹಿತಿಯನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗರಿಕೆ ಹುಲ್ಲಿನ (Cynodon dactylon) ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ, ಹಸಿರಾಗಿರುವ ಈ ಹುಲ್ಲು ಗಣಪನಿಗೆ ಬಲು ಪ್ರೀಯ. ಇದು ದೇವರ ಪೂಜೆಗೆ ಮಾತ್ರವಲ್ಲ ನಮ್ಮ ಆರೋಗ್ಯಕ್ಕೂ ಬಹಳ ಪ್ರಯೋಜನಕಾರಿ. ಅದರಲ್ಲಿಯೂ ಗರಿಕೆ ಹುಲ್ಲಿನ ರಸ (Durva Grass Juice) ಅಥವಾ ಜ್ಯೂಸ್ ಅಥವಾ ಕಷಾಯ ಸೇವನೆ ಮಾಡುವುದು ನಮ್ಮ ದೇಹಕ್ಕೆ ಒಳ್ಳೆಯದು. ಇದನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಹಲವು ರೀತಿಯ ರೋಗಗಳಿಂದ ನಮ್ಮನ್ನು ರಕ್ಷಿಸುತ್ತದೆ. ಇತ್ತೀಚಿಗೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದ್ದು ನಮ್ಮನ್ನು ನಾವು ಸುರಕ್ಷಿತವಾಗಿ ಇರಿಸಿಕೊಳ್ಳಲು ಇಂತಹ ಆಹಾರಗಳ ಸೇವನೆ ಮಾಡಬೇಕಾಗುತ್ತದೆ. ಇದರಲ್ಲಿರುವ ಔಷಧೀಯ ಗುಣಗಳು ನಮ್ಮನ್ನು ಕಾಯಿಲೆಗಳಿಂದ ದೂರವಿರಿಸುತ್ತದೆ. ಇದಕ್ಕೆ ಪೂರಕವೆಂಬಂತೆ ಗರಿಕೆ ಹುಲ್ಲಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಗಿರೀಶ್ (Gireesh Mutthu) ಎಂಬವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು ದೂರ್ವಾ ಅಥವಾ ಗರಿಕೆ ಹುಲ್ಲಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ಮತ್ತು ಅದು ಯಾರಿಗೆ ಒಳ್ಳೆಯದು ಎಂಬುದರ ಕುರಿತು ಮಾಹಿತಿ ಈ ಸ್ಟೋರಿಯಲ್ಲಿದೆ.
ದೂರ್ವೆ ಅಥವಾ ಗರಿಕೆ ಹುಲ್ಲು ಯಾಕೆ ಒಳ್ಳೆಯದು?
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಅದರಲ್ಲಿಯೂ ಈ ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಹಣ್ಣು, ತರಕಾರಿ ರಸ ಹೀಗೆ ವಿವಿಧ ರೀತಿಯಲ್ಲಿ ಆರೋಗ್ಯಕರ ಮಾರ್ಗಗಳನ್ನು ಕಂಡುಕೊಂಡಿರುತ್ತೇವೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದಕ್ಕಾಗಿಯೇ ದೂರ್ವಾ ಅಥವಾ ದೂರ್ವೆ ಅಥವಾ ಗರಿಕೆ ಹುಲ್ಲನ್ನು ಆಯುರ್ವೇದದಲ್ಲಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಉಪಯೋಗ ಮಾಡಲಾಗುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು, ರಕ್ತಸ್ರಾವವನ್ನು ಕಡಿಮೆ ಮಾಡುವುದು, ಮತ್ತು ಗಾಯಗಳನ್ನು ಗುಣಪಡಿಸುವ ವರೆಗೆ ಹಲವು ರೀತಿಯಲ್ಲಿ ಉಪಯೋಗ ಮಾಡಲಾಗುತ್ತದೆ. ಮಾತ್ರವಲ್ಲ ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಕೂಡ ಸಹಾಯ ಮಾಡುತ್ತದೆ.
ಗರಿಕೆ ರಸದ ಉಪಯೋಗ:
ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡುವುದು ಕೂಡ ಬಹಳ ಒಳ್ಳೆಯದು ಎಂದು ಆಯುರ್ವೇದ ವೈದ್ಯರು ಹೇಳುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ನಿಯಮಿತವಾಗಿ ಈ ಜ್ಯೂಸ್ ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುತ್ತದೆ. ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ. ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದ್ದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ.
ಗರಿಕೆ ರಸದ ಮತ್ತಷ್ಟು ಆರೋಗ್ಯ ಪ್ರಯೋಜನಗಳು:
- ಸಾಮಾನ್ಯವಾಗಿ ಗರಿಕೆ ಹುಲ್ಲಿನ ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
- ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ಅತಿಸಾರ, ಕಣ್ಣಿನ ದೋಷ, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
- ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿಮೆ ಮಾಡಲು, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ.
- ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದು ಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಿ ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮಕ್ಕೆ ಹೆಚ್ಚಿದರೆ ನಿಮಗೆ ತ್ವರಿತವಾಗಿ ಫಲಿತಾಂಶ ಸಿಗುತ್ತದೆ.
- ಗರಿಕೆ ಹುಲ್ಲಿಗೆ ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡು ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಇದನ್ನೂ ಓದಿ: Daily Devotional: ಗಣೇಶನಿಗೆ ಗರಿಕೆ ಯಾಕೆ ಪ್ರೀತಿ ಅಂತ ತಿಳಿಯಲು ಈ ವಿಡಿಯೋ ನೋಡಿ
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
- ತಾಜಾ ಗರಿಕೆ ಹುಲ್ಲನ್ನು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
- ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
- ನಂತರ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
- ಚೆನ್ನಾಗಿ ಪೇಸ್ಟ್ ಆದ ಮಿಶ್ರಣವನ್ನು ಸೋಸಿಕೊಳ್ಳಬೇಕು.
- ಬಳಿಕ ಇದು ಕುಡಿಯುವುದಕ್ಕೆ ಸಿದ್ದವಾಗಿರುತ್ತದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








