AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Physical Weakness: ದೈಹಿಕ ನಿಶ್ಯಕ್ತಿ ಕಾಡುತ್ತಿದೆಯಾ? ಚಿಂತೆ ಬಿಡಿ ಈ 5 ಆಹಾರಗಳನ್ನು ಸೇವಿಸಿ

ಯಥೇಚ್ಛವಾದ ವಿಟಮಿನ್​, ಮಿನರಲ್ಸ್​​ಗಳಿಂದ ಕೂಡಿರುವ ಬಾಳೆಹಣ್ಣು ಡಯೆಟ್​ಗೆ ಉತ್ತಮ ಆಹಾರವಾಗಿದೆ. ಇದರೊಂದಿಗೆ ದೇಹದ ಬಳಲಿಕೆಯನ್ನೂ ಕಡಿಮೆಗೊಳಿಸುತ್ತದೆ.

Physical Weakness: ದೈಹಿಕ ನಿಶ್ಯಕ್ತಿ ಕಾಡುತ್ತಿದೆಯಾ? ಚಿಂತೆ ಬಿಡಿ ಈ 5 ಆಹಾರಗಳನ್ನು ಸೇವಿಸಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 05, 2022 | 4:11 PM

Share

ಇತ್ತೀಚಿನ ದಿನಗಳಲ್ಲಿ ವರ್ಕ್​ ಫ್ರಾಮ್​ ಹೋಮ್​, ಸಾಂಕ್ರಾಮಿಕ ರೋಗದ ಭೀತಿ, ವೈರಲ್​ ಫೀವರ್​ ಹೀಗೆ ಇಂದಿನ ಜನತೆ ಒಂದಲ್ಲ ಒಂದು ತೊಳಲಾಟಕ್ಕೆ ಸಿಲುಕಿ ಒದ್ದಾಡುವಂತಹ ಪರಿಸ್ಥಿತಿಯಿದೆ. ಅತಿಯಾದ ಕೆಲಸ, ಒತ್ತಡದಿಂದಾಗಿ (Stress) ದೇಹಕ್ಕೆ ಸರಿಯಾದ ಆಹಾರ ಪೂರೈಕೆಯಾಗದೆ ಸುಸ್ತು, ಬಳಲಿಕೆ, ನಿಶ್ಯಕ್ತಿ (Physical Weakness) ಕಾಡುತ್ತದೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳೂ ಕೂಡ ಕಾಡುತ್ತದೆ. ಈ ರೀತಿ ನಿಶ್ಯಕ್ತಿ ವಯಸ್ಸಾದವರು, ಯುವ ಜನರಲ್ಲೂ ಕಾಡುತ್ತಿದೆ. ಇದಕ್ಕೆ ಹಲವು ಕಾರಣಗಳಿವೆ ಧೂಮಪಾನ, ಸರಿಯಾಗಿ ನೀರು ಕುಡಿಯದೇ ಇರುವುದು, ಅತಿಯಾದ ಕೆಲಸ, ಪೋಷಕಾಂಶಗಳ ಕೊರತೆ, ಕೆಫಿನ್​ ಅಂಶವಿರುವ ಚಹಾ, ಕಾಫಿಗಳ ಅಧಿಕ ಸೇವನೆ ಈ ರೀತಿ ದೈಹಿಕ ಬಳಲಿಕೆಗೆ ಕಾರಣವಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಸರಿಯಾದ ಆಹಾರ ಸೇವನೆ ಅಗತ್ಯವಾಗಿದೆ. ಸರಿಯಾದ ಸಮಯದಲ್ಲಿ ಪೌಷ್ಟಿಕ ಆಹಾರ ಸೇವನೆ, ಸರಿಯಾದ ಯೋಗ, ವ್ಯಾಯಾಮ ಸದೃಢ ದೇಹ ಮತ್ತು ಆರೋಗ್ಯಯುತ ಜೀವನಕ್ಕೆ ದಾರಿಯಾಗುತ್ತದೆ.  ಹೀಗಾಗಿ ನೀವು ಈ ಆಹಾರಗಳನ್ನು ನೀವು ಸೇವಿಸಿದರೆ ನಿಮ್ಮ ದೇಹ ನಿಶ್ಯಕ್ತಿಯಿಂದ ಮುಕ್ತಗೊಳ್ಳುತ್ತದೆ.

ಮೊಟ್ಟೆ: ದಿನಕ್ಕೊಂದು ಮೊಟ್ಟೆ ಆರೋಗ್ಯವನ್ನು ಸುಧಾರಿಸುತ್ತದೆ. ಮೊಟ್ಟೆಯಲ್ಲಿರುವ ವಿಟಮಿನ್​ ಎ. ಬಿ12, ಸೆಲೇನಿಯಂ ಅಂಶಗಳು ದೇಹದಲ್ಲಿ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿಮ್ಮ ನಿಶ್ಯಕ್ತಿಯ ಸಮಸ್ಯೆಯನ್ನೂ ನಿವಾರಿಸುತ್ತದೆ. ಮೊಟ್ಟೆಯಲ್ಲಿರುವ ಪ್ರೊಟೀನ್​ ಅಂಶಗಳು ಕಣ್ಣಿನ ಆರೋಗ್ಯವನ್ನೂ ಕಾಪಾಡುತ್ತದೆ. ಜತೆಗೆ ಸ್ನಾಯುಗಳನ್ನು ಬಲಪಡಿಸಲು ಕೂಡ ನೆರವಾಗುತ್ತದೆ. ಹೀಗಾಗಿ ನಿಮಗೆ ಪರಿಪೂರ್ಣ ಆಹಾರವಾಗುವುದರಲ್ಲಿ ಎರಡು ಮಾತಿಲ್ಲ. ದೈಹಿಕ ನಿಶ್ಯಕ್ತಿಯನ್ನು ಕೂಡ ಸುಧಾರಿಸುತ್ತದೆ.

ಪನ್ನೀರ್​: ಸಮೃದ್ದವಾದ ಪ್ರೊಟೀನ್​ ಮತ್ತು ಮ್ಯಾಗ್ನೀಶಿಯಂ ಗುಣಗಳನ್ನು ಹೊಂದಿರುವ ಪನ್ನೀರ್​ ಸಸ್ಯಾಹಾರಿಗಳಿಗೆ ಉತ್ತಮ ಆಹಾರವಾಗಿದೆ.  ದೇಹದಲ್ಲಿನ ಬಳಲಿಕೆಯನ್ನು ಕಡಿಮೆ ಮಾಡಿ ದೇಹವನ್ನು ಸುರಕ್ಷಿವಾಗಿಡುತ್ತದೆ. ಹೀಗಾಗಿ ಪನ್ನೀರ್​ ದೇಹದ ಸುಸ್ತನ್ನು ಸುಧಾರಿಸುತ್ತದೆ,

ಓಟ್ಸ್​​​: ಓಟ್ಸ್​​ನ ಓಟ್​ಮೀಲ್​ ಸೇವನೆ ದೇಹವನ್ನು ಅಶಕ್ತತೆಯಿಂದ ಕಾಪಾಡುತ್ತದೆ. ಓಟ್ಸ್​ಅನ್ನು ಪ್ರತಿದಿನ ಬೆಳಗ್ಗೆ ಉಪಹಾರದ ರೀತಿಯಲ್ಲಿ ಸೇವಿಸಿದರೆ ದೇಹವೂ ಆರೋಗ್ಯವಾಗಿರುತ್ತದೆ. ಜತೆಗೆ ಅತಿಯಾದ ತೂಕ ಇಳಿಕೆಗೂ ನೆರವಾಗುತ್ತದೆ.

ಬಾಳೆಹಣ್ಣು: ಯಥೇಚ್ಛವಾದ ವಿಟಮಿನ್​, ಮಿನರಲ್ಸ್​​ಗಳಿಂದ ಕೂಡಿರುವ ಬಾಳೆಹಣ್ಣು ಡಯೆಟ್​ಗೆ ಉತ್ತಮ ಆಹಾರವಾಗಿದೆ. ಇದರೊಂದಿಗೆ ದೇಹದ ಬಳಲಿಕೆಯನ್ನೂ ಕಡಿಮೆಗೊಳಿಸುತ್ತದೆ. ಬಾಳೆಹಣ್ಣಿನ ಮಿಲ್ಕ್​ಶೇಕ್ಅನ್ನೂ ಕೂಡ ಮಾಡಿ ಸೇವಿಸಬಹುದು.

ಡ್ರೈ ಪ್ರೂಟ್ಸ್​: ಬಾದಾಮಿ, ಪಿಸ್ತಾ, ಗೋಡಂಬಿಯಂತಹ ಡ್ರೈ ಪ್ರೂಟ್ಸ್​ಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ನಿಶ್ಯಕ್ತಿಯನ್ನು ಕಡಿಮೆಗೊಳಿಸುತ್ತದೆ.

ನೀರಿನ ಸೇವನೆ: ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ನೀರು ಪೂರೈಕೆಯಾಗದಿದ್ದರೆ ಸುಸ್ತು ಕಾಣಿಸಿಕೊಳ್ಳುತ್ತದೆ. ದೇಹದಲ್ಲಿ ಉಷ್ಣತೆ ಜಾಸ್ತಿಯಾದಾಗ ದೇಹ ನಿರ್ಜಲೀಕರಣಗೊಳ್ಳುತ್ತದೆ. ಅಂತಹ ಸಂದರ್ಭಗಳಲ್ಲಿ ಹೆಚ್ಚು ನೀರು ಬೇಕಾಗುತ್ತದೆ. ಏಳನೀರು ಅಥವಾ ನೀರು ಯಾವುದನ್ನು ಸೇವಿಸಿದರೂ ದೇಹಕ್ಕೆ ಉತ್ತಮ ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ:

Pumpkin: ರೋಗ ನಿರೋಧಕ ಶಕ್ತಿ ವೃದ್ಧಿಗೆ ಸಹಕಾರಿ ಕುಂಬಳಕಾಯಿ

Published On - 4:11 pm, Sat, 5 February 22

Follow Us
Web contact
Web contact

TV9 Kannada

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ