AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಹೊಳೆಯುವ ಚರ್ಮಕ್ಕಾಗಿ ಈ ಆಹಾರಗಳನ್ನು ಸೇವನೆ ಮಾಡಿ

ಆರೋಗ್ಯಕರ ಆಹಾರ ನಿಮ್ಮ ಚರ್ಮಕ್ಕೆ ಹೊಳಪು ನೀಡುವುದಲ್ಲದೆ ಚಳಿಗಾಲದಲ್ಲಿ ಕಂಡು ಬರುವ ನಾನಾ ರೀತಿಯ ಚರ್ಮ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ನಮ್ಮ ತ್ವಚೆ ಅಂದವಾಗಿ ಕಾಣಲು ಹಲವಾರು ಮಾರ್ಗಗಳಿವೆ. ಚರ್ಮವನ್ನು ಹೊರಗಿನಿಂದ ರಕ್ಷಿಸಲು ನಾನಾ ಬಗೆಯ ಫೇಸ್ ಪ್ಯಾಕ್, ಕ್ರೀಮ್, ಲೋಷನ್, ಮಾಯಿಶ್ಚರೈಸರ್ ಮುಂತಾದ ಹಲವು ಉತ್ಪನ್ನಗಳನ್ನು ಬಳಸುತ್ತೇವೆ. ಆದರೆ, ಚರ್ಮ ಉತ್ತಮವಾಗಲು ನೀವು ಒಳಗಿನಿಂದ ಆಹಾರ ನೀಡಬೇಕು. ಇದಕ್ಕಾಗಿ ಆರೋಗ್ಯಕರ ಆಹಾರ ಕ್ರಮವನ್ನು ಅನುಸರಿಸುವುದು ಬಹಳ ಮುಖ್ಯ. ಹಾಗಾದರೆ ಚಳಿಗಾಲದಲ್ಲಿ ಉತ್ತಮ ತ್ವಚೆಯನ್ನು ಪಡೆಯಲು ಯಾವ ರೀತಿಯ ಆಹಾರಗಳನ್ನು ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳಿ.

ಚಳಿಗಾಲದಲ್ಲಿ ಹೊಳೆಯುವ ಚರ್ಮಕ್ಕಾಗಿ ಈ ಆಹಾರಗಳನ್ನು ಸೇವನೆ ಮಾಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 03, 2025 | 4:47 PM

Share

ಚಳಿಗಾಲದಲ್ಲಿ ಸಾಮಾನ್ಯವಾಗಿ ಚರ್ಮದ ಹೊಳಪು ಕಡಿಮೆಯಾಗುವುದಲ್ಲದೆ ಸುಕ್ಕು, ಕಪ್ಪು ಚುಕ್ಕೆಗಳು ಕಂಡು ಬರುತ್ತದೆ. ಹೊಳೆಯುವ ಚರ್ಮ ಬೇಕಾದರೆ ಅದೇ ರೀತಿ ನಿಮ್ಮ ಆಹಾರ ಕ್ರಮಗಳನ್ನು ರೂಢಿಸಿಕೊಳ್ಳಬೇಕಾಗುತ್ತದೆ. ಏಕೆಂದರೆ ಆರೋಗ್ಯಕರ ಆಹಾರ ನಿಮ್ಮ ಚರ್ಮಕ್ಕೆ ಹೊಳಪು ನೀಡುವುದಲ್ಲದೆ ಚಳಿಗಾಲದಲ್ಲಿ ಕಂಡು ಬರುವ ನಾನಾ ರೀತಿಯ ಚರ್ಮ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ನಮ್ಮ ತ್ವಚೆ ಅಂದವಾಗಿ ಕಾಣಲು ಹಲವಾರು ಮಾರ್ಗಗಳಿವೆ. ಹೊರಗಿನಿಂದ ನಾನಾ ಬಗೆಯ ಫೇಸ್ ಪ್ಯಾಕ್, ಕ್ರೀಮ್, ಲೋಷನ್, ಮಾಯಿಶ್ಚರೈಸರ್ ಮುಂತಾದ ಹಲವು ಉತ್ಪನ್ನಗಳನ್ನು ಬಳಸುತ್ತೇವೆ. ಆದರೆ, ಚರ್ಮ ಉತ್ತಮವಾಗಲು ನೀವು ಒಳಗಿನಿಂದ ಆಹಾರ ನೀಡಬೇಕು. ಇದಕ್ಕಾಗಿ ಆರೋಗ್ಯಕರ ಆಹಾರ ಕ್ರಮವನ್ನು ಅನುಸರಿಸುವುದು ಬಹಳ ಮುಖ್ಯ. ಹಾಗಾದರೆ ಚಳಿಗಾಲದಲ್ಲಿ ಉತ್ತಮ ತ್ವಚೆಯನ್ನು ಪಡೆಯಲು ಯಾವ ರೀತಿಯ ಆಹಾರಗಳನ್ನು ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳಿ.

ಸಿಹಿ ಆಲೂಗೆಡ್ಡೆ

ಬೀಟಾ -ಕ್ಯಾರೋಟಿನ್ ನಿಂದ ಸಮೃದ್ಧವಾಗಿದ್ದು ಇದನ್ನು ವಿಟಮಿನ್ ಎ ಆಗಿ ಪರಿವರ್ತಿಸುತ್ತದೆ. ಈ ಅಂಶವು ಆರೋಗ್ಯಕರ ಚರ್ಮವನ್ನು ಉತ್ತೇಜಿಸುತ್ತದೆ. ಅದಲ್ಲದೆ ಸಿಹಿ ಆಲೂಗೆಡ್ಡೆಯಲ್ಲಿ ಮೈಕ್ರೊನ್ಯೂಟ್ರಿಯೆಂಟ್ ಸಮೃದ್ಧವಾಗಿದೆ ಮತ್ತು ಹೆಚ್ಚಿನ ಫೈಬರ್ ಅನ್ನು ಸಹ ಹೊಂದಿದೆ. ಇದು ಸ್ವಲ್ಪ ಕಡಿಮೆ ಕ್ಯಾಲೊರಿಗಳನ್ನು ಹೊಂದಿದ್ದು, ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ.

ಆವಕಾಡೊ

ಈ ಹಣ್ಣಿನಲ್ಲಿ ಆರೋಗ್ಯಕರ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತದೆ. ಅದರಲ್ಲಿಯೂ ಶುಷ್ಕ ತಿಂಗಳುಗಳಲ್ಲಿ ಚರ್ಮದ ಆರೋಗ್ಯ ಕಾಪಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಪಾಲಕ್ ಸೊಪ್ಪು

ಈ ಸೊಪ್ಪಿನಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಅಂಶವು ಚರ್ಮದಲ್ಲಿನ ನೆರಿಗೆ ಮತ್ತು ಗೆರೆಗಳನ್ನು ನಿವಾರಣೆ ಮಾಡುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಗೆ ಹಾಕಿ, ಚರ್ಮಕ್ಕೆ ಕಾಂತಿ ನೀಡುತ್ತದೆ. ಆದ್ದರಿಂದ ನಿಯಮಿತವಾಗಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಪಾಲಕ ಜ್ಯೂಸ್ ಕುಡಿಯುವುದು ಬಹಳ ಒಳ್ಳೆಯದು ಇದರಿಂದ ಚರ್ಮಕ್ಕೆ ಕಾಂತಿ ಸಿಗುತ್ತದೆ.

ಬಾದಾಮಿ

ಇದನ್ನು ನಿಯಮಿತವಾಗಿ ಸೇವನೆ ಮಾಯುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ. ಅದಲ್ಲದೆ ಬಾದಾಮಿ ಎಣ್ಣೆಯನ್ನು ಹಚ್ಚುವುದರಿಂದಲೂ ಕೂಡ ಇದು ಮೈಬಣ್ಣ ಮತ್ತು ಚರ್ಮದ ಟೋನ್ ಸುಧಾರಿಸುತ್ತದೆ. ಜೊತೆಗೆ ಇದರಲ್ಲಿರುವ ಎಮೋಲಿಯಂಟ್ ಗುಣಲಕ್ಷಣಗಳು ಚರ್ಮಕ್ಕೆ ಬಹಳ ಒಳ್ಳೆಯದು.

ಕ್ಯಾರೆಟ್

ಈ ತರಕಾರಿಯಲ್ಲಿ ಬೀಟಾ -ಕ್ಯಾರೋಟಿನ್ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು ಚರ್ಮವನ್ನು ಯುವಿ ಕಿರಣಗಳಿಂದ ರಕ್ಷಿಸುತ್ತದೆ ಮತ್ತು ಚರ್ಮ ಹೊಳಪಿನಿಂದ ಕೂಡಿರುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ