AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಆಹಾರ ಪದಾರ್ಥಗಳನ್ನು ಪ್ರಯತ್ನಿಸಿ

ನೀವು ಅಧಿಕ ರಕ್ತದೊತ್ತಡವನ್ನು ಹೊಂದಿದ್ದರೆ ಮತ್ತು ಸರಳ ಪರಿಹಾರಗಳನ್ನು ಹುಡುಕುತ್ತಿದ್ದರೆ ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ನೀವು ಕೆಲವು ಮನೆ ಆಹಾರಗಳನ್ನು ಸೇವಿಸಬಹುದು. ಅವುಗಳು ಯಾವುದು ಎಂದು ಈ ಸ್ಟೋರಿಯಲ್ಲಿ ನೀಡಿದ್ದೇವೆ.

Health Tips: ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಆಹಾರ ಪದಾರ್ಥಗಳನ್ನು ಪ್ರಯತ್ನಿಸಿ
ಸಾಂದರ್ಭಿಕ ಚಿತ್ರ
TV9 Web
| Updated By: Rakesh Nayak Manchi|

Updated on: Jun 04, 2022 | 8:00 AM

Share

ಅನೇಕ ಜನರು ಅಧಿಕ ರಕ್ತದೊತ್ತಡ(Hypertension)ದಿಂದ ಬಳಲುತ್ತಿದ್ದಾರೆ. ಇಂಥವರಿಗೆ ಆರೋಗ್ಯಕರ ಆಹಾರ ಮತ್ತು ಅವರ ಆಹಾರವನ್ನು ಸರಿಹೊಂದಿಸುವಂತಹ ಜೀವನಶೈಲಿ (Lifestyle) ಅಳವಡಿಸಿಕೊಳ್ಳುವುದು ಅಗತ್ಯವಿರುತ್ತದೆ. ನೀವು ಅಧಿಕ ರಕ್ತದೊತ್ತಡವನ್ನು ಹೊಂದಿದ್ದರೆ ಮತ್ತು ಸರಳ ಪರಿಹಾರಗಳನ್ನು ಹುಡುಕುತ್ತಿದ್ದರೆ ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ನೀವು ಕೆಲವು ಮನೆ ಆಹಾರಗಳನ್ನು ಸೇವಿಸಬೇಕು.

ಇದನ್ನೂ ಓದಿ: Health Tips: ಹೆಚ್ಚಿದ ತಾಪಮಾನ, ಹೃದಯದ ರಕ್ಷಣೆ ಹೇಗೆ? ಇಲ್ಲಿದೆ ಕೆಲವೊಂದು ಸಲಹೆಗಳು

ರಕ್ತದೊತ್ತಡ ಕಡಿಮೆ ಮಾಡಲು ಏನು ಸೇವಿಸಬೇಕು?

  • ಬಾಳೆಹಣ್ಣು: ಸುಲಭವಾಗಿ ಸಿಪ್ಪೆ ತೆಗೆಯಬಹುದಾದ ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ಮಿಲ್ಕ್​ಶೇಕ್​ ಮತ್ತು ಇತರ ಆಹಾರಗಳೊಂದಿಗೆ ಸೇವಿಸಬಹುದು.
  • ಬೀಟ್ರೂಟ್: ಕಡುಗೆಂಪು ಬೀಟ್ರೂಟ್​ನಲ್ಲಿ ಹೇರಳವಾಗಿರುವ ನೈಟ್ರೇಟ್‌ಗಳು ರಕ್ತನಾಳಗಳನ್ನು ವಿಶ್ರಾಂತಿ ಮಾಡಲು ಮತ್ತು ರಕ್ತದ ಹರಿವನ್ನು ವರ್ಧಿಸಲು ಸಹಾಯ ಮಾಡುತ್ತದೆ.
  • ಬೆಳ್ಳುಳ್ಳಿ: ಇದು ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಫಂಗಲ್ ಆಹಾರವಾಗಿದ್ದು, ಸ್ನಾಯುಗಳನ್ನು ವಿಶ್ರಾಂತಿ ಮಾಡುವ ಮೂಲಕ ಮತ್ತು ರಕ್ತನಾಳಗಳ ವಿಸ್ತರಣೆಯ ಮೂಲಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಹೆಚ್ಚು ನೀರು: ನಮ್ಮ ದೇಹದ ವಿಷಕಾರಕ ವಸ್ತುಗಳನ್ನು ಹೊರಹಾಕಲು ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಿಸಲು ಅತೀ ಅಗತ್ಯವಾದದ್ದು ನೀರು. ಹೀಗಾಗಿ ದಿನಕ್ಕೆ 3 ರಿಂದ 4 ಲೀಟರ್​ನಷ್ಟು ನೀಡು ಕುಡಿಯಿರಿ.
  • ಸಮತೋಲನ ಆಹಾರ ಸೇವನೆ: ದೇಹವು ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಸಮತೋಲಿತ ಆಹಾರ ಸೇವಿಸಿ. ತಾಜಾ ಹಣ್ಣುಗಳು, ಹಸಿ ತರಕಾರಿಗಳು, ಧಾನ್ಯಗಳು ಹಾಗೂ ಪೋಷಕಾಂಶಯುಕ್ತ ಆಹಾರವನ್ನು ಸೇವಿಸಬೇಕು.

ಇದನ್ನೂ ಓದಿ: ಚೂರಿಯಂತೆ ಚೂಪಾದ ಮುಳ್ಳುಗಳಿಂದ ಆವೃತ್ತವಾದ, ಕೆಂಪು ಕೆಂಪಾದ ಹಣ್ಣುಗಳಿಂದ ಆಕರ್ಷಿಸುವ ಪಾಪಾಸುಕಳ್ಳಿ ಆರೋಗ್ಯದ ಖಜಾನೆಯನ್ನೇ ಹೊಂದಿದೆ!

ರಕ್ತದೊತ್ತಡ ನಿಯಂತ್ರಣಕ್ಕೆ ಏನನ್ನು ತ್ಯಜಿಸಬೇಕು?

  1. ಧೂಮಪಾನ, ಮದ್ಯಪಾನ ತ್ಯಜಿಸಿ: ನಿರಂತರ ಧೂಮಪಾನ, ಮದ್ಯಪಾನವು ರಕ್ತದೊತ್ತಡ, ಹೃದಯಾಘಾತಕ್ಕೆ ಕಾರಣವಾಗಬಹುದು. ಧೂಮಪಾನ ಮಾಡುವುದರಿಂದ ರಕ್ತನಾಳಗಳು ಕುಗ್ಗಿಕೊಂಡು ರಕ್ತದೊತ್ತಡವನ್ನು ಉಂಟುಮಾಡುತ್ತದೆ. ಹೀಗಾಗಿ ಈ ದುಶ್ಚಟಗಳಿಂದ ದೂರ ಇರಿ.
  2. ಉಪ್ಪಿನಾಂಶ ತ್ಯಜಿಸಿ: ಉಪ್ಪಿನ ಅಂಶ ಜಾಸ್ತಿ ಇರುವ ಆಹಾರಗಳಾದ ಉಪ್ಪಿನಕಾಯಿ, ಕರಿದ ತಿಂಡಿಗಳು, ಸಿದ್ಧ ಆಹಾರಗಳನ್ನು ತ್ಯಜಿಸಬೇಕು.
  3. ಒತ್ತಡದ ವಾತಾವರಣದಲ್ಲಿ ಕೆಲಸ ಮಾಡುವುದನ್ನು ಕಡಿಮೆ ಮಾಡಬೇಕು: ಕೆಲಸದ ಸಮಯದಲ್ಲಿ ಅತಿಯಾದ ಒತ್ತಡದಿಂದ ರಸದೂತಗಳು ಸ್ರವಿಸುವಿಕೆಯಲ್ಲಿ ಏರುಪೇರಾಗಿ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಹೀಗಾಗಿ ಒತ್ತಡದ ವಾತಾವರಣದಲ್ಲಿ ಕೆಲಸ ಮಾಡುವುದನ್ನು ಕಡಿಮೆ ಮಾಡಬೇಕು.‘

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ