AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಆಹಾರ ಪದಾರ್ಥಗಳನ್ನು ಪ್ರಯತ್ನಿಸಿ

ನೀವು ಅಧಿಕ ರಕ್ತದೊತ್ತಡವನ್ನು ಹೊಂದಿದ್ದರೆ ಮತ್ತು ಸರಳ ಪರಿಹಾರಗಳನ್ನು ಹುಡುಕುತ್ತಿದ್ದರೆ ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ನೀವು ಕೆಲವು ಮನೆ ಆಹಾರಗಳನ್ನು ಸೇವಿಸಬಹುದು. ಅವುಗಳು ಯಾವುದು ಎಂದು ಈ ಸ್ಟೋರಿಯಲ್ಲಿ ನೀಡಿದ್ದೇವೆ.

Health Tips: ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಆಹಾರ ಪದಾರ್ಥಗಳನ್ನು ಪ್ರಯತ್ನಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on: Jun 04, 2022 | 8:00 AM

Share

ಅನೇಕ ಜನರು ಅಧಿಕ ರಕ್ತದೊತ್ತಡ(Hypertension)ದಿಂದ ಬಳಲುತ್ತಿದ್ದಾರೆ. ಇಂಥವರಿಗೆ ಆರೋಗ್ಯಕರ ಆಹಾರ ಮತ್ತು ಅವರ ಆಹಾರವನ್ನು ಸರಿಹೊಂದಿಸುವಂತಹ ಜೀವನಶೈಲಿ (Lifestyle) ಅಳವಡಿಸಿಕೊಳ್ಳುವುದು ಅಗತ್ಯವಿರುತ್ತದೆ. ನೀವು ಅಧಿಕ ರಕ್ತದೊತ್ತಡವನ್ನು ಹೊಂದಿದ್ದರೆ ಮತ್ತು ಸರಳ ಪರಿಹಾರಗಳನ್ನು ಹುಡುಕುತ್ತಿದ್ದರೆ ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ನೀವು ಕೆಲವು ಮನೆ ಆಹಾರಗಳನ್ನು ಸೇವಿಸಬೇಕು.

ಇದನ್ನೂ ಓದಿ: Health Tips: ಹೆಚ್ಚಿದ ತಾಪಮಾನ, ಹೃದಯದ ರಕ್ಷಣೆ ಹೇಗೆ? ಇಲ್ಲಿದೆ ಕೆಲವೊಂದು ಸಲಹೆಗಳು

ರಕ್ತದೊತ್ತಡ ಕಡಿಮೆ ಮಾಡಲು ಏನು ಸೇವಿಸಬೇಕು?

  • ಬಾಳೆಹಣ್ಣು: ಸುಲಭವಾಗಿ ಸಿಪ್ಪೆ ತೆಗೆಯಬಹುದಾದ ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ಮಿಲ್ಕ್​ಶೇಕ್​ ಮತ್ತು ಇತರ ಆಹಾರಗಳೊಂದಿಗೆ ಸೇವಿಸಬಹುದು.
  • ಬೀಟ್ರೂಟ್: ಕಡುಗೆಂಪು ಬೀಟ್ರೂಟ್​ನಲ್ಲಿ ಹೇರಳವಾಗಿರುವ ನೈಟ್ರೇಟ್‌ಗಳು ರಕ್ತನಾಳಗಳನ್ನು ವಿಶ್ರಾಂತಿ ಮಾಡಲು ಮತ್ತು ರಕ್ತದ ಹರಿವನ್ನು ವರ್ಧಿಸಲು ಸಹಾಯ ಮಾಡುತ್ತದೆ.
  • ಬೆಳ್ಳುಳ್ಳಿ: ಇದು ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಫಂಗಲ್ ಆಹಾರವಾಗಿದ್ದು, ಸ್ನಾಯುಗಳನ್ನು ವಿಶ್ರಾಂತಿ ಮಾಡುವ ಮೂಲಕ ಮತ್ತು ರಕ್ತನಾಳಗಳ ವಿಸ್ತರಣೆಯ ಮೂಲಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಹೆಚ್ಚು ನೀರು: ನಮ್ಮ ದೇಹದ ವಿಷಕಾರಕ ವಸ್ತುಗಳನ್ನು ಹೊರಹಾಕಲು ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಿಸಲು ಅತೀ ಅಗತ್ಯವಾದದ್ದು ನೀರು. ಹೀಗಾಗಿ ದಿನಕ್ಕೆ 3 ರಿಂದ 4 ಲೀಟರ್​ನಷ್ಟು ನೀಡು ಕುಡಿಯಿರಿ.
  • ಸಮತೋಲನ ಆಹಾರ ಸೇವನೆ: ದೇಹವು ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಸಮತೋಲಿತ ಆಹಾರ ಸೇವಿಸಿ. ತಾಜಾ ಹಣ್ಣುಗಳು, ಹಸಿ ತರಕಾರಿಗಳು, ಧಾನ್ಯಗಳು ಹಾಗೂ ಪೋಷಕಾಂಶಯುಕ್ತ ಆಹಾರವನ್ನು ಸೇವಿಸಬೇಕು.

ಇದನ್ನೂ ಓದಿ: ಚೂರಿಯಂತೆ ಚೂಪಾದ ಮುಳ್ಳುಗಳಿಂದ ಆವೃತ್ತವಾದ, ಕೆಂಪು ಕೆಂಪಾದ ಹಣ್ಣುಗಳಿಂದ ಆಕರ್ಷಿಸುವ ಪಾಪಾಸುಕಳ್ಳಿ ಆರೋಗ್ಯದ ಖಜಾನೆಯನ್ನೇ ಹೊಂದಿದೆ!

ರಕ್ತದೊತ್ತಡ ನಿಯಂತ್ರಣಕ್ಕೆ ಏನನ್ನು ತ್ಯಜಿಸಬೇಕು?

  1. ಧೂಮಪಾನ, ಮದ್ಯಪಾನ ತ್ಯಜಿಸಿ: ನಿರಂತರ ಧೂಮಪಾನ, ಮದ್ಯಪಾನವು ರಕ್ತದೊತ್ತಡ, ಹೃದಯಾಘಾತಕ್ಕೆ ಕಾರಣವಾಗಬಹುದು. ಧೂಮಪಾನ ಮಾಡುವುದರಿಂದ ರಕ್ತನಾಳಗಳು ಕುಗ್ಗಿಕೊಂಡು ರಕ್ತದೊತ್ತಡವನ್ನು ಉಂಟುಮಾಡುತ್ತದೆ. ಹೀಗಾಗಿ ಈ ದುಶ್ಚಟಗಳಿಂದ ದೂರ ಇರಿ.
  2. ಉಪ್ಪಿನಾಂಶ ತ್ಯಜಿಸಿ: ಉಪ್ಪಿನ ಅಂಶ ಜಾಸ್ತಿ ಇರುವ ಆಹಾರಗಳಾದ ಉಪ್ಪಿನಕಾಯಿ, ಕರಿದ ತಿಂಡಿಗಳು, ಸಿದ್ಧ ಆಹಾರಗಳನ್ನು ತ್ಯಜಿಸಬೇಕು.
  3. ಒತ್ತಡದ ವಾತಾವರಣದಲ್ಲಿ ಕೆಲಸ ಮಾಡುವುದನ್ನು ಕಡಿಮೆ ಮಾಡಬೇಕು: ಕೆಲಸದ ಸಮಯದಲ್ಲಿ ಅತಿಯಾದ ಒತ್ತಡದಿಂದ ರಸದೂತಗಳು ಸ್ರವಿಸುವಿಕೆಯಲ್ಲಿ ಏರುಪೇರಾಗಿ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಹೀಗಾಗಿ ಒತ್ತಡದ ವಾತಾವರಣದಲ್ಲಿ ಕೆಲಸ ಮಾಡುವುದನ್ನು ಕಡಿಮೆ ಮಾಡಬೇಕು.‘

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!