AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದ ಮಧ್ಯವೇ ಗಡಿಬಿಡಿಯಲ್ಲಿ ಆಹಾರ ಸೇವಿಸುವುದರಿಂದ ಉಂಟಾಗುವ ಅನಾರೋಗ್ಯದ ಬಗ್ಗೆ ಎಚ್ಚರವಿರಲಿ!

ಯಾವಾಗಲೂ ನೆನಪಿಟ್ಟುಕೊಳ್ಳುವಂತಹ ವಿಚಾರವೆಂದರೆ ಊಟ ಮಾಡುವಾಗ ಅಥವಾ ಆಹಾರವನ್ನು ಸೇವಿಸುವಾಗ ಗಡಿಬಿಡಿ ಮಾಡುವುದು ಒಳ್ಳೆಯದಲ್ಲ. ಇದು ನಿಮ್ಮ ಅನಾರೋಗ್ಯವನ್ನೂ ಇನ್ನೂ ಹೆಚ್ಚಿಸುತ್ತದೆ.

ಕೆಲಸದ ಮಧ್ಯವೇ ಗಡಿಬಿಡಿಯಲ್ಲಿ ಆಹಾರ ಸೇವಿಸುವುದರಿಂದ ಉಂಟಾಗುವ ಅನಾರೋಗ್ಯದ ಬಗ್ಗೆ ಎಚ್ಚರವಿರಲಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 13, 2021 | 1:38 PM

Share

ವರ್ಷಗಟ್ಟಲೆ ಮನೆಯಲ್ಲೇ ಇದ್ದು ಕೆಲಸ ಮಾಡುತ್ತಾ ಇರುವುದರಿಂದ ಜನರು ಮನೆಯಿಂದ ಕೆಲಸ ಮಾಡಲು ಒಗ್ಗಿಕೊಂಡಿದ್ದಾರೆ. ಊಟ ತಿಂಡಿ ಜತೆಗೆ ಮಧ್ಯಂತರ ಆಹಾರಗಳೆಲ್ಲವೂ ಸಹ ಕೆಲಸದ ಮಧ್ಯವೇ ನಡೆಯುತ್ತಿದೆ. ಸಮಯದ ಉಳಿತಾಯದ ದೃಷ್ಟಿಯಿಂದ ಕೆಲಸಕ್ಕೆ ಕೂತಿರುವ ಜಾಗದಲ್ಲಿಯೇ ಊಟ, ತಿಂಡಿ – ತಿನಿಸುಗಳನ್ನು ಸೇವಿಸುವುದು ಒಳ್ಳೆಯದು ಅನಿಸಬಹುದು. ಆದರೆ ಇದು ನಿಮ್ಮ ಆರೋಗ್ಯಕ್ಕೆ ಅಡ್ಡ ಪರಿಣಾಮಗಳನ್ನು ಬೀರುತ್ತದೆ ಎಂಬುದರ ಬಗ್ಗೆ ಎಚ್ಚರವಿರಲಿ!

ಕೆಲಸದ ಸ್ಥಳದಲ್ಲಿಯೇ ಒಂದು ಕಡೆ ಲ್ಯಾಪ್ಟಾಪ್ ಮತ್ತೊಂದು ಕಡೆ ಊಟದ ತಟ್ಟೆ. ಕೆಲಸದ ಮಧ್ಯವೇ ಚಮಚದಲ್ಲಿ ಊಟ ಮಾಡುವುದು ನಿಮ್ಮ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತವೆ. ಈ ಪ್ರಕ್ರಿಯೆಯಲ್ಲಿ ಒಬ್ಬೊಬ್ಬರು ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತಾರೆ. ಇದು ಹೊಟ್ಟೆ ನೋವು ಮತ್ತು ಹೊಟ್ಟೆ ಉಬ್ಬುವ ಸಮಸ್ಯೆಗೆ ಕಾರಣವಾಗಬಹುದು.

ಕೆಲಸದ ಮಧ್ಯೆ ಅವಸರದಲ್ಲಿ ಕುಳಿತಲ್ಲಿಯೇ ಲಘುಬಗೆಯಿಂದ ಊಟ ಮಾಡುವಿರಿ. ಅನ್ನವನ್ನು ಸರಿಯಾಗಿ ಅಗಿಯುವುದೂ ಇಲ್ಲ. ಅತಿಯಾಗಿ ತಿನ್ನುವುದು ಜತೆಗೆ ಅತಿ ವೇಗದಲ್ಲಿ ಊಟ ಮಾಡುವುದೂ ಸಹ ಆರೋಗ್ಯಕ್ಕೆ ಹಾನಿಕಾರಕ. ಅವಸರದಲ್ಲಿ ಕಡಿಮೆ ಊಟವನ್ನು ಮಾಡುವುದು ಸಹ ಅನಾರೋಗ್ಯವನ್ನು ಉಂಟು ಮಾಡುತ್ತವೆ.

ಆಹಾರದ ಮೂಲಕ ನಮ್ಮ ದೇಹಕ್ಕೆ ಕಾರ್ಬೊಹೈಡ್ರೆಟ್, ಫೈಬರ್, ಪ್ರೊಟೀನ್ ಮತ್ತು ಆರೋಗ್ಯಕರ ಕೊಬ್ಬುಗಳು ಸಿಗುತ್ತವೆ. ಅದನ್ನು ಬಿಟ್ಟು ಕೆಲಸದ ಒತ್ತಡದಲ್ಲಿ ಸ್ಯಾಂಡ್​ವಿಚ್​, ಬರ್ಗರ್, ನೂಡಲ್ಸ್​​ಗಳಂಥಹ ಆಹಾರವನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ.

ಯಾವಾಗಲೂ ನೆನಪಿಟ್ಟುಕೊಳ್ಳುವಂತಹ ವಿಚಾರವೆಂದರೆ ಊಟ ಮಾಡುವಾಗ ಅಥವಾ ಆಹಾರವನ್ನು ಸೇವಿಸುವಾಗ ಗಡಿಬಿಡಿ ಮಾಡುವುದು ಒಳ್ಳೆಯದಲ್ಲ. ಇದು ನಿಮ್ಮ ಅನಾರೋಗ್ಯವನ್ನೂ ಇನ್ನೂ ಹೆಚ್ಚಿಸುತ್ತದೆ. ಒಳ್ಳೆಯ ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯ ಜತೆಗೆ ಆಹಾರವನ್ನು ಚೆನ್ನಾಗಿ ಅಗಿದು ಸೇವಿಸುವುದು ಬಹಳ ಮುಖ್ಯ.

ಇದನ್ನೂ ಓದಿ:

Health Tips: ರಾತ್ರಿ ಎಡಭಾಗಕ್ಕೆ ತಿರುಗಿ ಮಲಗುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ಗಮನಿಸಿ

Health Tips: ಗೋಡಂಬಿ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ