AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಗೋಡಂಬಿ ತಿನ್ನುತ್ತಿಲ್ಲವೇ? ಹಾಗಾದರೆ ಈ ಆರೋಗ್ಯ ಪ್ರಯೋಜನಗಳನ್ನು ಮಿಸ್​ ಮಾಡಿಕೊಳ್ತಿದ್ದೀರಿ ನೋಡಿ

ಹೊಳೆಯುವ ತ್ವಚೆಗಾಗಿ ಗೋಡಂಬಿ! ಹೌದು ಮುಖದ ಮೇಲಿನ ಸುಕ್ಕು, ಕಲೆ, ಮೊಡವೆಗಳನ್ನು ಕಡಿಮೆ ಮಾಡುವ ಶಕ್ತಿಯೂ ಗೋಡಂಬಿಗೆ ಇದೆ. ಇದಕ್ಕೆ ಮುಖ್ಯ ಕಾರಣ ಇದರಲ್ಲಿರುವ ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕ ಗುಣಗಳು.

ನೀವು ಗೋಡಂಬಿ ತಿನ್ನುತ್ತಿಲ್ಲವೇ? ಹಾಗಾದರೆ ಈ ಆರೋಗ್ಯ ಪ್ರಯೋಜನಗಳನ್ನು ಮಿಸ್​ ಮಾಡಿಕೊಳ್ತಿದ್ದೀರಿ ನೋಡಿ
ಗೋಡಂಬಿಯಿಂದಾಗುವ ಆರೋಗ್ಯ ಪ್ರಯೋಜನಗಳನ್ನು ಮಿಸ್​ ಮಾಡಿಕೊಳ್ಳಬೇಡಿ
Follow us
ಸಾಧು ಶ್ರೀನಾಥ್​
|

Updated on: Sep 22, 2023 | 6:06 AM

Cashew Benefits: ಒಣಗಿದ ಹಣ್ಣುಗಳೊಂದಿಗೆ, ತಾಜಾ ತರಕಾರಿಗಳು ಮತ್ತು ಹಣ್ಣುಗಳ ದೈನಂದಿನ ಸೇವನೆಯು ಬಹಳಷ್ಟು ಪ್ರಯೋಜನಗಳನ್ನು ಹೊಂದಿದೆ. ಗೋಡಂಬಿಯು ಡ್ರೈನಟ್ಸ್‌ಗಳಲ್ಲಿ ಒಂದಾಗಿದೆ, ಇದು ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಗೋಡಂಬಿಯು ವಿಟಮಿನ್‌ಗಳು, ಪ್ರೋಟೀನ್‌ಗಳು, ಖನಿಜಗಳು, ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಅನೇಕ ಪೋಷಕಾಂಶಗಳನ್ನು ಸಮೃದ್ಧವಾಗಿ ಹೊಂದಿದೆ. ಇಷ್ಟು ಪೋಷಕಾಂಶಗಳನ್ನು ಹೊಂದಿರುವ ಗೋಡಂಬಿಯ ಪ್ರಯೋಜನಗಳೇನು ಎಂಬುದನ್ನು ಈಗ ನೋಡೋಣ…

ತೂಕ ನಿಯಂತ್ರಣ: ತೂಕ ಇಳಿಸಿಕೊಳ್ಳಲು ಬಯಸುವವರು ಗೋಡಂಬಿ ತಿಂದರೆ ಉತ್ತಮ ಫಲಿತಾಂಶ ಪಡೆಯಬಹುದು. ಗೋಡಂಬಿಯ ಸೇವನೆಯಿಂದಾಗಿ, ಗೋಡಂಬಿ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಮತ್ತು ತೀವ್ರತರ ಹಸಿವಿನ ಬಯಕೆಗಳನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ, ಜೀರ್ಣಕಾರಿ ಸಮಸ್ಯೆಗಳು ದೂರವಾಗುತ್ತವೆ ಮತ್ತು ತೂಕವೂ ಕಡಿಮೆಯಾಗುತ್ತದೆ!

ದೃಢ/ ಬಲವಾದ ಕೂದಲು: ಗೋಡಂಬಿಯಲ್ಲಿ ಹೇರಳವಾಗಿರುವ ಸತು, ಮೆಗ್ನೀಸಿಯಮ್, ಕಬ್ಬಿಣ, ರಂಜಕದಂತಹ ಪೋಷಕಾಂಶಗಳು ಕೂದಲನ್ನು ಮೃದುವಾಗಿ, ದೃಢವಾಗಿ ಮತ್ತು ದಪ್ಪವಾಗಿಸಲು ಪ್ರಮುಖ ಪಾತ್ರವಹಿಸುತ್ತವೆ. ಅಲ್ಲದೆ, ವಿಟಮಿನ್ ಇ ಮತ್ತು ಆಂಟಿ-ಆಕ್ಸಿಡೆಂಟ್ ಗುಣಲಕ್ಷಣಗಳು ಕೂದಲಿನ ಸಮಸ್ಯೆಗಳನ್ನು ದೂರವಿರಿಸುತ್ತದೆ.

ಇದನ್ನೂ ಓದಿ: Almonds for Weight Loss: ತೂಕ ಇಳಿಸುವ ಪ್ರಯತ್ನದಲ್ಲಿದ್ದರೆ ಬಾದಾಮಿ ತಿನ್ನಿ

ಸಕ್ಕರೆ ನಿಯಂತ್ರಣ: ಮೊದಲೇ ಹೇಳಿದಂತೆ ಗೋಡಂಬಿಯಲ್ಲಿ ನಾರಿನಂಶ ಹೇರಳವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುವುದಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ನಿಯಂತ್ರಿಸುತ್ತದೆ.

ಹೊಳೆಯುವ ತ್ವಚೆ: ಮುಖದ ಮೇಲಿನ ಸುಕ್ಕು, ಕಲೆ, ಮೊಡವೆಗಳನ್ನು ಕಡಿಮೆ ಮಾಡುವ ಶಕ್ತಿಯೂ ಗೋಡಂಬಿಗೆ ಇದೆ. ಇದಕ್ಕೆ ಮುಖ್ಯ ಕಾರಣ ಇದರಲ್ಲಿರುವ ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕ ಗುಣಗಳು.

ರಕ್ತಹೀನತೆ ನಿಯಂತ್ರಿಸುತ್ತದೆ: ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಗೋಡಂಬಿ ಒಳ್ಳೆಯದು. ಗೋಡಂಬಿಯಲ್ಲಿರುವ ಕಬ್ಬಿಣವು ರಕ್ತ ಕಣಗಳ ಉತ್ಪಾದನೆಯನ್ನು ಸುಧಾರಿಸುತ್ತದೆ ಮತ್ತು ರಕ್ತಹೀನತೆಯ ಸಮಸ್ಯೆಯನ್ನು ನಿವಾರಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ