AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಗೋಡಂಬಿ ತಿನ್ನುತ್ತಿಲ್ಲವೇ? ಹಾಗಾದರೆ ಈ ಆರೋಗ್ಯ ಪ್ರಯೋಜನಗಳನ್ನು ಮಿಸ್​ ಮಾಡಿಕೊಳ್ತಿದ್ದೀರಿ ನೋಡಿ

ಹೊಳೆಯುವ ತ್ವಚೆಗಾಗಿ ಗೋಡಂಬಿ! ಹೌದು ಮುಖದ ಮೇಲಿನ ಸುಕ್ಕು, ಕಲೆ, ಮೊಡವೆಗಳನ್ನು ಕಡಿಮೆ ಮಾಡುವ ಶಕ್ತಿಯೂ ಗೋಡಂಬಿಗೆ ಇದೆ. ಇದಕ್ಕೆ ಮುಖ್ಯ ಕಾರಣ ಇದರಲ್ಲಿರುವ ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕ ಗುಣಗಳು.

ನೀವು ಗೋಡಂಬಿ ತಿನ್ನುತ್ತಿಲ್ಲವೇ? ಹಾಗಾದರೆ ಈ ಆರೋಗ್ಯ ಪ್ರಯೋಜನಗಳನ್ನು ಮಿಸ್​ ಮಾಡಿಕೊಳ್ತಿದ್ದೀರಿ ನೋಡಿ
ಗೋಡಂಬಿಯಿಂದಾಗುವ ಆರೋಗ್ಯ ಪ್ರಯೋಜನಗಳನ್ನು ಮಿಸ್​ ಮಾಡಿಕೊಳ್ಳಬೇಡಿ
ಸಾಧು ಶ್ರೀನಾಥ್​
|

Updated on: Sep 22, 2023 | 6:06 AM

Share

Cashew Benefits: ಒಣಗಿದ ಹಣ್ಣುಗಳೊಂದಿಗೆ, ತಾಜಾ ತರಕಾರಿಗಳು ಮತ್ತು ಹಣ್ಣುಗಳ ದೈನಂದಿನ ಸೇವನೆಯು ಬಹಳಷ್ಟು ಪ್ರಯೋಜನಗಳನ್ನು ಹೊಂದಿದೆ. ಗೋಡಂಬಿಯು ಡ್ರೈನಟ್ಸ್‌ಗಳಲ್ಲಿ ಒಂದಾಗಿದೆ, ಇದು ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಗೋಡಂಬಿಯು ವಿಟಮಿನ್‌ಗಳು, ಪ್ರೋಟೀನ್‌ಗಳು, ಖನಿಜಗಳು, ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಅನೇಕ ಪೋಷಕಾಂಶಗಳನ್ನು ಸಮೃದ್ಧವಾಗಿ ಹೊಂದಿದೆ. ಇಷ್ಟು ಪೋಷಕಾಂಶಗಳನ್ನು ಹೊಂದಿರುವ ಗೋಡಂಬಿಯ ಪ್ರಯೋಜನಗಳೇನು ಎಂಬುದನ್ನು ಈಗ ನೋಡೋಣ…

ತೂಕ ನಿಯಂತ್ರಣ: ತೂಕ ಇಳಿಸಿಕೊಳ್ಳಲು ಬಯಸುವವರು ಗೋಡಂಬಿ ತಿಂದರೆ ಉತ್ತಮ ಫಲಿತಾಂಶ ಪಡೆಯಬಹುದು. ಗೋಡಂಬಿಯ ಸೇವನೆಯಿಂದಾಗಿ, ಗೋಡಂಬಿ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಮತ್ತು ತೀವ್ರತರ ಹಸಿವಿನ ಬಯಕೆಗಳನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ, ಜೀರ್ಣಕಾರಿ ಸಮಸ್ಯೆಗಳು ದೂರವಾಗುತ್ತವೆ ಮತ್ತು ತೂಕವೂ ಕಡಿಮೆಯಾಗುತ್ತದೆ!

ದೃಢ/ ಬಲವಾದ ಕೂದಲು: ಗೋಡಂಬಿಯಲ್ಲಿ ಹೇರಳವಾಗಿರುವ ಸತು, ಮೆಗ್ನೀಸಿಯಮ್, ಕಬ್ಬಿಣ, ರಂಜಕದಂತಹ ಪೋಷಕಾಂಶಗಳು ಕೂದಲನ್ನು ಮೃದುವಾಗಿ, ದೃಢವಾಗಿ ಮತ್ತು ದಪ್ಪವಾಗಿಸಲು ಪ್ರಮುಖ ಪಾತ್ರವಹಿಸುತ್ತವೆ. ಅಲ್ಲದೆ, ವಿಟಮಿನ್ ಇ ಮತ್ತು ಆಂಟಿ-ಆಕ್ಸಿಡೆಂಟ್ ಗುಣಲಕ್ಷಣಗಳು ಕೂದಲಿನ ಸಮಸ್ಯೆಗಳನ್ನು ದೂರವಿರಿಸುತ್ತದೆ.

ಇದನ್ನೂ ಓದಿ: Almonds for Weight Loss: ತೂಕ ಇಳಿಸುವ ಪ್ರಯತ್ನದಲ್ಲಿದ್ದರೆ ಬಾದಾಮಿ ತಿನ್ನಿ

ಸಕ್ಕರೆ ನಿಯಂತ್ರಣ: ಮೊದಲೇ ಹೇಳಿದಂತೆ ಗೋಡಂಬಿಯಲ್ಲಿ ನಾರಿನಂಶ ಹೇರಳವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುವುದಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ನಿಯಂತ್ರಿಸುತ್ತದೆ.

ಹೊಳೆಯುವ ತ್ವಚೆ: ಮುಖದ ಮೇಲಿನ ಸುಕ್ಕು, ಕಲೆ, ಮೊಡವೆಗಳನ್ನು ಕಡಿಮೆ ಮಾಡುವ ಶಕ್ತಿಯೂ ಗೋಡಂಬಿಗೆ ಇದೆ. ಇದಕ್ಕೆ ಮುಖ್ಯ ಕಾರಣ ಇದರಲ್ಲಿರುವ ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕ ಗುಣಗಳು.

ರಕ್ತಹೀನತೆ ನಿಯಂತ್ರಿಸುತ್ತದೆ: ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಗೋಡಂಬಿ ಒಳ್ಳೆಯದು. ಗೋಡಂಬಿಯಲ್ಲಿರುವ ಕಬ್ಬಿಣವು ರಕ್ತ ಕಣಗಳ ಉತ್ಪಾದನೆಯನ್ನು ಸುಧಾರಿಸುತ್ತದೆ ಮತ್ತು ರಕ್ತಹೀನತೆಯ ಸಮಸ್ಯೆಯನ್ನು ನಿವಾರಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ