AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಮಚವಿಲ್ಲದೆ ಕೈಗಳಿಂದ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೋ, ಕೆಟ್ಟದ್ದೋ ತಿಳಿದುಕೊಳ್ಳಿ

ಸಾಮಾನ್ಯವಾಗಿ ನಾವು ಆಹಾರಗಳನ್ನು ಕೈಗಳಿಂದ ಸೇವನೆ ಮಾಡುತ್ತೇವೆ. ಆದರೆ ಈಗ ಚಮಚಗಳು ಬಂದಿರುವುದರಿಂದ ಈ ಪದ್ಧತಿ ಕಡಿಮೆಯಾಗಿದೆ. ಮನಸ್ಸಿನಲ್ಲಿ ಕೈಗಳಿಂದ ತಿನ್ನಬೇಕು ಎಂಬ ಮನಸ್ಸಿದ್ದರೂ ಬೇರೆಯವರು ಏನೆಂದುಕೊಳ್ಳುತ್ತಾರೋ ಏನೋ ಎಂಬ ಭಾವನೆಯಿಂದ ಚಮಚ ಬಳಸುವವರು ಕೂಡ ಇದ್ದಾರೆ. ಆದರೆ ಇತ್ತೀಚಿಗೆ ನಡೆದಂತಹ ಕೆಲವು ಸಂಶೋಧನೆಗಳ ಪ್ರಕಾರ ಹಳೆಯವರು ಮಾಡಿದ ಸಂಪ್ರದಾಯವನ್ನು ಪಾಲಿಸಬೇಕು ಇದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನೆಗಳನ್ನು ಪಡೆದುಕೊಳ್ಳಬಹುದು ಎಂದಿದ್ದಾರೆ. ಹಾಗಾದರೆ ಇದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು? ಈ ಬಗ್ಗೆ ಮಾಹಿತಿ ಇಲ್ಲಿದೆ.

ಚಮಚವಿಲ್ಲದೆ ಕೈಗಳಿಂದ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೋ, ಕೆಟ್ಟದ್ದೋ ತಿಳಿದುಕೊಳ್ಳಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Nov 23, 2024 | 2:48 PM

Share

ಹಿಂದಿನ ಕಾಲದ ಆಹಾರ ಸೇವನೆಗೂ ಇಂದಿನ ಜೀವನಶೈಲಿಗೂ ಅಜಗಜಾಂತರ ವ್ಯತ್ಯಾಸವಿದೆ. ಸಾಮಾನ್ಯವಾಗಿ ನಾವು ಆಹಾರಗಳನ್ನು ಕೈಗಳಿಂದ ಸೇವನೆ ಮಾಡುತ್ತೇವೆ. ಆದರೆ ಈಗ ಚಮಚಗಳು ಬಂದಿರುವುದರಿಂದ ಈ ಪದ್ಧತಿ ಕಡಿಮೆಯಾಗಿದೆ. ಮನಸ್ಸಿನಲ್ಲಿ ಕೈಗಳಿಂದ ತಿನ್ನಬೇಕು ಎಂಬ ಮನಸ್ಸಿದ್ದರೂ ಬೇರೆಯವರು ಏನೆಂದುಕೊಳ್ಳುತ್ತಾರೋ ಏನೋ ಎಂಬ ಭಾವನೆಯಿಂದ ಚಮಚ ಬಳಸುವವರು ಕೂಡ ಇದ್ದಾರೆ. ಆದರೆ ಇತ್ತೀಚಿಗೆ ನಡೆದಂತಹ ಕೆಲವು ಸಂಶೋಧನೆಗಳ ಪ್ರಕಾರ ಹಳೆಯವರು ಮಾಡಿದ ಸಂಪ್ರದಾಯವನ್ನು ಪಾಲಿಸಬೇಕು ಇದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನೆಗಳನ್ನು ಪಡೆದುಕೊಳ್ಳಬಹುದು ಎಂದಿದ್ದಾರೆ. ಹಾಗಾದರೆ ಇದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು? ಈ ಬಗ್ಗೆ ಮಾಹಿತಿ ಇಲ್ಲಿದೆ.

ಆಯುರ್ವೇದದ ಪ್ರಕಾರ ಕೈಗಳನ್ನು ಬಳಸಿ ಆಹಾರ ಸೇವನೆ ಮಾಡುವುದರಿಂದ ನಮ್ಮ ಜೀರ್ಣ ಶಕ್ತಿ ಹೆಚ್ಚಾಗುತ್ತದೆ. ಅಲ್ಲದೆ ಬೆರಳುಗಳ ಮೂಲಕ ಆಹಾರವನ್ನು ಸ್ಪರ್ಶಿಸಿದಾಗ ಮೆದುಳಿಗೆ ನಾವು ತಿನ್ನಲು ಆರಂಭಿಸಿದ್ದೇವೆ ಎನ್ನುವ ಸಂದೇಶ ರವಾನೆಯಾಗುತ್ತದೆ. ಇದರಿಂದಾಗಿ ಹೊಟ್ಟೆ ಮತ್ತು ಜೀರ್ಣಾಂಗ ವ್ಯವಸ್ಥೆಯ ಅಂಗಗಳು ಕಾರ್ಯಾರಂಭಿಸಲು ತಯಾರಾಗಲಿವೆ. ಅಲ್ಲದೆ ಕೈನಿಂದಲೇ ನಾವು ಆಹಾರ ಸೇವಿಸುವುದರಿಂದ ಏನನ್ನ ತಿನ್ನುತ್ತಿದ್ದೇವೆ? ಎಷ್ಟು ತಿನ್ನುತ್ತಿದ್ದೇವೆ? ಎಂಬುದು ಅರಿವಾಗುವುದರಿಂದ ಜೀರ್ಣಕ್ರಿಯೆಗೆ ಸಹಕಾರಿಯಾಗಲಿದೆ.

ಇದನ್ನೂ ಓದಿ: ಕಾಫಿ ಪ್ರಿಯರಿಗೆ ಆಘಾತ! ಎಸ್ಪ್ರೆಸೊ ಕಾಫಿ ಪುರುಷರಿಗೆ ಅಪಾಯಕಾರಿ

ವೈಜ್ಞಾನಿಕ ಲಾಭವೇನು?

ಇದು ರಕ್ತ ಪರಿಚಲನೆಗೆ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಕೈಗಳಿಂದ ಆಹಾರ ಸೇವಿಸುವಾಗ ಬೆರಳುಗಳು ಮತ್ತು ಕೈಯ ಸ್ನಾಯುಗಳಿಗೆ ಚಲನೆಯಾಗುತ್ತದೆ. ಹಾಗಾಗಿ ಇದು ದೇಹದಲ್ಲಿ ರಕ್ತ ಪರಿಚಲನೆಗೆ ಸಹಾಯ ಮಾಡುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕೈಗಳಿಂದ ಆಹಾರ ಸೇವನೆ ಮಾಡುವುದರಿಂದ ಕೆಲವು ಪ್ರಯೋಜನಕಾರಿ ಬ್ಯಾಕ್ಟೀರಿಯಾಗಳು ದೇಹ ಸೇರುತ್ತವೆ. ಈ ಬ್ಯಾಕ್ಟೀರಿಯಾಗಳು ದೇಹ ಸೇರಿರುವ ಕೆಲ ರೋಗ ಕಾರಕಗಳು ಮತ್ತು ಸೋಂಕಿನಿಂದ ನಮ್ಮನ್ನ ರಕ್ಷಣೆ ಮಾಡಲಿವೆ. ಅಲ್ಲದೆ ಬ್ಲಡ್ ಶುಗರ್ ಲೆವೆಲ್ ಮೇಲೆ ಪರಿಣಾಮ ಬೀರುತ್ತದೆ. ಆಹಾರದಲ್ಲಿನ ಗ್ಲೈಸೆಮಿಕ್ ಸೂಚ್ಯಂಕವನ್ನ ನಿಯಂತ್ರಿಸಲಿದ್ದು,ಬ್ಲಡ್ ಶುಗರ್ ಮಟ್ಟದ ಮೇಲೆ ಪರಿಣಾಮ ಬೀರಲಿದೆ. ಜೊತೆಗೆ ಆಹಾರ ಸೇವಿಸಿದ ಬಳಿಕ ಹೊಟ್ಟೆ ತುಂಬುವುದು ಮಾತ್ರವಲ್ಲ, ಆಹಾರವನ್ನ ಆಸ್ವಾದಿಸಿ ತಿನ್ನುವುದು ಕೂಡ ಅಷ್ಟೇ ಮುಖ್ಯ. ಕೈನಿಂದ ಆಹಾರ ಸವಿದಾಗ ಮಾನಸಿಕ ತೃಪ್ತಿ ಸಿಗಲಿದೆ ಎಂಬುದನ್ನ ಹಲವು ಸಂಶೋಧನೆಗಳು ತಿಳಿಸಿವೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?