AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Healthy Diet Tips: ಈ ಸಮಯದಲ್ಲಿ ಹಣ್ಣುಗಳನ್ನು ಸೇವಿಸಿದರೆ, ಅದು ವಿಷವಾಗುತ್ತೆ

ಹಣ್ಣುಗಳನ್ನು ತಿನ್ನುವುದು ದೇಹಕ್ಕೆ ಒಳಗಿನಿಂದ ಪೋಷಣೆಯನ್ನು ನೀಡುತ್ತದೆ. ಆದರೆ ಇದನ್ನು ಸರಿಯಾದ ಸಮಯದಲ್ಲಿ ಸೇವನೆ ಮಾಡಬೇಕು ಎನ್ನುವುದು ನಿಮಗೆ ತಿಳಿದಿದೆಯೇ? ಹೌದು. ನೀವು ಹಣ್ಣುಗಳ ಸೇವಿಸುವ ಸಮಯದ ಆಧಾರದ ಮೇಲೆ ಅದರ ಪ್ರಯೋಜನಗಳು ನಿರ್ಧಾರವಾಗುತ್ತದೆ. ಹಣ್ಣುಗಳನ್ನು ಯಾವಾಗಲೂ ಊಟದ ನಂತರ ಮಾತ್ರ ಸೇವಿಸಬೇಕು ಎಂದು ಹೇಳುತ್ತಾರೆ. ಆದರೆ ಇದು ತಪ್ಪು. ಈ ರೀತಿ ಮಾಡಿದರೆ ಉಪಯೋಗದ ಬದಲು ದೇಹಕ್ಕೆ ಹಾನಿಯಾಗುವ ಸಾಧ್ಯತೆಯೇ ಹೆಚ್ಚಾಗಿರುತ್ತದೆ. ಹಾಗಾದರೆ ಊಟದ ನಂತರ ಹಣ್ಣುಗಳನ್ನು ಏಕೆ ಸೇವನೆ ಮಾಡಬಾರದು? ಹಣ್ಣುಗಳನ್ನು ಯಾವಾಗ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಿ.

Healthy Diet Tips: ಈ ಸಮಯದಲ್ಲಿ ಹಣ್ಣುಗಳನ್ನು ಸೇವಿಸಿದರೆ, ಅದು ವಿಷವಾಗುತ್ತೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 08, 2025 | 10:49 AM

Share

ಹಣ್ಣುಗಳು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇದನ್ನು ಸರಿಯಾದ ಸಮಯದಲ್ಲಿ ಸೇವನೆ ಮಾಡಬೇಕು ಎನ್ನುವುದು ನಿಮಗೆ ತಿಳಿದಿದೆಯೇ? ಹೌದು. ನೀವು ಹಣ್ಣುಗಳ ಸೇವಿಸುವ ಸಮಯದ ಆಧಾರದ ಮೇಲೆ ಅದರ ಪ್ರಯೋಜನಗಳು ನಿರ್ಧಾರವಾಗುತ್ತದೆ. ಸಾಮಾನ್ಯವಾಗಿ ಮನೆಗಳಲ್ಲಿ ಹಣ್ಣುಗಳನ್ನು ಯಾವಾಗಲೂ ಊಟದ ನಂತರ ಮಾತ್ರ ಸೇವಿಸಬೇಕು ಎಂದು ಹೇಳುತ್ತಾರೆ. ಆದರೆ ಇದು ತಪ್ಪು. ಈ ರೀತಿ ಮಾಡಿದರೆ ಉಪಯೋಗದ ಬದಲು ದೇಹಕ್ಕೆ ಹಾನಿಯಾಗುವ ಸಾಧ್ಯತೆಯೇ ಹೆಚ್ಚಾಗಿರುತ್ತದೆ. ಆಯುರ್ವೇದದ ಪ್ರಕಾರ, ಹಣ್ಣುಗಳನ್ನು ತಿನ್ನುವ ಸಮಯ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಹಣ್ಣುಗಳನ್ನು ತಿನ್ನಲು ಸರಿಯಾದ ಸಮಯವಿದೆ ಅದನ್ನು ಅನುಸರಿಸಬೇಕು ಎಂದು ಹೇಳಲಾಗುತ್ತದೆ. ಹಾಗಾದರೆ ಊಟದ ನಂತರ ಹಣ್ಣುಗಳನ್ನು ಏಕೆ ಸೇವನೆ ಮಾಡಬಾರದು?ಹಣ್ಣುಗಳನ್ನು ಯಾವಾಗ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಿ.

ಊಟದ ನಂತರ ಹಣ್ಣುಗಳನ್ನು ತಿಂದರೆ ಏನಾಗುತ್ತದೆ?

  • ಆಮ್ಲೀಯತೆಗೆ ಕಾರಣವಾಗುತ್ತದೆ: ಸಾಮಾನ್ಯವಾಗಿ ನಾವು ಊಟದ ನಂತರ ಹಣ್ಣುಗಳನ್ನು ತಿನ್ನುವುದರಿಂದ ಆಮ್ಲೀಯತೆ ಸಮಸ್ಯೆಗಳಿಗೆ ಕಾರಣವಾಗಬಹುದು. ಕಿತ್ತಳೆ, ನಿಂಬೆ, ದ್ರಾಕ್ಷಿಯಂತಹ ಹುಳಿ ಹಣ್ಣುಗಳು ಹೊಟ್ಟೆಯಲ್ಲಿ ಆಮ್ಲದ ಮಟ್ಟವನ್ನು ಹೆಚ್ಚಿಸುತ್ತವೆ. ಇದು ವ್ಯಕ್ತಿಯನ್ನು ಆಮ್ಲೀಯತೆಯ ಸಮಸ್ಯೆಗಳಿಂದ ಬಳಲುವಂತೆ ಮಾಡುತ್ತದೆ. ಹುಳಿ ಹಣ್ಣುಗಳು ಆಮ್ಲದ ಹೆಚ್ಚಳಕ್ಕೆ ಕಾರಣವಾಗುತ್ತವೆ.
  • ತಲೆನೋವನ್ನು ಹೆಚ್ಚಿಸುತ್ತದೆ: ಆಹಾರದ ಜೊತೆಗೆ ಹಣ್ಣುಗಳನ್ನು ತಿನ್ನುವುದು ತಲೆನೋವಿನಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಹಣ್ಣುಗಳಲ್ಲಿರುವ ಆಮ್ಲ ಮತ್ತು ಸಕ್ಕರೆ ಅಂಶ ತಲೆನೋವಿಗೆ ಕಾರಣವಾಗಬಹುದು. ಜೊತೆಗೆ ಸಿಟ್ರಸ್ ಹಣ್ಣುಗಳು ಆಕ್ಟೋಪಮೈನ್ ಅನ್ನು ಹೊಂದಿರುತ್ತವೆ. ಇದು ಕೂಡ ತಲೆನೋವಿಗೆ ಕಾರಣವಾಗಬಹುದು. ಹಾಗಾಗಿ ನಿಮಗೆ ಮೈಗ್ರೇನ್ ಸಮಸ್ಯೆ ಇದ್ದಲ್ಲಿ, ಸಿಟ್ರಸ್ ಹಣ್ಣುಗಳು, ಆವಕಾಡೊಗಳು, ರಾಸ್ಪ್ಬೆರಿ, ಪ್ಲಮ್, ಅಂಜೂರ, ಒಣ ಹಣ್ಣುಗಳನ್ನು ತಿನ್ನದಿರುವುದು ಉತ್ತಮ.
  • ಮಲಬದ್ಧತೆಗೆ ಕಾರಣವಾಗುತ್ತದೆ: ಊಟದ ನಂತರ ಹಣ್ಣುಗಳನ್ನು ತಿನ್ನುವುದರಿಂದ ದೇಹದಲ್ಲಿ ವಿಷಕಾರಿ ವಸ್ತುಗಳು ಸಂಗ್ರಹವಾಗುತ್ತವೆ. ಇದು ಗ್ಯಾಸ್, ಆಮ್ಲೀಯತೆ, ಅಜೀರ್ಣ, ಮಲಬದ್ಧತೆ ಮುಂತಾದ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗಬಹುದು.
  • ಜೀರ್ಣಕಾರಿ ಸಮಸ್ಯೆಗಳನ್ನು ಹೆಚ್ಚಿಸುತ್ತದೆ: ಹಣ್ಣುಗಳಲ್ಲಿರುವ ಫೈಬರ್ ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ಅಡ್ಡಿಪಡಿಸುತ್ತದೆ. ಊಟವಾದ ತಕ್ಷಣ ಹಣ್ಣುಗಳನ್ನು ತಿನ್ನುವುದು ದೇಹದಲ್ಲಿನ ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ, ಆಹಾರದ ಪೌಷ್ಠಿಕಾಂಶದ ಮೌಲ್ಯವು ಕಳೆದುಹೋಗುತ್ತದೆ. ಆಹಾರದ ಜೊತೆಗೆ ಅಥವಾ ಹೊಟ್ಟೆ ತುಂಬಿದಾಗ ಹಣ್ಣುಗಳನ್ನು ತಿನ್ನುವುದು ಸಹ ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು. ಊಟದ ನಂತರ ಹಣ್ಣುಗಳನ್ನು ತಿನ್ನುವುದು ಜೀರ್ಣಕ್ರಿಯೆಯನ್ನು ಕಡಿಮೆ ಮಾಡುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯ ಮೇಲೆ ಒತ್ತಡ ಹೇರುತ್ತದೆ. ಇದು ಆಹಾರವನ್ನು ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ. ಹಾಗಾಗಿ ಖಾಲಿ ಹೊಟ್ಟೆಯಲ್ಲಿ ಹಣ್ಣುಗಳ ಸೇವನೆ ಮಾಡಬೇಕು ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ