Sign In

By signing in or creating an account, you agree with Associated Broadcasting Company's Terms & Conditions and Privacy Policy.

Healthy Diet Tips: ಈ ಸಮಯದಲ್ಲಿ ಹಣ್ಣುಗಳನ್ನು ಸೇವಿಸಿದರೆ, ಅದು ವಿಷವಾಗುತ್ತೆ

ಹಣ್ಣುಗಳನ್ನು ತಿನ್ನುವುದು ದೇಹಕ್ಕೆ ಒಳಗಿನಿಂದ ಪೋಷಣೆಯನ್ನು ನೀಡುತ್ತದೆ. ಆದರೆ ಇದನ್ನು ಸರಿಯಾದ ಸಮಯದಲ್ಲಿ ಸೇವನೆ ಮಾಡಬೇಕು ಎನ್ನುವುದು ನಿಮಗೆ ತಿಳಿದಿದೆಯೇ? ಹೌದು. ನೀವು ಹಣ್ಣುಗಳ ಸೇವಿಸುವ ಸಮಯದ ಆಧಾರದ ಮೇಲೆ ಅದರ ಪ್ರಯೋಜನಗಳು ನಿರ್ಧಾರವಾಗುತ್ತದೆ. ಹಣ್ಣುಗಳನ್ನು ಯಾವಾಗಲೂ ಊಟದ ನಂತರ ಮಾತ್ರ ಸೇವಿಸಬೇಕು ಎಂದು ಹೇಳುತ್ತಾರೆ. ಆದರೆ ಇದು ತಪ್ಪು. ಈ ರೀತಿ ಮಾಡಿದರೆ ಉಪಯೋಗದ ಬದಲು ದೇಹಕ್ಕೆ ಹಾನಿಯಾಗುವ ಸಾಧ್ಯತೆಯೇ ಹೆಚ್ಚಾಗಿರುತ್ತದೆ. ಹಾಗಾದರೆ ಊಟದ ನಂತರ ಹಣ್ಣುಗಳನ್ನು ಏಕೆ ಸೇವನೆ ಮಾಡಬಾರದು? ಹಣ್ಣುಗಳನ್ನು ಯಾವಾಗ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಿ.

Healthy Diet Tips: ಈ ಸಮಯದಲ್ಲಿ ಹಣ್ಣುಗಳನ್ನು ಸೇವಿಸಿದರೆ, ಅದು ವಿಷವಾಗುತ್ತೆ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 08, 2025 | 10:49 AM

ಹಣ್ಣುಗಳು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇದನ್ನು ಸರಿಯಾದ ಸಮಯದಲ್ಲಿ ಸೇವನೆ ಮಾಡಬೇಕು ಎನ್ನುವುದು ನಿಮಗೆ ತಿಳಿದಿದೆಯೇ? ಹೌದು. ನೀವು ಹಣ್ಣುಗಳ ಸೇವಿಸುವ ಸಮಯದ ಆಧಾರದ ಮೇಲೆ ಅದರ ಪ್ರಯೋಜನಗಳು ನಿರ್ಧಾರವಾಗುತ್ತದೆ. ಸಾಮಾನ್ಯವಾಗಿ ಮನೆಗಳಲ್ಲಿ ಹಣ್ಣುಗಳನ್ನು ಯಾವಾಗಲೂ ಊಟದ ನಂತರ ಮಾತ್ರ ಸೇವಿಸಬೇಕು ಎಂದು ಹೇಳುತ್ತಾರೆ. ಆದರೆ ಇದು ತಪ್ಪು. ಈ ರೀತಿ ಮಾಡಿದರೆ ಉಪಯೋಗದ ಬದಲು ದೇಹಕ್ಕೆ ಹಾನಿಯಾಗುವ ಸಾಧ್ಯತೆಯೇ ಹೆಚ್ಚಾಗಿರುತ್ತದೆ. ಆಯುರ್ವೇದದ ಪ್ರಕಾರ, ಹಣ್ಣುಗಳನ್ನು ತಿನ್ನುವ ಸಮಯ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಹಣ್ಣುಗಳನ್ನು ತಿನ್ನಲು ಸರಿಯಾದ ಸಮಯವಿದೆ ಅದನ್ನು ಅನುಸರಿಸಬೇಕು ಎಂದು ಹೇಳಲಾಗುತ್ತದೆ. ಹಾಗಾದರೆ ಊಟದ ನಂತರ ಹಣ್ಣುಗಳನ್ನು ಏಕೆ ಸೇವನೆ ಮಾಡಬಾರದು?ಹಣ್ಣುಗಳನ್ನು ಯಾವಾಗ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಿ.

ಊಟದ ನಂತರ ಹಣ್ಣುಗಳನ್ನು ತಿಂದರೆ ಏನಾಗುತ್ತದೆ?

  • ಆಮ್ಲೀಯತೆಗೆ ಕಾರಣವಾಗುತ್ತದೆ: ಸಾಮಾನ್ಯವಾಗಿ ನಾವು ಊಟದ ನಂತರ ಹಣ್ಣುಗಳನ್ನು ತಿನ್ನುವುದರಿಂದ ಆಮ್ಲೀಯತೆ ಸಮಸ್ಯೆಗಳಿಗೆ ಕಾರಣವಾಗಬಹುದು. ಕಿತ್ತಳೆ, ನಿಂಬೆ, ದ್ರಾಕ್ಷಿಯಂತಹ ಹುಳಿ ಹಣ್ಣುಗಳು ಹೊಟ್ಟೆಯಲ್ಲಿ ಆಮ್ಲದ ಮಟ್ಟವನ್ನು ಹೆಚ್ಚಿಸುತ್ತವೆ. ಇದು ವ್ಯಕ್ತಿಯನ್ನು ಆಮ್ಲೀಯತೆಯ ಸಮಸ್ಯೆಗಳಿಂದ ಬಳಲುವಂತೆ ಮಾಡುತ್ತದೆ. ಹುಳಿ ಹಣ್ಣುಗಳು ಆಮ್ಲದ ಹೆಚ್ಚಳಕ್ಕೆ ಕಾರಣವಾಗುತ್ತವೆ.
  • ತಲೆನೋವನ್ನು ಹೆಚ್ಚಿಸುತ್ತದೆ: ಆಹಾರದ ಜೊತೆಗೆ ಹಣ್ಣುಗಳನ್ನು ತಿನ್ನುವುದು ತಲೆನೋವಿನಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಹಣ್ಣುಗಳಲ್ಲಿರುವ ಆಮ್ಲ ಮತ್ತು ಸಕ್ಕರೆ ಅಂಶ ತಲೆನೋವಿಗೆ ಕಾರಣವಾಗಬಹುದು. ಜೊತೆಗೆ ಸಿಟ್ರಸ್ ಹಣ್ಣುಗಳು ಆಕ್ಟೋಪಮೈನ್ ಅನ್ನು ಹೊಂದಿರುತ್ತವೆ. ಇದು ಕೂಡ ತಲೆನೋವಿಗೆ ಕಾರಣವಾಗಬಹುದು. ಹಾಗಾಗಿ ನಿಮಗೆ ಮೈಗ್ರೇನ್ ಸಮಸ್ಯೆ ಇದ್ದಲ್ಲಿ, ಸಿಟ್ರಸ್ ಹಣ್ಣುಗಳು, ಆವಕಾಡೊಗಳು, ರಾಸ್ಪ್ಬೆರಿ, ಪ್ಲಮ್, ಅಂಜೂರ, ಒಣ ಹಣ್ಣುಗಳನ್ನು ತಿನ್ನದಿರುವುದು ಉತ್ತಮ.
  • ಮಲಬದ್ಧತೆಗೆ ಕಾರಣವಾಗುತ್ತದೆ: ಊಟದ ನಂತರ ಹಣ್ಣುಗಳನ್ನು ತಿನ್ನುವುದರಿಂದ ದೇಹದಲ್ಲಿ ವಿಷಕಾರಿ ವಸ್ತುಗಳು ಸಂಗ್ರಹವಾಗುತ್ತವೆ. ಇದು ಗ್ಯಾಸ್, ಆಮ್ಲೀಯತೆ, ಅಜೀರ್ಣ, ಮಲಬದ್ಧತೆ ಮುಂತಾದ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗಬಹುದು.
  • ಜೀರ್ಣಕಾರಿ ಸಮಸ್ಯೆಗಳನ್ನು ಹೆಚ್ಚಿಸುತ್ತದೆ: ಹಣ್ಣುಗಳಲ್ಲಿರುವ ಫೈಬರ್ ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ಅಡ್ಡಿಪಡಿಸುತ್ತದೆ. ಊಟವಾದ ತಕ್ಷಣ ಹಣ್ಣುಗಳನ್ನು ತಿನ್ನುವುದು ದೇಹದಲ್ಲಿನ ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ, ಆಹಾರದ ಪೌಷ್ಠಿಕಾಂಶದ ಮೌಲ್ಯವು ಕಳೆದುಹೋಗುತ್ತದೆ. ಆಹಾರದ ಜೊತೆಗೆ ಅಥವಾ ಹೊಟ್ಟೆ ತುಂಬಿದಾಗ ಹಣ್ಣುಗಳನ್ನು ತಿನ್ನುವುದು ಸಹ ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು. ಊಟದ ನಂತರ ಹಣ್ಣುಗಳನ್ನು ತಿನ್ನುವುದು ಜೀರ್ಣಕ್ರಿಯೆಯನ್ನು ಕಡಿಮೆ ಮಾಡುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯ ಮೇಲೆ ಒತ್ತಡ ಹೇರುತ್ತದೆ. ಇದು ಆಹಾರವನ್ನು ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ. ಹಾಗಾಗಿ ಖಾಲಿ ಹೊಟ್ಟೆಯಲ್ಲಿ ಹಣ್ಣುಗಳ ಸೇವನೆ ಮಾಡಬೇಕು ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ