AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Non-Veg Side Effects: ವಾರ ಪೂರ್ತಿ ಮಾಂಸಾಹಾರ ಸೇವನೆ ಮಾಡುತ್ತೀರಾ, ನಿಮಗೆ ಈ ರೋಗ ತಪ್ಪಿದ್ದಲ್ಲ

ಚಿಕನ್, ಮಟನ್ ಇಲ್ಲದೆ ಊಟ ಮಾಡದವರಿದ್ದಾರೆ. ಪ್ರತಿದಿನ ಕೊಟ್ಟರೂ ಹಿಂಜರಿಯದೇ ತಿನ್ನುತ್ತಾರೆ. ವಾಸ್ತವದಲ್ಲಿ ಮಾಂಸ ತುಂಬಾ ಇಷ್ಟಪಡುವವರಿದ್ದು, ಇದು ದೇಹವನ್ನು ಬಲಪಡಿಸುವುದು ಮಾತ್ರವಲ್ಲದೆ ಕಬ್ಬಿಣ, ಸತು, ಜೀವಸತ್ವಗಳು, ಅಗತ್ಯ ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದೆ ಮತ್ತು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ನೀವು ಪ್ರತಿನಿತ್ಯ ಮಾಂಸಾಹಾರ ಸೇವನೆ ಮಾಡುತ್ತಿದ್ದರೆ ಇಂದೇ ಆ ಅಭ್ಯಾಸವನ್ನು ಬಿಟ್ಟು ಬಿಡಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆ ಗೊತ್ತಾ?

Non-Veg Side Effects: ವಾರ ಪೂರ್ತಿ ಮಾಂಸಾಹಾರ ಸೇವನೆ ಮಾಡುತ್ತೀರಾ, ನಿಮಗೆ ಈ ರೋಗ ತಪ್ಪಿದ್ದಲ್ಲ
ಸಾಂಧರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 07, 2024 | 12:20 PM

Share

ತುಂಡು ಇಲ್ಲದೆ ಊಟವಿಲ್ಲ ಎಂಬ ಮಾತನ್ನು ಶಿರಸಾ ವಹಿಸಿ ಪಾಲಿಸುವವರಿದ್ದಾರೆ. ಅಂದರೆ ಚಿಕನ್, ಮಟನ್ ಇಲ್ಲದೆ ಊಟ ಮಾಡದವರಿದ್ದಾರೆ. ಪ್ರತಿದಿನ ಕೊಟ್ಟರೂ ಹಿಂಜರಿಯದೇ ತಿನ್ನುತ್ತಾರೆ. ವಾಸ್ತವದಲ್ಲಿ ಮಾಂಸ ತುಂಬಾ ಇಷ್ಟಪಡುವವರಿದ್ದು, ಇದು ದೇಹವನ್ನು ಬಲಪಡಿಸುವುದು ಮಾತ್ರವಲ್ಲದೆ ಕಬ್ಬಿಣ, ಸತು, ಜೀವಸತ್ವಗಳು, ಅಗತ್ಯ ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದೆ ಮತ್ತು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ನೀವು ಪ್ರತಿನಿತ್ಯ ಮಾಂಸಾಹಾರ ಸೇವನೆ ಮಾಡುತ್ತಿದ್ದರೆ ಇಂದೇ ಆ ಅಭ್ಯಾಸವನ್ನು ಬಿಟ್ಟು ಬಿಡಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆ ಗೊತ್ತಾ? ದಿನನಿತ್ಯ ಮಾಂಸಾಹಾರ ಸೇವನೆ ಮಾಡುತ್ತಿದ್ದರೆ ನೀವು ಹೃದ್ರೋಗ, ಕ್ಯಾನ್ಸರ್, ಮಧುಮೇಹ, ನ್ಯುಮೋನಿಯಾ, ರಕ್ತದೊತ್ತಡ, ಬೊಜ್ಜು, ಹೆಚ್ಚಿನ ಕೊಲೆಸ್ಟ್ರಾಲ್, ಜೀರ್ಣಕಾರಿ ಸಮಸ್ಯೆಗಳು, ಯೂರಿಕ್ ಆಮ್ಲದಂತಹ ಸಮಸ್ಯೆಗಳಿಂದ ಬಳಲಬಹುದು ಎಂದು ವೈದ್ಯಕೀಯ ತಜ್ಞರು ಎಚ್ಚರಿಸುತ್ತಾರೆ. ಹಾಗಾಗಿ ವಾರಕ್ಕೆ 3 ಬಾರಿಗಿಂತ ಹೆಚ್ಚು ಮಾಂಸ ತಿನ್ನುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕ ಎಂದು ಹೇಳಲಾಗುತ್ತದೆ.

9 ಬಗೆಯ ರೋಗಗಳ ಅಪಾಯ;

ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಬಿಎಂಸಿ ಮೆಡಿಸಿನ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಒಬ್ಬ ವ್ಯಕ್ತಿಯು ವಾರದಲ್ಲಿ 3 ದಿನ ಅಥವಾ ಅದಕ್ಕಿಂತ ಹೆಚ್ಚು ದಿನ ಕೆಂಪು ಮಾಂಸ, ಸಂಸ್ಕರಿಸಿದ ಮಾಂಸ, ಕೋಳಿ ಮಾಂಸ ಇತ್ಯಾದಿಗಳನ್ನು ಸೇವನೆ ಮಾಡಿದರೆ 9 ರೀತಿಯ ರೋಗಗಳು ಬರುವ ಅಪಾಯ ಹೆಚ್ಚಾಗಿ ಇರುತ್ತದೆ ಎಂದಿದೆ. ಕೆಂಪು ಸಂಸ್ಕರಿಸಿದ ಮಾಂಸವನ್ನು ಅತಿಯಾದ ಸೇವನೆಯಿಂದ ಹೊಟ್ಟೆಯ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗಿರುತ್ತದೆ ಎಂದು ಅನೇಕ ಅಧ್ಯಯನಗಳು ಮತ್ತು ಸಂಶೋಧನೆಗಳು ತೋರಿಸಿ ಕೊಟ್ಟಿವೆ.

ಆರೋಗ್ಯ ಕ್ಷೀಣಿಸಬಹುದು;

ಈ ಸಂಶೋಧನೆಯ ಜೊತೆಗೆ, ವಿಶ್ವ ಆರೋಗ್ಯ ಸಂಸ್ಥೆ ಕೆಂಪು ಮಾಂಸ ಮತ್ತು ಸಂಸ್ಕರಿಸಿದ ಮಾಂಸವನ್ನು ತಿನ್ನುವುದು ಆರೋಗ್ಯಕ್ಕೆ ಗಂಭೀರ ಹಾನಿಯನ್ನುಂಟು ಮಾಡುತ್ತದೆ ಎಂದು ಅನೇಕ ಬಾರಿ ಹೇಳಿದೆ. ಈ ಅಧ್ಯಯನದಲ್ಲಿ ಬ್ರಿಟನ್ನ 4 ಲಕ್ಷ 75 ಸಾವಿರ ಮಧ್ಯ ವಯಸ್ಕರನ್ನು ಈ ಅಧ್ಯಯನದಲ್ಲಿ ಸೇರಿಸಿಕೊಳ್ಳಲಾಗಿದ್ದು ಈ ಸಮಯದಲ್ಲಿ, ಸಂಶೋಧಕರು ಆ ಜನರ ಆಹಾರ ಮತ್ತು ವೈದ್ಯಕೀಯ ದಾಖಲೆಗಳು, ಆಸ್ಪತ್ರೆಗೆ ದಾಖಲಾದವರು ಮತ್ತು ಅವರ ಸಾವಿನ ಬಗ್ಗೆ ಅನೇಕ ಮಾಹಿತಿ ಕಲೆ ಹಾಕಿದೆ. ಈ ಅಧ್ಯಯನವು ಸುಮಾರು 8 ವರ್ಷಗಳ ಕಾಲ ನಡೆದಿದ್ದು ವಾರಕ್ಕೆ ಸರಾಸರಿ 3 ಅಥವಾ ಅದಕ್ಕಿಂತ ಹೆಚ್ಚು ದಿನ ಮಾಂಸವನ್ನು ಸೇವನೆ ಮಾಡುವವರು ಕಡಿಮೆ ಮಾಂಸ ಸೇವನೆ ಮಾಡುವವರಿಗೆ ಹೋಲಿಸಿದರೆ ಕೆಟ್ಟ ಆರೋಗ್ಯ ಪರಿಸ್ಥಿತಿಯನ್ನು ಹೊಂದಿದ್ದಾರೆ ಎಂದು ಅಧ್ಯಯನದ ಫಲಿತಾಂಶಗಳಿಂದ ಬಹಿರಂಗಗೊಂಡಿದೆ.

ಇದನ್ನೂ ಓದಿ: ಮಾವಿನ ಎಲೆಗಳ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ

ಹೃದ್ರೋಗದ ಅಪಾಯ

ಸಂಸ್ಕರಿಸದ ಕೆಂಪು ಮಾಂಸ ಸೇವಿಸುವ ಜನರಲ್ಲಿ ಹೃದ್ರೋಗ, ನ್ಯುಮೋನಿಯಾ, ಡೈವರ್ಟಿಕ್ಯುಲರ್ ಕಾಯಿಲೆ ಮತ್ತು ಮಧುಮೇಹದ ಅಪಾಯ ಹೆಚ್ಚಾಗಬಹುದು. ಕೋಳಿ ಮಾಂಸ ತಿನ್ನುವವರಲಿ ಗ್ಯಾಸ್ಟ್ರೈಟಿಸ್, ಡ್ಯುಡೆನಿಟಿಸ್, ಪಿತ್ತಕೋಶದ ಕಾಯಿಲೆ ಮತ್ತು ಮಧುಮೇಹ ಹೆಚ್ಚಾಗಬಹುದು. ಪ್ರತಿದಿನ 70 ಗ್ರಾಂ ಸಂಸ್ಕರಿಸದ ಕೆಂಪು ಮಾಂಸ ಮತ್ತು ಸಂಸ್ಕರಿಸಿದ ಮಾಂಸ ಸೇವಿಸುವವರಲ್ಲಿ ಹೃದ್ರೋಗದ ಅಪಾಯವು ಶೇಕಡಾ 15 ರಷ್ಟು ಮತ್ತು ಮಧುಮೇಹದ ಅಪಾಯವು ಶೇಕಡಾ 30 ರಷ್ಟು ಹೆಚ್ಚಾಗುತ್ತದೆ. ಹಾಗಾಗಿ ಈ ಸಂಶೋಧನೆಯು ನಮ್ಮ ದೇಹಕ್ಕೆ ಅಗತ್ಯವಿರುವಷ್ಟು ಮಾಂಸವನ್ನು ಮಾತ್ರ ತಿನ್ನಬೇಕು ಎಂಬುದನ್ನು ತಿಳಿಸುತ್ತದೆ.

ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ