AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವೀಟ್ ಸೇವನೆ ಮಾಡುವುದಕ್ಕೆ ಸರಿಯಾದ ಸಮಯ ಯಾವುದು ಗೊತ್ತಾ?

ಸಿಹಿತಿಂಡಿಗಳು ನಮ್ಮ ಸಂತೋಷ ಒಂದು ಭಾಗವಾಗಿರುತ್ತದೆ. ಆದರೆ ತಜ್ಞರು ಸಿಹಿತಿಂಡಿಗಳನ್ನು ತಿನ್ನುವುದರ ಬಗ್ಗೆ ಮಾತ್ರವಲ್ಲ, ಅವುಗಳನ್ನು ಯಾವಾಗ ತಿನ್ನುತ್ತೀರಿ ಎಂಬುದರ ಬಗ್ಗೆಯೂ ಬಹಳ ಎಚ್ಚರಿಕೆ ವಹಿಸಬೇಕು ಎನ್ನುತ್ತಾರೆ. ಯಾವುದೋ ಸಮಯಕ್ಕೆ ಸಿಹಿ ತಿನ್ನಬೇಕು ಎಂದು ಅನಿಸಿದಾಗ ಸಕ್ಕರೆ ಅಂಶವಿರುವ ಆಹಾರವನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಏರಿಕೆ ಉಂಟಾಗಬಹುದು ಮತ್ತು ಕಾಲಾನಂತರದಲ್ಲಿ, ತೂಕ ಹೆಚ್ಚಾಗುವುದು ಮತ್ತು ಮಧುಮೇಹದಂತಹ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು.

ಸ್ವೀಟ್ ಸೇವನೆ ಮಾಡುವುದಕ್ಕೆ ಸರಿಯಾದ ಸಮಯ ಯಾವುದು ಗೊತ್ತಾ?
Best Time To Eat SweetsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jul 04, 2026 | 6:20 PM

Share

ಮುಖ್ಯಾಂಶಗಳು

  • ಸಿಹಿ ತಿನ್ನಲು ಸರಿಯಾದ ಸಮಯ ಯಾವುದು? ವೈದ್ಯರ ಮಹತ್ವದ ಸಲಹೆ
  • ಮಧುಮೇಹದ ಅಪಾಯ ಕಡಿಮೆ ಮಾಡಲು ಸಿಹಿ ತಿನ್ನುವ ಸಮಯವನ್ನು ತಿಳಿದುಕೊಳ್ಳಿ
  • ರಾತ್ರಿ ಸಿಹಿ ತಿನ್ನುವುದು ಆರೋಗ್ಯಕ್ಕೆ ಎಷ್ಟು ಅಪಾಯಕಾರಿ?

ಇಂದಿನ ಜೀವನಶೈಲಿಯಲ್ಲಿ ಬಗೆ ಬಗೆಯ ಸಿಹಿ ಪದಾರ್ಥಗಳ ಸೇವನೆ ಮಾಡುವುದು ಬಹಳ ಸಾಮಾನ್ಯವಾಗಿದೆ. ಆದರೆ ಸಿಹಿ ತಿನ್ನುವ ಸಮಯವೂ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ. ಹೌದು, ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಅಥವಾ ರಾತ್ರಿ ಮಲಗುವ ಮೊದಲು ಸಿಹಿ ತಿನ್ನುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸಬಹುದು. ನಿಮಗೂ ಕೂಡ ಈ ರೀತಿ ಅಭ್ಯಾಸವಿದ್ದರೆ ಇದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಿ. ಜೊತೆಗೆ ಸಿಹಿ ತಿನ್ನುವುದಕ್ಕೆ ಸೂಕ್ತ ಸಮಯ ಯಾವುದು ಮತ್ತು ಯಾಕೆ ಈ ಸಮಯಕ್ಕೆ ಸಿಹಿ ತಿನ್ನಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಖಾಲಿ ಹೊಟ್ಟೆಯಲ್ಲಿ ಸಿಹಿ ತಿಂದರೆ ಏನಾಗುತ್ತದೆ?

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸಿಹಿ ತಿಂದರೆ ಅದರಲ್ಲಿರುವ ಸಕ್ಕರೆ ವೇಗವಾಗಿ ರಕ್ತದಲ್ಲಿ ಬೆರೆತು ಬ್ಲಡ್ ಶುಗರ್ ಮಟ್ಟ ಏರಿಕೆಯಾಗುತ್ತದೆ. ಇದನ್ನು ನಿಯಂತ್ರಿಸಲು ದೇಹ ಹೆಚ್ಚು ಇನ್ಸುಲಿನ್ ಬಿಡುಗಡೆ ಮಾಡುತ್ತದೆ. ಪರಿಣಾಮವಾಗಿ ನಂತರ ಸಕ್ಕರೆ ಮಟ್ಟ ಏಕಾಏಕಿ ಇಳಿದು ಆಯಾಸ, ನಿಶಕ್ತಿ ಹಾಗೂ ಮತ್ತೆ ಸಿಹಿ ತಿನ್ನಬೇಕೆಂಬ ಆಸೆ ಉಂಟಾಗಬಹುದು.

ಇದನ್ನೂ ಓದಿ: ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿದರೆ ಆರೋಗ್ಯದಲ್ಲಿ ಬದಲಾವಣೆ ಆಗುತ್ತದೆಯೇ? ಯಾವ ಆಹಾರಗಳಲ್ಲಿ ಸಕ್ಕರೆ ಅಂಶ ಹೆಚ್ಚಿರುತ್ತದೆ?

ಸಿಹಿ ತಿನ್ನಲು ಉತ್ತಮ ಸಮಯ ಯಾವುದು?

ತಜ್ಞರ ಪ್ರಕಾರ, ಮಧ್ಯಾಹ್ನ ಅಥವಾ ರಾತ್ರಿ ಊಟದ ನಂತರ ಸ್ವಲ್ಪ ಪ್ರಮಾಣದಲ್ಲಿ ಸಿಹಿ ಸೇವಿಸುವುದು ಉತ್ತಮ. ಊಟದಲ್ಲಿರುವ ಫೈಬರ್, ಪ್ರೋಟೀನ್ ಮತ್ತು ಆರೋಗ್ಯಕರ ಕೊಬ್ಬುಗಳುರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತವೆ. ಆದರೆ ಮಲಗುವ ಮುನ್ನ ಮಾತ್ರ ಸೇವಿಸಬಾರದು. ಏಕೆಂದರೆ ಮಲಗುವ ಮುನ್ನ ಹೆಚ್ಚು ಸಿಹಿ ತಿನ್ನುವುದರಿಂದ ದೇಹವು ಹೆಚ್ಚುವರಿ ಕ್ಯಾಲೊರಿಗಳನ್ನು ಬಳಸಲು ಸಾಧ್ಯವಾಗುವುದಿಲ್ಲ. ಇದರಿಂದ ಕೊಬ್ಬು ಸಂಗ್ರಹವಾಗಿ ತೂಕ ಹೆಚ್ಚಳ, ಸಕ್ಕರೆ ಮಟ್ಟದಲ್ಲಿ ಅಸಮತೋಲನ ಹಾಗೂ ಮೆಟಾಬಾಲಿಕ್ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು.

ಈ ಅಭ್ಯಾಸಗಳನ್ನು ಅನುಸರಿಸಿ

  • ಸಿಹಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬೇಡಿ.
  • ಊಟಕ್ಕೆ ಬದಲಾಗಿ ಕೇಕ್, ಪೇಸ್ಟ್ರಿ ಅಥವಾ ಸಾಫ್ಟ್ ಡ್ರಿಂಕ್ಸ್ ಸೇವಿಸುವುದನ್ನು ತಪ್ಪಿಸಿ.
  • ಹಣ್ಣುಗಳು, ಬೇಳೆಕಾಳುಗಳು, ಧಾನ್ಯಗಳು ಮತ್ತು ಹಸಿರು ತರಕಾರಿಗಳಿಗೆ ಆದ್ಯತೆ ನೀಡಿ.
  • ಮಧುಮೇಹ, ಪ್ರೀ-ಡಯಾಬಿಟಿಸ್, ಥೈರಾಯ್ಡ್ ಅಥವಾ ಸ್ಥೂಲಕಾಯ ಸಮಸ್ಯೆ ಇರುವವರು ವೈದ್ಯರು ಅಥವಾ
  • ಡಯಟಿಷಿಯನ್ ಸಲಹೆಯಂತೆ ಸಿಹಿ ಸೇವಿಸಬೇಕು.

ಗಮನಿಸಿ: ಈ ಮಾಹಿತಿ ಆರೋಗ್ಯ ಜಾಗೃತಿಗಾಗಿ ಮಾತ್ರ. ಯಾವುದೇ ಆರೋಗ್ಯ ಸಮಸ್ಯೆ ಇದ್ದರೆ ವೈದ್ಯರ ಸಲಹೆ ಪಡೆಯುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ